ads

Search This Blog

Saturday, 12 February 2022

ದೊಡ್ಡಕೆರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಣೆ ಜಿಲ್ಲೆಯ ಬ್ಯಾಡಗಿ ಹಾಗೂ ಹಾನಗಲ್ ತಾಲೂಕಿಗೆ ತಲಾ ಎರಡು ಏತ ನೀರಾವರಿ ಯೋಜನೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ


ದೊಡ್ಡಕೆರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಣೆ ಜಿಲ್ಲೆಯ ಬ್ಯಾಡಗಿ ಹಾಗೂ ಹಾನಗಲ್ ತಾಲೂಕಿಗೆ ತಲಾ ಎರಡು ಏತ ನೀರಾವರಿ ಯೋಜನೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಾವೇರಿ. : ಶಿಗ್ಗಾಂವ ತಾಲೂಕು ಹಿರೇಬೆಂಡಿಗೇರಿ ಗ್ರಾಮದ ದೊಡ್ಡಕೆರೆಗೆ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಶನಿವಾರ ಬಾಗಿನ ಅರ್ಪಿಸಿದರು. 

  ಸಾಂಪ್ರದಾಯಿಕ ವಿಧಿ-ವಿಧಾನ ಪೂಜಾ ಕಾರ್ಯಕ್ರಮದೊಂದಿಗೆ ಭಕ್ತಿಪೂರ್ವಕವಾಗಿ ಮಂತ್ರೋಚ್ಚಾರಗಳ ಮೂಲಕ ಜಲರಾಶಿಗೆ ಬಾಗಿನ ಸಮರ್ಪಿಸಿದರು.

 ಕೆರೆಗೆ ಬಾಗಿನ ಅರ್ಪಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸವಣೂರು ಏತ ನೀರಾವರಿ ಯೋಜನೆಯಡಿ  ಶಿಗ್ಗಾಂವ ಮತ್ತು ಸವಣೂರು ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ 48 ಕೆರೆಗಳ ತುಂಬಿಸುವ ರೂ. 90.57 ಕೋಟಿ ವೆಚ್ಚದ  ಕಾಮಗಾರಿ ಪೂರ್ಣಗೊಂಡಿದೆ.  ಇದರಿಂದ 14 ಸಾವಿರ ಎಕರೆಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಬರುವ ದಿನಗಳಲ್ಲಿ ಜಿಲ್ಲೆಯ ಬ್ಯಾಡಗಿ  ಹಾಗೂ ಹಾನಗಲ್ ತಾಲೂಕಿನಲ್ಲಿ ತಲಾ ಎರಡು ಏತ ನೀರವಾರಿ ಯೋಜನೆಗಳ ಉದ್ಘಾಟನೆ ನೆರವೇರಿಸಲಾಗುವುದು ಎಂದರು.

ಹಾವೇರಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಅಧಿವೇಶನ ಮುಗಿದ ಬಳಿಕ ಉದ್ಘಾಟನೆ ಮಾಡಲಾಗುವುದು. ಸಮಗ್ರ ಕರ್ನಾಟಕ ಅಭಿವೃದ್ಧಿ ಬಜೆಟ್ ಮಂಡಿಸಲಾಗುವುದು ಎಂದು ತಿಳಿಸಿದರು. 

ಶಾಲಾ- ಕಾಲೇಜು ಸೇರಿದಂತೆ ಎಲ್ಲಕಡೆ ಶಾಂತಿ ನೆಲೆಸಬೇಕು. ಹೈಕೋರ್ಟ್ ಆಜ್ಞೆ ಪರಿಪೂರ್ಣವಾಗಿ ಜಾರಿ ಮಾಡಬೇಕು. ಎಲ್ಲ ಮಕ್ಕಳು ಯಾವುದೇ ಬೇಧ ಭಾವವಿಲ್ಲದೆ ಒಮ್ಮನಸ್ಸಿನಿಂದ ಮೊದಲಿನಂತೆ ಸೌಹಾರ್ದತೆಯಿಂದ  ಇರಬೇಕು. ಇದು ನನ್ನ ಮೊದಲನೆ ಕರ್ತವ್ಯವಾಗಿದೆ. ರಾಜ್ಯ ಬಜೆಟ್ ಪ್ರಕ್ರಿಯೆ ಆರಂಭ ಮಾಡಿದ್ದೇನೆ. ಎಲ್ಲ ಇಲಾಖೆಗಳ ಬೇಡಿಕೆ ಬಗ್ಗೆ ಚರ್ಚೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳ ಜೊತೆಗೆ ರಾಜ್ಯ ಸರಕಾರದ ಯೋಜನೆಗಳನ್ನು ಜೋಡಿಸಲಾಗುತ್ತಿದೆ. ಸಮಗ್ರ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ಬಜೆಟ್ ಮಂಡನೆ ಮಾಡಲಾಗುವುದು. ಕನ್ನಡ ಸಾಹಿತ್ಯ ಪರಿಷತ್ ಕೂಡ ಈ ಬಗ್ಗೆ ತನ್ನ ಅಭಿಲಾಷೆ ವ್ಯಕ್ತಪಡಿಸಿದೆ. ಅದಕ್ಕೆ ಪೂರಕವಾಗಿ ಶಿಫಾರಸ್ಸು ಮಾಡುತ್ತೇವೆ ಎಂದರು.

  ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ.ಕಾರಜೋಳ, ಕಾರ್ಮಿಕ  ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಅರಬೈಲ್ ಶಿವರಾಮ ಹೆಬ್ಬಾರ ಇತರರು ಉಪಸ್ಥಿತರಿದ್ದರು.

No comments:

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...