ads

Search This Blog

Thursday, 19 December 2024

ತೆಲಂಗಾಣ ಮಾಜಿ ಸಚಿವಗೆ ಸಂಕಷ್ಟ; ಬಹು ಕೋಟಿ ಅಕ್ರಮ ಪ್ರಕರಣದಲ್ಲಿ ಎ1 ಆರೋಪಿ

 

ತೆಲಂಗಾಣ ಮಾಜಿ ಸಚಿವಗೆ ಸಂಕಷ್ಟ; ಬಹು ಕೋಟಿ ಅಕ್ರಮ ಪ್ರಕರಣದಲ್ಲಿ ಎ1 ಆರೋಪಿ

ಹೈದರಾಬಾದ್: ಭಾರತ್‌ ರಾಷ್ಟ್ರ ಸಮಿತಿ (BRS) ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಪುತ್ರ ಕೆಟಿ ರಾಮಾರಾವ್ (KTR)ಗೆ ಸಂಕಷ್ಟ ಎದುರಾಗಿದ್ದು, ಬಹುಕೋಟಿ Formula E race ಭ್ರಷ್ಟಾಚಾರ ಪ್ರಕರಣದಲ್ಲಿ ಅವರನ್ನು ಎ1 ಆರೋಪಿಯನ್ನಾಗಿ ಮಾಡಲಾಗಿದೆ.

ಹೌದು.. ತೆಲಂಗಾಣದ ಹಿಂದಿನ ಬಿಆರ್‌ಎಸ್‌ (ಭಾರತ್‌ ರಾಷ್ಟ್ರ ಸಮಿತಿ) ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಫಾರ್ಮುಲಾ ಇ ರೇಸ್‌ನಲ್ಲಿ ಹಣಕಾಸು ಅವ್ಯವಹಾರ ಆರೋಪಗಳಿಗೆ ಸಂಬಂಧಿಸಿದಂತೆ ಬಿಆರ್‌ಎಸ್‌ ಶಾಸಕ, ಮಾಜಿ ಸಚಿವ ಕೆ.ಟಿ. ರಾಮರಾವ್‌ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಜಿಷ್ಣುದೇವ್‌ ವರ್ಮಾ ಅವರು ಬುಧವಾರ ಅನುಮತಿ ನೀಡಿದ್ದಾರೆ. ಇದರೊಂದಿಗೆ ಬಿಆರ್‌ಎಸ್‌ ಕಾರ್ಯಾಧ್ಯಕ್ಷರೂ ಆಗಿರುವ ಕೆಟಿಆರ್‌ಗೆ ಸಂಕಟ ಎದುರಾಗಿದ್ದು, ಕೆ.ಟಿ. ರಾಮರಾವ್‌ ಅವರು ಪೌರಾಡಳಿತ ಸಚಿವರಾಗಿದ್ದ ಸಂದರ್ಭದಲ್ಲಿ ನಿಯಮಗಳನ್ನು ಅನುಸರಿಸದೇ ಫಾರ್ಮುಲಾ ಇ ರೇಸ್‌ ಆಯೋಜಕರಿಗೆ 55 ಕೋಟಿ ರೂ. ವರ್ಗಾಯಿಸಲು ಅನುಮತಿ ನೀಡಿದ್ದರು. ಇದರಲ್ಲಿಅಕ್ರಮಗಳು ನಡದಿವೆ ಎಂದು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಆರೋಪಿಸಿದೆ. ಈಗ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಎಸಿಬಿ ತನಿಖೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

ಎಸಿಬಿ ಮೂಲಗಳ ಪ್ರಕಾರ, ಕೆಟಿ ರಾಮಾರಾವ್ ಅಲ್ಲದೆ ಆಗಿನ ಪುರಸಭೆ ಆಡಳಿತ ವಿಶೇಷ ಮುಖ್ಯ ಕಾರ್ಯದರ್ಶಿಯಾಗಿದ್ದ ಐಎಎಸ್ ಅಧಿಕಾರಿ ಅರವಿಂದ್ ಕುಮಾರ್ ಅವರನ್ನು ಆರೋಪಿ-2 (ಎ-2), ಮುಖ್ಯ ಎಂಜಿನಿಯರ್ ಬಿಎಲ್‌ಎನ್ ರೆಡ್ಡಿ ಅವರನ್ನು ಆರೋಪಿ-3 (ಎ-3) ಎಂದು ಹೆಸರಿಸಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13(1)(ಎ) ಮತ್ತು 13(2)(ಎ) ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 409 ಮತ್ತು 120(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

No comments:

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...