ads

Search This Blog

Tuesday, 24 December 2024

ಶತಮಾನೋತ್ಸವ ನಡೆಸಿ ಹಣ ಪೋಲು ಮಾಡುತ್ತಿದ್ದಾರೆ - ಪ್ರಹ್ಲಾದ್ ಜೋಶಿ

 ಹುಬ್ಬಳ್ಳಿ: ಕಾಂಗ್ರೆಸ್ ಸಮಾವೇಶ ನಡೆಸಿ ಹಣ ಪೋಲು ಮಾಡುತ್ತಿದೆ. ಮಹಾತ್ಮ ಗಾಂಧೀಜಿಗೂ ಇಂದಿನ ಕಾಂಗ್ರೆಸ್‌ಗೂ ಏನು ಸಂಬಂಧ? ಈಗಿರುವ ಕಾಂಗ್ರೆಸ್ ನಲ್ಲಿ ಮೂಲಕ ಕಾಂಗ್ರೆಸ್ ಕಾಣುತ್ತಿಲ್ಲ. ಇದು ಇಂದಿರಾ ಗಾಂದಿ ಕಾಂಗ್ರೆಸ್ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು  ಹೇಳಿದ್ದಾರೆ.


ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬೆಳಗಾವಿಯಲ್ಲಿ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿರುವ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಗೂ ಇಂದಿನ ಕಾಂಗ್ರೆಸ್‌ಗೂ ಏನು ಸಂಬಂಧ? ಮಹಾತ್ಮಾ ಗಾಂಧಿ ಕಾಂಗ್ರೆಸ್ ಮತ್ತು ಇಂದಿನ ಕಾಂಗ್ರೆಸ್ ನಡುವೆ ವ್ಯತ್ಯಾಸವಿದೆ. ಈಗಿನ ಕಾಂಗ್ರೆಸ್ ಮೂಲ ಕಾಂಗ್ರೆಸ್ ಅಲ್ಲ. ಈ ಕಾಂಗ್ರೆಸ್ ಪಕ್ಷಕ್ಕೆ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಾಮರಸ್ಯದಲ್ಲಿ ನಂಬಿಕೆಯಿಲ್ಲ. ಬಿ.ಆರ್.ಅಂಬೇಡ್ಕರ್ ಅವರಿಗೆ ಅಗೌರವ ಸೂಚಿಸಿದೆ ಎಂದು ಹೇಳಿದರು.

ಸಿಟಿ ರವಿ ಪ್ರಕರಣ ಕುರಿತು ಮಾತನಾಡಿ. ವಿಧಾನ ಪರಿಷತ್‌ ಸದಸ್ಯ ಸಿ.ಟಿ. ಅವರನ್ನು ಕಾರಿನಲ್ಲಿ ಸುತ್ತಾಡಿಸಿದ್ದು ತನಗೆ ಗೊತ್ತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿಕೆ ನೀಡುತ್ತಾರೆ. ಅಂದರೆ, ಗೃಹ ಸಚಿವರನ್ನೇ ಕತ್ತಲಲ್ಲಿ ಇಟ್ಟು ಪೊಲೀಸರು ಹೀಗೆ ಮಾಡಿದ್ದಾರಾ? ಜಿಲ್ಲಾ ಉಸ್ತುವಾರಿ ಸಚಿವರು ಸಹ ಪೊಲೀಸರು ತಪ್ಪು ಮಾಡಿದ್ದಾರೆ ಎಂದಿದ್ದಾರೆ. ಹಾಗಾದರೆ ಸರ್ಕಾರದಲ್ಲಿ ಏನು ನಡೆಯುತ್ತಿದೆ? ಇದರ ಹಿಂದಿನ ಸೂತ್ರಧಾರರು ಯಾರು ಎನ್ನುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

No comments:

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...