ads

Search This Blog

Thursday, 19 December 2024

ಜಗದೀಪ್ ಧಂಖರ್ ಪದಚ್ಯುತಿಗೆ ಆಗ್ರಹಿಸಿ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯದ ನೋಟಿಸ್ ತಿರಸ್ಕೃತ

 

ಜಗದೀಪ್ ಧಂಖರ್ ಪದಚ್ಯುತಿಗೆ ಆಗ್ರಹಿಸಿ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯದ ನೋಟಿಸ್ ತಿರಸ್ಕೃತ

ನವದೆಹಲಿ: ಉಪಾಧ್ಯಕ್ಷ ಜಗದೀಪ್ ಧಂಖರ್ ಪದಚ್ಯುತಿಗೆ ಆಗ್ರಹಿಸಿ ಪ್ರತಿಪಕ್ಷಗಳು ನೀಡಿದ್ದ ಅವಿಶ್ವಾಸ ನಿರ್ಣಯದ ನೋಟಿಸ್ ತಿರಸ್ಕೃತಗೊಂಡಿದೆ. ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿ.ಸಿ ಮೋದಿ ಅವರು ಸದನದಲ್ಲಿ ಮಂಡಿಸಿದ ನಿರ್ಧಾರದಲ್ಲಿ, ಮಹಾಭಿಯೋಗ ನೋಟಿಸ್ ದೇಶದ ಸಾಂವಿಧಾನಿಕ ಸಂಸ್ಥೆಗಳನ್ನು ದೂಷಿಸುವ ಮತ್ತು ಪ್ರಸ್ತುತ ಉಪರಾಷ್ಟ್ರಪತಿಯ ಮಾನಹಾನಿ ಮಾಡುವ ಷಡ್ಯಂತ್ರದ ಭಾಗವಾಗಿದೆ ಎಂದು ಉಪಸಭಾಪತಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಸಭೆಯಲ್ಲಿ ವಿಪಕ್ಷಗಳು ಸಭಾಪತಿ ಜಗದೀಪ್ ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ನೋಟಿಸ್ ನೀಡಿದ್ದರು. ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು 67ಬಿ ವಿಧಿ ಅಡಿಯಲ್ಲಿ ವಿರೋಧ ಪಕ್ಷಗಳು ನೋಟಿಸ್ ನೀಡಿದ್ದು, ಈ ನೋಟಿಸ್ ಅನ್ನು ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿಸಿ ಮೋದಿ ಅವರಿಗೆ ಹಸ್ತಾಂತರಿಸಲಾಗಿತ್ತು. ರಾಜ್ಯಸಭೆಯ ಅಧ್ಯಕ್ಷರನ್ನು ಪದಚ್ಯುತಗೊಳಿಸಲು ಅವಿಶ್ವಾಸ ನಿರ್ಣಯವನ್ನು ತರಲು ಕನಿಷ್ಠ 14 ದಿನಗಳ ಮುಂಚಿತವಾಗಿ ನೋಟಿಸ್ ನೀಡುವುದು ಮುಖ್ಯ. ಆದರೆ ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 20ರಂದು ಅಂದರೆ ನಾಳೆ ಕೊನೆಗೊಳ್ಳುತ್ತಿದ್ದು ಆರು ದಿನಗಳ ಹಿಂದಷ್ಟೇ ಅವಿಶ್ವಾಸ ನಿರ್ಣಯದ ನೋಟಿಸ್ ಸಲ್ಲಿಸಿತ್ತು.

No comments:

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...