ಅದಾನಿ, ಅಮಿತ್ ಶಾ ವಿವಾದದಿಂದ ಗಮನ ಬೇರೆಡೆ ಸೆಳೆಯುವ ಬಿಜೆಪಿ ತಂತ್ರ- ರಾಹುಲ್
ನವದೆಹಲಿ: ಸಂಸತ್ ಆವರಣದಲ್ಲಿ ಗುರುವಾರ ಆಡಳಿತಾರೂಢ ಎನ್ ಡಿಎ ಹಾಗೂ ವಿಪಕ್ಷಗಳ ಪ್ರತಿಭಟನೆ ವೇಳೆಯಲ್ಲಿನ ನಡೆದ ತಳ್ಳಾಟ- ನೂಕಾಟ ಕುರಿತು ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಮತ್ತು ಅಮೆರಿಕದ ನ್ಯಾಯಾಲಯದಲ್ಲಿ ಅದಾನಿ ವಿರುದ್ಧ ಚಾರ್ಜ್ ಶೀಟ್ ವಿವಾದದಿಂದ ಗಮನ ಬೇರೆಡೆ ಸೆಳೆಯುವ ಬಿಜೆಪಿಯ ತಂತ್ರವಾಗಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಎಲ್ಲಾ ಸಂಸದರು ಶಾಂತಯುತವಾಗಿ ಸಂಸತ್ ಭವನಕ್ಕೆ ಹೋಗುತ್ತಿದ್ದರು. ಸಂಸತ್ ಭವನದ ಮೆಟ್ಟಿಲುಗಳ ಮೇಲೆ ನಿಂತಿದ್ದ ಬಿಜೆಪಿ ಸಂಸದರು ನಮ್ಮನ್ನು ತಡೆದರು. ನರೇಂದ್ರ ಮೋದಿ ಅವರ ಸ್ನೇಹಿತ ಅದಾನಿ ವಿರುದ್ಧ ಅಮೆರಿಕದ ನ್ಯಾಯಾಲಯದ ಕೇಸ್ ನಡೆಯುತ್ತಿದೆ. ಮೋದಿ ಭಾರತವನ್ನು ಅದಾನಿಗೆ ಮಾರಾಟ ಮಾಡುತ್ತಿದ್ದಾರೆ. ಇದು ಈ ವಿವಾದಕ್ಕೆ ಪ್ರಮುಖ ಕಾರಣವಾಗಿದೆ. ಸಂಸತ್ತಿನಲ್ಲಿ ಈ ಕುರಿತ ಚರ್ಚೆಗೆ ಬಿಜೆಪಿ ಸಿದ್ಧವಿಲ್ಲ ಎಂದು ಆರೋಪಿಸಿದರು.
No comments:
Post a Comment