ads

Search This Blog

Friday, 20 December 2024

ಪ್ರೌಢಶಾಲಾ ಸಹ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಮಟ್ಟೂರ ಆಗ್ರಹ

 ಮಾಜಿ ಎಮ್‌ಎಲ್‌ಸಿ ಶರಣಪ್ಪ ಮಟ್ಟೂರ ನೇತೃತ್ವದಲ್ಲಿ ಮನವಿ ಸಲ್ಲಿಕೆ

ಪ್ರೌಢಶಾಲಾ ಸಹ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಮಟ್ಟೂರ ಆಗ್ರಹ 

ಭಾಲ್ಕಿ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಮಸ್ಯೆಗಳ ಪರಿಹಾರ ಮತ್ತು ವಿವಿಧ ಬೇಡಿಕೆಗಳನ್ನು ಇಡೇರಿಸುವಂತೆ ಆಗ್ರಹಿಸಿ ಮಾಜಿ ಶಾಸಕ ಶರಣಪ್ಪ ಮಟ್ಟೂರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಸಲ್ಲಿಸಲಾಯಿತು.



ಶಿಕ್ಷಕರ ಸಮಸ್ಯೆಗಳ ಪರಿಹಾರ ಮತ್ತು ವಿವಿಧ ಬೇಡಿಕೆಗಳನ್ನು ಇಡೇರಿಸುವಂತೆ ಆಗ್ರಹಿಸಿ ಮಾಜಿ ಶಾಸಕ ಶರಣಪ್ಪ ಮಟ್ಟೂರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಸಲ್ಲಿಸಲಾಯಿತು.

ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ವತಿಯಿಂದ ಪ್ರೌಢಶಾಲಾ ಸಹ ಶಿಕ್ಷಕರ ಕಾನೂನು ಸಲಹೆಗಾರ ಹಾಗು ಮಾಜಿ ವಿಧಾನ ಪರಿಷತ್ ಸದಸ್ಯ ಶರಣಪ್ಪ ಮಟ್ಟೂರ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಶಿಕ್ಷಕರ ಸಂಘದ ಪದಾಧಿಕಾರಿಗಳು, ಪ್ರೌಢಶಾಲಾ ಸಹಶಿಕ್ಷಕರಿಗೆ ಕಲಿಕಾ ಆಸರೆ, ಮರುಸಿಂಚನ, ಎಫ್‌ಎಲ್‌ಎನ್, ಪ್ರತಿಬಿಂಬ ಇತ್ಯಾದಿ ಕಾರ್ಯಕ್ರಮಗಳ ಅನುಷ್ಠಾನಗಳಿಂದ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ತೊಂದರೆಯಾಗುತ್ತಲಿದೆ. ಕಾರಣ ಶಿಕ್ಷಕರ ಮೇಲಿನ ಒತ್ತಡ ತಗ್ಗಿಸಿ, ಗುಣಾತ್ಮಕ ಕಲಿಕೆಗೆ ಒತ್ತು ನೀಡಬೇಕು. ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ೩ ಹಂತದ ಪರೀಕ್ಷೆಗಳ ಬದಲು ಮೊದಲಿನಂತೆ ಎರಡು ಹಂತದ ಪರೀಕ್ಷೆಗಳನ್ನು ಆಯೋಜಿಸಬೇಕು. ಸಿಬಿಎಸ್‌ಇ, ಐಸಿಎಸ್‌ಸಿ ಪರೀಕ್ಷಾ ಫಲಿತಾಂಶ ಮಾದರಿಯಂತೆ ಆಂತರಿಕ ಅಂಗಳನ್ನು ಪರಿಗಣಿಸಿ ಫಲಿತಾಂಶ ನೀಡಬೇಕು. ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರಶ್ನೆ ಪತ್ರಿಕೆ ವಿನ್ಯಾಸ ಸರಳೀಕರಣಗೊಳಿಸಬೇಕು. ಪರೀಕ್ಷಾ ಮೌಲ್ಯಮಾಪನ ಕಾರ್ಯ ಏಪ್ರಿಲ್ ೧೪ ರ ಒಳಗಾಗಿ ಪೂರ್ಣಗೊಳಿಸಬೇಕು. 

ಖಾಸಗಿ ಅನುದಾನಿತ ಶಾಲೆಗಳಲ್ಲಿ ೨೦೧೬ ರಿಂದ ೨೦೨೦ ರ ವರೆಗೆ ಖಾಲಿ ಇರುವ ಹುದ್ದೆಗಳನ್ನು ತುಂಬಲು ಶೀಘ್ರದಲ್ಲಿ ಅನಿಮತಿ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಬೇಕು. ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಬಡ್ತಿಹೊಂದಿದ ಶಿಕಷಕರುಗಳಿಗೆ ಕಾಲಮಿತಿ ವೇತನ ಬಡ್ತಿ ನೀಡಲು ವೃಂದ ನೇಮಕಾತಿ ನಿಯಮಗಳಿಗೆ ಸಮಗ್ರ ತಿದ್ದುಪಡಿ ತರಬೇಕು. ಶಾಲಾ ಶಿಕ್ಷಣ ಇಲಾಖೆಯ ಕರ್ತವ್ಯ ನಿರ್ವಹಿಸುತ್ತಿರುವ ಪ್ರೌಢಶಾಲಾ ಶಿಕ್ಷಕರು ರಜೆ ಸಹಿತ ನೌಕರರಾಗಿದ್ದು, ಈ ಹಿಂದೆ ಜಾರಿಯಲ್ಲಿದ್ದಂತೆ ದಸರಾ ರಜೆಗಳನ್ನು ಅಕ್ಟೋಬರ್ ೨ ರಿಂದ ಅ.೨೯ ರ ರವರೆಗೆ ಮತ್ತು ಬೇಸಿಗೆ ರಜೆಗಳನ್ನು ಏಪ್ರಿಲ್ ೧೦ ರಿಂದ ಮೇ ೩೦ ರ ವರೆಗೆ ನಿಗಧಿಗೊಳಿಸುವುದು. ರಜೆಯ ಅವಧಿಯಲ್ಲಿ ತರಬೇತಿ, ಮೌಲ್ಯಮಾಪನ ಇನ್ನಿತರೆ ಕೆಲಸಗಳನ್ನು ನಿರ್ವಹಿಸಿದಲ್ಲಿ ಅದಕ್ಕೆ ಸಮಾನಾದ ಗಳಿಕೆ ರಜೆ ನೀಡಬೆಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ ಮನವಿ ಪತ್ರ ಸ್ವೀಕರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಪ್ರೌಢಶಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ದತ್ತು ಕಾಟಕರ, ಕಾರ್ಯದರ್ಶಿ ಬಾಲಾಜಿ ಕಾಂಬಳೆ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಹಣಮಂತ ಕಾರಾಮುಂಗೆ, ಕಿರಣಕುಮಾರ ಭಾಟಸಾಂಗವಿ, ವಿಠಲರಾವ ಬಿರಾದಾರ, ರಾಜಕುಮಾರ ಬರಸೂರೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಶಿವಕುಮಾರ ಫುಲಾರಿ, ಮಲ್ಲಿಕಾರ್ಜುನ ಕನ್ನಾಳೆ, ಸಹದೇವ ಗೌಡಗಾವೆ, ಮುಖ್ಯಶಿಕ್ಷಕ ದಿಲೀಪ ಬಿರಾದಾರ, ಮಲ್ಲಿನಾಥ ಸಜ್ಜನ ಮತ್ತಿತರರು ಇದ್ದರು.


No comments:

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...