ads

Search This Blog

Tuesday, 24 December 2024

ಒಳ ಮೀಸಲಾತಿ ಜಾರಿಯಾಗುವ ತನಕ ಮುಂಬಡ್ತಿ, ನೇಮಕಾತಿ ಆದೇಶ ನಿಲ್ಲಿಸಿ - ಮಾದಿಗ ಸಮುದಾಯಗಳ ಸ್ವಾಭಿಮಾನ ಒಕ್ಕೂಟ ಎಚ್ಚರಿಕೆ

ದೇವನಹಳ್ಳಿ : ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿಗೆ ತರಲು ಹಿಂದೇಟು ಹಾಕುತ್ತಿರುವುದು ಸರಿಯಲ್ಲ, ಸರ್ವೋಚ್ಛ ನ್ಯಾಯಾಲಯದ ತೀರ್ಪಿಗೆ ಬದ್ದರಾಗಿ ಎಸ್.ಸಿ, ಎಸ್.ಟಿ ಸಮುದಾಯಗಳಿಗೆ ಒಳ ಮೀಸಲಾತಿ ಕೊಡಲು ತಾತ್ವಿಕ ಒಪ್ಪಿಗೆ ನೀಡಿದ್ದರೂ ಸುಮ್ಮನಿರುವುದು ಏಕೆ ಇದು ವಚನ ಭ್ರಷ್ಠ ಸರ್ಕಾರ ಎಂದು ಆಲ್ ಇಂಡಿಯಾ ಬಿ.ಎಸ್.ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.



  ಪಟ್ಟಣದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಕರೆಯಲಾಗಿದ್ದ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಠ ಜಾತಿಗಳಿಗೆ ಒಳ ಮೀಸಲಾತಿ ಜಾರಿಯಾಗುವ ತನಕ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಹಾಗೂ ಮುಂಬಡ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ತೀರ್ಮಾನದವರೆಗೂ ಹೊರಡಿಸಬಾರದು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ನೀಡಿದರು.

 ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ಗುಂಪುಗಳಲ್ಲನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ತೀರ್ಮಾನದವರೆಗೆ ಹೊರಡಿಸಬಾರದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ನಿರ್ದರಿಸಿದೆ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಎಚ್.ಕೆ. ಪಾಟೀಲ್ ಪತ್ರಿಕಾ ಹೇಳಿಕೆಯಲ್ಲಿ ಸಹ ತಿಳಿಸಿದೆ, ಈ ಆದೇಶವನ್ನು ಸಮಾಜ ಕಲ್ಯಾಣ ಇಲಾಖೆ ತಡವಾಗಿ ಡಿ.ಪಿ.ಎ.ಆರ್ ಇಲಾಖೆಗೆ ರವಾನಿಸಿದೆ, ಎರಡು ವಾರಗಳ ನಂತರ ಡಿ.ಪಿ.ಎ.ಆರ್. ಇಲಾಖೆ, ಈ ಆದೇಶವನ್ನು ಎಲ್ಲಾ ಇಲಾಖೆಗಳಿಗೆ ಸೂಚಿಸಿದೆ.

 ಇದನ್ನು ಲೆಕ್ಕಿಸದ ಹಲವಾರು ಇಲಾಖೆಗಳು ನೇರ ನೇಮಕಾತಿ ಪ್ರಕ್ರಿಯೆ ಶುರು ಮಾಡಲು ಅಧಿಸೂಚನೆಯನ್ನು ಹೊರಡಿಸುತ್ತಿರುವುದು ಖಂಡನೀಯ, ಡಿಪಿಎ.ಆರ್. ಇಲಾಖೆ ಇಲಾಖೆ ಇದುವರೆಗೂ ವಿವಿಧ ಇಲಾಖೆಗಳು ನೇಮಕಾತಿ ಅಧಿಸೂಚನೆಗಳನ್ನು ಕೂಡಲೆ ಹಿಂಪಡೆದು ಒಳ ಮೀಸಲಾತಿ ಜಾರಿಯಾಗುವವರೆಗೆ ಯಾವುದೆ ನೇಮಕಾತಿ ಮುಂಬಡ್ತಿ ಮಾಡಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುತ್ತಿದೆ ಎಂದರು.

 ಆಲ್ ಇಂಡಿಯಾ ಬಿ.ಎಸ್.ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದಿಗುಂದ ವೆಂಕಟೇಶ್ ಮಾತನಾಡಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಪೀಠ ಆಯೋಗವನ್ನು ರಚಿಸಿದ್ದು, ಈ ನಿರ್ಣಯವನ್ನು ಪ್ರಕಟಿಸುವಾಗ ರಾಜ್ಯ ಸಚಿವ ಸಂಪುಟ ಒಳ ಮೀಸಲಾತಿ ಜಾರಿಯಾಗುವವರೆಗೆ ಹೊರಡಿಸಬಾರದೆಂದು ಎಚ್ಚರಿಕೆ ನೀಡಲಾಗುತ್ತಿದೆ, ಈ ಕ್ರಮಗಳನ್ನು ಅನುಸರಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಮಾದಿಗ ಸಮುದಾಯಗಳ ಸ್ವಾಭಿಮಾನ ಒಕ್ಕೂಟದಿಂದ ರಾಜ್ಯಾಧ್ಯಂತ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.
 ಈ ಸಮಯದಲ್ಲಿ ಮಾದಿಗ ಸಮುದಾಯದ ಒಕ್ಕೂಟದ ದ.ಸಂ.ಸ ಸಂಸ್ಥಾಪಕ ಡಾ|| ಎನ್. ಮೂರ್ತಿ, ರಾಜ್ಯಾಧ್ಯಕ್ಷ ಗುರುಮೂರ್ತಿ, ರಾಜ್ಯ ಪ್ರ. ಕಾರ್ಯದರ್ಶಿ ಜೆ.ಬಿ.ರಾಜು, ರಾಜ್ಯ ಕಾರ್ಯಾಧ್ಯಕ್ಷ ಕೇಶವಮೂರ್ತಿ, ಡಾ|| ಭೀಮರಾಜ್, ಎಂ.ಸಿ. ಶ್ರೀನಿವಾಸ್, ಜೆ.ಸಿ. ಪ್ರಕಾಶ್, ಆರ್. ಲೋಕೇಶ್, ಣಾಗರಾಜು, ಕಾಳಪ್ಪ, ತಾಲೂಕು ಅಧ್ಯಕ್ಷ ನಾಗರಾಜು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ಮಾದಿಗ ಸಮುದಾಯಗಳ ಸ್ವಾಭಿಮಾನ ಒಕ್ಕೂಟದ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದ ಪದಾಧಿಕಾರಿಗಳು

No comments:

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...