ads

Search This Blog

Monday, 23 December 2024

ಮೈಲಾರ ಮಲ್ಲಣ್ಣ ದೇವರ ಮೂರ್ತಿ ಆನೆ ಮೇಲೆ ಮೆರವಣಿಗೆ : ರಥೋತ್ಸವ

ಬೀದರ್ - ಭಾಲ್ಕಿ ತಾಲ್ಲೂಕಿನ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ಜಾತ್ರೆ ನಿಮಿತ್ತ ರವಿವಾರ  ಮಲ್ಲಣ್ಣ ದೇವರ ಮೂರ್ತಿ ಆನೆ ಮೇಲೆ ಮೆರವಣಿಗೆ  ನಡೆಯಿತು. ನಂತರ ರಥೋತ್ಸವ ಜರುಗಿತು. ಅಪಾರ ಭಕ್ತ ಸಮೂಹ ಭಕ್ತಿಪರಾಕಷ್ಟೆ ಮೆರೆದರು. 

ಮೆರವಣಿಗೆಯು ದೇವಸ್ಥಾನದಿಂದ ಹೊರಟು ಗಣೇಶ ಕುಂಡ, ಜ್ಯೋತಿರ್ಲಿಂಗ ದೇವಸ್ಥಾನ, ತೆಪ್ಪದ ಕುಂಡ ಹಾದು ಘಟಮಾರಿ ದೇವಸ್ಥಾನಕ್ಕೆ ತಲುಪಿ ವಗ್ಗೆ ಕಡೆಯಿಂದ ಹಾಡು, ಚಾಬುಕ ನೃತ್ಯ ನಡೆಯಿತು.  ಮಲ್ಲಣ್ಣ ದೇವಸ್ಥಾನಕ್ಕೆ ಆಗಮಿಸಿ ಮಂಗಳಾರತಿಯೊಂದಿಗೆ ಮೆರವಣಿಗೆಯ ಸಮಾಪ್ತಿ ಮಾಡಲಾಯಿತು. 

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ ಮೇತ್ರೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾವ್ ಕುಲಕರ್ಣಿ, ವ್ಯವಸ್ಥಾಪಕ ಸಂಜೀವಕುಮಾರ ಸುಂದಾಳ, ಪ್ರಧಾನ ಅರ್ಚಕ ಬಸಪ್ಪ ಹಿರಿವಗ್ಗೆ, ಮಲ್ಲಿಕಾರ್ಜುನ ಹಿರಿವಗ್ಗೆ, ಪ್ರಕಾಶ ಹಿರಿವಗ್ಗೆ ಮತ್ತು ಆಕಾಶ ಹಿರಿವಗ್ಗೆ ಸೇರಿದಂತೆ ದೇವಸ್ಥಾನದ ಸಿಬ್ಬಂದಿಗಳು ಕೂಡ ಇದ್ದರು. 

ಜಾತ್ರೆ ನಿಮಿತ್ಯ ಮಹಾರಾಷ್ಟ್ರ ತೇಲಂಗಾಣ, ಆಂಧ್ರಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ವಿವಿಧ ಕಡೆಯಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಮಲ್ಲಣ್ಣನ ಕೃಪೆಗೆ ಪಾತ್ರರಾದರು.. ಮೆರವಣಿಗೆಯ್ಯೂದಕ್ಕೂ ಭಕ್ತರು ಮಲ್ಲಣ್ಣನ ಜೈಯಘೋಷದೊಂದಿಗೆ ಎಳ್ಳಕೋಟ ಎಳ್ಳಕೋಟಗೆ ಎಂಬ ಜೈಯಿಕಾರ ಹಾಕಿದರು



ತೇಲಂಗಾಣ, ಆಂಧ್ರ ಮತ್ತು ಕರ್ನಾಟಕ ಸೇರಿದಂತೆ ವಿವಿಧ ಕಡೆಯಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. 



No comments:

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...