ಬೀದರ :- ರೆಡ್ಡಿ ಸಮಾಜವು ಶಾಂತಿ ಸಹಬಾಳ್ವೆಯ ಸಂಕೇತವಾಗಿದೆ. ಇವರು ಸರ್ವ ಜನಾಂಗದವರೊAದಿಗೆ ಪ್ರೀತಿ ವಾತ್ಸಲ್ಯದಿಂದ ಒಳಗೊಳ್ಳುವ ಪರಿಪಾಠ ಹೊಂದಿದ್ದಾರೆ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಮ್ ಖಾನ್ ಹೇಳಿದರು.

ಅವರು ಇಂದು ಬೀದರನ ಹೇಮ ವೇಮ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರದಲ್ಲಿ ಹಮ್ಮಿಕೊಂಡಿದ್ದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿಗೆ ಕೆಲವರು ರೆಡ್ಡಿ ಸಮಾಜವನ್ನು 3ಎ ಯಿಂದ ಬೇರೆ ವರ್ಗಕ್ಕೆ ಸೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಈ ಮನವಿಯನ್ನು ಪುರಸ್ಕರಿಸದೆ ಯಥಾವತ್ತಾಗಿ ಮುಂದುವರೆಸಬೇಕು ಎಂದು ಸಮಾಜದ ಮುಖಂಡರು ಮನವ ಮಾಡಿದ್ದಾರೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಮನವರಿಕೆ ಮಾಡಲಾಗುವುದು. ನಾನು ಕಳೆದ ಬಾರಿ ಘೋಷಿಸಿದ 10 ಲಕ್ಷ ರೂಪಾಯಿ ಅನುದಾನವನ್ನು 15 ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.
ಸಹ ಶಿಕ್ಷಕ ಹಾಗೂ ಹುಮನಾಬಾದ ಮಾಜಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕ ಅಧ್ಯಕ್ಷ ವಿರಂತರೆಡ್ಡಿ ಜಂಪಾ, ಅತಿಥಿ ಉಪನ್ಯಾಸ ನೀಡಿ ಮಾತನಾಡಿ, ವೇಮನರು ತಮ್ಮ ಪದ್ಯ ಹಾಗೂ ವಚನಗಳ ಮೂಲಕ ಸಮಾಜದಲ್ಲಿನ ಅಂಕು-ಡೊAಕುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ. ಆಂದ್ರೆ ಪ್ರದೇಶದ ಕೆಲವು ಸಾಹಿತಿಕಾರರು ಉದ್ದೇಶಪೂರ್ವವಾಗಿ ಇವರ ಇತಿಹಾಸ ಮುಚ್ಚಿಟ್ಟಿದ್ದರು. ನಂತರ ದಿನಗಳಲ್ಲಿ ಸಿ.ಪಿ ಬ್ರೋನ್ ವೇಮನರ ಸಾಹಿತ್ಯವನ್ನು ಇಂಗ್ಲೀಷ್ಗೆ ಅನುವಾದ ಮಾಡಿದ್ದರಿಂದ ನಮಗೆ ಅವರ ಇತಿಹಾಸ ತಿಳಿಯಲು ಸಾಧ್ಯವಾಯಿತು. ಮುಂದಿನ ದಿನಗಳಲ್ಲಿ ವೇಮನರ ಕುರಿತು ಇನ್ನು ಹೆಚ್ಚಿನ ಸಂಶೋಧನೆ ಆಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಜುರೆಡ್ಡಿ ಜಂಪ್ಪಾರವರು ದೇವಸ್ಥಾನದ ಭೂಮಿ ಖರೀದಿಗಾಗಿ ರೂಪದಲ್ಲಿ 10 ಲಕ್ಷ ರೂಪಾಯಿ ದೇಣಿಗೆ ನೀಡಿದರು.ಇತ್ತೀಚಿಗೆ ನಡೆದ ಪಿಕೆಪಿಎಸ್ ಹಾಗೂ ಗ್ರಾಮ ಪಂಚಾಯತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ವಿಜೇತರಾದವರಿಗೆ ಹಾಗೂ ಸರ್ಕಾರಿ ಉದ್ಯೋಗದಿಂದ ನಿವೃತ್ತಿ ಹಾಗೂ ಪದೋನ್ನತಿ ಹೊಂದಿದ್ದವರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ನಗರ ಸಭೆ ಅಧ್ಯಕ್ಷ ಮೊಹ್ಮದ್ ಗೌಸ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಗನ್ನಾಥ ಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಎನ್. ಬಿ. ರೆಡ್ಡಿ ಸ್ವಾಮಿಜಿ, ರೆಡ್ಡಿ ಸಮಾಜದ ಅಧ್ಯಕ್ಷ ಶಂಕರರೆಡ್ಡಿ ಚಿಟ್ಟಾ, ಕಾರ್ಯದರ್ಶಿ ಗೋಪಾಲರೆಡ್ಡಿ, ಉಪಾಧ್ಯಕ್ಷ ರಾಜರೆಡ್ಡಿ ಸಮಾಜದ ಮುಖಂಡರಾದ ಸಂಜುರೆಡ್ಡಿ ಜಂಪ್ಪಾ, ರಾಜು ಚಿಂತಾಮಣಿ, ಸಂಗ್ರಾಮರೆಡ್ಡಿ, ಸಂಚಾಲಕ ಡಾ. ಶ್ರೀನಿವಾಸ್ ರೆಡ್ಡಿ, ಓಂರೆಡ್ಡಿ, ಸಮಾಜದ ಬಂದುಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
No comments:
Post a Comment