ads

Search This Blog

Sunday, 5 January 2025

ದೇವಸ್ಥಾನಗಳ ಮೂಲಕ ಧರ್ಮಪ್ರಚಾರ ಮಾಡಲು ಕರ್ನಾಟಕ ರಾಜ್ಯ ದ್ವಿತೀಯ ಮಂದಿರ ಅಧಿವೇಶನದಲ್ಲಿ ೮೦೦ಕ್ಕೂ ಹೆಚ್ಚು ವಿಶ್ವಸ್ಥರ ನಿರ್ಧಾರ

ಬೆಂಗಳೂರು : ಸಾಮಾಜಿಕನ್ಯಾಯ , ಕುಟುಂಬಶಿಕ್ಷಣ ವ್ಯವಸ್ಥೆಯನ್ನು ಒಂದೊಂದಾಗಿ ನಾವೇ ಸರ್ಕಾರಕ್ಕೆ ಒಪ್ಪಿಸಿದ್ದೇವೆಸಮಾಜ ಸರಕಾರದ ಅಧೀನವಾಗುವುದು ದೈನ್ಯ ಪರಿಸ್ಥಿತಿಯಾಗಿದೆಪ್ರತಿಯೊಂದು ವ್ಯವಸ್ಥೆಯಲ್ಲಿ ಸಮಾಜದ ಜನರು ಧರ್ಮದ ಆಧಾರವನ್ನು ಇಟ್ಟುಕೊಂಡು ಜೀವನ ನಡೆಸಿದರೆ ನಮ್ಮ ಸರ್ವಾಂಗೀಣ ಉನ್ನತಿಯಾಗುತ್ತದೆಸರಕಾರದ ಹಸ್ತಕ್ಷೇಪದಿಂದ ದೇವಸ್ಥಾನಗಳನ್ನು ಹಿಂಪಡೆದರ ಮಾತ್ರ ಪುನಃ ಸಮಾಜದ ಅಭಿವೃದ್ಧಿಯನ್ನು ಮಾಡಲು ಸಾಧ್ಯವಾಗಬಹುದು ಎಂದು ಉಪಸ್ಥಿತರಿಗೆ ಶ್ರೀ ಅಭಿನವ ಶಂಕರ ಭಾರತಿ ಮಹಾಸ್ವಾಮೀಜಿ ಮಾರ್ಗದರ್ಶನವನ್ನು ಮಾಡಿದರು.

ದೇವಸ್ಥಾನಗಳ ಸಂಸ್ಕೃತಿಯ ರಕ್ಷಣೆಗಾಗಿ ಕರ್ನಾಟಕ ಮಂದಿರ ಮಹಾಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಆಯೋಜಿತ ‘ಕರ್ನಾಟಕ ರಾಜ್ಯ ದ್ವಿತೀಯ ಮಂದಿರ ಅಧಿವೇಶನವು ಗಂಗಮ್ಮ ತಿಮ್ಮಯ್ಯ ಕನ್ವೆಂಷನ್ ಹಾಲ್‌, ಬಸವೇಶ್ವರ ನಗರಬೆಂಗಳೂರಿನಲ್ಲಿ ಎರಡನೆಯ ದಿನವು  ಯಶಸ್ವಿಯಾಗಿ ನಡೆಯುತ್ತಿದೆ ಸಮಯದಲ್ಲಿ ಸನಾತನ ಪಂಚಾಂಗ ಆ್ಯಂಡ್ರಾಯ್ಡ್ ಆ್ಯಪ್ 2025 ಇದರ ಲೋಕಾರ್ಪಣೆ ಮಾಡಲಾಯಿತು  (ಸನಾತನ ಪಂಚಾಂಗ ಆ್ಯಪ್ ನಲ್ಲಿ ಆಯಾದಿನದ ಮಾಹಿತಿಪಂಚಾಂಗಮುಹೂರ್ತ ಮಾತ್ರವಲ್ಲದ  ಹಬ್ಬ  ಉತ್ಸವಗಳು,  ಆಧ್ಯಾತ್ಮಆಯುರ್ವೇದ ಮತ್ತು ಧರ್ಮಶಿಕ್ಷಣಕ್ಕೆ ಸಂಬಂಧಿಸಿದ ಲೇಖನಗಳು ಲಭ್ಯವಿರುವುದು )  ನಂತರ ಸನಾತನದ ಗ್ರಂಥವಾದ 'ಆಯುರ್ವೇದವನ್ನು ಪಾಲಿಸಿ ಔಷಧಿಗಳಿಲ್ಲದೇ ಆರೋಗ್ಯವಂತರಾಗಿಇದರ -ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

ಧರ್ಮ ಪಾಲನೆಯಿಂದಲೇ ವಿಶ್ವದ ಶಾಂತಿ ಸಾಧ್ಯ ! - ಪೂಜ್ಯ ಸಿಧ್ಧಲಿಂಗ ಸ್ವಾಮಿಜಿ

ಸಂಸ್ಕೃತಿಯನ್ನು ಬೆಳೆಸುವ ಕಾರ್ಯ ದೇವಸ್ಥಾನ ಮಾಡಬಲ್ಲದುವೇದ ಪಾರಾಯಣ , ಸಾಮೂಹಿಕ ಪೂಜೆಯಜ್ಞ ಇತ್ಯಾದೆಗಳ ಮೂಲಕ ದೇವಸ್ಥಾನ ಮತ್ತು ಮಠಗಳಲ್ಲಿ ಜಾಗೃತಿ ಮೂಡಿಸಬೇಕುಧರ್ಮದಿಂದಲೇ ವಿಶ್ವದಶಾಂತಿಮಾನವ ಧರ್ಮದ ಮೌಲ್ಯವನ್ನು  ಎತ್ತಿಹಿಡಿದಾಗ ವಿಶ್ವಕಲ್ಯಾಣ ಸಾಧ್ಯವಿಶ್ವವೇ ನಮ್ಮ ಮನೆಲೋಕಾ ಸಮಸ್ತಾ ಸುಖಿನೋ ಭವಂತು ಎಂಬ ಧ್ಯೇಯವನ್ನಿಟ್ಟು ಧರ್ಮದ ರಕ್ಷಣೆ ಮಾಡಲು ಸ್ಕಂದೇಶ್ವರ ಸ್ವಾಮಿ ದೇವಸ್ಥಾನದ ಪೂಜ್ಯ ಸಿಧ್ಧಲಿಂಗ ಸ್ವಾಮಿಜಿ ಮಾರ್ಗದರ್ಶನ ಮಾಡಿದರು.

ಹಿಂದೂ ಸಂಸ್ಕೃತಿಯ ಉಳಿವಿಗಾಗಿ ಜಾಗೃತಿ ಅಗತ್ಯ - ವೇದ ಬ್ರಹ್ಮ  ಶ್ರೀ ಇಂದ್ರಾಚಾರ್ಯ

ಹಿಂದೂ ಧರ್ಮ , ಮತ್ತು ಸಂಸ್ಕೃತಿ ಉಳಿಸಿ ಬೆಳೆಸುವ ಮತ್ತು ಹಿಂದೂ ಧರ್ಮ ಜಾಗೃತಿ  ಕಾರ್ಯ ಪ್ರತಿಯೊಂದು ದೇವಸ್ಥಾನದಲ್ಲಿ ಆಗಬೇಕೆಂಬುದರ ಮಹತ್ವವನ್ನು ವೇದ ಬ್ರಹ್ಮ ಶ್ರೀ ಇಂದ್ರಾಚಾರ್ಯ ಇವರು  ಉಪಸ್ಥಿತರಿಗೆ ತಿಳಿಸಿದರು.

ಪಾಕಿಸ್ತಾನದಲ್ಲಿ ಸನಾತನ ಬೋರ್ಡ್ ಇಲ್ಲಬಾಂಗ್ಲಾದೇಶದಲ್ಲಿ ಸನಾತನ ಬೋರ್ಡ್ ಇಲ್ಲಹಾಗಿದ್ದರೆ ಭಾರತದಲ್ಲಿ ವಕ್ಫ್ ಬೋರ್ಡ್ ಯಾಕೆ ? - ಶ್ರೀ.ಸುನಿಲ್ ಘನವಟ್

ಇಂದು ದೇವಸ್ಥಾನಗಳ ಪವಿತ್ರ ಭೂಮಿ ಒಂದು ರಾಕ್ಷಸಿ ಕಾನೂನಿನ ಮೂಲಕ ವಕ್ಫ್ ಬೋರ್ಡ್ ವಶವಾಗುತ್ತಿದೆವಕ್ಫ್ ಬೋರ್ಡ್ ಮೂಲಕ ಯಾರ ಭೂಮಿಯೇ ಇರಲಿಅದಕ್ಕೆ ಒಂದು ನೋಟಿಸ್ ಕೊಟ್ಟು ಭೂಮಿಯನ್ನು ವಕ್ಫ್ ವಶಪಡಿಸಿಕೊಳ್ಳಬಹುದುಕೇವಲ ನಾಗರಿಕರದ್ದಲ್ಲಕರ್ನಾಟಕ ರಾಜ್ಯದ ಸುಮಾರು ೨೫೦೦೦ ಎಕ್ರೆ ಭೂಮಿಯ ಮೇಲೆ ವಕ್ಫ್ ದಾವೆ ಹೂಡಿದೆಭಾರತದಲ್ಲಿ ಇಂತಹ ಅನೇಕ ಕ್ಷೇತ್ರಗಳನ್ನು ವಕ್ಫ್ ಬೋರ್ಡ್ ಅನಧಿಕೃತವಾಗಿ ವಶಪಡಿಕೊಂಡಿದೆಭಾರತದಲ್ಲಿ  ಲಕ್ಷ ೫೦ ಸಾವಿರ ಎಕರೆ ಜಾಮೀನು ವಕ್ಫ್ ಬೋರ್ಡ್ ದ್ದಾಗಿದೆದೇವಸ್ಥಾನಕ್ಕೆ ಸಂಬಂಧಿಸಿದ ಕಾಗದಪತ್ರಗಳನ್ನುದಾಖಲೆಗಳನ್ನು ನವೀಕರಿಸಿ ವಕ್ಫ್ ಬೋರ್ಡ್  ಸಂಕಟದಿಂದ ದೇವಸ್ಥಾನಗಳನ್ನು ರಕ್ಷಿಸಿ ಎಂದು ಶ್ರೀ.ಸುನಿಲ್ ಘನವಟ್ ಇವರು ಕರೆ ನೀಡಿದರು.

ಕರ್ನಾಟಕ ಮಂದಿರ ಅಧಿವೇಶನಕ್ಕೆ ತುಮಕೂರು ಮತ್ತು ಬೆಂಗಳೂರು ಜಿಲ್ಲೆಯಿಂದ 34 ಕ್ಕೂ ಅಧಿಕ ದೇವಸ್ಥಾನದ  ವಿಶ್ವಸ್ಥರು ಪಾಲ್ಗೊಂಡಿದ್ದು ಇಲ್ಲಿ ನಡೆದ ಗುಂಪು ಚರ್ಚೆಗಳಲ್ಲಿ ತಮ್ಮ ತಮ್ಮ ಜಿಲ್ಲೆಯಲ್ಲಿನ ಮಂದಿರಗಳಲ್ಲಿ ಧರ್ಮ ಶಿಕ್ಷಣ ವರ್ಗಗಳನ್ನು ಪ್ರಾರಂಭಿಸುವುದು, ಧರ್ಮ ಶಿಕ್ಷಣ ನೀಡುವ ಫಲಕಗಳನ್ನು ಅಳವಡಿಸುವುದು, ಸರಕಾರೀಕರಣದ ವಿರುದ್ಧ ಹೋರಾಡುವುದು, ಮಂದಿರ ಮಹಾಸಂಘದೊಂದಿಗೆ ಕೈಜೋಡಿಸಿ ಪ್ರತಿಯೊಂದು ಉಪಕ್ರಮಗಳಲ್ಲಿ ಸಹಭಾಗಿ ಆಗುವಂತೆ ಸಂಕಲ್ಪ ಮಾಡಿದರು. ತುಮಕೂರು  ಜಿಲ್ಲೆಯ ಡಾ.ಅರ್.ಎಲ್.ರಮೇಶ್ ಬಾಬು, ಸಿ.ಆರ್. ಮೋಹನ್ ಕುಮಾರ್,  ಎಂ.ಮನೋಜ್, ಆನಂದ್ ಗುರೂಜೀ ಹಾಗೂ ಇತರ ಗಣ್ಯರು  ಉಪಸ್ಥಿತರಿದ್ದರು.

No comments:

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...