ದಲ್ಲೇವಾಲ್ ರಕ್ತದೊತ್ತಡದಲ್ಲಿ ಏರುಪೇರು, ಆರೋಗ್ಯ ಸ್ಥಿತಿ ಚಿಂತಾಜನಕ- ವೈದ್ಯರು
ಚಂಡೀಗಢ: ರೈತರ ಬೇಡಿಕೆಗಳಿಗೆ ಒತ್ತಾಯಿಸಿ ೪೨ ದಿನಗಳಿಂದ ಅನರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಸೋಮವಾರ ಸಂಜೆ ರಕ್ತದೊತ್ತಡದಲ್ಲಿ ಕುಸಿತವಾಗಿದೆ ಎಂದು ಪ್ರತಿಭಟನಾ ಸ್ಥಳದಲ್ಲಿ ಹಾಜರಿದ್ದ ವೈದ್ಯರು ತಿಳಿಸಿದ್ದಾರೆ.
ಇದಕ್ಕೂ ಮೊದಲು ಸುಪ್ರೀಂ ಕರ್ಟ್ ನೇಮಿಸಿದ ಸಮಿತಿ ೭೦ ರ್ಷದ ದಲ್ಲೆವಾಲ್ ಅವರನ್ನು ಭೇಟಿಯಾಗಿ ವೈದ್ಯಕೀಯ ನೆರವು ತೆಗೆದುಕೊಳ್ಳುವಂತೆ ಒತ್ತಾಯಿಸಿತು.
ರ್ವೋಚ್ಚ ನ್ಯಾಯಾಲಯದ ನರ್ದೇಶನಗಳನ್ನು ಅನುಸರಿಸಿ ಪಂಜಾಬ್ ರ್ಕಾರ ನೀಡಿದ ವೈದ್ಯಕೀಯ ನೆರವು ಪಡೆಯಲು ದಲ್ಲೇವಾಲ್ ನಿರಾಕರಿಸಿದ್ದಾರೆ. ದಲ್ಲೆವಾಲ್ ಅವರ ರಕ್ತದೊತ್ತಡ ೮೦/೫೬ಕ್ಕೆ ಕುಸಿದಿದ್ದು, ಏರುಪೇರಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
"ಅವರ ಸ್ಥಿತಿ ಹದಗೆಟ್ಟಿದೆ. ಅವರ ರಕ್ತದೊತ್ತಡ ತೀವ್ರವಾಗಿ ಕುಸಿದಿದೆ. ಅವರ ಸ್ಥಿತಿಯನ್ನು ನೋಡಿದ ನಂತರ ನಾವು ಆತಂಕಗೊಂಡಿದ್ದೇವೆ. ನಾವು ಅವರಿಗೆ ಯಾವುದೇ ವೈದ್ಯಕೀಯ ನೆರವು ನೀಡಲು ಸಾಧ್ಯವಿಲ್ಲ" ಎಂದು ಡಾ ಅವತಾರ್ ಸಿಂಗ್ ಹೇಳಿದ್ದಾರೆ.
"ನಾವು ಅವರ ಕಾಲುಗಳನ್ನು ಮೇಲಕ್ಕೆತ್ತಿದ್ದೇವೆ, ಅದರ ನಂತರ ಅವರ ರಕ್ತದ ಹರಿವು ಸ್ವಲ್ಪ ಸುಧಾರಿಸಿದೆ" ಎಂದು ಎನ್ಜಿಒ '೫ ರಿರ್ಸ್ ಹರ್ಟ್ ಅಸೋಸಿಯೇಷನ್' ತಂಡದ ಭಾಗವಾಗಿರುವ ಸಿಂಗ್ ಹೇಳಿದ್ದಾರೆ. ಅವರ ರಕ್ತದೊತ್ತಡ ಮತ್ತು ನಾಡಿಮಿಡಿತದಲ್ಲಿ ಏರುಪೇರಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಸಂಯುಕ್ತ ಕಿಸಾನ್ ಮರ್ಚಾ (ರಾಜಕೀಯೇತರ) ಸಂಚಾಲಕರಾಗಿರುವ ದಲ್ಲೆವಾಲ್ ಅವರು ಕಳೆದ ರ್ಷ ನವೆಂಬರ್ ೨೬ ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಖಾನೌರಿ ಗಡಿಯಲ್ಲಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಒSP) ಮೇಲೆ ಕಾನೂನು ಖಾತರಿ ಸೇರಿದಂತೆ ರೈತರ ವಿವಿಧ ಬೇಡಿಕೆಗಳಿಗಾಗಿ ಅನರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಡಿಸೆಂಬರ್ ೨೦ ರಂದು, ಸುಪ್ರೀಂ ಕರ್ಟ್ ಪಂಜಾಬ್ ರ್ಕಾರಿ ಅಧಿಕಾರಿಗಳು ಮತ್ತು ವೈದ್ಯರ ಮೇಲೆ ಅವರನ್ನು ಆಸ್ಪತ್ರೆಗೆ ದಾಖಲಿಸುವ ಬಗ್ಗೆ ನರ್ಧರಿಸುವ ಜವಾಬ್ದಾರಿಯನ್ನು ವಹಿಸಿತ್ತು.
ಉಪವಾಸದ ಸಮಯದಲ್ಲಿ ದಲ್ಲೆವಾಲ್ ಏನೂ ಸೇವಿಸಿರಲಿಲ್ಲ ಎಂದು ರೈತ ಮುಖಂಡರು ಈ ಹಿಂದೆ ಹೇಳಿದ್ದರು, ಅವರು ಕೇವಲ ನೀರನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಕಳೆದ ಹಲವಾರು ದಿನಗಳಲ್ಲಿ, ಪಂಜಾಬ್ ರ್ಕಾರ ದಲ್ಲೆವಾಲ್ ಅವರ ಉಪವಾಸವನ್ನು ಮುರಿಯಲು ಬಯಸದಿದ್ದರೆ ವೈದ್ಯಕೀಯ ನೆರವು ತೆಗೆದುಕೊಳ್ಳುವಂತೆ ಮನವೊಲಿಸಲು ಅಧಿಕಾರಿಗಳ ಮೂಲಕ ಹಲವಾರು ಪ್ರಯತ್ನಗಳನ್ನು ಮಾಡಿದೆ, ಆದರೆ ಇದಕ್ಕೆ ಅವರು ನಿರಾಕರಿಸಿದ್ದಾರೆ.
ಪಂಜಾಬ್ ಮತ್ತು ಹರಿಯಾಣ ಹೈಕರ್ಟ್ನ ಮಾಜಿ ನ್ಯಾಯಾಧೀಶ ನವಾಬ್ ಸಿಂಗ್ ನೇತೃತ್ವದ ಉನ್ನತಾಧಿಕಾರ ಸಮಿತಿ ಸೋಮವಾರ ದಲ್ಲೆವಾಲ್ ಅವರನ್ನು ಭೇಟಿ ಮಾಡಿ ವೈದ್ಯಕೀಯ ನೆರವು ಪಡೆಯುವಂತೆ ಒತ್ತಾಯಿಸಿದೆ. ದಲ್ಲೆವಾಲ್ ಅವರನ್ನು ಭೇಟಿಯಾದ ನಂತರ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, "ನಾವೆಲ್ಲರೂ ಅವರಿಗೆ ವೈದ್ಯಕೀಯ ನೆರವು ಪಡೆಯುವುದಕ್ಕೆ ಪದೇ ಪದೇ ವಿನಂತಿಸಿದ್ದೇವೆ. ಅವರ ಆರೋಗ್ಯ ಚೆನ್ನಾಗಿರಬೇಕೆಂದು ನಾವು ಬಯಸುತ್ತೇವೆ."
"ನಾನು ಇಂದು ಇಲ್ಲಿಗೆ ಬಂದಿರುವುದು ಆಂದೋಲನ ಕೊನೆಗೊಳ್ಳಬೇಕು ಎಂದು ಹೇಳಲು ಅಲ್ಲ, ಆದರೆ ನಿಮ್ಮ (ದಲ್ಲೆವಾಲ್) ಆರೋಗ್ಯ ಚೆನ್ನಾಗಿರಬೇಕು ಎಂದು ಹೇಳಲು" ಎಂದು ನವಾಬ್ ಸಿಂಗ್ ಹೇಳಿದ್ದಾರೆ.
ಸುಪ್ರೀಂ ಕರ್ಟ್, ಸೆಪ್ಟೆಂಬರ್ ೨೦೨೪ ರಲ್ಲಿ, ಪ್ರತಿಭಟನಾ ನಿರತ ರೈತರ ಕುಂದುಕೊರತೆಗಳನ್ನು ಸೌಹರ್ದಯುತವಾಗಿ ಪರಿಹರಿಸುವ ಉದ್ದೇಶದಿಂದ ಸಮಿತಿಯನ್ನು ರಚಿಸಿತು.
ಸಮಿತಿಯು ನಿವೃತ್ತ ಐಪಿಎಸ್ ಅಧಿಕಾರಿ ಬಿ ಎಸ್ ಸಂಧು, ಕೃಷಿ ತಜ್ಞ ದೇವಿಂದರ್ ರ್ಮಾ, ಪ್ರೊಫೆಸರ್ ರಂಜಿತ್ ಸಿಂಗ್ ಘುಮಾನ್ ಮತ್ತು ಡಾ ಸುಖಪಾಲ್ ಸಿಂಗ್, ಪಂಜಾಬ್ ಕೃಷಿ ವಿಶ್ವವಿದ್ಯಾಲಯದ ಕೃಷಿ ರ್ಥಶಾಸ್ತ್ರಜ್ಞರನ್ನು ಒಳಗೊಂಡಿದೆ.
ಎಸ್ಕೆಎಂ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮರ್ಚಾದ ಬ್ಯಾನರ್ನಡಿಯಲ್ಲಿ ರೈತರು ದೆಹಲಿಗೆ ಅವರ ಮೆರವಣಿಗೆಯನ್ನು ಭದ್ರತಾ ಪಡೆಗಳು ತಡೆದ ನಂತರ ಫೆಬ್ರವರಿ ೧೩ ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಬಿಂದುಗಳಲ್ಲಿ ಮೊಕ್ಕಾಂ ಹೂಡಿದ್ದಾರೆ.
No comments:
Post a Comment