ads

Search This Blog

Thursday, 9 January 2025

ಪತ್ರಿಕಾಗೋಷ್ಠಿ ತಾತ್ಕಾಲಿಕ ಮುಂದುಡಿಕೆ,ಕರವೇ ರಾಜ್ಯ ವಕ್ತಾರ ಬಿ.ಎಂ.ಪಾಟೀಲ್"

ಬಾಗಲಕೋಟೆ  : ನವನಗರದ ಪತ್ರಿಕಾ ಭವನದಲ್ಲಿ ದಿನಾಂಕ:01-01-2025 ರಂದು  ನಡೆಯಬೇಕಿದ್ದ ಪತ್ರಿಕಾಗೋಷ್ಠಿ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕರವೇ ರಾಜ್ಯ ವಕ್ತಾರ ಹಾಗೂ ಜಿಲ್ಲಾಧ್ಯಕ್ಷ ಬಿ.ಎಂ.ಪಾಟೀಲ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಹಾಗೂ ಹಿರಿಯ ಉಪನೋಂದಣಾಧಿಕಾರಿಗಳ ಕಛೇರಿಯಲ್ಲಿ ಬಿ.ಟಿ.ಡಿ.ಎ ಪ್ರಾಧಿಕಾರಕ್ಕೆ ಸಂಬಂಧಿಸಿದ ಹಲವು ಮಾಹಿತಿಯ ದೃಢೀಕೃತ ಪ್ರತಿಗಳನ್ನು ಮಾಹಿತಿ ಹಕ್ಕು ಅಧಿನಿಯಮ 2005 ರಡಿ ಪೊರೈಸಲು ಅರ್ಜಿ ಸಲ್ಲಿಸಲಾಗಿತ್ತು. ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ನಿಗದಿತ ಸಮಯದೊಳಗೆ ಮಾಹಿತಿ ನೀಡಲು ವಿಫಲರಾದ ಹಿನ್ನೆಲೆ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಹಾಗೂ ಹಿರಿಯ ಉಪನೋಂದಣಾಧಿಕಾರಿಗಳ ಕಛೇರಿಯ ಪ್ರಥಮ ಮೇಲ್ಮನವಿ (ಹಿರಿಯ) ಅಧಿಕಾರಿಗಳಿಗೆ ಪ್ರಥಮ ಮೇಲ್ಮನವಿ ಸಲ್ಲಿಸಲಾಗಿತ್ತು. ಪ್ರಥಮ ಮೇಲ್ಮನವಿ ವಿಚಾರಣೆಯ ಅಧಿಕಾರಿಗಳು ನಿನ್ನೆಯ ದಿನ ದಿನಾಂಕ: 07-01-2025 ರಂದು ಪ್ರಥಮ ಮೇಲ್ಮನವಿ ವಿಚಾರಣೆ ನಡೆಸಿ  ಅರ್ಜಿದಾರರು ಕೇಳಿರುವ ಮಾಹಿತಿಯ  ದೃಢೀಕೃತ ಪ್ರತಿಗಳನ್ನು ಪೂರೈಸಲು ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ತಿಳಿಸಿದ್ದರ ಪ್ರಯುಕ್ತ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಅರ್ಜಿದಾರರು ಕೇಳಿರುವ ಮಾಹಿತಿಗಳು ಬೃಹತ್ತ ಗಾತ್ರದ್ದಾಗಿರುವುದರಿಂದ ಮತ್ತು ದೃಢೀಕರಿಸಿ ಪೊರೈಸಲು ಒಂದು ವಾರಗಳ ಕಾಲಾವಕಾಶ ಕೋರಿದರು ಅದಕ್ಕೆ ಅರ್ಜಿದಾರರಾದ ಬಿಎಂ ಪಾಟೀಲರು ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಹಾಗೂ ಸಮರ್ಪಕ ಮಾಹಿತಿ ತಲುಪಿಸುವ ಕಾರಣ ದಿನಾಂಕ: 08-01-2025  ರಂದು ನಡೆಯಬೇಕಾಗಿದ್ದ ಪತ್ರಿಕಾಗೋಷ್ಠಿ ಕಾರ್ಯಕ್ರಮ ವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕರವೇ ರಾಜ್ಯ ವಕ್ತಾರ ಹಾಗೂ ಜಿಲ್ಲಾಧ್ಯಕ್ಷ ಬಿ.ಎಮ್ .ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

No comments:

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...