ಹೌದು... ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ನಾಯಕ ಹಾಗೂ ಉಪ ಮುಖ್ಯಮಂತ್ರಿ, ಬೆಂಗಳೂರು ನಗರಾಭಿವೃದ್ಧಿ ಸಚಿವ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಪಕ್ಷದಿಂದಲೇ ವಿರೋಧ ವ್ಯಕ್ತವಾಗುತ್ತಿದೆ. ತಮಿಳುನಾಡಿನ ಕೊಯಮತ್ತೂರಿನ ಇಶಾ ಫೌಂಡೇಷನ್ನಲ್ಲಿ ಆಯೋಜಿಸಿದ್ದ ಮಹಾಶಿವರಾತ್ರಿ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಅವರು ಭಾಗವಹಿಸುತ್ತಿದ್ದಂತೆಯೇ ಅವರ ನಡೆಯ ಕುರಿತು ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಇಶಾ ಫೌಂಡೇಶನ್ನ ಸಂಸ್ಥಾಪಕ ಹಾಗೂ ಆಧ್ಯಾತ್ಮಿಕ ನಾಯಕ ಸದ್ಗುರು ಜಗ್ಗಿ ವಾಸುದೇವ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ವೇದಿಕೆ ಹಂಚಿಕೊAಡಿರುವ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗುತ್ತಿದ್ದು, ಡಿ.ಕೆ ಶಿವಕುಮಾರ್ ಅವರಿಗೆ ಯಾವುದೇ ಸಿದ್ಧಾಂತ ಇಲ್ಲವೇ ಎಂದು ಕೆಲವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪ್ರಶ್ನೆ ಮಾಡಿದ್ದಾರೆ.
ಡಿಕೆ ಶಿವಕುಮಾರ ಅವರ ಇತ್ತೀಚಿನ ನಡೆಗಳು ಕಾಂಗ್ರೆಸ್ ಹೈಕಮಾಂಡ್ ವಿರೋಧವಾಗಿಯೇ ನಡೆಯುತ್ತಿರುವುದನ್ನು ಗಮನಿಸಬಹುದು. ಗಂಗಾ ನದಿಯಲ್ಲಿ ಮುಳುಗಿದರೆ ಬಡತನ ನಿವಾರಣೆಯಾಗುತ್ತದೆಯೇ? ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಹಿಂದೂಗಳ ಕೇಂಗಣ್ಣಿಗೆ ಗುರಿಯಾದರು. ಎಐಸಿಸಿ ಅಧ್ಯಕ್ಷರ ಟೀಕೆಯ ಬೆನ್ನಲ್ಲೇ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಪತ್ನಿ ಸಮೇತ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಮುಳುಗುಹಾಕಿ ಬಂದರು. ಇದಕ್ಕೂ ಮುಂಚೆ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ ಅವರೂ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು. ಇದರ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ವಿರೋಧದ ನಡುವೆಯೂ ದೇಶದಾದ್ಯಂತದಿAದ ಸಾಲು ಸಾಲು ಕಾಂಗ್ರೆಸ್ ನಾಯಕರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು. ಇದರಿಂದ ಕಾಂಗ್ರೆಸ್ ಹೈಕಮಾಂಡ್ ಎಷ್ಟೊಂದು ದುರ್ಬಲವಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬಹುದು.
ಬಿಜೆಪಿಯವರೊಂದಿಗೆ ವೇದಿಕೆ:
ಇನ್ನು ಡಿ.ಕೆ.ಶಿವಕುಮಾರ ವಿಷಯಕ್ಕೆ ಬಂದರೆ, ಇಶಾ ಫೌಂಡೇಶನ್ನಿAದ ಪ್ರತಿ ವರ್ಷವೂ ಮಹಾಶಿವರಾತ್ರಿಯ ಸಂದರ್ಭದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆಯುತ್ತವೆ. ಅದೇ ರೀತಿ ಈ ವರ್ಷವೂ ಕೊಯಮತ್ತೂರಿನಲ್ಲಿ ರಾತ್ರಿ ಪೂರ್ತಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಆಧ್ಯಾತ್ಮಿಕ ಗುರುಗಳು ಸಂಗೀತ ಕಾರ್ಯಕ್ರಮ, ಧ್ಯಾನ ಹಾಗೂ ನೃತ್ಯ ಕಾರ್ಯಕ್ರಮಗಳು ನಡೆಯುತ್ತವೆ. ಈ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಅವರು ವೇದಿಕೆ ಹಂಚಿಕೊAಡಿರುವುದರ ಬಗ್ಗೆ ಕಾಂಗ್ರೆಸ್ ಪಕ್ಷದ ಒಳಗೇ ಅಸಮಾಧಾನ ಭುಗಿಲೆದ್ದಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯದರ್ಶಿ ಪಿ.ವಿ ಮೋಹನ್ ಅವರು, ಡಿ.ಕೆ ಶಿವಕುಮಾರ್ ಅವರ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿ.ಕೆ ಶಿವಕುಮಾರ್ ಅವರ ನಡೆಯು ಪಕ್ಷದ ಮೂಲಕ್ಕೇ, ಪಕ್ಷದ ಸಿದ್ಧಾಂತಗಳಿಗೆ ಹಾನಿಯನ್ನುಂಟು ಮಾಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ತಮಿಳುನಾಡಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆಯಲ್ಲಿ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರೊಂದಿಗೆ ವೇದಿಕೆ ಹಂಚಿಕೊAಡಿರುವುದು ಕಾಂಗ್ರೆಸ್ ಬುಡಕ್ಕೆ ಬೆಂಕಿ ಬಿದ್ದಂತಾಗಿದೆ. ಜಾತ್ಯತೀತ ಪಕ್ಷದ ಕೆಪಿಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವಾಗ, ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಿದವರಿಗೆ ನೀವು ಯಾವ ರೀತಿ ಧನ್ಯವಾದ ಹೇಳಲು ಸಾಧ್ಯ? ಎಂದು ಪ್ರಶ್ನೆ ಮಾಡಿದ್ದಾರೆ. ಮಹಾಶಿವರಾತ್ರಿ ಆಚರಣೆಯಲ್ಲಿ ಭಾಗವಹಿಸುವಂತೆ ಜಗ್ಗಿ ವಾಸುದೇವ ಅವರು ದೇವರಲ್ಲಿ ನಂಬಿಕೆ ಇರುವ ತಾವು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ವಿಶೇಷ ಆಹ್ವನ ನೀಡಿದ್ದರು. ಆಹ್ವಾನ ನೀಡಿದ್ದಕ್ಕೆ ಧನ್ಯವಾದಗಳು ಎಂದು ಡಿ.ಕೆ ಶಿವಕುಮಾರ್ ಅವರು ಹೇಳುವ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇಶಾ ಫೌಂಡೇಶನ್ ಹಾಗೂ ಜಗ್ಗಿ ವಾಸುದೇವ್ ಅವರ ಸಿದ್ಧಾಂತಗಳು ಬಿಜೆಪಿ ಹಾಗೂ ಆರ್ಎಸ್ಎಸ್ಗೆ ಪೂರಕವಾಗಿವೆ. ಕಾಂಗ್ರೆಸ್ ಆರ್ಎಸ್ಎಸ್ ಸಿದ್ಧಾಂತಗಳನ್ನು ಸಂಪೂರ್ಣವಾಗಿ ವಿರೋಧಿಸಿಕೊಂಡು ಬಂದಿದೆ. ಕಾಂಗ್ರೆಸ್ ಪಕ್ಷದಲ್ಲಿ ಆರ್ಎಸ್ಎಸ್ ಸಿದ್ಧಾಂತಗಳನ್ನು ಪಾಲಿಸುವವರು ಯಾರೇ ಇದ್ದರೂ ಪಕ್ಷವನ್ನು ಬಿಟ್ಟು ಹೋಗಬಹುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಅತ್ಯಂತ ಸ್ಪಷ್ಟವಾಗಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ದೇವಾಲಯಗಳಿಗೆ ಭೇಟಿ ಕೊಡುವುದಕ್ಕೆ ಯಾವುದೇ ಅಭ್ಯಂತರವಿಲ್ಲ. ಆದರೆ ಅವರು ನಡೆದುಕೊಳ್ಳುವ ರೀತಿಯು ಪಕ್ಷದ ಮೌಲ್ಯಗಳನ್ನು ಪ್ರತಿಬಿಂಬಿಸುವAತೆ ಇರಬೇಕು ಎಂದು ಕಾಂಗ್ರೆಸ್ ಟೀಕಿಸಿದೆ.
ಸಂತೋಷ ವ್ಯಕ್ತಪಡಿಸಿದ ಡಿಕೆ
ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾದಲ್ಲಿ ಸಂತೋಷ ಹಂಚಿಕೊAಡಿದ್ದು, ಸದ್ಗುರು ಅವರ ಮಾತುಗಳಲ್ಲಿ ಆಳವಾದ ತತ್ವಗಳ ಜೊತೆ ಸೌಮ್ಯವಾದ ಹಾಸ್ಯದ ಸಂಯೋಜನೆ ಇರುತ್ತದೆ. ಅವರೊಂದಿಗೆ ಬದುಕಿನ ಒಳಹುಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದೆವು. ಗಂಭೀರ ವಿಚಾರಗಳ ಮಧ್ಯೆ, ಹಾಸ್ಯದ ಝಲಕ್ಗಳು ಮನಸ್ಸಿಗೆ ಹಿತ ನೀಡಿದವು. ಜೀವನವೆಂದರೆ ಅನಂತ ಯಾತ್ರೆ. ಪ್ರತಿ ಕ್ಷಣವೂ ಒಂದು ಅಧ್ಯಾಯ, ಪ್ರತಿ ನಗುವೂ ಮತ್ತು ಆಲೋಚನೆಯೂ ನಮ್ಮ ಆಂತರಿಕ ಬೆಳಕಿಗೆ ಪೂರಕ. ನಿಜವಾದ ಸಂಪತ್ತು ಅಂದರೆ, ಆಂತರಿಕ ಶಾಂತಿ, ಆತ್ಮಸಾಕ್ಷಾತ್ಕಾರ ಮತ್ತು ಆ ಭಾವನೆ, ಬದುಕಿನ ಪ್ರತಿಯೊಂದು ಕ್ಷಣದಲ್ಲಿ ಜೀವಂತವಾಗಿರುವ ಸತ್ಯ ಎಂಬ ಡಿಕೆ ಶಿವಕುಮಾರ ಅವರ ಹೇಳಿಕೆ, ಅವರ ಒಲವು ಯಾವ ಕಡೆಗೆ ಎಂಬುದು ಸಪಷ್ಟವಾಗುತ್ತದೆ.
ಹೌದು... ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತಂದದ್ದು ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ ಅವರ ನೇತೃತ್ವದಲ್ಲಿ ಎಂಬುದು ನಿರ್ವಿವಾದ. ಅವರು ೨೦೨೦ರಲ್ಲಿ ಕೆಪಿಸಿಸಿ ಅಧ್ಯಕ್ಷರಾದ ನಂತರದಿAದಲೂ ಅಂದಿನ ಬಿಜೆಪಿ ಸರ್ಕಾರವನ್ನು ವಿವಿಧ ಆಯಾಮಗಳ ಮೂಲಕ ಟೀಕೆಗೆ ಗುರಿಮಾಡಿ ಸರ್ಕಾರದ ವಿರುದ್ಧ ರಾಜ್ಯದಲ್ಲಿ ಒಂದು ಅಲೆ ಎಬ್ಬಿಸಿದ್ದು ಡಿಕೆ ಶಿವಕುಮಾರ. ಅನಂತರ ಇಡೀ ರಾಜ್ಯದಲ್ಲಿ ಸಂಚರಿಸಿ ಪಂಚವನ್ನು ಸಂಘಟಿಸಿ, ಕಾರ್ಯಕರ್ತರಲ್ಲಿ ಅಧಿಕಾರಕ್ಕೆ ಬರುವ ಭರವಸೆ ಮೂಡಿಸುವುದರೊಂದಿಗೆ ೨೦೨೩ರಲ್ಲಿ ನಡೆದ ವಿಧಾನಸಭೆ ಚುನಾವಣೆಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ರೂಪಿಸಿದ್ದೂ ಡಿ.ಕೆ.ಶಿವಕುಮಾರ. ಅಲ್ಲದೇ ನೆರೆಯ ತೆಲಂಗಾಣ ರಾಜ್ಯದಲ್ಲಿ ಚುನಾವಣೆ ನಡೆದಾಗ ಅಲ್ಲೇ ಕ್ಯಾಂಪ್ ಮಾಡಿ ಗೆಲುವಿನ ತಂತ್ರಗಾರಿಕೆ ರೂಪಿಸಿದ್ದು ಇದೇ ಡಿಕೆ ಶಿವಕುಮಾರ.
ಅಧಿಕಾರದಿಂದ ದೂರವಿಡುವ ಯತ್ನ:
ಇಷ್ಟೆಲ್ಲ ಆದ ನಂತರವೂ ಡಿ.ಕೆ.ಶಿವಕುಮಾರ ಅವರನ್ನು ಅಧಿಕಾರದಿಂದ ದೂರವಿಟ್ಟು, ಸಿದ್ದರಾಮಯ್ಯ ಅವರೇ ಎರಡನೇ ಬಾರಿಗೆ ಸಿಎಂ ಮಾಡಿದ್ದು ಇದೇ ಕಾಂಗ್ರೆಸ್ ಹೈಕಮಾಂಡ್ ಅಲ್ಲವೇ? ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಅತ್ಯಂತ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಡಿ.ಕೆ.ಶಿವಕುಮಾರ ಹಲವು ಸಂಕಷ್ಟಗಳನ್ನು ಎದುರಿಸಿದರೂ, ತಮ್ಮ ನಿಷ್ಠೆಯನ್ನು ಬದಲಿಸದೇ ಗಾಂಧಿ ಕುಟುಂಬದ ನಾಯಕತ್ವವನ್ನು ನೆಚ್ಚಿಕೊಂಡು ಬಂದವರು. ಇಷ್ಟೆಲ್ಲ ನಿಷ್ಠೆ ಹೊಂದಿರುವ ಡಿಕೆ ಶಿವಕುಮಾರಗೆ ಅನ್ಯಾಯವಾಗುತ್ತಿರುವುದು ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ಬರಲಿಲ್ಲವೇ?
ಹಿಂದೊಮ್ಮೆ ಡಿಕೆ ಶಿವಕುಮಾರ ಹೇಳಿದ್ದರು. ನಾವೇನು ರಾಜಕೀಯಕ್ಕೆ ಕಿವಿಯಲ್ಲಿ ಹೂವಿಟ್ಟುಕೊಂಡು ಬಂದವರಲ್ಲ. ನಮಗೂ ಅಧಿಕಾರ ಬೇಕು. ಅದಕ್ಕಾಗಿಯೇ ಪಕ್ಷಕ್ಕೆ ನಿಷ್ಠೆಯಿಮದ ದುಡಿಯುತ್ತಿದ್ದೇವೆ. ನಾನೇನು ಬೇರೆ ಪಕ್ಷದಿಂದ ವಲಸೆ ಬಂದು ಕಾಂಗ್ರೆಸ್ಸಿನಲ್ಲಿ ಆಶ್ರಯ ಪಡೆದು ಆಕ್ರಮಿಸಿಕೊಂಡವನಲ್ಲ. ನಾನು ಮೂಲ ಕಾಂಗ್ರೆಸ್ಸಿಗ. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷನಾಗಿರುವ ನನ್ನನ್ನೇ ಮೂಲೆಗುಂಪು ಮಾಡುತ್ತಿರುವುದು ಹೈಕಮಾಂಡ್ ಗಮನಕ್ಕೆ ಬಂದಿಲ್ಲವೇ? ಸಕಾಲಕ್ಕೆ ಎಲ್ಲವೂ ಸರಿಹೋಗುತ್ತದೆ ಎಂದು ಭಾವಿಸಿದ ಡಿಕೆ ಶಿವಕುಮಾರಗೆ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದ ನಂತರವಾದರೂ ತಮಗೆ ಅಧಿಕಾರ ದೊರೆಯಬಹುದೆಂಬ ನಂಬಿಕೆಯಲ್ಲಿದ್ದರು.
ಆದರೆ ಈಗ ಆಗುತ್ತಿರುವುದೇನು? ಸಿಎಂ ಸಿದ್ದರಾಮಯ್ಯ ಅವರು ನೇರವಾಗಿ ಏನನ್ನೂ ಹೇಳುವದಿಲ್ಲ. ಆದರೆ, ಅವರ ಬೆಂಬಲಿಗರ ಮೂಲಕ ಎಲ್ಲವನ್ನೂ ಮಾಡಿಸುತ್ತಿದ್ದಾರೆ. ಮುಂದಿನ ಐದು ವರ್ಷಗಳ ವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೂ ಅರ್ಹ, ಸಚಿವ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಎರಡನ್ನೂ ಸಮರ್ಥವಾಗಿ ನಿಭಾಯಿಸುವ ತಾಕತ್ತು ನನಗಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರೆ, ಇನ್ನೊಮ್ಮೆ ಮುಂದಿನ ೨೦೨೮ಕ್ಕೆ ಸಿಎಂ ಅಭ್ಯರ್ಥಿ ನಾನೇ ಎಂದೂ ಹೇಳುತ್ತಿದ್ದಾರೆ. ಅಂದರೆ ಮುಂದಿನ ಬಾರಿಯೂ ಡಿಕೆ ಶಿವಕುಮಾರಗೆ ಅವಕಾಶವಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಈ ಮೂಲಕ ನೀಡುತ್ತಿದ್ದಾರೆ. ಸಚಿವರುಗಳಾದ ಡಾ.ಎಚ್.ಸಿ.ಮಹಾದೇವಪ್ಪ, ರಾಜಣ್ಣ ಮುಂತಾದವರು ದಿನಕ್ಕೊಂದು ಹೇಳಿಕೆ ನೀಡುತ್ತ ರಾಜ್ಯದಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ.
ಬಾಯ್ಮುಚ್ಚಿಕೊಂಡು ಕೆಲಸ ಮಾಡಿ ಎಂದೊಮ್ಮೆ ಎಐಸಿಸಿ ಅಧ್ಯಕ್ಷರು ಹೇಳಿಕೆ ನೀಡಿದ್ದು ಬಿಟ್ಟರೆ, ಅನಂತರ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳೂ ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ಬಂದರೂ, ಡಿಕೆ ಶಿವಕುಮಾರ ಅವರನ್ನು ರಆಜ್ಯದಲ್ಲಿ ಮೂಲೆಗುಂಪು ಮಾಡುವ ನಿರಂತರ ಪ್ರಯತ್ನ ನಡೆಯುತ್ತಿದ್ದರೂ ಹೈಕಮಾಂಡರ್ ಯಾರ ವಿರುದ್ಧವೂ ಕ್ರಮ ಕೈಕೊಳ್ಳದಂಥ ದುರ್ಬಲ ನಾಯಕತ್ವದ ಬೇಸರ ಡಿಕೆ ಶಿವಕುಮಾರ ಅವರಿಗೆ ತಮ್ಮದೇ ಹೊಸ ದಾರಿ ಕಂಡುಕೊಳ್ಳುವAತೆ ಮಾಡಿರುವುದರಲ್ಲಿ ಅನುಮಾನವಿಲ್ಲ.
ದೈವಭಕ್ತ ಡಿಕೆಶಿ
ಡಿಕೆ ಶಿವಕುಮಾರ ಮೊದಲಿಂದಲೂ ದೈವ ಭಕ್ತರು. ಅವರು ಹೋದಲ್ಲೆಲ್ಲ ಅನೇಕ ದೇವಸ್ಥಾನ, ಮಠ ಮಂದಿರಗಳಿಗೆ ಭೇಟಿ ನೀಡುವುದು, ಪೂಜೆ ಪುನಸ್ಕಾರ ಮಾಡುವ ಮೂಲಕ ದೇವರು ಮತ್ತು ದೈವದಲ್ಲಿ ನಂಬಿಕೆ ಹೊಂದಿದವರು. ಇದುವರೆಗೂ ಮುಸ್ಲಿಮರನ್ನು ನಮ್ಮ ಬ್ರರ್ಸ್ ಎನ್ನುತ್ತಿದ್ದ ಡಿಕೆ ಶಿವಕುಮಾರ, ಇದೀಗ ಹಿಂದೂಗಳೂ ತಮ್ಮವರೆಂದು ಒಪ್ಪಿಕೊಳ್ಳುತ್ತಿರುವುದು ಹೊಸ ಬೆಳವಣಿಗೆ. ಈ ಹೊಸ ಬೆಳವಣಿಗೆಯ ಮುಂದುವರಿದ ಭಾಗವಾಗಿ, ಇಶಾ ಫೌಂಡೇಶನ್ ಆಂತ್ರಣ ಸ್ವೀಕರಿಸಿ ಮಹಾಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಇದ್ದಾರೆಂದು ಗೊತ್ತಿದ್ದೂ ಭಾಗವಹಿಸಿದ್ದು ಡಿಕೆ ಶಿವಕುಮಾರ ಅವರ ತಲೆಯಲ್ಲಿ ಏನೋ ಓಡುತ್ತಿದೆ ಎಂದು ಅರ್ಥೈಸಲಾಗುತ್ತಿದೆ. ಅದನ್ನು ಕಾರ್ಯಗತಗೊಳಿಸುವ ದಿಸೆಯಲ್ಲಿ ಅವರು ಏನೋ ಗುಪ್ತ ಸೂಚಿ ಹೊಂದಿದ್ದಾರೆ. ಅದಕ್ಕೆ ಪೂರಕವಾದ ಬೆಳವಣಿಗೆಗಳು ಕೊಯಿಮತ್ತೂರಿನಲ್ಲಿ ನಡೆದಿವೆ. ಈ ಮೂಲಕ ಡಿಕೆ ಶಿವಕುಮಾರ ಕಾಂಗ್ರೆಸ್ ಹೈಕಮಾಂಡ್ಗೆ ಎಚ್ಚರಿಕೆ ಸಂದೇಶವನ್ನು ನೀಡಿದಂತಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ ಕರ್ನಾಟಕದ ಏಕನಾಥ್ ಶಿಂಧೆ ಆಗುತ್ತಾರೆಯೇ? ಎಂಬ ಅನುಮಾನಗಳು ಮೂಡುವುದು ಸಹಜ. ಹಾಗೇನಾದರೂ ಆಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಿದ್ದು ಹೋದರೆ, ಅದಕ್ಕೆ ಕಾಂಗ್ರೆಸ್ ಹೈಕಮಾಂಡ್ನ ದುರ್ಬಲ ನಾಯಕತ್ವವೇ ಹೊಣೆಯಾಗಬೇಕಾಗುತ್ತದೆ. ಇದರ ಬೆನ್ನಲ್ಲೇ ತೆಲಂಗಾಣ ಸರ್ಕಾರಕ್ಕೂ ಆಪತ್ತು ಬರಲಿದೆ. ಇದರಿಂದ ದಕ್ಷಿಣ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರಗಳು ಬಿದ್ದು ಹೋಗುವುದರಲ್ಲಿ ಅನುಮಾನವಿಲ್ಲ.
No comments:
Post a Comment