ads

Search This Blog

Saturday, 27 September 2025

ಪ್ರವಾಸೋದ್ಯಮದಿಂದ ದೇಶದ ಆರ್ಥಿಕ ಪ್ರಗತಿ ಹೆಚ್ಚಳ: ಪ್ರವಾಸೋದ್ಯಮ ಅಧಿಕಾರಿ ನಜೀರ ಅಹ್ಮದ

 ರಾಯಚೂರು : ಪ್ರವಾಸೋದ್ಯಮವು ವಿವಿಧ ದೇಶಗಳ ಸಂಸ್ಕೃತಿ, ವೈವಿಧ್ಯತೆಯ ಬಗ್ಗೆ ಪ್ರವಾಸಿಗರಿಗೆ ತಿಳಿದುಕೊಳ್ಳಲು ಸಹಾಯವಾಗಿದೆ. ಅಲ್ಲದೆ ದೇಶದ ಆರ್ಥಿಕತೆಯನ್ನು ಹೆಚ್ಚಿಸುಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ನಜೀರ ಅಹ್ಮದ್ ಕನವಳ್ಳಿ ಅವರು ಹೇಳಿದರು.

ಸೆ.27ರ ಶನಿವಾರ ದಂದು ನಗರದ ಹಮದರ್ದ್ ಪ್ರೌಢ ಶಾಲೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಪುರಾತತ್ವ ಸಂಗ್ರಹಾಲಯಗಳು & ಪರಂಪರೆ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2025ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೇವಲ ಪ್ರವಾಸಿ ತಾಣಗಳನ್ನು ಗುರುತಿಸುವುದು ಮಾತ್ರವಲ್ಲ; ಅವುಗಳನ್ನು ಮೇಲ್ದರ್ಜೆಗೇರಿಸುವುದು, ಆಕರ್ಷಣೆಯಗೊಳಿಸುವುದು ಪ್ರವಾಸೋದ್ಯಮ ಇಲಾಖೆಯ ಮುಖ್ಯಉದ್ದೇಶವಾಗಿದೆ. ಪ್ರವಾಸಿ ತಾಣಗಳಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸುವ ಜವಾಬ್ದಾರಿ ಇಲಾಖೆಯ ಮೇಲಿದೆ ಎಂದರು.
ಜಿಲ್ಲೆಯಲ್ಲಿರುವ ಐತಿಹಾಸಿಕ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಇಲಾಖೆಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರತಿಯೊಬ್ಬರ ಸಹಕಾರ ಅತ್ಯಗತ್ಯವಾಗಿರುತ್ತದೆ ಎಂದರು.
ಈ ವೇಳೆ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಚೆನ್ನಾರೆಡ್ಡಿ ಅವರು ಉಪನ್ಯಾಸ ನೀಡಿ, ಜಿಲ್ಲೆಯಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿದ್ದು, ಅವುಗಳನ್ನು ಅಭಿವೃದ್ಧಿಪಡಿಸುವುದು ಅತೀ ಅಗತ್ಯವಾಗಿದೆ. ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ವಿಶ್ವದ್ಯಾಂತ ಆಚರಣೆ ಮಾಡಲಾಗುತ್ತದೆ. ಈ ದಿನಾಚರಣೆಯು ಕಾರ್ಯಕ್ರಮಕ್ಕೆ ಸೀಮಿತವಾಗಬಾರದು ಎಂದರು.
ಅನೇಕ ಐತಿಹಾಸಿಕ ಸ್ಥಳಗಳು ಜಿಲ್ಲೆಯಲ್ಲಿದ್ದು, ಅವುಗಳನ್ನು ಅಭಿವೃದ್ಧಿಪಡಿಸುವ ಕಾರ್ಯವಾಗಬೇಕು. ಪ್ರವಾಸಿ ತಾಣಗಳು ಅಭಿವೃದ್ಧಿಯಾದಲ್ಲಿ ಸ್ಥಳೀಯರಿಗೆ ಆರ್ಥಿಕವಾಗಿ ಅನುಕೂಲವಾಗಲಿದೆ. ಪ್ರವಾಸೋದ್ಯಮ ಕಾರ್ಯಚಟುವಟಿಕೆಯಿಂದ ಇತಿಹಾಸದ ಬಗ್ಗೆ ತಿಳಿಯಲು ಸಾಧ್ಯವಾಗುತ್ತದೆ ಎಂದರು.
ಪ್ರವಾಸೋದ್ಯಮ ಅಭಿವೃದ್ಧಿಯಾದಾಗ, ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತದೆ ಮತ್ತು ಕರಕುಶಲಕಾರರು ಕೂಡ ಆರ್ಥಿಕವಾಗಿ ಸಬಲರಾಗುತ್ತಾರೆ ಎಂದು ತಿಳಿಸಿದರು.
ಜಿಲ್ಲೆಯು 4000 ವರ್ಷಗಳ ಇತಿಹಾಸ ಹೊಂದಿದ್ದು, ಜಿಲ್ಲೆಯ ಮಸ್ಕಿಯಲ್ಲಿ ಇತಿಹಾಸಕಾರರು ಭೂ ಉತ್ಪನನೆ ಮಾಡಿದ್ದಾರೆ. ಇದರಲ್ಲಿ ನಾಲ್ಕು ಸಾವಿರ ವರ್ಷಗಳ ಹಿಂದೆ ಜನರು ವಾಸಿಸುತ್ತಿದ್ದರು ಎಂದು ತಿಳಿಬಂದಿದೆ.
ಗಬ್ಬೂರಿನಲ್ಲಿ 20 ಪ್ರಾಚೀನ ದೇವಾಲಯಗಳಿವೆ. 21 ಶಿಲಾಶಾಸನಗಳಿವೆ. ಮುದಗಲ್‌ನಲ್ಲಿ ಎರಡು ಸುತ್ತಿನ ಕೋಟೆಯಲ್ಲಿ ಶಿಲಾಶಾಸನಗಳಿವೆ. ಕವಿತಾಳ, ಕೋಟೆಕಲ್ ಸೇರಿದಂತೆ ಹಲವೆಡೆ ಬೆಟ್ಟ ಗುಡ್ಡಗಳ ಮೇಲೆ ರೇಖಾ ಚಿತ್ರಗಳಿವೆ. ಇವು ಆದಿಮಾನವರ ವಾಸಸ್ಥಾನಗಳು ಎಂಬುದು ತಿಳಿಯುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪ್ರಥಮ ದರ್ಜೆ ಪದವಿ ಮಹಿಳಾ ಕಾಲೇಜು ಪ್ರಾಂಶುಪಾಲರಾದ ಡಾ.ಸುಗುಣಾ, ಪುರಾತತ್ವ ಸಂಗ್ರಹಾಲಯ, ಪರಂಪರೆ ಇಲಾಖೆಯ ಕ್ಯೂರೇಟರ್ ಶಿವಪ್ರಕಾಶ, ಹಮದರ್ದ್ ಕಾಲೇಜಿನ ಪ್ರಾಂಶುಪಾಲರಾದ ಕಾಶಪ್ಪ, ಚಿತ್ರಕಲಾ ಶಿಕ್ಷಕ ಚಂದ್ರಶೇಖರ ಸೇರಿದಂತೆ ಇತರರಿದ್ದರು. ಶಿಕ್ಷಕ ಡಾ.ದಂಡಪ್ಪ ಬಿರಾದಾರ ನಿರೂಪಿಸಿದರು.

No comments:

Shodhavani: ಕರ್ನಾಟಕ ಜೈಲುಗಳ ಸುಧಾರಣೆ : ಡಿಜಿಪಿ ಅಲೋಕ್ ಕುಮಾರ ಮುಂದಿ...

Shodhavani: ಕರ್ನಾಟಕ ಜೈಲುಗಳ ಸುಧಾರಣೆ : ಡಿಜಿಪಿ ಅಲೋಕ್ ಕುಮಾರ ಮುಂದಿ... :   ಕರ್ನಾಟಕ ಜೈಲುಗಳ ಸುಧಾರಣೆ  : ಡಿಜಿಪಿ ಅಲೋಕ್ ಕುಮಾರ ಮುಂದಿರುವ ಸವಾಲುಗಳು... ರಾಜ್...