ಸವಣೂರ ಏತ ನೀರಾವರಿ ಯೋಜನೆ ಲೋಕಾರ್ಪಣೆ ರೂ.638 ಕೋಟಿ ವೆಚ್ಚದಲ್ಲಿ ಶಿಗ್ಗಾಂವ- ಹಾನಗಲ್ ಕ್ಷೇತ್ರದ 230ಕ್ಕೂ ಅಧಿಕ ಗ್ರಾಮಗಳಿಗೆ ತುಂಗಭದ್ರಾ ನೀರು -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹಾವೇರಿ. : ಶಿಗ್ಗಾಂವ ಕ್ಷೇತ್ರದ ಪ್ರತಿ ಹಳ್ಳಿಗೆ ನಳದ ನೀರು ಕೊಡುವ ನಿಟ್ಟಿನಲ್ಲಿ ರೂ.638 ಕೋಟಿ ವೆಚ್ಚದಲ್ಲಿ ಶಿಗ್ಗಾಂವ ಹಾಗೂ ಹಾನಗಲ್ ಕ್ಷೇತ್ರದ 230ಕ್ಕೂ ಅಧಿಕ ಹಳ್ಳಿಗೆ ತುಂಗಭದ್ರಾ ನೀರು ಒದಗಿಸುವ ಬೃಹತ್ ಯೋಜನೆಗೆ ಮಂಜೂರಾತಿ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಶಿಗ್ಗಾಂವ ತಾಲೂಕು ಹಿರೇಬೆಂಡಿಗೇರಿ ಗ್ರಾಮದಲ್ಲಿ ಸವಣೂರ ಏತ ನೀರಾವರಿ ಯೋಜನೆಯಡಿ 48 ಕೆರೆಗಳ ತುಂಬಿಸುವ ರೂ. 90.57 ಕೋಟಿ ವೆಚ್ಚದ ಕಾಮಗಾರಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಹಿರೇಬೆಂಡಿಗೇರಿ ಕೆರೆ ನೈಸರ್ಗಿಕವಾಗಿ ತುಂಬುತ್ತಿತ್ತು. ಸತತ ಮೂರು ವರ್ಷಗಳ ಬರಗಾಲದಿಂದ ಈ ಕೆರೆ ಬತ್ತಿದ ಕಾರಣ ಹಿರಿಯ ಮನಸ್ಸಿಗೆ ಬಹಳ ನೋವಾಗಿತ್ತು. ಆಗ ನಾನು ತೀರ್ಮಾನಿಸಿ 40 ಕಿ.ಮೀ.ದೂರದಿಂದ ವರದೆ ಇಂದು ಹಿರೇಬೆಂಡಿಗೇರಿಗೆ ಹರಿದು ಬಂದಿದ್ದು, ವರದಾನವಾಗಿದೆ. ನಾನು ಕೊಟ್ಟಮಾತು ಮಾತು ಉಳಿಸಿಕೊಂಡಿದ್ದು ಸಮಾಧಾನವಾಗಿದೆ ಎಂದು ಹೇಳಿದರು.
ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ರಾಜ್ಯದಲ್ಲಿ 7.5 ಲಕ್ಷ ಎಕರೆ ನೀರಾವರಿ ಮಾಡಲಾಗಿದೆ. ಒಂದು ಪ್ರಯತ್ನವಾಗಿ ಶಿಗ್ಗಾಂವ ಏತ ನೀರಾವರಿ ಯೋಜನೆಯಡಿ ಮೈಕ್ರೋ ಇರಿಗೇಷನ್ ಮಾಡಲಾಯಿತು. ರಾಜ್ಯ ಮತ್ತು ಕೇಂದ್ರಕ್ಕೆ ಮಾದರಿ ಕೆಲಸವಾಗಿದೆ. ಶಿಗ್ಗಾಂವ ಮತ್ತು ಸವಣೂರ ಏತ ನೀರಾವರಿ ಯೋಜನೆ ಮೂಲಕ ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕನಸು ಕಂಡಿದ್ದೆ, ನನ್ನ ಅವ್ವ ಗಂಗಮ್ಮನ ಆಶೀರ್ವಾದಿಂದ ಇಂದು ನನಸಾಗಿದೆ. ನೀರು ಬಹಳ ಮುಖ್ಯ ನೀರು ಇಲ್ಲದೆ ಬದುಕಿಲ್ಲ, ದಿನನಿತ್ಯದ ಬದುಕಿಗೆಮ ವ್ಯವಸಾಯಕ್ಕೆ ಹಾಗೂ ಕಾರ್ಖಾನೆಗಳಿಗೂ ನೀರು ಬೇಕು. ನೀರನ್ನು ಸದ್ಬಳಕೆ ಮಾಡಬೇಕು ಎಂದು ಹೇಳಿದರು.
ಪಕ್ಷದ ಹಿರಿಯರ ಹಾಗೂ ಕ್ಷೇತ್ರದ ಜನತೆ ಆಶೀರ್ವಾದಿಂದ ಮುಖ್ಯಮಂತ್ರಿಯಾದಮೇಲೆ ಜವಾಬ್ದಾರಿ ಹೆಚ್ಚಾಗಿದೆ. ದಿನದ 15 ತಾಸು ಕೆಲಸ ನಿರ್ವಹಿಸುತ್ತೇನೆ. ಕಳೆದ ಎರಡು ವರ್ಷದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದ ನಡುವೆಯೂ ಕರ್ನಾಟಕದ ಸಂಪನ್ಮೂಲ ಕ್ರೋಢಿಕರಿಸಿ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲಾಗಿದೆ. ಬಜೆಟ್ ಪೂರ್ವದಲ್ಲಿ ರೈತ ಮಕ್ಕಳಿಗೆ ವಿದ್ಯಾನಿಧಿ ಜಾರಿಗೆ ತರಲಾಗಿದೆ. ರಾಜ್ಯದ ಐದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡಿದಾರೆ. ಕೃಷಿ, ತೋಟಗಾರಿಕೆ ಹಾಗೂ ನೀರಾವರಿ ಬೆಳೆಹಾನಿ ಪರಿಹಾರವನ್ನು ದ್ವಿಗುಣಗೊಳಿಸಲಾಗಿದೆ. ಗ್ರಾಮೀಣ ಪ್ರದೇಶಕ್ಕೆ ಐದು ಲಕ್ಷ ಮನೆಗಳನ್ನು ಮಂಜೂರಲಾಗಿದೆ. ಪರಿತರ ವಿತರಣೆಗೆ ಹೆಚ್ಚಿಸಲಾಗಿದೆ. ರೂ.700 ಕೋಟಿ ಅನುದಾನ ನೀಡಲಾಗಿದೆ. ನೀರಾವರಿಗೆ ಹೆಚ್ಚು ಒತ್ತುನೀಡಲಾಗಿದೆ ಎಂದರು.
ಬರುವ ದಿನಗಳಲ್ಲಿ ಬಾಕಿ ಯೋಜನೆಗಳನ್ನು ಪೂರ್ಣಗೊಳಿಸಿ ಕನ್ನಡನಾಡಿನ ಭೂಮಿತಾಯಿಗೆ ಹಸಿರು ಸೀರೆ ಉಡಿಸುವ ಸಂಕಲ್ಪಮಾಡಲಾಗಿದೆ. ಇದರ ಜವಾಬ್ದಾರಿಯನ್ನು ಸಚಿವರಾದ ಕಾರಜೋಳ ಅವರಿಗೆ ವಹಿಸಲಾಗಿದೆ. ಕಾರ್ಮಿಕರ ಹಿತದೃಷ್ಟಿಯಿಂದ ರೂ. 400 ಕೋಟಿ ಮಂಜೂರು ಮಾಡಿ ಕಾರ್ಮಿಕರ ಮಕ್ಕಳ ಖಾತೆಗೆ ಜಮೆ ಮಾಡಲಾಗಿದೆ. ಸರ್ಕಾರದ ಹೃದಯಮಿಡಿತ ರೈತರು, ಕಾರ್ಮಿಕರು ಹಾಗೂ ಬಡವರ ಬಗ್ಗೆ ಇದೆ. ಇದು ನಮ್ಮ ಧ್ಯೇಯ ಹಾಗೂ ನೀತಿಯಾಗಿದೆ ಎಂದರು.
ಇದರ ಜೊತೆಗೆ ರಾಷ್ಟ್ರೀಯ ಅಭಿವೃದ್ಧಿಮ ಸೇತುವೆ ಸೇರಿದಂತೆ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಲಾಗಿದೆ. ಕುಡಿಯುವ ನೀರಿನ ಜಲಜೀವನ ಮಿಷನ್ ಯೋಜನೆಗೆ ರೂ.7000 ಕೋಟಿ ನೀಡಲಾಗಿದೆ. ಇನ್ನೂ ಹೆಚ್ಚಿನ ಕೆಲಸಮಾಡುವ ಉತ್ಸಾಹವಿದೆ. ಅಭಿವೃದ್ಧಿ ನಿರಂತರ ಚಕ್ರ, ದನಿವರಿಯದೆ ಕೆಲಸ ಮಾಡಬೇಕು. ದುಡಿಮೆಯಲ್ಲಿ ದೇವರು ಹಾಗೂ ಯಶಸ್ಸು ಇರುವುದಾಗಿ ನಂಬಿದ್ದೇವೆ ಎಂದು ಹೇಳಿದರು.
ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ.ಕಾರಜೋಳ ಅವರು ಮಾತನಾಡಿ, 2013ರಲ್ಲಿ ಬೃಹತ್ ನೀರವಾರಿ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರು ತಮ್ಮ ದೂರ ದೃಷ್ಟಿಯಿಂದ ರೂ.690 ಕೋಟಿ ವೆಚ್ಚದ 30 ಹಳ್ಳಿಗಳ 38 ಸಾವಿರ ಎಕರೆ ನೀರಾವರಿ ಯೋಜನೆಗೆ ಅನುಮೋದನೆ ನೀಡಿದ್ದರು. ಇಂದು ಮುಖ್ಯಮಂತ್ರಿಗಳಾಗಿ ಲೋಕರ್ಪಾಣೆ ಮಾಡಿದ್ದಾರೆ. ಇದರಿಂದ ಕುಡಿಯುವ ನೀಡಿನ ಸಮಸ್ಯೆ ಪರಿಹಾರವಾಗುತ್ತದೆ ಹಾಗೂ ದನಕರುಗಳಿಗೆ ಅನುಕೂಲವಾಗಲಿದೆ. ಒಟ್ಟಾರೆ ತಾಲೂಕನ್ನು ಹಸಿರು ಮಾಡಿದ್ದಾರೆ. ಐದು ವರ್ಷಗಳ ಕಾಲ ನೀರಾವರಿ ಸಚಿವರಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ರಾಜ್ಯದ ಉದ್ದಗಲಕ್ಕೂ ಅನೇಕ ನೀರಾವರಿ ಯೋಜನೆಗಳನ್ನು ಆರಂಭಿಸಿದ್ದರು ಎಂದರು.
ಮಾನ್ಯ ಮುಖ್ಯಮಂತ್ರಿಗಳು ಅನೇಕ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ, ನಾಡಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡೋಣ. ಸ್ವಾತಂತ್ರ್ಯೋತ್ಸವದ 75ನೇ ಅಮೃತ ಮಹೋತ್ಸವ ಅಂಗವಾಗಿ ಅಮೃತ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಕರೋನಾ ಸಂಕಷ್ಟದಲ್ಲಿಯೂ ಸಹ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.
ಕಾರ್ಮಿಕ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಅರಬೈಲ್ ಶಿವರಾಮ ಹೆಬ್ಬಾರ ಅವರು ಮಾತನಾಡಿ, ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು, ನಾಡಿನ ರೈತರಿಗೆ ಮಾನ್ಯತೆ ನೀಡಿದ್ದಾರೆ. ದೇಶಕ್ಕೆ ಅನ್ನನೀಡುವ ರೈತರ ಮಕ್ಕಳ ಶಿಕ್ಷಣಕ್ಕಾಗಿ ತಾವು ಅಧಿಕಾರ ವಹಿಸಿಕೊಂಡ ಒಂದು ಗಂಟೆಯೊಳಗೆ ರೂ.ಒಂದುಸಾವಿರ ಕೋಟಿ ಅನುದಾನ ನೀಡಿದ್ದಾರೆ. ನಾಡಿನ ರೈತರ ಕಣ್ಮನಿಯಾಗಿದ್ದಾರೆ, ರಾಜ್ಯ ಹಾಗೂ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ತಮ್ಮ ಛಾಪು ಮೂಡಿಸಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಮಾಜಿ ಶಾಸಕ ಶಿವರಾಜ ಸಜ್ಜನರ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಿದ್ದರು.