ads

Search This Blog

Friday, 20 December 2024

ಅಂಬೇಡ್ಕರ್ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ಬಿಟ್ಟು, ದಲಿತರೊಬ್ಬರು ಸಿಎಂ ಆಗಲು ರಾಜೀನಾಮೆ ನೀಡಿ -ವಿಜಯೇಂದ್ರ

 

ಅಂಬೇಡ್ಕರ್ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ಬಿಟ್ಟು, ದಲಿತರೊಬ್ಬರು ಸಿಎಂ ಆಗಲು ರಾಜೀನಾಮೆ ನೀಡಿ

ಬೆಂಗಳೂರು: ‘ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು’ ಬಿಟ್ಟು ದಲಿತರೊಬ್ಬರು ಸಿಎಂ ಆಗುವ ಹಾದಿಯನ್ನು ಸುಗಮಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು  ಹೇಳಿದರು.


ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಡಾ ಬಿಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದೆ. ಭ್ರಷ್ಟಾಚಾರದಲ್ಲಿ ಮುಳುಗಿರುವ ಸಿದ್ದರಾಮಯ್ಯ ಅವರು, 3 ತಿಂಗಳ ಹಿಂದೆಯೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು. ಆದರೆ, ಹಾಗೆ ಮಾಡಲಿಲ್ಲ. ಇನ್ನೂ ಸಮಯವಿದೆ. ನೀವು ನಿಜವಾಗಿಯೂ ಪ್ರಾಮಾಣಿಕರಾಗಿದ್ದರೆ ರಾಜೀನಾಮೆ ನೀಡಿ ದಲಿತರೊಬ್ಬರು ಸಿಎಂ ಆಗಲು ಅವಕಾಶ ಮಾಡಿಕೊಡಿ. ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದುಸ ಹಾಗೂ ರಾಜಕೀಯ ಷಡ್ಯಂತ್ರ ಮಾಡುವುದನ್ನು ಬಿಡಿ. ದೇಶದ ಜನರು ನಿಮ್ಮನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಹೇಳಿದರು.

ಅಂಬೇಡ್ಕರ್ ಅವರ ಜೀವಿತಾವಧಿಯ ಕಾಲದಲ್ಲಿ ಅವರನ್ನು ನಿರಂತರ ಅಪಮಾನಿಸಿ, ಅವರ ಅರ್ಹತೆ, ವಿದ್ವತ್ತನ್ನು ಗೌರವಿಸದೇ ಅವರನ್ನು ರಾಜಕೀಯವಾಗಿ ಸಾಮಾಜಿಕವಾಗಿ ತುಳಿದ ಕಾಂಗ್ರೆಸ್ ಶೋಷಿತರನ್ನು ಮತ ಬ್ಯಾಂಕ್ ಮಾಡಿಕೊಂಡು ಇದುವರೆಗೂ ಅಧಿಕಾರದ ಸವಿ ಅನುಭವಿಸುತ್ತಾ ಬಂದಿದೆ. ಅಂಬೇಡ್ಕರ್ ಅವರ ನಿಧನದ ನಂತರ ಅವರ ಪಾರ್ಥಿವ ಶರೀರ ಮಣ್ಣು ಮಾಡಲು ದೆಹಲಿಯಲ್ಲಿ ಕನಿಷ್ಠ ಅಡಿಯ ಜಾಗವನ್ನು ನೀಡದೆ ಮುಂಬೈಗೆ ಅವರ ದೇಹ ಸಾಗಿಸುವ ವ್ಯವಸ್ಥೆಯನ್ನೂ ಮಾಡದೆ ಅವರನ್ನು ತಾತ್ಸಾರವಾಗಿ ನೋಡಿಕೊಂಡ ಕಾಂಗ್ರೆಸ್ಸಿಗರಿಗೆ ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವ ಯಾವ ನೈತಿಕ ಹಕ್ಕು ಇಲ್ಲ. ಅಂಬೇಡ್ಕರ್ ಅವರಿಗೆ ಭಾರತರತ್ನ ನೀಡಿ ಗೌರವಿಸಿದ ಹೆಗ್ಗಳಿಕೆ ಭಾರತೀಯ ಜನತಾ ಪಾರ್ಟಿಯದ್ದು. ಅಂಬೇಡ್ಕರ್ ಅವರ ಇತಿಹಾಸ ಮುಂದಿನ ಭವಿಷ್ಯದೊಂದಿಗೆ ತಿಳಿಯುವಂತೆ ಸಂವಿಧಾನ ದಿನವನ್ನು ಆಚರಿಸುವ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದು ಭಾರತೀಯ ಜನತಾ ಪಾರ್ಟಿ.

ಅಮಿತ್ ಶಾ ಅವರು ಕಾಂಗ್ರೆಸಿಗರು ಅಂದು ಅಂಬೇಡ್ಕರ್ ಅವರನ್ನು ಅವಮಾನಿಸಿ ಇಂದು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಅಂಬೇಡ್ಕರ್ ಅವರ ಹೆಸರನ್ನು ಪಟಿಸುತ್ತಿರುವ ಕಾಂಗ್ರೆಸ್ಸಿಗರ ಗೋಮುಖ ವ್ಯಾಘ್ರತನವನ್ನು ಬಯಲು ಮಾಡುವ ನಿಟ್ಟಿನಲ್ಲಿ ಆಡಿದ ಮಾತುಗಳನ್ನು ತಿರುಚುವ ಮೂಲಕ ಅಪಪ್ರಚಾರ ನಡೆಸಿ ರಾಜಕೀಯ ಬಂಡವಾಳ ಮಾಡಿಕೊಳ್ಳಲು ಹೊರಟಿರುವ ಕಾಂಗ್ರೆಸ್ಸಿಗರ ನಡೆ ನಾಚಿಕೆಗೇಡಿತನದ ಪರಮಾವಧಿಯಾಗಿದೆ ಎಂದು ತಿಳಿಸಿದರು.

ವಿಶ್ವ ಕಂಡ ಶ್ರೇಷ್ಠ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅಡಿಗಡಿಗೂ ಅವಮಾನಿಸಿ ಅವರ ಸಾವಿನ ನಂತರವೂ ಅವರನ್ನು ತಾತ್ಸಾರವಾಗಿ ಕಂಡ ಕಾಂಗ್ರೆಸ್ಸಿಗರು ಇತ್ತೀಚಿನ ದಿನಗಳಲ್ಲಿ ವಿಪರೀತವಾಗಿ ಸುರಿಸುತ್ತಿರುವ ಮೊಸಳೆ ಕಣ್ಣೀರಿನ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ವ್ಯಂಗ್ಯಭರಿತ ಮಾತುಗಳಿಂದ ಕಾಂಗ್ರೆಸ್ ಬಂಡವಾಳ ಬಯಲು ಮಾಡಿದ್ದಾರೆ. ಇದನ್ನು ಸಹಿಸಿಕೊಳ್ಳಲಾರದೆ ಹತಾಶ ಮನಸ್ಥಿತಿಯಿಂದ ವಿಡಿಯೋ ಎಡಿಟ್ ಮಾಡಿಕೊಂಡು ವಿಷಯವನ್ನು ತಿರುಚಿ ರಾಜಕೀಯ ಬಂಡವಾಳ ಮಾಡಿಕೊಳ್ಳಲು ಹೊರಟಿರುವ ಕಾಂಗ್ರೆಸ್ಸಿಗರ ನೀಚ ಪ್ರವೃತ್ತಿ ಅಂಬೇಡ್ಕರ್ ರವರನ್ನು ಅವಮಾನಿಸುವುದೇ ಆಗಿದೆ, ಇದಕ್ಕೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ.

ಅಂದು ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ಸಿಗರು, ನೀವೂ ಕೂಡ ಮುಖ್ಯಮಂತ್ರಿ ಆಗಲಿದ್ದ ದಲಿತ ಮುಖಂಡರೊಬ್ಬರನ್ನು 2013ರ ಚುನಾವಣೆಯಲ್ಲಿ ಸೋಲಿಸಿ ಅವರ ಅವಕಾಶ ಕಸಿದುಕೊಂಡಿದ್ದು ಇತಿಹಾಸದ ಪುಟಗಳಲ್ಲಿ ಬಹಿರಂಗ ಸತ್ಯವಾಗಿ ಉಳಿದಿದೆ. ಈಗಲೂ ದಲಿತರೊಬ್ಬರು ಮುಖ್ಯಮಂತ್ರಿಯಾಗುವ ಅವಕಾಶದ ಬಾಗಿಲು ತೆರೆಯದೆ ಭ್ರಷ್ಟತೆಯ ಮೂಟೆ ಹೊತ್ತು ಮುಖ್ಯಮಂತ್ರಿ ಸ್ಥಾನವನ್ನು ಭಂಡತನದಿಂದ ಆಕ್ರಮಿಸಿಕೊಂಡಿರುವ ನಿಮಗೆ ಅಂಬೇಡ್ಕರ್ ವಾದ, ಸಮಾಜವಾದ, ಸಾಮಾಜಿಕ ನ್ಯಾಯಗಳ ಬಗ್ಗೆ ಮಾತನಾಡುವ ಹಕ್ಕು ಕಳೆದುಕೊಂಡಿದ್ದೀರಿ, ಪರಿಶಿಷ್ಟರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣದ ಕಾರ್ಯಕ್ಕಾಗಿ ಮೀಸಲಿಟ್ಟ ಹಣ ಲೂಟಿಯಾಗಲು ಕಾರಣರಾಗಿದ್ದೀರಿ, ನಿಮ್ಮ ಪಂಚಭಾಗ್ಯಗಳಿಗೆ ವಿನಿಯೋಗಿಸಲು ಬಳಸಿಕೊಂಡಿದ್ದೀರಿ. ಡಾ.ಬಿ.ಆರ್.ಅಂಬೇಡ್ಕರ್ ರವರ ಹೆಸರು ಬಳಸಿಕೊಂಡು ದಿಕ್ಕು ತಪ್ಪಿಸುವ ಹೇಳಿಕೆಗಳನ್ನು ನೀಡುವ ಬದಲು ಈಗಲಾದರೂ ಪರಿಶಿಷ್ಟರು ಹಾಗೂ ಹಿಂದುಳಿದವರಿಗಾಗಿ ಏನನ್ನಾದರೂ ಯೋಜನೆ ಕಾರ್ಯಗತಗೊಳಿಸಿ ನಿಮಗಂಟಿರುವ ಕಳಂಕ ತೊಳೆದುಕೊಳ್ಳಲು ಪ್ರಯತ್ನಿಸಿ ಎಂದು ತಿಳಿಸಿದರು.

ಬೆಂಗಳೂರು ಹೊರವಲಯದಲ್ಲಿ ಘನತ್ಯಾಜ್ಯ ವಿಲೇವಾರಿಗೆ ಶೀಘ್ರವೇ ಟೆಂಡರ್

 

ಬೆಂಗಳೂರು ಹೊರವಲಯದಲ್ಲಿ ಘನತ್ಯಾಜ್ಯ ವಿಲೇವಾರಿಗೆ ಶೀಘ್ರವೇ ಟೆಂಡರ್

ಬೆಂಗಳೂರು: ಮುಂದಿನ ದಿನಗಳಲ್ಲಿ ಸಂಚಾರ ದಟ್ಟಣೆ ಗಮನದಲ್ಲಿಟ್ಟುಕೊಂಡು, ನಮ್ಮ ಮೆಟ್ರೋ ಮಾರ್ಗವನ್ನು ಹೊಸಕೋಟೆ, ನೆಲಮಂಗಲ ಹಾಗೂ ಬಿಡದಿವರೆಗೆ ವಿಸ್ತರಣೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.


 ಡಿಸಿಎಂ ಡಿ.ಕೆ. ಶಿವಕುಮಾರ್ 

ವಿಧಾನಸಭೆಯ ಕಲಾಪದಲ್ಲಿ ಕಾಂಗ್ರೆಸ್ ಶಾಸಕ ಶರತ್ ಬಚ್ಛೇಗೌಡ ಅವರು ಹೊಸಕೋಟೆಗೆ ಮೆಟ್ರೋ ಮಾರ್ಗ ವಿಸ್ತರಣೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಈ ವಿಚಾರವಾಗಿ ಶರತ್ ಅವರು ಬಹಳ ಹೋರಾಟ ಮಾಡುತ್ತಿದ್ದಾರೆ. ಬೆಂಗಳೂರು ಕೂಡ ವಿಪರೀತವಾಗಿ ಬೆಳೆಯುತ್ತಿದೆ. ಸಾಮಾನ್ಯ ರೈಲಿನಲ್ಲಿ ಕೋಲಾರದಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ದಿನ ನಿತ್ಯ ಸಂಚರಿಸುತ್ತಾರೆ. ಐಟಿ ಕಾರಿಡಾರ್ ಬಹುತೇಕ ಹೊಸಕೋಟೆ ಮುಟ್ಟಿದೆ. ಹೀಗಾಗಿ ಮೆಟ್ರೋ ಅವಶ್ಯಕತೆ ಇದೆ ಎಂದು ತಿಳಿಸಿದರು.

ಮಾರ್ಗ ವಿಸ್ತರಣೆ ವಿಚಾರವನ್ನು ನಾನು ಈಗಾಗಲೇ ಯೋಜನೆಯಲ್ಲಿ ಸೇರಿಸಿ ವಿಸ್ತೃತ ಸಮೀಕ್ಷೆ ಮಾಡಿಸುತ್ತಿದ್ದೇನೆ. ನಮ್ಮ ಸರ್ಕಾರ ಹಾಗೂ ಮೆಟ್ರೋ ಸಂಸ್ಥೆ ಅವರ ಮನವಿಯನ್ನು ಸಹಾನುಭೂತಿಯಿಂದ ಪರಿಗಣಿಸಿದೆ. ಹೊಸಕೋಟೆ ಜತೆಗೆ ಬಿಡದಿ, ನೆಲಮಂಗಲದವರೆಗೂ ಮೆಟ್ರೋ ಮಾರ್ಗ ವಿಸ್ತರಣೆ ಯೋಜನೆ ಸಿದ್ಧಡಿಸಲು ವರದಿ ರೂಪಿಸಲಾಗುತ್ತಿದೆ. ನಾವು ನಿಮ್ಮ ಮನವಿಯನ್ನು ಪರಿಗಣಿಸಿದ್ದೇವೆ" ಎಂದು ತಿಳಿಸಿದರು. ಬೆಂಗಳೂರಿನ ಹೊರ ವಲಯದಲ್ಲಿ ನಾಲ್ಕು ಕಡೆ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು. ಅದರ ಜತೆಗೆ ಬೆಂಗಳೂರಿನಲ್ಲಿರುವ ಘನತ್ಯಾಜ್ಯ ಮಾಫಿಯಾ ಮಟ್ಟ ಹಾಕಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರು: ಮುಂದಿನ ದಿನಗಳಲ್ಲಿ ಸಂಚಾರ ದಟ್ಟಣೆ ಗಮನದಲ್ಲಿಟ್ಟುಕೊಂಡು, ನಮ್ಮ ಮೆಟ್ರೋ ಮಾರ್ಗವನ್ನು ಹೊಸಕೋಟೆ, ನೆಲಮಂಗಲ ಹಾಗೂ ಬಿಡದಿವರೆಗೆ ವಿಸ್ತರಣೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸಭೆಯ ಕಲಾಪದಲ್ಲಿ ಕಾಂಗ್ರೆಸ್ ಶಾಸಕ ಶರತ್ ಬಚ್ಛೇಗೌಡ ಅವರು ಹೊಸಕೋಟೆಗೆ ಮೆಟ್ರೋ ಮಾರ್ಗ ವಿಸ್ತರಣೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಈ ವಿಚಾರವಾಗಿ ಶರತ್ ಅವರು ಬಹಳ ಹೋರಾಟ ಮಾಡುತ್ತಿದ್ದಾರೆ. ಬೆಂಗಳೂರು ಕೂಡ ವಿಪರೀತವಾಗಿ ಬೆಳೆಯುತ್ತಿದೆ. ಸಾಮಾನ್ಯ ರೈಲಿನಲ್ಲಿ ಕೋಲಾರದಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ದಿನ ನಿತ್ಯ ಸಂಚರಿಸುತ್ತಾರೆ. ಐಟಿ ಕಾರಿಡಾರ್ ಬಹುತೇಕ ಹೊಸಕೋಟೆ ಮುಟ್ಟಿದೆ. ಹೀಗಾಗಿ ಮೆಟ್ರೋ ಅವಶ್ಯಕತೆ ಇದೆ ಎಂದು ತಿಳಿಸಿದರು.

ಮಾರ್ಗ ವಿಸ್ತರಣೆ ವಿಚಾರವನ್ನು ನಾನು ಈಗಾಗಲೇ ಯೋಜನೆಯಲ್ಲಿ ಸೇರಿಸಿ ವಿಸ್ತೃತ ಸಮೀಕ್ಷೆ ಮಾಡಿಸುತ್ತಿದ್ದೇನೆ. ನಮ್ಮ ಸರ್ಕಾರ ಹಾಗೂ ಮೆಟ್ರೋ ಸಂಸ್ಥೆ ಅವರ ಮನವಿಯನ್ನು ಸಹಾನುಭೂತಿಯಿಂದ ಪರಿಗಣಿಸಿದೆ. ಹೊಸಕೋಟೆ ಜತೆಗೆ ಬಿಡದಿ, ನೆಲಮಂಗಲದವರೆಗೂ ಮೆಟ್ರೋ ಮಾರ್ಗ ವಿಸ್ತರಣೆ ಯೋಜನೆ ಸಿದ್ಧಡಿಸಲು ವರದಿ ರೂಪಿಸಲಾಗುತ್ತಿದೆ. ನಾವು ನಿಮ್ಮ ಮನವಿಯನ್ನು ಪರಿಗಣಿಸಿದ್ದೇವೆ" ಎಂದು ತಿಳಿಸಿದರು. ಬೆಂಗಳೂರಿನ ಹೊರ ವಲಯದಲ್ಲಿ ನಾಲ್ಕು ಕಡೆ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು. ಅದರ ಜತೆಗೆ ಬೆಂಗಳೂರಿನಲ್ಲಿರುವ ಘನತ್ಯಾಜ್ಯ ಮಾಫಿಯಾ ಮಟ್ಟ ಹಾಕಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

Thursday, 19 December 2024

ಜಗದೀಪ್ ಧಂಖರ್ ಪದಚ್ಯುತಿಗೆ ಆಗ್ರಹಿಸಿ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯದ ನೋಟಿಸ್ ತಿರಸ್ಕೃತ

 

ಜಗದೀಪ್ ಧಂಖರ್ ಪದಚ್ಯುತಿಗೆ ಆಗ್ರಹಿಸಿ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯದ ನೋಟಿಸ್ ತಿರಸ್ಕೃತ

ನವದೆಹಲಿ: ಉಪಾಧ್ಯಕ್ಷ ಜಗದೀಪ್ ಧಂಖರ್ ಪದಚ್ಯುತಿಗೆ ಆಗ್ರಹಿಸಿ ಪ್ರತಿಪಕ್ಷಗಳು ನೀಡಿದ್ದ ಅವಿಶ್ವಾಸ ನಿರ್ಣಯದ ನೋಟಿಸ್ ತಿರಸ್ಕೃತಗೊಂಡಿದೆ. ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿ.ಸಿ ಮೋದಿ ಅವರು ಸದನದಲ್ಲಿ ಮಂಡಿಸಿದ ನಿರ್ಧಾರದಲ್ಲಿ, ಮಹಾಭಿಯೋಗ ನೋಟಿಸ್ ದೇಶದ ಸಾಂವಿಧಾನಿಕ ಸಂಸ್ಥೆಗಳನ್ನು ದೂಷಿಸುವ ಮತ್ತು ಪ್ರಸ್ತುತ ಉಪರಾಷ್ಟ್ರಪತಿಯ ಮಾನಹಾನಿ ಮಾಡುವ ಷಡ್ಯಂತ್ರದ ಭಾಗವಾಗಿದೆ ಎಂದು ಉಪಸಭಾಪತಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಸಭೆಯಲ್ಲಿ ವಿಪಕ್ಷಗಳು ಸಭಾಪತಿ ಜಗದೀಪ್ ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ನೋಟಿಸ್ ನೀಡಿದ್ದರು. ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು 67ಬಿ ವಿಧಿ ಅಡಿಯಲ್ಲಿ ವಿರೋಧ ಪಕ್ಷಗಳು ನೋಟಿಸ್ ನೀಡಿದ್ದು, ಈ ನೋಟಿಸ್ ಅನ್ನು ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿಸಿ ಮೋದಿ ಅವರಿಗೆ ಹಸ್ತಾಂತರಿಸಲಾಗಿತ್ತು. ರಾಜ್ಯಸಭೆಯ ಅಧ್ಯಕ್ಷರನ್ನು ಪದಚ್ಯುತಗೊಳಿಸಲು ಅವಿಶ್ವಾಸ ನಿರ್ಣಯವನ್ನು ತರಲು ಕನಿಷ್ಠ 14 ದಿನಗಳ ಮುಂಚಿತವಾಗಿ ನೋಟಿಸ್ ನೀಡುವುದು ಮುಖ್ಯ. ಆದರೆ ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 20ರಂದು ಅಂದರೆ ನಾಳೆ ಕೊನೆಗೊಳ್ಳುತ್ತಿದ್ದು ಆರು ದಿನಗಳ ಹಿಂದಷ್ಟೇ ಅವಿಶ್ವಾಸ ನಿರ್ಣಯದ ನೋಟಿಸ್ ಸಲ್ಲಿಸಿತ್ತು.

ಸಂಸತ್ತಿನಲ್ಲಿ ಹಲ್ಲೆ ವಿವಾದ: ಬಿಜೆಪಿ, ಕಾಂಗ್ರೆಸ್ ಪೊಲೀಸರಿಗೆ ದೂರು ಸಲ್ಲಿಕೆ

 

ಸಂಸತ್ತಿನಲ್ಲಿ ಹಲ್ಲೆ ವಿವಾದ: ಬಿಜೆಪಿ, ಕಾಂಗ್ರೆಸ್ ಪೊಲೀಸರಿಗೆ ದೂರು ಸಲ್ಲಿಕೆ

ನವದೆಹಲಿ: ಅಂಬೇಡ್ಕರ್ ವಿಚಾರವಾಗಿ ಸಂಸತ್ತಿನಲ್ಲಿ ಇಂದು ನಡೆದ ಸರಣಿ ಪ್ರತಿಭಟನೆ ವೇಳೆ ಹಲ್ಲೆ ನಡೆಸಲಾಗಿದೆ ಎಂದು ಆಡಳಿತಾರೂಢ ಬಿಜೆಪಿ ಆರೋಪಿಸಿದೆ. ಹಲ್ಲೆ, ಬೆದರಿಕೆಗಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿರುವುದಾಗಿ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ವಿರುದ್ಧ ಸೆಕ್ಷನ್ 109 (ಕೊಲೆಗೆ ಯತ್ನ) 115, 117,125,131, 351 ಅಡಿಯಲ್ಲಿ ದೂರು ದಾಖಲಿಸಲಾಗಿದ್ದು, ಸಂಸತ್ತಿನ ಹೊರಗಡೆ ಎನ್ ಡಿಎ ಸಂಸದರು ಶಾಂತಯುತವಾಗಿ ನಡೆಸುತ್ತಿದ್ದ ಪ್ರತಿಭಟನೆ ವೇಳೆಯಲ್ಲಿ ನಡೆದ ಘಟನೆಯನ್ನು ಸಮಗ್ರವಾಗಿ ವಿವರಿಸಲಾಗಿದೆ ಎಂದು ಅವರು ಹೇಳಿದರು.

ಮುಂಬೈ ಕೇಂದ್ರಾಡಳಿತ ಪ್ರದೇಶವಾಗಬೇಕು

 

ಮುಂಬೈ ಕೇಂದ್ರಾಡಳಿತ ಪ್ರದೇಶವಾಗಬೇಕು

ಮುಂಬೈ: ವಾಣಿಜ್ಯ ನಗರಿ ಮುಂಬೈ ಕ್ರೇಂದ್ರಾಡಳಿತ ಪ್ರದೇಶವಾಗಬೇಕು ಎಂಬ ಕರ್ನಾಟಕದ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ  ವಿರುದ್ಧ ಇಂಡಿಯಾ ಮೈತ್ರಿಕೂಟದ ಶಿವಸೇನಾ (ಯುಬಿಟಿ) ಶಾಸಕ ಆದಿತ್ಯ ಠಾಕ್ರೆ ಕಿಡಿಕಾರಿದ್ದಾರೆ.

ಮಹಾರಾಷ್ಟ್ರದ ನಾಯಕರು ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಹೇಳಿದ್ದಾರೆ. ಹಾಗಿದ್ದರೆ ಮುಂಬೈಯನ್ನೂ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂಬ ಸವದಿ ಹೇಳಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿದ ಆದಿತ್ಯ ಠಾಕ್ರೆ, ಮುಂಬೈಯನ್ನು ಮಹಾರಾಷ್ಟ್ರದಿಂದ ಬೇರ್ಪಡಿಸುವ ಯಾವುದೇ ಪ್ರಯತ್ನ ಸಹಿಸುವುದಿಲ್ಲ ಎಂದರು.

ಇಂಡಿಯಾ ಬಣ ಆಕ್ರೋಶದ ನಡುವೆ ಅಮಿತ್ ಶಾ ಭೇಟಿಯಾದ ಸಿಎಂ ಒಮರ್ ಅಬ್ದುಲ್ಲಾ

 

ಇಂಡಿಯಾ ಬಣ ಆಕ್ರೋಶದ ನಡುವೆ ಅಮಿತ್ ಶಾ ಭೇಟಿಯಾದ ಸಿಎಂ ಒಮರ್ ಅಬ್ದುಲ್ಲಾ

ನವದೆಹಲಿ: ಅಂಬೇಡ್ಕರ್ ಕುರಿತ ಮಾತುಗಳಿಂದ ಅಮಿತ್ ಶಾ ವಿರುದ್ಧ 'ಇಂಡಿಯಾ' ಬಣದ ಪಕ್ಷಗಳು ರಾಷ್ಟ್ರ ರಾಜಧಾನಿ ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಸುತ್ತಿದ್ದರೆ ಇತ್ತ ವಿರೋಧ ಪಕ್ಷಗಳ ಕೂಟದಲ್ಲಿರುವ ನ್ಯಾಶನಲ್ ಕಾಂಗ್ರೆಸ್ ನ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇತ್ತೀಚಿಗೆ ಇವಿಎಂಗಳ ಲೋಪ ಕುರಿತ ಕಾಂಗ್ರೆಸ್ ನಡೆಯನ್ನು ಟೀಕಿಸಿದ್ದ ಒಮರ್ ಅಬ್ದುಲ್ಲಾ, ಇದೀಗ ಅಂಬೇಡ್ಕರ್ ಕುರಿತ ಟೀಕೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಅಮಿತ್ ಶಾ ಅವರೊಂದಿಗೆ ಜಮ್ಮು-ಕಾಶ್ಮೀರಕ್ಕೆ ಶೀಘ್ರದಲ್ಲೇ ರಾಜ್ಯ ಸ್ಥಾನಮಾನ ಮರು ಸ್ಥಾಪನೆ ಸೇರಿದಂತೆ ಹಲವು ವಿಷಯಗಳ ಕುರಿತು ಒಮರ್ ಅಬ್ದುಲ್ಲಾ ಚರ್ಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 370ನೇ ವಿಧಿ ರದ್ದುಗೊಂಡ ನಂತರ ಕೇಂದ್ರಾಡಳಿತ ಪ್ರದೇಶದ ಮೊದಲ ಸಿಎಂ ಆಗಿ ಅಬ್ದುಲ್ಲಾ ಅಧಿಕಾರ ವಹಿಸಿಕೊಂಡ ನಂತರ ಅಮಿತ್ ಶಾ ಅವರನ್ನು ಎರಡನೇ ಬಾರಿಗೆ ಭೇಟಿಯಾಗಿದ್ದಾರೆ.



ತೆಲಂಗಾಣ ಮಾಜಿ ಸಚಿವಗೆ ಸಂಕಷ್ಟ; ಬಹು ಕೋಟಿ ಅಕ್ರಮ ಪ್ರಕರಣದಲ್ಲಿ ಎ1 ಆರೋಪಿ

 

ತೆಲಂಗಾಣ ಮಾಜಿ ಸಚಿವಗೆ ಸಂಕಷ್ಟ; ಬಹು ಕೋಟಿ ಅಕ್ರಮ ಪ್ರಕರಣದಲ್ಲಿ ಎ1 ಆರೋಪಿ

ಹೈದರಾಬಾದ್: ಭಾರತ್‌ ರಾಷ್ಟ್ರ ಸಮಿತಿ (BRS) ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಪುತ್ರ ಕೆಟಿ ರಾಮಾರಾವ್ (KTR)ಗೆ ಸಂಕಷ್ಟ ಎದುರಾಗಿದ್ದು, ಬಹುಕೋಟಿ Formula E race ಭ್ರಷ್ಟಾಚಾರ ಪ್ರಕರಣದಲ್ಲಿ ಅವರನ್ನು ಎ1 ಆರೋಪಿಯನ್ನಾಗಿ ಮಾಡಲಾಗಿದೆ.

ಹೌದು.. ತೆಲಂಗಾಣದ ಹಿಂದಿನ ಬಿಆರ್‌ಎಸ್‌ (ಭಾರತ್‌ ರಾಷ್ಟ್ರ ಸಮಿತಿ) ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಫಾರ್ಮುಲಾ ಇ ರೇಸ್‌ನಲ್ಲಿ ಹಣಕಾಸು ಅವ್ಯವಹಾರ ಆರೋಪಗಳಿಗೆ ಸಂಬಂಧಿಸಿದಂತೆ ಬಿಆರ್‌ಎಸ್‌ ಶಾಸಕ, ಮಾಜಿ ಸಚಿವ ಕೆ.ಟಿ. ರಾಮರಾವ್‌ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಜಿಷ್ಣುದೇವ್‌ ವರ್ಮಾ ಅವರು ಬುಧವಾರ ಅನುಮತಿ ನೀಡಿದ್ದಾರೆ. ಇದರೊಂದಿಗೆ ಬಿಆರ್‌ಎಸ್‌ ಕಾರ್ಯಾಧ್ಯಕ್ಷರೂ ಆಗಿರುವ ಕೆಟಿಆರ್‌ಗೆ ಸಂಕಟ ಎದುರಾಗಿದ್ದು, ಕೆ.ಟಿ. ರಾಮರಾವ್‌ ಅವರು ಪೌರಾಡಳಿತ ಸಚಿವರಾಗಿದ್ದ ಸಂದರ್ಭದಲ್ಲಿ ನಿಯಮಗಳನ್ನು ಅನುಸರಿಸದೇ ಫಾರ್ಮುಲಾ ಇ ರೇಸ್‌ ಆಯೋಜಕರಿಗೆ 55 ಕೋಟಿ ರೂ. ವರ್ಗಾಯಿಸಲು ಅನುಮತಿ ನೀಡಿದ್ದರು. ಇದರಲ್ಲಿಅಕ್ರಮಗಳು ನಡದಿವೆ ಎಂದು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಆರೋಪಿಸಿದೆ. ಈಗ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಎಸಿಬಿ ತನಿಖೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

ಎಸಿಬಿ ಮೂಲಗಳ ಪ್ರಕಾರ, ಕೆಟಿ ರಾಮಾರಾವ್ ಅಲ್ಲದೆ ಆಗಿನ ಪುರಸಭೆ ಆಡಳಿತ ವಿಶೇಷ ಮುಖ್ಯ ಕಾರ್ಯದರ್ಶಿಯಾಗಿದ್ದ ಐಎಎಸ್ ಅಧಿಕಾರಿ ಅರವಿಂದ್ ಕುಮಾರ್ ಅವರನ್ನು ಆರೋಪಿ-2 (ಎ-2), ಮುಖ್ಯ ಎಂಜಿನಿಯರ್ ಬಿಎಲ್‌ಎನ್ ರೆಡ್ಡಿ ಅವರನ್ನು ಆರೋಪಿ-3 (ಎ-3) ಎಂದು ಹೆಸರಿಸಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13(1)(ಎ) ಮತ್ತು 13(2)(ಎ) ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 409 ಮತ್ತು 120(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...