ads

Search This Blog

Monday, 23 December 2024

ಜನೆವರಿ ೧೧ ಮತ್ತು ೧೨ : ವಿಭಾಗ ಮಟ್ಟದ ತತ್ವಪದಕಾರರ ಸಮಾವೇಶ ಮತ್ತು ಭಜನೆ ಸ್ಪರ್ದೆ

ಬೀದರ್ : ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದಿಂದ ಮುಂಬರುವ ೨೦೨೫ರ ಜನೆವರಿ ೧೧ ಮತ್ತು ೧೨ ರಂದು ಬೀದರ ನಗರದ ಪೂಜ್ಯ ಶ್ರೀ ಡಾ|| ಚನ್ನಬಸವ ಪಟ್ಟದೇವರ ಜಿಲ್ಲಾ ರಂಗಮ0ದಿರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ತತ್ವಪದಕಾರರ ಸಮಾವೇಶ ಮತ್ತು ಭಜನೆ ಸ್ಪರ್ದೆ ಕಾರ್ಯಕ್ರಮಗಳ ಸ್ವಾಗತ ಸಮಿತಿಯ ಅಧ್ಯಕ್ಷರನ್ನಾಗಿ ಖ್ಯಾತ ಉದ್ಯಮಿ, ಬಸವತತ್ವ ಚಿಂತಕರು, ಸಮಾಜ ಸೇವಕರು, ದಿ ಗ್ರೇನ್ ಐಂಡ್ ಸೀಡ್ಸ್ ಮರ್ಚಂಟ್ಸ್ ಅಸೋಶಿಯೆಶನ್ ಜಿಲ್ಲಾಧ್ಯಕ್ಷ ಬಸವರಾಜ ಧನ್ನೂರ್ ಅವರನ್ನು ನೇಮಕ ಮಾಡಲಾಗಿರುವುದು.


ಒಕ್ಕೂಟದ ಕೇಂದ್ರ ಸಮಿತಿಯ ಗೌರವ ಅಧ್ಯಕ್ಷರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ|| ಮಾತಾ ಬಿ. ಮಂಜಮ್ಮ ಜೋಗುತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಸವರಾಜ ಧನ್ನೂರ ಅವರನ್ನು ಸ್ವಾಗತ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲು ನಿರ್ಣಯಿಸಲಾಗಿತ್ತು, ಅದರಂತೆ ಇಂದು ಅವರಿಗೆ ಸ್ವಾಗತಿಸಲಾಯಿತು.

ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷರಾದ ವಿಜಯಕುಮಾರ ಸೋನಾರೆ ಅವರ ನೇತೃತ್ವದಲ್ಲಿ ಧನ್ನೂರ ಅವರ ನಿವಾಸಕ್ಕೆ ತೆರಳಿ ಅವರ ಒಪ್ಪಿಗೆ ಪಡೆದು ಸನ್ಮಾನಿಸಿ, ಗೌರವಿಸಿ ಸ್ವಾಗತಿಸಲಾಯಿತು. ನಂತರ ಮಾನತಾಡಿದ ಬಸವರಾಜ ಧನ್ನೂರ ಅವರು ನಮ್ಮ ಭವ್ಯ ಭಾತರದ ಸಂಸ್ಕೃತಿ, ಪರಂಪರೆ, ಸಂಸ್ಕಾರ, ಜಾನಪದ, ತತ್ವಪದ ಹಾಡುಗಾರಿಕೆ  ಅಳಿಸಿಹೊಗುತ್ತಿರುವ ಸಂದರ್ಭ ದಲ್ಲಿ ಅವುಗಳಿಗೆ ಸಂರಕ್ಷಿಸಿ ಇಂದಿನ ಯುವ ಶಕ್ತಿ ಪಡೆಗೆ ಅರುಹಿ ಸುಂದರ ಸುಭದ್ರ ಸಮಾಜ ನಿರ್ಮಿಸುವಂತಾಗಲು ಒಕ್ಕೂಟದ ಈ ಕಾರ್ಯಕ್ರಮಗಳು ದೇಶಕ್ಕೆ ಮಾದರಿಯಾಗಲಿವೆ ಎಂದು ಹೇಳಿದರು.

ವಿಜಯಕುಮಾರ ಸೋನಾರೆ ಮಾತನಾಡಿ, ಏಳು ಜಿಲ್ಲೆಗಳ ಕಲಾವಿದರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತತ್ವಪದ, ಭಜನೆ ಮತ್ತು ಜಾನಪದ ಗೀತೆಗಳನ್ನು ಹಾಡಲಿದ್ದಾರೆ. ಭಜನೆ ಸ್ಪರ್ದೇಯಲ್ಲಿ ಕಡಕೋಳ ಮಡಿವಾಳಪ್ಪ, ಸಂತ ಶಿಶುನಾಳ ಶರೀಫರು ಕನಕದಾಸರು ಮತ್ತು ಪುರಂದರದಾಸರುಗಳು ರಚಿತ ಸಾಹಿತ್ಯದ ಹಾಡುಗಳನ್ನು ಮಾತ್ರ ಈ ಸ್ಪರ್ದೇಯಲ್ಲಿ ಕಲಾವಿದರು ಹಾಡಬೇಕು. ಸ್ಪರ್ದೇಯ ಪ್ರಥಮ ವಿಜೇತ ತಂಡಕ್ಕೆ ೫೦ ಸಾವಿರ ರೂಪಾಯಿ, ದ್ವೀತಿಯ ತಂಡಕ್ಕೆ ೨೫ ಸಾವಿರ ಮತ್ತು ತೃತಿಯ ಸ್ಥಾನ ಪಡೆಯುವ ತಂಡಕ್ಕೆ ೧೫ ಸಾವಿರ ರೂಪಾಯಿ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸದ ಅವರು ಹಿಂದಿನಿ0ದಲೂ ಭಜನೆ ಪದಗಳು ಹಿರಿಯ ಕಲಾಜೀವಿಗಳು ಹಾಡುತ್ತಲೇ ಬಂದಿದ್ದಾರೆ. ಅವರುಗಳಲ್ಲಿ ಅದೇಷ್ಟೋ ಸಂಖ್ಯೆಯಲ್ಲಿ ಮರೆಯಾಗಿದ್ದಾರೆ. ಅಳಿದುಳಿದ ಕಲಾವಿದರಿಗೆ ಪ್ರೋತ್ಸಾಹ ನೀಡಿ ಇಂದಿನ ಯುವ ಕಲಾವಿದರು ಪ್ರೇರಣೆಗೊಂಡು ಭಜನೆ ಹಾಡುಗಳನ್ನು ಹಾಡುವಂತೆ ಮಾದರಿಯನ್ನಾಗಿ ಮಾಡುವ ಈ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದರು.

ಈ ಸಂದರ್ಭದಲ್ಲಿ ಪೃಥ್ವಿರಾಜ್ ಎಸ್, ಸುನೀಲಕುಮಾರ ಕುಲಕರ್ಣಿ, ನಾಗಶೆಟ್ಟಿ ಧರಮಪೂರ್, ಸುನೀಲ ಭಾವಿಕಟ್ಟಿ,  ಸೇರಿದಂತೆ ಇತರರು ಇದ್ದರು.


ರೈತರಲ್ಲಿ ಹೊಸ ಅವಿಷ್ಕಾರಗಳ ಕಲ್ಪನೆ ಅಗತ್ಯ : ಭಾಂಡಗೆ

 ೨ನೇ ದಿನದ ತೋಟಗಾರಿಕೆ ಮೇಳ | ಫಲಶ್ರೇಷ್ಠ ರೈತರಿಗೆ ಸನ್ಮಾನ

ಬಾಗಲಕೋಟೆ : ರೈತರಿಗೆ ಅನೇಕ ರೀತಿಯ ಹೊಸ ಹೊಸ ಅವಿಷ್ಕಾರಗಳ ಬಗ್ಗೆ ಕಲ್ಪನೆ ಕೊಟ್ಟು ಇಳುವರಿ ಹೆಚ್ಚಿನ ಪ್ರಮಾಣ ಪಡೆದು ಆರ್ಥಿಕವಾಗಿ ಬಲಿಷ್ಟವಾಗುವಂತೆ ಮಾಡುವ ಕೆಲಸ ತೋಟಗಾರಿಕೆ ವಿಶ್ವವಿದ್ಯಾಲಯ ಮಾಡಬೇಕೆಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಗಡೆ ಹೇಳಿದರು.

ತೋವಿವಿಯ ಉದ್ಯಾನಗಿರಿಯಲ್ಲಿ ಹಮ್ಮಿಕೊಂಡ ತೋಟಗಾರಿಕೆ ಮೇಳದ ಎರಡನೇ ದಿನದ ಕಾರ್ಯಕ್ರಮದಲ್ಲಿ ೮ ಜಿಲ್ಲೆಯ ಫಲಶ್ರೇಷ್ಠ ರೈತರನ್ನು ಸನ್ಮಾನಿಸಿ ಮಾತನಾಡಿದ ಅವರು ವಿಜ್ಞಾನಿಗಳು ಅವಿಷ್ಕಾರ ಮಾಡಿ ಹೊರತಂದ ಅನೇಕ ವಿಧದ ತಳಿಗಳು, ಅವಿಷ್ಕಾರಗಳನ್ನು ನೋಡಿ ತಿಳಿದುಕೊಂಡು ಅವುಗಳ ಕಲ್ಪನೆ ಮೂಡಿದಾಗ ಮಾತ್ರ ತೋಟಗಾರಿಕೆ ಮೇಳ ಏರ್ಪಡಿಸಿದ್ದಕ್ಕೆ ಸಾರ್ಥಕ ಪಡೆದುಕೊಳ್ಳುತ್ತದೆ. ಇದರಿಂದ ರೈತನ ಸಮಗ್ರ ಬೇಸಾಯ ಪದ್ದತಿಯಿಂದ ಆರ್ಥಿಕವಾಗಿ ಮುಂದೆ ಬರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕೀಟಗಳನ್ನು ನಾಶ ಮಾಡಲು ಕೀಟನಾಶಕ ಔಷಧಿಗಳ ಸಿಂಪರಣೆ ಮಾಡುತ್ತೇವೆ. ಆದರೆ ಎಲ್ಲ ಕೀಟಗಳು ಬೆಳೆಗಳನ್ನು ನಾಶ ಮಾಡುವದಿಲ್ಲ. ೧೦೦ಕ್ಕೆ ೯೯ ರಷ್ಟು ಕೀಟಗಳು ರೈತ ಮಿತ್ರವಾಗಿರುತ್ತವೆ. ಪ್ರತಿಶತ ಒಂದು ರಷ್ಟು ಕೀಟಗಳು ಮಾತ್ರ ಬೆಳೆಗಳನ್ನು ನಾಶ ಮಾಡುತ್ತವೆ. ರೈತ ಏನೇಲ್ಲ ಸಾಧಿಸಬಹುದು ಎಂಬುದರ ವಿಶ್ವಾಸ ಮೂಡಿಸುವ ಕಾರ್ಯ ತೋಟಗಾರಿಕೆ ವಿಶ್ವವಿದ್ಯಾಲಯ ಮಾಡುತ್ತಿದೆ. ತೋಟಗಾರಿಕೆ ವಿಶ್ವವಿದ್ಯಾಲಯ ಇನ್ನು ಹೆಚ್ಚಿನ ಸಂಶೋಧನೆ ನಡೆಸಲಿ ಕೇಂದ್ರ ಸರಕಾರದಿಂದ ಏನೇನು ಬೇಕು ಅವುಗಳನ್ನು ಕೊಡಿಸುವ ಪ್ರಾಮಾಣಿಕ ಪ್ರಂiÀiತ್ನ ಮಾಡುವುದಾಗಿ ತಿಳಿಸಿದರು.

ವಿಧಾನ ಪರಿಷತ್ ಶಾಸಕ ಪಿ.ಎಚ್.ಪೂಜಾರ ಮಾತನಾಡಿ ಬಯಲು ಸೀಮೆ ಎನಿಸಿರುವ ಬಾಗಲಕೋಟೆ ಜಿಲ್ಲೆ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ತೋಟಗಾರಿಕೆ ವಿಶ್ವವಿದ್ಯಾಲಯ ಈ ಭಾಗದ ಹೆಮ್ಮೆಯ ಕೊಡುಗೆಯಾಗಿದ್ದು, ಕೃಷಿಪ್ರಧಾನವಾಗಿರುವ ಬಾಗಲಕೋಟೆ ಹಾಗೂ ಉತ್ತರ ಕನ್ನಡ ಭಾಗದ ಅನೇಕ ಜಿಲ್ಲೆಗಳಲ್ಲಿ ಇನ್ನು ಮುಂದೆ ವಿಫುಲವಾಗಿ ತೋಟಗಾರಿಕೆ ಬೆಳೆ ಬೆಳೆಯಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಬಾಗಲಕೋಟೆ-ವಿಜಯಪುರ ಜಿಲ್ಲೆಗಳ ನೆಲದಲ್ಲಿ ಅಧಿಕ ಪ್ರಮಾಣದ ದಾಳಿಂಬೆ, ಮಾವು, ದ್ರಾಕ್ಷಿ, ಚಿಕ್ಕು ಹಣ್ಣುಗಳ ಬೆಳೆಗಳಿಗೆ ಹೇಳಿ ಮಾಡಿಸಿದ ನೆಲ ಇಲ್ಲಿದ್ದು, ಕೃಷ್ಣಾ ಮೇಲ್ದಂಡೆ ಯೋಜನೆ ಅಡಿಯ ಹಿನ್ನೀರು ರೈತರಿಗೆ ವರದಾನವಾಗಿದೆ. ಈ ಭಾಗದಲ್ಲಿ ದಾಳಿಂಬೆ ಬೆಳೆಗೆ ವಿಫುಲ ಅವಕಾಶ ದೊರಕಿಸಿಕೊಡಬೇಕಾಗಿದೆ. ಇಲ್ಲಿ ಕಾರ್ಯನಿರ್ವಹಿಸುತ್ತಿರುವ ತೋವಿವಿಯಲ್ಲಿ ಜಗತ್ತಿನಲ್ಲಿ ಬೆಳೆಯಬಹುದಾದ ಎಲ್ಲ ತರಹದ ಹೂ, ಹಣ್ಣುಗಳನ್ನು ಬೆಳೆಯುವಂತಾಗಿ ಈ ಭಾಗದ ರೈತ ಆರ್ಥಿಕವಾಗಿ ಪ್ರಭಲವಾಗಿ ಬೆಳೆಯವಂತಾಗಬೇಕು ಎಂದರು.

ಈ ಸಂದರ್ಬಧಲ್ಲಿ ತೋಟಗಾರಿಕೆ ಮೇಳದ ಮಾಹಿತಿಯನ್ನು ತ್ವರಿತವಾಗಿ ಪ್ರಕ್ರಿಯೆ ನೀಡುವ ಜಾಲತಾಣಗಳ ಕ್ಯೂಆರ್ ಕೋಡಗಳನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ತೋವಿವಿಯ ಕುಲಪತಿ ಡಾ.ವಿಷ್ಣುವರ್ಧನ, ವಿಸ್ತರಣಾ ನಿರ್ದೇಶಕ ಡಾ.ಟಿ.ಬಿ.ಅಳ್ಳೊಳ್ಳಿ, ಡೀನ್ ಸ್ನಾತಕೋತ್ತರ ಡಾ.ಲಕ್ಷಿö್ಮÃನಾರಾಯಣ ಹೆಗಡೆ, ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿವಿಯ ಕುಲಪತಿ ಡಾ.ಆರ್.ಸಿ.ಜಗದೀಶ, ಬೆಂಗಳೂರಿನ ಕೃವಿವಿಯ ಸಂಶೋಧನಾ ನಿರ್ದೇಶಕ ಡಾ.ಎಚ್.ಎಸ್.ಶಿವರಾಮು, ಧಾರವಾಡ ಕೃವಿವಿಯ ವಿಸ್ತರಣಾ ನಿರ್ದೇಶಕ ಡಾ.ಬಸವರಾಜಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಫಲಶ್ರೇಷ್ಠ ರೈತರಿಗೆ ಸನ್ಮಾನ 

ಫಲಶ್ರೇಷ್ಠ ರೈತರಿಗೆ ಸನ್ಮಾನ : ಡಾ.ಎಸ್.ಪಿ.ಯೋಗಣ್ಣ (ಮೈಸೂರು), ಮಹಾದೇವಸ್ವಾಮಿ ಬಿ (ಚಾಮರಾಜನಗರ), ವಿ.ಆರ್.ರಾಮು (ಮಂಡ್ಯ), ಜಿ.ರವಿಕುಮಾರ (ಹಾಸನ), ಮಹಾಂತೇಶ ಪಟ್ಟಣಶೆಟ್ಟಿ (ಧಾರವಾಡ), ಅರವಿಂದ ಕಟಗಿ (ಗದಗ), ರಾಘವೇಂದ್ರ ಬಸವಂತ್ರಾಯ (ಯಾದಗಿರಿ), ದೊಡ್ಡಪ್ಪ ಅಡಿವೆಪ್ಪ ಹೂಲಿ (ಬೆಳಗಾವಿ).


ರೈತರ ಬೆಳೆಗೆ ಮೌಲ್ಯ ಕಟ್ಟಬಹುದು. ಶ್ರಮ ಅಮೂಲ್ಯವಾದದು. ರೈತನಿಗೆ ಸಕ್ಕರೆ ಕೊಡುವ ಮೂಲಕ ಅಕ್ಕರೆಯ ಅಭಿನಂದನೆ - ಶಿವರಾಜ ಅಂಡಗಿ


        ಕಲಬುರಗಿ  : ಇ0ದು ಡಿಸೆಂಬರ್ ೨೩ "ರಾಷ್ಟಿಯ ರೈತರ ದಿನಾಚರಣೆ" ನಿಮಿತ್ಯ ಜಗದ ಹಸಿವು ನೀಗಿಸುವ ಹಸಿದ ಹೊಟ್ಟಯ ಅನ್ನದಾತ, ಬೆವರಿನ ಶ್ರಮ ಮಣ್ಣಿನ ಮಮತೆಯ ಮಕ್ಕಳಾದ ರೈತರು ಹಗಲು-ಇರಳು, ಮಳೆ, ಬಿಸಿಲು ಗಾಳಿ ಚಳಿ ಎನ್ನದೇ ನಮ್ಮೆಲ್ಲರ ಆಹಾರ ಉತ್ಪಾದನೆ ಮಾಡುವ ಮೂಲಕ ಹೊಲದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರೈತರಿಗೆ ಸಕ್ಕರೆ ಕೊಡುವ ಮೂಲಕ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶೀಗಳಾದ ಶ್ರೀ ಶಿವರಾಜ ಅಂಡಗಿಯವರು ರೈತರಿಗೆ ಗೌರವಿಸಿ ಅಭಿನಂದಿಸಿದರು.


ಎರಡು ದಿನಗಳ ಹಿಂದೆ ಸಕ್ಕರೆಯ ನಾಡು ಅಕ್ಕರೆಯ ಬೀಡು ಮಂಡ್ಯ ಜಿಲ್ಲೆಯಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ ನಮಗೆಲ್ಲರಿಗೂ ಅಕ್ಕರೆಯ ಸಕ್ಕರೆಯ ಉಡಗೊರೆ ಕೊಟ್ಟು ಗೌರವಿಸಿದ್ದಾರೆಂದು ಸ್ಮರಿಸಿಕೊಳ್ಳುತ್ತಾ ಈ ವರ್ಷ ಎಲ್ಲಾ ಬೆಳೆಗಳು ಚೆನ್ನಾಗಿ ಬೆಳೆದು ಉತ್ತಮ ಬೆಲೆ ಬಂದು ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸಿ ರೈತ ಸಮುದಾಯಕ್ಕೆ ಸಂತೋಷ ಒದಗಿಸಲಿ ಎಂದು ಹಾರೈಸಿ ಶುಭಾಶಯ ಕೋರಿದ್ದಾರೆ.



ದಾನಿ ಬಾಬುರಾವ ಅವರಿಗೆ ಮಂಡ್ಯ ಸಮ್ಮೇಳನದಲ್ಲಿ ಗೌರವ ಸನ್ಮಾನ

 ಇದೇ ಡಿಸೆಂಬರ್ 20,21 ಮತ್ತು 22 ರಂದು ಸಕ್ಕರೆ ನಾಡು‌ ಮಂಡ್ಯದಲ್ಲಿ ಹಮ್ಮಿಕೊಂಡಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜಿಲ್ಲೆಯ ನಿವೃತ್ತ ಮುಖ್ಯಗುರುಗಳಾದ ಶ್ರೀ ದಾನಿ ಬಾಬುರಾವ ಅವರನ್ನು‌ ಗೌರವಿಸಲಾಯಿತು. ಈ ಸಂದರ್ಭದಲ್ಲಿ ನ್ಯಾಯಮೂರ್ತಿ ಶಿವರಾಜ ಪಾಟೀಲ, ಕೃಷಿ ಸಚಿವ ಚಲುವರಾಯ ಸ್ವಾಮಿ, ಕಸಾಪ ರಾಜ್ಯಾಧ್ಯಕ್ಷ ನಾಡೋಜ‌ ಮಹೇಶ ಜೋಶಿ, ಬೀದರ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ವೇದಿಕೆಯಲ್ಲಿದ್ದರು.




ದಾನಿ ಬಾಬುರಾವ ಅವರಿಗೆ ಪರಿಷತ್ತಿನ ಗೌರವ ಸನ್ಮಾನ ದೊರೆತದ್ದಕ್ಕಾಗಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಸುರೇಶ ಚನ್ನಶೆಟ್ಟಿ, ಗೌರವ ಕಾರ್ಯದರ್ಶಿಗಳಾದ ಪ್ರೊ.ಶಿವಕುಮಾರ ಕಟ್ಟೆ, ಟಿ.ಎಂ.ಮಚ್ಚೆ, ಕೋಶಾಧ್ಯಕ್ಷರಾದ ಶಿವಶಂಕರ ಟೋಕರೆ, ಡಾ.ಬಸವರಾಜ ಬಲ್ಲೂರ್, ಬೀದರ ತಾಲೂಕು ಕಸಾಪ ಅಧ್ಯಕ್ಷರಾದ ಎಂ.ಎಸ್.ಮನೋಹರ, ಯುವ ಘಟಕದ ಅಧ್ಯಕ್ಷ ಗುರುನಾಥ ರಾಜಗಿರಾ, ವೀರೇಶ್ ಸ್ವಾಮಿ, ಆಕಾಶ ಕೋಟೆ ಮುಂತಾದವರು ಅಭಿನಂದಿಸಿದ್ದಾರೆ. 

ದಾನಿ ಬಾಬುರಾವ ಅವರು ಹೆಚ್.ಕೆ.ಇ.ಸಂಸ್ಥೆಯ ಪ್ರೌಡ ಶಾಲೆಯಲ್ಲಿ ಶಿಕ್ಷಕರಾಗಿ, ಮುಖ್ಯಗುರುಗಳಾಗಿ ಶೈಕ್ಷಣಿಕ ಮತ್ತು ವೈಜ್ಞಾನಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಮಂಡ್ಯ ಸಮ್ಮೇಳನದಲ್ಲಿ ಗೌರವಿಸಲಾಗಿದೆ. 

ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಜಿ.ಪಂ.ಸಿಇಓ ಲವೀಶ ಒರಡಿಯಾ

ಯಾದಗಿರಿ  : ಸಿರಿಧಾನ್ಯ ಸೇವನೆಯಿಂದ ಗುಣವಾಗದ ಕಾಯಿಲೆಗಳನ್ನೂ ಗುಣ ಪಡಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಧಿಕಾರಿಗಳಾದ ಡಾ.ಲವೀಶ್ ಒರಡಿಯಾ ಅವರು ಹೇಳಿದರು.ಕೃಷಿ ಇಲಾಖೆಯಿಂದ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಸಿರಿಧಾನ್ಯ ಹಾಗೂ ಸಾವಯವ ಅಂತರಾಷ್ಟಿçÃಯ ಅಂತಾರಾಷ್ಟಯ ವಾಣಿಜ್ಯ ಮೇಳ ಅಂಗವಾಗಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಸ್ಪರ್ಧೆ ಹಾಗೂ  ಮರೆತುಹೋದ ಖಾದ್ಯಗಳ  ಪಾಕ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

     ಸಿರಿಧಾನ್ಯ ಸೇವನೆಯಿಂದ ಗುಣವಾಗದ ಕಾಯಿಲೆಗಳು ಗುಣಪಡಿಸಬಹುದು. ಪೌಷ್ಟಿಕ ಆಹಾರ ಹೊಂದಿರುವ ಸಿರಿಧಾನ್ಯಗಳನ್ನು ಎಲ್ಲರೂ ದಿನನಿತ್ಯ ಸೇವನೆ ಮಾಡಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು. ಸ್ಪರ್ಧೆಗಳಲ್ಲಿ ಗೆಲುವು ಸೋಲು ಇದ್ದೇ ಇರುತ್ತದೆ. ಇನ್ನು ಇಂತಹ ಕಾರ್ಯಕ್ರಮ ಹೆಚ್ಚು ಆಗಬೇಕು. ಇದರಿಂದ ಆರೋಗ್ಯಕರ ಆಹಾರ ಕ್ಕೂ ಉತ್ತೇಜನ ದೊರೆಯಲಿದೆ ಎಂದು ಹೇಳಿ ಸಿರಿಧಾನ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ ಸ್ಪರ್ಧಾಳುಗಳಿಗೆ ಪ್ರೋತ್ಸಾಹ ನೀಡುವಂತೆ ಸಲಹೆ ನೀಡಿದರು.



     ದಿನಗಳಲ್ಲಿ ಸಿರಿಧಾನ್ಯಗಳಲ್ಲಿ ಅಡಗಿರುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ಹೆಚ್ಚಿನವರಿಗೆ ಗೊತ್ತಾಗಬೇಕಿದೆ. ಇದರಲ್ಲಿ ರುವ ಹಲವು ಬಗೆಯ ಆರೋಗ್ಯಕಾರಿ ಅಂಶಗಳು, ರೋಗ ರುಜಿನಗಳನ್ನು ದೂರವಿಡುವುದು ಮಾತ್ರವಲ್ಲದೆ, ದೀರ್ಘಕಾಲದ ಕಾಯಿಲೆಗಳಿಂದ ಕೂಡ ನಮ್ಮ ಆರೋಗ್ಯವನ್ನು ಕಾಪಾಡುತ್ತದೆ. ಸರಿಸುಮಾರು 20- 25 ವರ್ಷಗಳ ಹಿಂದೆ, ನಮ್ಮ ಹಳ್ಳಿಗಳಲ್ಲಿ ವಾರಕ್ಕೆ ಒಮ್ಮೆ ನಡೆಯುವ ತರಕಾರಿ ಹಾಗೂ ದಿನಸಿ ಸಾಮಗ್ರಿಗಳನ್ನು ಮಾರಾಟ ಮಾಡುವ ಸಂತೆಗಳಲ್ಲಿ ಅಲ್ಲಲ್ಲಿ ವಿಭಿನ್ನ ಬಗೆಯ ಸಿರಿ ಧಾನ್ಯಗಳು ರಾಶಿ ರಾಶಿಯೇ ಕಾಣಲು ಸಿಗುತ್ತಿತ್ತು. ಇದರ ಮಾರಾಟ ಕೂಡ ಅಷ್ಟೇ ಜೋರಾಗಿ ನಡೆಯುತ್ತಿತ್ತು. ಆದರೆ ಕಾಲ ಬದಲಾಗಿ ಹಿಂದಿನ ಕಾಲದಲ್ಲಿ ಹೇರಳವಾಗಿ ಎಲ್ಲಾ ಕಡೆ ಲಭ್ಯವಿದ್ದ ಈ ಆರೋಗ್ಯ ಭರಿತ ಸಿರಿಧಾನ್ಯಗಳು, ಇತ್ತೀಚಿನ ದಿನಗಳಲ್ಲಿ ಕಣ್ಮರೆ ಆಗಿರುವುದು ನಿಜಕ್ಕೂ  ವಿಷಾದನೀಯ  ಸಂಗತಿ ಎಂದು ಹೇಳಿದರು.

     ಇಂದು ನಡೆದ ಕಾರ್ಯಕ್ರಮದಲ್ಲಿ ವಿವಿಧ ತಾಲೂಕಿನ ಸ್ಪರ್ಧಾಳುಗಳು ಭಾಗಿಯಾಗಿದ್ದರು. ಒಟ್ಟು 22 ಜನ ಭಾಗವಹಿಸಿ ಸಿರಿ ಧಾನ್ಯಗಳಿಂದ ಮಾಡಿದಂತಹ ಪದಾರ್ಥ ಪ್ರದರ್ಶಿಸಿದರು. ಸಿರಿಧಾನ್ಯ ಹಾಗೂ ಸಾವಯವ  ಅಂತರಾಷ್ಟಿçÃಯ ಮೇಳ 2025ರಈ ಸ್ಪರ್ಧೆಯಲ್ಲಿ 9 ಜನ ಸ್ಪರ್ಧಾಳುಗಳನ್ನು ವಿಜೇತರನ್ನಾಗಿ ಘೋಷಿಸಲಾಯಿತು.




     ಸಿರಿಧಾನ್ಯ ಸ್ಪರ್ಧೆಗೆ ತೀರ್ಪುಗಾರರಾಗಿ ಆಗಮಿಸಿದ, ಡಾಕ್ಟರ್ ಶಶಿಕಲಾ ರೂಳಿ. ಡಾಕ್ಟರ್ ವಾಣಿಶ್ರೀ. ಹಾಗೂ ಶ್ರೀಮತಿ ಮನುಜಾಕ್ಷಿ, ಬಂದ0ತ ಎಲ್ಲ ಸ್ಪರ್ಧೆಗಳ ಸಿರಿಧಾನ್ಯಗಳಿಂದ ಮಾಡಿದ ಪದಾರ್ಥ ವೀಕ್ಷಣೆ ಮಾಡಿ ತೀರ್ಪು ನೀಡಿದರು. ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕರು ರವೀಂದ್ರನಾಥ್ ಸೂಗೂರು. ಉಪ ಕೃಷಿ ನಿರ್ದೇಶಕರು ಶ್ರೀಮತಿ ಮಂಜುಳಾ ಬಸವ ರೆಡ್ಡಿ, ಸಹಾಯಕ ಕೃಷಿ ನಿರ್ದೇಶಕರು ರಾಜಕುಮಾರ್. ಸುರೇಶ್.ಬಿ.ಸಹಾಯಕ ಕೃಷಿ ಅಧಿಕಾರಿಗಳು ಉಪಸ್ಥಿತರಿದ್ದರು.

ಡಾ. ಅಮ್ಮಸಂದ್ರ ಸುರೇಶ್ ಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ

ಬೆಂಗಳೂರಿನ  ಸರ‍್ವೆ ಕಲ್ಚರಲ್ ಅಕಾಡೆಮಿ ಮತ್ತು ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ  ಇಂಜಿನಿಯರಿಂಗ್ ಪ್ರತಿಷ್ಠಾನ ಕೊಡಮಾಡುವ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಗೆ ಡಾ. ಅಮ್ಮಸಂದ್ರ ಸುರೇಶ್ ಭಾಜನರಾಗಿದ್ದಾರೆ.


 ಡಾ. ಅಮ್ಮಸಂದ್ರ ಸುರೇಶ್


ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಮ್ಮಸಂದ್ರ ಸುರೇಶ್ ಅವರು ಇದುವರೆಗೂ ಇಪ್ಪತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ ಮತ್ತು ರಾಜ್ಯ ಮಟ್ಟದ ಪತ್ರಿಕೆಗಳಿಗೆ ಅಂಕಣಗಳನ್ನು ಬರೆಯುತ್ತಿದ್ದಾರೆ. ಪ್ರಶಸ್ತಿಯನ್ನು ಇದೇ ತಿಂಗಳ ೨೭ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗಮಂದಿರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಧಾನ ಮಾಡಲಾಗುವುದು ಎಂದು ಅಕಾಡೆಮಿಯ ಸ್ಥಾಪಕ ಅಧ್ಯಕ್ಷ ರಮೇಶ್ ಸರ‍್ವೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪಿತ್ರಾರ್ಜಿತ ಆಸ್ತಿಯಲ್ಲಿ ಮೃತ ಹೆಣ್ಣು ಮಕ್ಕಳಿಗೂ ಸಮಾನ ಪಾಲು

 ಬೆಂಗಳೂರು: 2024ನೇ ವರ್ಷ ಮುಕ್ತಾಯವಾಗುತ್ತಿದೆ. ಹೊಸ ವರ್ಷ 2025ಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ರಾಜ್ಯ ಹೈಕೋರ್ಟ್ ಈ ವರ್ಷ ಹೊರಡಿಸಿದ್ದ ಮಹತ್ವದ ಆದೇಶಗಳ 

  • ಮಲಗುಂಡಿ ಸ್ವಚ್ಛತೆಗೆ ತಳ ಸಮುದಾಯದವರ ಬಳಕೆ ಮಾಡಿಕೊಂಡಿರುವ ಕುರಿತಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ಕೇಳಿತ್ತು.ಮೃತ ಪುತ್ರನಿಗೆ ಪಿತ್ರಾರ್ಜಿತ ಆಸ್ತಿಯ ಹಕ್ಕು ಇದೆ ಎಂದಾದರೆ ಹೆಣ್ಣು ಮಕ್ಕಳಿಗೂ ಅದು ಅನ್ವಯವಾಗುತ್ತದೆ. ಆದ್ದರಿಂದ ಪಿತ್ರಾರ್ಜಿತ ಆಸ್ತಿಯಲ್ಲಿ ಮೃತ ಹೆಣ್ಣು ಮಕ್ಕಳಿಗೂ ಸಮಾನ ಪಾಲು ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು.ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟೆ ಸುತ್ತ 30 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಹೈಕೋರ್ಟ್ ಆದೇಶ.
  • ರಾಜ್ಯದಲ್ಲಿ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿ ಕೊರತೆಯಿದ್ದ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ಪ್ರತಿಕ್ರಿಯೆ ಕೇಳಿದ್ದ ಹೈಕೋರ್ಟ್. ಸೇನೆಯಲ್ಲಿನ ನರ್ಸಿಂಗ್ ಸೇವೆಗೆ ಮಹಿಳೆಯರಿಗೆ ಮಾತ್ರ ಇದ್ದ ಅವಕಾಶ ರದ್ದುಗೊಳಿಸಿದ್ದಲ್ಲದೇ, ಈ ರೀತಿಯ ಮೀಸಲಾತಿ ಸಂವಿಧಾನದ ಪರಿಚ್ಛೇದ 14 ಮತ್ತು 16(2)ಕ್ಕೆ ವಿರುದ್ಧ ಎಂದು ಸಾರಿದ್ದ ಹೈಕೋರ್ಟ್.
  • ಸಾರ್ವಜನಿಕ ಸ್ಥಳದಲ್ಲಿ ಧಾರ್ಮಿಕ ಕೇಂದ್ರಗಳನ್ನು ನಿರ್ಮಿಸಿದರೆ ಜನ ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದ ಹೈಕೋರ್ಟ್, ಸಾರ್ವಜನಿಕ ರಸ್ತೆಯಲ್ಲಿ ದೇವಾಲಯ, ಮಸೀದಿ, ಚರ್ಚ್ ನಿರ್ಮಿಸಿದರೆ ಜನರು ಏನು ಮಾಡಬೇಕು? ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.
  • ಸರ್ಕಾರ ಬದಲಾದರೆ ಅಧಿಕಾರಿಗಳ ವಿರುದ್ಧದ ಪ್ರಕರಣ ಹಿಂಪಡೆಯಲು ಮುಂದಾಗಬಾರದು ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದ ಹೈಕೋರ್ಟ್. ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಮಹಿಳೆಯ ರಕ್ಷಣೆಗೆ ಕ್ರಮ ಕೈಗೊಳ್ಳದ ಪೊಲೀಸ್ ಇಲಾಖೆಗೆ ತರಾಟೆ ತೆಗೆದುಕೊಂಡಿತ್ತು. ಜೊತೆಗೆ, ಮಹಿಳೆಗೆ ಎರಡು ಎಕರೆ ಜಮೀನು ಮತ್ತು ಸರ್ಕಾರದಿಂದ ಚಿಕಿತ್ಸೆ ಮತ್ತು ಪರಿಹಾರ ಒದಗಿಸುವಂತೆ ಮಹತ್ವದ ತೀರ್ಪು ಪ್ರಕಟಿಸಿತ್ತು.
  • ಆಸ್ತಿ ಮಾರಾಟ ಸೇರಿದಂತೆ ಇತರೆ ದಾಖಲೆಗಳ ನೋಂದಣಿಗೂ ಮುನ್ನ ಆ ದಾಖಲೆಗಳನ್ನು ಸಲ್ಲಿಸುವ ವ್ಯಕ್ತಿಯ ಆಧಾರ್ ನೈಜತೆಯನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಆದೇಶ. ಬಿಡಿಎ ಕಾರ್ಯವೈಖರಿ ಬಗ್ಗೆ ಹೈಕೋರ್ಟ್ ಅಸಮಾಧಾನ. ಮಾರುವೇಷದಲ್ಲಿ ಕಚೇರಿಗೆ ಹೋಗಿ ಪರಿಶೀಲಿಸುವಂತೆ ಬಿಡಿಎ ಆಯುಕ್ತರಿಗೆ ಸಲಹೆ. ಸುಗ್ರೀವಾಜ್ಞೆ ಮೂಲಕ ಬಿಡಿಎ ಮುಚ್ಚುವುದೇ ಲೇಸು ಎಂದು ಮೌಖಿಕ ಅಭಿಪ್ರಾಯ.
  • ಕಾನೂನುಬಾಹಿರವಾಗಿ ವೈದ್ಯಕೀಯ ಸ್ನಾತಕೋತ್ತರ ಪದವಿಯ ಸೀಟು ಹಂಚಿಕೆ ಆರೋಪ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ 1 ಲಕ್ಷ ರೂ. ದಂಡ ವಿಧಿಸಿದ್ದ ಹೈಕೋರ್ಟ್​.
  • ಬಾಲ್ಯ ವಿವಾಹದಿಂದಾಗುವ ಪರಿಣಾಮ ಅರಿಯದೆ ಪರಸ್ಪರ ಒಮ್ಮತದಿಂದ ಹದಿಹರೆಯದವರು ಲೈಂಗಿಕ ಸಂಭೋಗ ನಡೆಸುವುದರಿಂದ ಅದನ್ನು ಅಪರಾಧೀಕರಿಸುವುದಕ್ಕೆ ಸಾಧ್ಯವಿಲ್ಲ. ಅಪ್ರಾಪ್ತೆಯಾಗಿರುವ ಪತ್ನಿ ಮತ್ತು ಆಕೆಯ ಮಗುವಿಗೆ ಆರೋಪಿತರೇ ಜೀವನಾಧಾರವಾಗಿದ್ದ ಹಿನ್ನೆಲೆಯಲ್ಲಿ, ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ರದ್ದುಪಡಿಸಿ ಆದೇಶಿಸಿದ್ದ ಹೈಕೋರ್ಟ್.
  • ಮೃತಪಟ್ಟ ತಂದೆಯ ನೌಕರಿಯನ್ನು ವಿವಾಹಿತ ಪುತ್ರಿಗೆ ಅನುಕಂಪದ ಆಧಾರದಲ್ಲಿ ನೀಡಲಾಗದು ಎಂದಿದ್ದ ಹೈಕೋರ್ಟ್.ರಾಜ್ಯದಲ್ಲಿ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಪಡಿಸಿ ಮಹತ್ವದ ಆದೇಶ ನೀಡಿದ್ದ ಹೈಕೋರ್ಟ್, ದ್ವಿಸದಸ್ಯ ಪೀಠದಿಂದ ಅನುಮತಿ, ಬಳಿಕ ಸುಪ್ರೀಂಕೋರ್ಟ್‌ನಿಂದ ಅನುಮತಿ ರದ್ದು.
  • ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣದಲ್ಲಿ ಡಾ.ಶಿವಮೂರ್ತಿ ಮುರುಘಾಶರಣರ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣ ಸಂಬಂಧದ ಆರೋಪವನ್ನು ಮರು ನಿಗದಿ ಮಾಡಲು ಹೈಕೋರ್ಟ್ ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿದೆ.ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ಸೇವೆ (ಬಡ್ತಿ, ಸೇವಾ ಹಿರಿತನ)ಗೆ ಸಂಬಂಧಿಸಿದ ನಿಯಮಗಳ ಅಡಿ ದಾಖಲಾಗುವ ಪ್ರಕರಣಗಳ ವಿಚಾರಣೆ ನಡೆಸುವ ಅಧಿಕಾರಗಳಿಲ್ಲ ಎಂದು ಹೈಕೋರ್ಟ್ ಆದೇಶ.
  • ಕ್ರೂರ, ಅಪಾಯಕಾರಿ ಶ್ವಾನ ತಳಿ ಸಂತಾನೋತ್ಪತ್ತಿ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಿದ್ದ ಹೈಕೋರ್ಟ್.ಮೃತ ಸೈನಿಕನ ವಿಚ್ಛೇದಿತ ಪತ್ನಿಗೆ ಎಲ್ಲ ರೀತಿಯ ವಿಧವಾ ಸೌಲಭ್ಯಗಳನ್ನು ಕಲ್ಪಿಸಲು ಸೇನಾ ಪ್ರಾಧಿಕಾರಕ್ಕೆ ಸೂಚಿಸಿದ್ದ ಹೈಕೋರ್ಟ್.
  • ಹೈಕೋರ್ಟ್ ನ್ಯಾಯಪೀಠದ ಮುಂದೆ ಕತ್ತಿಗೆ ಗಾಯ ಮಾಡಿಕೊಂಡ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು.ಶ್ರವಣದೋಷವುಳ್ಳ ವಕೀಲರಿಗೆ ನೆರವಾಗಲು ಅರ್ಥ ನಿರೂಪಣಾಕಾರರ ನೇಮಕ ಮಾಡಿ ಪ್ರಕರಣದ ವಿಚಾರಣೆ ನಡೆಸಿ ಇತ್ಯರ್ಥಪಡಿಸಿದ ಹೈಕೋರ್ಟ್.ನ್ಯಾಯಾಲಯದ ಆದೇಶ ಪಾಲಿಸದ ಸರ್ಕಾರದ ಪ್ರಾಧಿಕಾರಗಳು ವಿರುದ್ಧ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿಕೊಂಡು ಸರ್ಕಾರದ ಪ್ರತಿಕ್ರಿಯೆ ಕೇಳಿದ್ದ ಹೈಕೋರ್ಟ್ಸರ್ಕಾರಿ ಕೋಟಾದಡಿ ಪದವಿ ಪಡೆದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಗ್ರಾಮೀಣ ಸೇವೆ ಕಡ್ಡಾಯ ಎಂದು ಹೈಕೋರ್ಟ್ ಆದೇಶ.
  • ವಿದ್ಯುತ್ ಸ್ಪರ್ಶದಿಂದ ಆನೆ ಸೇರಿ ವನ್ಯಜೀವಿಗಳ ಸಾವು ಕುರಿತಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಹೈಕೋರ್ಟ್, ಸರ್ಕಾರದಿಂದ ಮಾಹಿತಿ ನೀಡಲು ಸೂಚನೆ ನೀಡಿತ್ತು.ವಿದೇಶಿಯರಿಗೆ ವೈದ್ಯಕೀಯ ವೀಸಾ ನೀಡುವುದಕ್ಕೂ ಮುನ್ನ ಅವರ ಹಿನ್ನೆಲೆಯಲ್ಲಿ ಸೂಕ್ಷ್ಮವಾಗಿ ಪರಿಶೀಲಿಸಿ ನಿರ್ಧಾರ ಕೈಗೊಳ್ಳುವಂತೆ ಪಾಸ್‌ಪೋರ್ಟ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದ ಹೈಕೋರ್ಟ್2020ರಲ್ಲಿ ನಟಿ ಸಂಜನಾ ಗಲ್ರಾಣಿ ಮತ್ತಿತರರ ವಿರುದ್ಧ ದಾಖಲಾಗಿದ್ದ ಮಾದಕ ದ್ರವ್ಯ ಸೇವನೆ ಪ್ರಕರಣ ರದ್ದುಗೊಳಿಸಿ ಆದೇಶಿಸಿದ್ದ ಹೈಕೋರ್ಟ್
  • ವೇಶ್ಯಾವಾಟಿಕೆಯಲ್ಲಿ ಸಿಕ್ಕಿಹಾಕಿಕೊಳ್ಳುವ ಸಂತ್ರಸ್ತೆಯರನ್ನು ಅಭಿಯೋಜನೆಗೆ ಗುರಿಪಡಿಸಲಾಗದು ಎಂದು ಆದೇಶಿಸಿದ್ದ ಹೈಕೋರ್ಟ್ಬಿಟ್ ಕಾಯಿನ್ ಹಗರಣದಲ್ಲಿ ಆರೋಪಿ ಶ್ರೀಕಿ ಸೇರಿ ಇಬ್ಬರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆಯಡಿ(ಕೋಕಾ) ವಿಧಿಸಿದ್ದ ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಒಂದು ಹಕ್ಕು, ಈ ವೇಳೆ ಸಣ್ಣ ಹಾನಿಯಾಗುವುದು ಸಾಮಾನ್ಯ ಎಂದು ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿರುವ ಹೈಕೋರ್ಟ್
  • ವಿದ್ಯಾರ್ಥಿಗೆ ಆತ್ಮಹತ್ಯೆ ಪ್ರಚೋದನೆ ನೀಡುವ ಶಿಕ್ಷಕರು ಶಿಸ್ತು ಕಲಿಸುವ ನೆಪದಲ್ಲಿ ಮಕ್ಕಳ ಜೀವಕ್ಕೆ ಹಾನಿಯಾಗುವ ಕೃತ್ಯಗಳಿಗೆ ಮುಂದಾಗಬಾರದು ಎಂದು ಶಿಕ್ಷಕರಿಗೆ ಸಲಹೆ ನೀಡಿದ್ದ ಹೈಕೋರ್ಟ್ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ ಕುರಿತಂತೆ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ಸರ್ಕಾರದ ಪ್ರತಿಕ್ರಿಯೆ ಕೇಳಿದ್ದ ಹೈಕೋರ್ಟ್.ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಕೊಲೆ ಆರೋಪಿಗಳಿಗೆ ಜಾಮೀನು ನೀಡಿದ್ದ ಹೈಕೋರ್ಟ್.ವಿದ್ಯಾರ್ಥಿಯೊಂದಿಗೆ ಅಸಹಜ ಫೋಟೋ ಕ್ಲಿಕ್ಕಿಸಿಕೊಂಡಿದ್ದ ಮುಖ್ಯ ಶಿಕ್ಷಕಿ ನಡೆಗೆ ಹೈಕೋರ್ಟ್ ಅಸಮಾಧಾನ.ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಯ್ದೆಯಡಿ ಮಂಜೂರಾದ ಜಮೀನನ್ನು ಜಿಪಿಎ ಮಾಡಿಕೊಂಡು ಸೊಸೈಟಿಯಿಂದ ಪಡೆದ ಸಾಲಕ್ಕೆ ಜಪ್ತಿ ಮಾಡಲಾಗದು ಎಂದು ಆದೇಶಿಸಿದ್ದ ಹೈಕೋರ್ಟ್
  • ನಿವೃತ್ತಿ ನಂತರ ಸೇವಾ ಅವಧಿ ವಿಸ್ತರಣೆಗಾಗಿ ಜನ್ಮ ದಿನ ಬದಲಾವಣೆ ಕೋರಿ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ.ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಮಾಡುವುದು ಸಾಮರಸ್ಯ ಉತ್ತೇಜಿಸುವ ಸಂಕೇತವಾಗಿರಲಿದೆ ಎಂದು ಹೈಕೋರ್ಟ್ ಆದೇಶ.ಅರ್ಹತೆ ಇದ್ದರೂ ವೈದ್ಯಕೀಯ ಸೀಟು ನೀಡದ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಅಂತಾರಾಷ್ಟ್ರೀಯ ಚೆಸ್ ಪಟುವಿಗೆ ₹10 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಸೂಚನೆ.ಅಪಘಾತ ಸಂಭವಿಸಿದಾಗ ವಾಹನಕ್ಕೆ ಪರವಾನಗಿ, ಫಿಟ್ನೆಸ್ ಸರ್ಟಿಫಿಕೆಟ್ ಇಲ್ಲದಿದ್ದರೂ ಸಂತ್ರಸ್ತರಿಗೆ ವಿಮಾ ಕಂಪನಿ ಪರಿಹಾರ ಪಾವತಿಸಬೇಕು ಎಂದು ಹೈಕೋರ್ಟ್ ಆದೇಶ.ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಜಾರಿ ಬಳಿಕ ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್​​ಪಿಸಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗದು ಎಂದು ತಿಳಿಸಿದ್ದ ಹೈಕೋರ್ಟ್.ಅಪರಾಧದಲ್ಲಿ ಭಾಗಿಯಾಗಿರುವ ಪತಿಯೊಂದಿಗೆ ನೆಲೆಸಿರುವ ಕಾರಣ ಪತ್ನಿಯನ್ನೂ ಸಹ ಆರೋಪಿಯನ್ನಾಗಿ ಮಾಡಲಾಗುವುದಿಲ್ಲ ಎಂದು ಹೈಕೋರ್ಟ್ ಆದೇಶ.ವಾಲ್ಮೀಕಿ ನಿಗಮ ಹಗರಣವನ್ನು ಕೇಂದ್ರ ತನಿಖಾ ದಳದ (ಸಿಬಿಐ) ತನಿಖೆಗೆ ಒಪ್ಪಿಸಬೇಕು ಎಂದು ಯೂನಿಯನ್ ಬ್ಯಾಂಕ್ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್.ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಲಯಾಳಂ ಸಿನಿಮಾ ನಿರ್ದೇಶಕರ ವಿರುದ್ಧದ ದಾಖಲಾದ ಸುಳ್ಳು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್.ಮದರಸಾದಲ್ಲಿ ಶಿಕ್ಷಕರಿಂದ ಬಾಲಕನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಕುರಿತು ಪ್ರಕರಣ ದಾಖಲಿಸದ ಮದರಸಾ ಸಂಸ್ಥಾಪಕನ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ.ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್.ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿರ್ವಸಿಟಿ (ಎನ್‌ಎಸ್‌ಎಲ್​​ಯು) ಯಲ್ಲಿ ತೃತೀಯ ಲಿಂಗಿಗಳಿಗೆ ಶೇ.0.5ರಷ್ಟು ಮೀಸಲಾತಿ ನೀಡುವಂತೆ ಹೈಕೋರ್ಟ್ ಸೂಚನೆ.

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...