ads

Search This Blog

Tuesday, 24 December 2024

ಉದ್ಯೋಗ,ಮತ್ತು ಶಿಕ್ಷಣದಲ್ಲಿ ಮಾತ್ರ ಬೆಳವಣೆಗೆ ಕೈಗಾರಿಕಾ ಕ್ಷೇತ್ರದಲ್ಲಿ ಬದಲಾವಣೆ ಕಾಣಬೇಕು


ಕಲಬುರಗಿ : ಜಿಲ್ಲೆಯಾದ್ಯಂತ ಉದ್ಯೋಗ  ಮತ್ತು ಶಿಕ್ಷಣದಲ್ಲಿ ಮಾತ್ರ ಬೆಳವಣೆಯಾಗುತ್ತಿದ್ದು, ಕೈಗಾರಿಕಾ ಕ್ಷೇತ್ರದಲ್ಲಿ ಬದಲಾವಣೆಯನ್ನು ಕಾಣುತ್ತಿಲ್ಲ ಪ್ರ‍್ರತ್ಯೇಕ ಕಲ್ಯಾಣ ಕರ್ನಾಟಕ ಕೈಗಾರಿಕಾ ನೀತಿಯನ್ನು ಜಾರಿಗೊಳಿಸಬೇಕು   ಎಂದು  ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಶಶಿಕಾಂತ್ ಜಿ. ಪಾಟೀಲ್ ಅವರು ಹೇಳಿದರು.

 ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಯ ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಸರ್ಕಾರ, ಜಿಲ್ಲಾ ಕೈಗಾರಿಕಾ ಕೇಂದ್ರ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿ.ಟಿ.ಪಿ.ಸಿ) ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಸಹಯೋಗದಲ್ಲಿ "ಎಂ.ಎಸ್.ಎA.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು" ( ಆರ್‌ಎಎಂಪಿ ) ಯೋಜನೆಯಡಿಯಲ್ಲಿ  ಲೀನ್ ಯೋಜನೆ ಮತ್ತು ಝಡ್.ಇ.ಡಿ. ಹಾಗೂ ರಫ್ತು ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಉದ್ಫಾಟಿಸಿ ಮಾತನಾಡಿದರು.


ಪಿ.ಎಂ. ಮಿತ್ರ ಅಡಿಯಲ್ಲಿ ಟೇಕ್ಸಟೈಲ್ ಪಾರ್ಕ  ಸ್ಥಾಪಿಸಬೇಕಾಗಿತ್ತು.ಒಂದೂವರೆಗೆ ವರ್ಷ ಅಯಿತ್ತು ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಕಾಣುತ್ತಿಲ್ಲ  ಕೈಗಾರಿಕಾ ಜಾಗೃತಿ ಕಾರ್ಯಕ್ರಮಗಳು ಮಾಡಿದರೆ ಸಾಲದು  ಎಂದರು.

ಮುಂದಿನ ನಮ್ಮ ಕೈಗಾರಿಕೆ ವಲಯದಲ್ಲಿ ಆಗಲಿ ವಾಣಿಜ್ಯ ವಲಯದಲ್ಲಿ ಒತ್ತನ್ನ ಕೊಡಬೇಕು ಯಾವ ರೀತಿ ದೇಶಕ್ಕೆ  ರೈತರು ಬೆಳವಣೆಯಾಗುತ್ತಾರೆ ಅದೇ ರೀತಿಯಾಗಿ ಕೈಗಾರಿಕಾ ಕ್ಷೇತ್ರದಲ್ಲಿ ಬೆಳೆವಣಿಯಾಗಬೇಕು ಎಂದು ಅವರು ಹೇಳಿದರು.

ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಸುರೇಖಾ ಮುನೋಳ್ಳಿ ಮಾತನಾಡಿ, ಕಲಬುರಗಿ ಜಿಲ್ಲೆಯಿಂದ ಸ್ಥಳೀಯ ತಯಾರಿಸಿದ ವಸ್ತುಗಳನ್ನು ಮತ್ತು ಸ್ಥಳೀಯವಾಗಿ ಬೆಳೆಯುವ ಉತ್ಪಾದನೆಗಳು ರಫ್ತು ಮಾಡಲು ಮತ್ತು ಅದನ್ನು ಹೆಚ್ಚಿನ ಪ್ರಮಾಣದಲ್ಲಿ ರಫ್ತು ಮಾಡಲು ಹೆಚ್ಚಿಸುವ ನಿಟ್ಟಿನಲ್ಲಿ ಇಲಾಖೆ ಕೈಗಾರಿಕೆ ಉದ್ದಿಮೆದಾರರು ಶ್ರಮಿಸಬೇಕಾಗುತ್ತದೆ ಎಂದರು.

ಕಲಬುರಗಿ ಶಾಖಾ ಕಛೇರಿ ವಿ.ಟಿ.ಪಿ.ಸಿ. ಸಹಾಯಕ ನಿರ್ದೇಶಕ ಜಾಫರ್ ಖಾಸಿಂ ಅನ್ಸಾರಿ ಅವರು ಮಾತನಾಡಿ, ವಿಟಿಪಿಸಿ ಯ ಶಾಖಾ ಕಛೇರಿಯನ್ನು ಸರ್ಕಾರವು ಸ್ಥಾಪಿಸು ತ್ತ್ತಿದೆ, ಇತ್ತೀಚೆಗೆ ಕಲ್ಯಾಣ ಕರ್ನಾಟಕ ಕಂದಾಯ ಭಾಗದ ಶಾಖಾ ಕಛೇರಿಯ ಕಲಬುರಗಿಯಲ್ಲಿ ಪ್ರಾರಂಭಿಸಿದೆ ಈ ಭಾಗದ ಜನರಿಗೆ ವಿಶೇಷವಾಗಿ ರಫ್ತುದಾರರಿಗೆ ಸಹಾಯವಾಗಲಿದೆ ಎಂದು ಹೇಳಿದರು.

ಕೈಗಾರಿಕಾ ಉಪನಿರ್ದೇಶಕ ಅಬ್ದುಲ್ ಅಜೀಮ್ ಜಿಲ್ಲಾ ಕೈಗಾರಿಕಾ ಕೇಂದ್ರ ಇವರ ಆರ್‌ಎಎಂಪಿ ಯೋಜನೆ ಬಗ್ಗೆ ವಿವರಿಸಿದರು. ಅಧ್ಯಕ್ಷತೆಯನ್ನು ಕಾಸಿಯಾ ಅಧ್ಯಕ್ಷರಾದ ಎಂ.ಜಿ. ರಾಜಗೋಪಾಲ್ ವಹಿಸಿ ಎಂ.ಎಸ್.ಎA.ಇ. ಕೈಗಾರಿಕೆಗಳು ತಮ್ಮ ಲಾಭವನ್ನು ಹೆಚ್ಚಿಸಲು ರಫ್ತುಗಳು  ರಫ್ತುಗೆ ಒತ್ತು ನೀಡಬೇಕೆಂದು  ಪ್ರಾಸ್ತಾವಿಕವಾಗಿ ಮಾತನಾಡಿದರು.

ಲೀನ್ ಯೋಜನೆ ಬಗ್ಗೆ ಡಾ ಜಗದೀಶ ಅವರು  ವಿಶೇಷ ಉಪನ್ಯಾಸ ನೀಡಿದರು.  ಝಡ್.ಇ.ಡಿ, ಬಗ್ಗೆ ಈರಪ್ಪಾ ಉಪನ್ಯಾಸ ನೀಡಿದರು. ರಫ್ತು ಬಗ್ಗೆ ಸತೀಶ ಕೋಟಾ ಅವರು ಉಪನ್ಯಾಸ ನೀಡಿದರು. ಈ ಕಾರ್ಯಾಗಾರದಲ್ಲಿ  ಗೌರವ ಪ್ರಧಾನ ಸುರೇಶ ಎನ್ ಸಾಗರ್, ಕಲಬುರಗಿ  ಗ್ರಾಮೀಣ ಜಂಟಿಕಾರ್ಯದರ್ಶಿ ಸತೀಶ್ ಎನ್., ಜಿಲ್ಲಾಭಿವೃದ್ಧಿ ಸಮಿತಿ ಉಪಸಮಿತಿ ಅಧ್ಯಕ್ಷ ಚನ್ನಬಸ್ಸಯ್ಯ ಜಿ. ನಂದಿಕೋಲ್ ಸೇರಿದಂತೆ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕ ಸಂಸ್ಥೆ, ಸಣ್ಣ ಕೈಗಾರಿಕೆಗಳ ಮಾಲೀಕರ ಸಂಘ ಗುಲಬರ್ಗ ದಾಲಾ ಮಿಲ್ಲರ್ಸ್, ಅಸೋಸಿಯೇಷನ್, ಗುಲಬರ್ಗ ಇಂಡಿಸ್ಟಿçÃಯಲ್ ಎಸ್ಟೇಟ್ ಮ್ಯಾನುಫ್ಯಾಕ್ಚರ್ಸ್, ಅಸೋಸಿಯೇಷನ್, ಗುಲಬರ್ಗ ಕೈಗಾರಿಕಾ ವಸಾಹತು ಮಾಲೀಕರ ಸಂಘ, ಕಲಬುರಗಿ ಲೇಡಿಸ್ ಅಸೋಸಿಯೇಷನ್ ಮ್ಯಾನುಫ್ಯಾಕ್ಚರ್ಸ್ ಮ್ಯಾನುಫ್ಯಾಕ್ಚರ್ಸ ಪಾರ್ಕ್ದಲ್ಲಿ ಭಾಗವಹಿಸಿದ್ದರು.



 

 





ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆ: ಪ್ರಾದೇಶಿಕ ಅಸಮಾನತೆ ನಿವಾರಣೆ ನಮ್ಮ ಗುರಿ,ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಬದ್ಧ -ಸಿದ್ದರಾಮಯ್ಯ

ಕಲಬುರಗಿ-ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ, ಕರಾವಳಿ, ಮೈಸೂರು ಭಾಗ ಎನ್ನದೆ ಯಾವುದೇ ಪ್ರದೇಶಕ್ಕೆ ತಾರತಮ್ಯ ಮಾಡದೇ ಪ್ರಾದೇಶಿಕ ಅಸಮಾನತೆ ನಿವಾರಿಸುವ ಗುರಿ ಹೊಂದಲಾಗಿದೆ. ಸಮಗ್ರ ಕರ್ನಾಟಕ ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರವಿವಾರ ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ ರಂಗಮ0ದಿರದ ಎದುರುಗಡೆ ಸುಮಾರು ೩೨೭.೧೭ ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ೩೭೧ ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಡಾ.ಡಿ.ಎಂ.ನ0ಜು0ಡಪ್ಪ ಅವರು ೨೦೦೨ರಲ್ಲಿ ನೀಡಿದ ವರದಿಯಲ್ಲಿ ಅಂದಿನ ೧೭೫ ತಾಲೂಕುಗಳ ಪೈಕಿ ಅತ್ಯಂತ ಹಿಂದುಳಿದ ತಾಲೂಕುಗಳಲ್ಲಿ ಕಲಬುರಗಿ ಮತ್ತು ಬೆಳಗಾವಿ ವಿಭಾಗದ ೩೯ ತಾಲೂಕುಗಳು ಸೇರಿವೆ. ನಂಜುAಡಪ್ಪ ಅವರ ವರದಿಯಂತೆ ಹಿಂದುಳಿವಿಕೆ ಹೋಗಲಾಡಿಸಲು ಇದೂವರೆಗೆ ೩೫,೦೦೦ ಕೋಟಿ ರೂ. ಅನುದಾನ ನೀಡಿದ್ದರು ನಿರೀಕ್ಷಿತ ಮಟ್ಟದಲ್ಲಿ ಹಿಂದುಳೀತ ತಾಲೂಕಿನಲ್ಲಿ ಪ್ರಗತಿ ಕಂಡಿಲ್ಲ. ಹೀಗಾಗಿ ಆರ್ಥಿಕ ತಜ್ಞ ಪ್ರೊ.ಗೋವಿಂದರಾಜು ಅವರ ಅಧ್ಯಕ್ಷತೆಯಲ್ಲಿ ನಮ್ಮ ಸರ್ಕಾರ ಉನ್ನತ ಸಮಿತಿ ರಚಿಸಿದ್ದು, ಅದರ ವರದಿಯನ್ನಾಧರಿಸಿ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಹೊಸ ಯೋಜನೆ, ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುವಂತೆ ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರಿಗೆ ನಿರ್ದೇಶನ ನೀಡಿದ್ದೇನೆ. ಆರೋಗ್ಯ ಮತು ಶಿಕ್ಷಣ ಸಂಸ್ಥೆಗಳು ಹೆಚ್ಚಾಗಿ ಬೆಳೆದಲ್ಲಿ ಪ್ರದೇಶದಲ್ಲಿ ಅಭಿವೃದ್ಧಿ ಕಾಣಿಸಲು ಸಾಧ್ಯ ಎಂದು ಪುನರುಚ್ಚಿಸಿದ್ದ ಸಿ.ಎಂ., ಗುಲಬರ್ಗಾ ವಿ.ವಿ. ಸಮಗ್ರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಉಪನ್ಯಾಸಕರ ಭರ್ತಿಗೆ ಕ್ರಮ ವಹಿಸಲಾಗುವುದು ಎಂದರು.

ಖಾಲಿ ಹುದ್ದೆ ಭರ್ತಿಗೆ ಕ್ರಮ: ೩೭೧ಜೆ ಕಾಯ್ದೆ ಅನ್ವಯ ಈ ಭಾಗದಲ್ಲಿ ಖಾಲಿ ಉಳಿದ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಡಾ.ಮಲ್ಲಿಕಾರ್ಜುನ ಖರ್ಗೆ ಅವರ ವಿಶೇಷ ಪ್ರಯತ್ನದಿಂದ ಜಾರಿಗೆ ಬಂದ ೩೭೧ಜೆ ಕಾಯ್ದೆ ಅನುಷ್ಠಾನಕ್ಕೆ ತರಲು ೨೦೧೩ರಲ್ಲಿ ತಮ್ಮ ನೇತೃತ್ವದ ಸರ್ಕಾರದ ಅವಧಿಯಲ್ಲಿ ಹೆಚ್.ಕೆ.ಪಾಟೀಲ ನೇತೃತ್ವದಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಿ ನೀತಿ ನಿಯಮಗಳನ್ನು ಜಾರಿಗೆ  ತಂದು ಈ ಭಾಗದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ವಿಶೇಷ ಮೀಸಲಾತಿ ಕಲ್ಪಿಸಿದೆ. ಪರಿಣಾಮ ಇದೂವರೆಗೆ ೮೦ ಸಾವಿರ ಜನರಿಗೆ ನೌಕರಿ ದೊರೆತಿದೆ. ಸಾವಿರಾರು ಮಕ್ಕಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಸಾವಿರಾರು ಕೋಟಿ ಹಣ ಪ್ರದೇಶಕ್ಕೆ ಹರಿದು ಬರುತ್ತಿದೆ ಎಂದರು.

ಕಲಬುರಗಿಯಲ್ಲಿ ನಿಮ್ಹಾನ್ಸ್ ಶಾಖೆ ಸ್ಥಾಪನೆ: ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆಯ ಸುಂದರ ಕಟ್ಟಡ ತಲೆ ಎತ್ತಿ ನಿಂತಿರುವುದು ಸಂತಸ ತಂದಿದೆ. ಚಿಕಿತ್ಸೆ ಪಡೆಯುವದಕ್ಕಿಂತ ಕಾಯಿಲೆ ಬಾರದಂತೆ ಎಚ್ಚರಿಕೆ ವಹಿಸುವುದು ಅವಶ್ಯಕ. ಹೀಗಾಗಿ ಈ ನೂತನ ಆಸ್ಪತ್ರೆಯಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಸ್ವಚ್ಛತೆ ಇದ್ದಲ್ಲಿ ಬೇರೆ ಕಾಯಿಲೆಗಳು ಬರಲ್ಲ ಎಂದ ವೈದ್ಯರಿಗೆ ನಿರ್ದೇಶನ ನೀಡಿದ ಸಿ.ಎಂ. ಅವರು, ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಒತ್ತಾಸೆಯಂತೆೆ ಕಲಬುರಗಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆಯ ಶಾಖೆ ಮತ್ತು ಇನ್ಸ್ಟಿಟ್ಯೂಟ್ ಆಫ್ ಡಯಬಟಾಲೋಜಿ ಘಟಕವನ್ನು ತೆರೆಯಲಾಗುವುದು ಎಂದು ಘೋಷಿಸಿದರು.

ತೊಗರಿಗೆ ಹಾನಿ, ಪರಿಹಾರದ ಭರವಸೆ: ಕಲಬುರಗಿ ಸೇರಿ ಕೆಲವಡೆ ವಿಚಿತ್ರ ರೋಗದಿಂದ ತೊಗರಿ ಬೆಳೆ ಹಾನಿಯಾಗಿದ್ದು ತಮ್ಮ ಗಮನಕ್ಕೆ ಬಂದಿದೆ. ಈಗಾಗಲೆ ಅಧ್ಯಯನಕ್ಕೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ವರದಿ ಆಧರಿಸಿ ರೈತರಿಗೆ ಆಗಿರುವ ಅನ್ಯಾಯ ಸರಿಪಡಿಸಿ ಪರಿಹಾರ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗುಲಬರ್ಗಾ ವಿ.ವಿ.ಗೆ ಕಾಯಕಲ್ಪ ನೀಡಿ: ಇದಕ್ಕೂ ಮುನ್ನ ರಾಜ್ಯಸಭೆಯ  ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಹಿಂದುಳಿದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಹೊಂದಬೇಕಾದರೆ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕೆಂದ ಅವರು, ಕೆಲವರು ಬಡ ಜನರನ್ನು ಶಿಕ್ಷಣ ಮತ್ತು ಆರೋಗ್ಯ ಸವಲತ್ತಿನಿಂದ ದೂರ ಇಡಲು ಬಯಸುತ್ತಿರುವುದು ಬೇಸರ ತಂದಿದೆ ಎಂದರು.

ಗುಲಬರ್ಗಾ ವಿ.ವಿ. ತುಂಬಾ ಹಳೇಯದಾಗಿದ್ದು, ಸುಣ್ಣ-ಬಣ್ಣ ಕಂಡಿಲ್ಲ. ಹುದ್ದೆ ಭರ್ತಿಯಾಗಿಲ್ಲ. ಹೊಸ ಕೋರ್ಸ್ ಇಲ್ಲ. ಈ ಬಗ್ಗೆ ಗಮನಹರಿಸಿ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ವಿಶೇಷ ಅನುದಾನ ನೀಡುವುದರ ಜೊತೆಗೆ ಉಪನ್ಯಾಸಕರ ಭರ್ತಿಗೆ ವಿಶೇಷ ಆಸಕ್ತಿ ತೋರಬೇಕು ಎಂದರು.

ಕಲಬುರಗಿಯಲ್ಲಿ ೩೭೧ಕಾಯ್ದೆ ದಶಮಾನೋತ್ಸವ ಸವಿನೆನಪಿನಲ್ಲಿ ಇಂದಿಲ್ಲಿ ೩೭೧ ಹಾಸಿಗೆ ಸಾಮರ್ಥ್ಯದ ಜಯದೇವ ಆಸ್ಪತ್ರೆ ಲೋಕಾರ್ಪಣೆ ಮಾಡಿದ್ದು ಅತೀವ ಸಂತಸ ತಂದಿದೆ. ಕಟ್ಟಡ ಆಯ್ತು, ಕ್ಯಾತಲ್ಯಾಬ್ ಬಂದೈತು. ವೈದ್ಯರು ಬಂದರು. ಇದೀಗ ಇದರ ನಿರ್ವಹಣೆ ಬಹಳ ಮುಖ್ಯವಾಗಿದೆ. ಉತ್ತಮ ಆರೋಗ್ಯ ಸೇವೆ ನೀಡಬೇಕಾದರೆ ಸ್ವಚ್ಛತೆ ಇಲ್ಲಿ ಎದ್ದು ಕಾಣುವಂತಾಗಬೇಕು ಎಂದು ವೈದ್ಯರಿಗೆ ಸೂಚಿಸಿದ ಅವರು, ನಿಮ್ಹಾನ್ಸ್ ಆಸ್ಪತ್ರೆಯ ಶಾಖೆ ಮತ್ತು ಇನ್ಸಟಿಟ್ಯೂಟ್ ಆಫ್ ಡಯಬಟಾಲೋಜಿ ಘಟಕವನ್ನು ಇಲ್ಲಿ ತೆರೆಯುವ ಮೂಲಕ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ಸಿ.ಎಂ. ಅವರಲ್ಲಿ ಕೇಳಿಕೊಂಡರು.

ಇದಕ್ಕು ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಸಭೆ ವಿಪಕ್ಷ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆ ಉದ್ಘಾಟಿಸಿ ಕ್ಯಾತಲ್ಯಾಬ್, ಓ.ಟಿ. ಥಿಯೇಟರ್ ಸೇರಿದಂತೆ ಇಡೀ ಆಸ್ಪತ್ರೆ ವೀಕ್ಷಿಸಿದರು.

ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಸಚಿವ ಡಿ. ಸುಧಾಕರ್, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ, ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಜೇವರ್ಗಿ ಶಾಸಕ ಮತ್ತು ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ. ಅಜಯಸಿಂಗ್, ಅಫಜಲಪುರ ಶಾಸಕ ಮತ್ತು ಕೆ.ಕೆ.ಆರ್.ಟಿ.ಸಿ ಅಧ್ಯಕ್ಷ ಎಂ.ವೈ. ಪಾಟೀಲ, ಮುಖ್ಯಮಂತ್ರಿಯವರ ನೀತಿ ಮತ್ತು ಕಾರ್ಯಕ್ರಮ ಸಲಹೆಗಾರ ಬಿ.ಆರ್. ಪಾಟೀಲ, ಕರ್ನಾಟಕ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರುಗಳಾದ ಬಸವರಾಜ ಮತ್ತಿಮಡು, ಚೆನ್ನಾರೆಡ್ಡಿ ಪಾಟೀಲ, ವಿಧಾನ ಪರಿಷತ್ ಶಾಸಕರುಗಳಾದ ಡಾ. ಬಿ.ಜಿ.ಪಾಟೀಲ, ಶಶೀಲ ಜಿ. ನಮೋಶಿ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ತಿಮ್ಮಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಅರವಿಂದ ಅರಳಿ, ಮಹಾನಗರ ಪಾಲಿಕೆ ಮಹಾಪೌರ ಯಲ್ಲಪ್ಪ ನಾಯ್ಕೋಡಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಬ್ದುಲ್ ರಶೀದ ಅವರು ಭಾಗವಹಿಸಿದ್ದರು.

ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ಐ.ಜಿ.ಪಿ ಅಜಯ್ ಹಿಲೋರಿ, ಕೆ.ಕೆ.ಅರ್.ಡಿ.ಬಿ. ಕಾರ್ಯದರ್ಶಿ ಎಂ. ಸುಂದರೇಶ ಬಾಬು, ಡಿ.ಸಿ. ಬಿ. ಫೌಜಿಯಾ ತರನ್ನುಮ್, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಸುಜಾತಾ ರಾಠೋಡ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ ಎಸ್., ಮಹಾನಗರ ಪಾಲಿಕೆ ಆಯುಕ್ತ ಪ್ರಭಾರಿ ಆಯುಕ್ತ ಅವಿನಾಶ ಶಿಂಧೆ, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಉಪಸ್ಥಿತರಿದ್ದರು. ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಕೆ.ಎಸ್.ರವಿಂದ್ರನಾಥ ಪ್ರಸ್ತಾವಿಕವಾಗಿ ಮಾತನಾಡಿದರು.


ಪೊಲೀಸ್ ಎನ್ ಕೌಂಟರ್ ನಲ್ಲಿ ಇಬ್ಬರು ಬ್ಯಾಂಕ್ ದರೋಡೆಕೋರರ ಹತ್ಯೆ

 ಲಖನೌ: ಉತ್ತರ ಪ್ರದೇಶದ ರಾಜಧಾನಿ ಲಖನೌನ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನ ಚಿನ್ಹಾಟ್ ಶಾಖೆಯಲ್ಲಿ ಇತ್ತೀಚಿಗೆ ನಡೆದಿದ್ದ ದರೋಡೆಯಲ್ಲಿ ಭಾಗಿಯಾಗಿದ್ದ ಇಬ್ಬರು ಕ್ರಿಮಿನಲ್ ಗಳನ್ನು ಪೊಲೀಸ್ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ. ಲಖನೌ ಹಾಗೂ ಘಾಜಿಪುರ ಪೊಲೀಸರು ಪ್ರತ್ಯೇಕ ಎನ್ ಎನ್ ಕೌಂಟರ್ ನಲ್ಲಿ ದರೋಡೆಕೋರರನ್ನು ಹತ್ಯೆ ಮಾಡಿರುವುದಾಗಿ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.


26 ವರ್ಷದ ಸೋಬಿಂದ್ ಕುಮಾರ್ ಎಂಬಾತನನ್ನು ಕಿಸಾನ್ ಪಾಥ್ ಬಳಿ ಲಖನೌ ಪೊಲೀಸರು ಎನ್ ಕೌಂಟರ್ ಮಾಡಿದ್ದರೆ 28 ವರ್ಷದ ಮತ್ತೋರ್ವ ಆರೋಪಿ ಸನ್ನಿ ದಯಾಳ್ ಎಂಬಾತನನ್ನು ಘಾಜಿಪುರ ಪೊಲೀಸರು ಹತ್ಯೆ ಮಾಡಿದ್ದಾರೆ.

ಬಿಹಾರ ಮೂಲದ ಸೋಬಿಂದ್ ಕುಮಾರ್ ಬ್ಯಾಂಕ್ ದರೋಡೆಯಲ್ಲಿ ಪೊಲೀಸರಿಗೆ ಬೇಕಾಗಿದ್ದ. ಸೋಮವಾರ ಸುಳಿವಿನ ಆಧಾರದ ಮೇಲೆ ಆತನು ಸಂಚರಿಸುತ್ತಿದ್ದ ವಾಹನವನ್ನು ತಡೆದಾಗ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಬಳಿಕ ಪ್ರತಿದಾಳಿ ನಡೆಸಿದಾಗ ಗುಂಡೇಟಿನಿಂದ ಗಾಯಗೊಂಡು ಆತ ಸಾವನ್ನಪ್ಪಿರುವುದಾಗಿ ಚಿನ್ಹಾಟ್ ಸಹಾಯಕ ಪೊಲೀಸ್ ಕಮಿಷನರ್ ರಾಧಾ ರಮಣ್ ಸಿಂಗ್ ತಿಳಿಸಿದ್ದಾರೆ.

ಗಾಜಿಪುರ ಬಳಿ ನಡೆದ ಮತ್ತೊಂದು ಎನ್ ಕೌಂಟರ್ ನಲ್ಲಿ ದಯಾಳ್ ನನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿರುವುದಾಗಿ ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ. ದಯಾಳ್ ಕುರಿತು ಮಾಹಿತಿ ನೀಡಿದ್ದವರಿಗೆ ರೂ. 25,000 ಬಹುಮಾನವನ್ನು ಘೋಷಿಸಲಾಗಿತ್ತು. ಕುತುಬ್‌ಪುರ ಬಳಿ ಆತನನ್ನು ಹಿಡಿಯಲು ಪ್ರಯತ್ನಿಸಿದ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಬಳಿಕ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ ಬಳಿಕ ಸಮುದಾಯ ಆರೋಗ್ಯ ಕೇಂದ್ರಕ್ಕೆ, ನಂತರ ಗಾಜಿಪುರ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ಆತ ಮೃತಪಟ್ಟಿರುವುದಾಗಿ ಘೋಷಿಸಲಾಯಿತು ಎಂದು ಡಿಜಿಪಿ ಹೇಳಿದರು.


ಎನ್‌ಎಚ್‌ಆರ್‌ಸಿ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ನೇಮಕ

 ನವದೆಹಲಿ: ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ಅವರನ್ನು ಎನ್‌ಎಚ್‌ಆರ್‌ಸಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮಾನವ ಹಕ್ಕುಗಳ ಸಂರಕ್ಷಣಾ ಕಾಯ್ದೆ 1993ರ ಅಡಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ನೇಮಕ ಮಾಡಿದರು.


ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್

ನಿವೃತ್ತ ನ್ಯಾಯಮೂರ್ತಿ ರಾಮಸುಬ್ರಮಣಿಯನ್ ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ NHRC ಅಧ್ಯಕ್ಷರಾಗಿರುತ್ತಾರೆ ಎಂದು ಕೇಂದ್ರ ಸರ್ಕಾರ ಗೆಜೆಟ್ ಹೊರಡಿಸಿದೆ. 1993ರ ಮಾನವ ಹಕ್ಕುಗಳ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 4ರ ಉಪ-ವಿಭಾಗ (1) ರ ಮೂಲಕ ನೀಡಲಾದ ಅಧಿಕಾರವನ್ನು ಚಲಾಯಿಸುವ ಮೂಲಕ ಭಾರತದ ಅಧ್ಯಕ್ಷರಾದ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ (ನಿವೃತ್ತ) ಅವರನ್ನು ನೇಮಕ ಮಾಡಿದರು.

ನಿವೃತ್ತ ನ್ಯಾಯಮೂರ್ತಿ ವಿ.ರಾಮಸುಬ್ರಮಣ್ಯಂ ಅವರು 30 ಜೂನ್ 1958ರಂದು ಜನಿಸಿದರು. ಚೆನ್ನೈನ ರಾಮಕೃಷ್ಣ ಮಿಷನ್ ವಿವೇಕಾನಂದ ಕಾಲೇಜಿನಲ್ಲಿ ರಸಾಯನಶಾಸ್ತ್ರದಲ್ಲಿ ಪದವಿ ಪಡೆದಿದ್ದು ಮದ್ರಾಸ್ ಕಾನೂನು ಕಾಲೇಜಿನಲ್ಲಿ ಕಾನೂನು ಅಧ್ಯಯನವನ್ನು ಪೂರ್ಣಗೊಳಿಸಿದರು. 1983ರ ಫೆಬ್ರವರಿ 16ರಂದು ಬಾರ್‌ನ ಸದಸ್ಯರಾಗಿದ್ದು ಮದ್ರಾಸ್ ಹೈಕೋರ್ಟ್‌ನಲ್ಲಿ ಸುಮಾರು 23 ವರ್ಷಗಳ ಕಾಲ ಅಭ್ಯಾಸ ಮಾಡಿದರು.

2006ರ ಜುಲೈ 31ರಂದು ಮದ್ರಾಸ್ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದ ಅವರು 2009ರ ನವೆಂಬರ್ 9ರಂದು ಕಾಯಂ ನ್ಯಾಯಾಧೀಶರಾದರು. ನಂತರ 2016ರ ಏಪ್ರಿಲ್ 27ರಂದು ಅವರನ್ನು ಹೈದರಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು. 2019ರ ಜನವರಿ 1ರಂದು ಆಂಧ್ರ ಪ್ರದೇಶ ಹೈಕೋರ್ಟ್ ರಚನೆಯಾದ ನಂತರ, ಅವರು ತೆಲಂಗಾಣ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಉಳಿದರು. 2019ರ ಜೂನ್ 22ರಂದು ಅವರನ್ನು ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಯಿತು. ನಂತರ 2019ರ ಸೆಪ್ಟೆಂಬರ್ 23ರಂದು ಅವರು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾದರು. ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ಅಧಿಕಾರಾವಧಿಯಲ್ಲಿ ಅವರು 102 ತೀರ್ಪುಗಳನ್ನು ನೀಡಿದ್ದು 2023ರ ಜೂನ್ 29ರಂದು ನಿವೃತ್ತರಾದರು

ಶತಮಾನೋತ್ಸವ ನಡೆಸಿ ಹಣ ಪೋಲು ಮಾಡುತ್ತಿದ್ದಾರೆ - ಪ್ರಹ್ಲಾದ್ ಜೋಶಿ

 ಹುಬ್ಬಳ್ಳಿ: ಕಾಂಗ್ರೆಸ್ ಸಮಾವೇಶ ನಡೆಸಿ ಹಣ ಪೋಲು ಮಾಡುತ್ತಿದೆ. ಮಹಾತ್ಮ ಗಾಂಧೀಜಿಗೂ ಇಂದಿನ ಕಾಂಗ್ರೆಸ್‌ಗೂ ಏನು ಸಂಬಂಧ? ಈಗಿರುವ ಕಾಂಗ್ರೆಸ್ ನಲ್ಲಿ ಮೂಲಕ ಕಾಂಗ್ರೆಸ್ ಕಾಣುತ್ತಿಲ್ಲ. ಇದು ಇಂದಿರಾ ಗಾಂದಿ ಕಾಂಗ್ರೆಸ್ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು  ಹೇಳಿದ್ದಾರೆ.


ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬೆಳಗಾವಿಯಲ್ಲಿ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿರುವ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಗೂ ಇಂದಿನ ಕಾಂಗ್ರೆಸ್‌ಗೂ ಏನು ಸಂಬಂಧ? ಮಹಾತ್ಮಾ ಗಾಂಧಿ ಕಾಂಗ್ರೆಸ್ ಮತ್ತು ಇಂದಿನ ಕಾಂಗ್ರೆಸ್ ನಡುವೆ ವ್ಯತ್ಯಾಸವಿದೆ. ಈಗಿನ ಕಾಂಗ್ರೆಸ್ ಮೂಲ ಕಾಂಗ್ರೆಸ್ ಅಲ್ಲ. ಈ ಕಾಂಗ್ರೆಸ್ ಪಕ್ಷಕ್ಕೆ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಾಮರಸ್ಯದಲ್ಲಿ ನಂಬಿಕೆಯಿಲ್ಲ. ಬಿ.ಆರ್.ಅಂಬೇಡ್ಕರ್ ಅವರಿಗೆ ಅಗೌರವ ಸೂಚಿಸಿದೆ ಎಂದು ಹೇಳಿದರು.

ಸಿಟಿ ರವಿ ಪ್ರಕರಣ ಕುರಿತು ಮಾತನಾಡಿ. ವಿಧಾನ ಪರಿಷತ್‌ ಸದಸ್ಯ ಸಿ.ಟಿ. ಅವರನ್ನು ಕಾರಿನಲ್ಲಿ ಸುತ್ತಾಡಿಸಿದ್ದು ತನಗೆ ಗೊತ್ತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿಕೆ ನೀಡುತ್ತಾರೆ. ಅಂದರೆ, ಗೃಹ ಸಚಿವರನ್ನೇ ಕತ್ತಲಲ್ಲಿ ಇಟ್ಟು ಪೊಲೀಸರು ಹೀಗೆ ಮಾಡಿದ್ದಾರಾ? ಜಿಲ್ಲಾ ಉಸ್ತುವಾರಿ ಸಚಿವರು ಸಹ ಪೊಲೀಸರು ತಪ್ಪು ಮಾಡಿದ್ದಾರೆ ಎಂದಿದ್ದಾರೆ. ಹಾಗಾದರೆ ಸರ್ಕಾರದಲ್ಲಿ ಏನು ನಡೆಯುತ್ತಿದೆ? ಇದರ ಹಿಂದಿನ ಸೂತ್ರಧಾರರು ಯಾರು ಎನ್ನುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಕ್ರಿಸ್‌ಮಸ್‌-ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆದರೆ DCPಗಳೇ ಹೊಣೆ - ಗೃಹ ಸಚಿವ ಜಿ. ಪರಮೇಶ್ವರ

 ಬೆಂಗಳೂರು: ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ  ಸೂಚನೆ ನೀಡಿದರು.


ನಗರ ಪೊಲೀಸ್ ಕಮಿಷನರ್‌ ಕಚೇರಿಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಸಂಭ್ರಮದ ವೇಳೆ ಕಳೆದ ವರ್ಷ ಅಚ್ಚುಕಟ್ಟಾಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಅದೇ ರೀತಿ ಈ ವರ್ಷವೂ ಬಂದೋಬಸ್ತ್‌ ಕೈಗೊಳ್ಳಬೇಕು. ಯಾವುದೇ ರೀತಿಯ ಅನಾಹುತಗಳು ಸಂಭವಿಸಿದರೆ ಸಂಬಂಧಪಟ್ಟ ಡಿಸಿಪಿ, ಎಸಿಪಿ, ಇನ್‌ಸ್ಪೆಕ್ಟರ್‌ಗಳನ್ನೇ ಹೊಣೆ ಮಾಡಲಾಗುವುದು. ಈ ವಿಚಾರದಲ್ಲಿ ಯಾರು ಏನೇ ಹೇಳಿದರೂ ಕೇಳುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಕ್ರಿಸ್‌ಮಸ್ ಆಚರಣೆ ಹಿನ್ನೆಲೆಯಲ್ಲಿ ಗುಪ್ತದಳ ಇಲಾಖೆಯೊಂದಿಗೆ ನಿರಂತರವಾಗಿ‌ ಸಂಪರ್ಕದಲ್ಲಿರಬೇಕು. ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಸಣ್ಣ ಪುಟ್ಟ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕಿದೆ. ಹೊಸ ವರ್ಷ ಆಚರಿಸುವವರಿಗೆ ಆಡಚಣೆ ಮಾಡುವುದು ಬೇಡ. ಅವರಿಗೆ ಸುರಕ್ಷತೆ ನೀಡಬೇಕು. ತೊಂದರೆ ಉಂಟು ಮಾಡುವ ಕಿಡಿಗೇಡಿಗಳ ಮೇಲೆ ನಿಗಾವಹಿಸಿ ಕ್ರಮ ಜರುಗಿಸಬೇಕು ಎಂದು ಹೇಳಿದರು‌.

ಅಗತ್ಯ ಬಂದೋಬಸ್ತ್ ಹಿನ್ನಲೆಯಲ್ಲಿ ನಗರ‌ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ರಜೆ ನೀಡುವುದು ಬೇಡ. ತೀರ ಅಗತ್ಯತೆ ಮತ್ತು ಅನಿವಾರ್ಯತೆ ಇದ್ದವರಿಗೆ ರಜೆ ನೀಡಿ. ಬಿಬಿಎಂಪಿ, ಬಿಎಂಟಿಸಿ ಬಿಎಂಆರ್‌ಸಿಎಲ್, ಆರೋಗ್ಯ ಮತ್ತು ಅಗ್ನಿಶಾಮಕ ಇಲಾಖೆಯ ನೆರವು ಪಡೆದುಕೊಳ್ಳಬೇಕು. ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನಚ್ಚರಿಕೆ ವಹಿಸಬೇಕು. ಡ್ರಂಕ್ ಆ್ಯಂಡ್ ಡ್ರೈವ್, ಬೈಕ್ ವ್ಹೀಲಿಂಗ್ ಮಾಡುವ ಕಿಡಿಗೇಡಿಗಳು ಹಾಗೂ ಹಳೇ‌ ಪ್ರಕರಣಗಳ ಆರೋಪಿಗಳ ಮೇಲೆ ನಿಗಾ ಇರಿಸಬೇಕು. ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕೈಗೊಳ್ಳುವಂತೆ ಸೂಚಿಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಗರದಲ್ಲಿ ಹೊಸ ವರ್ಷ ಆಚರಣೆಗೆ 7 ಲಕ್ಷ ಜನ ಸೇರುವ ಸಾಧ್ಯತೆ ಇದ್ದು, ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ, ಪೊಲೀಸರು ಕೈಗೊಂಡಿರುವ ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚಿಸಲಾಗಿದೆ.‌ಎಲ್ಲರು ಸಂತೋಷದಿಂದ ಕ್ರಿಸ್ಮಸ್ ಮತ್ತು ಹೊಸ ವರ್ಷ ಆಚರಿಸಲು ಸಹಕರಿಸಲಾಗುವುದು‌. ಟ್ರಾಫಿಕ್ ನಿರ್ವಹಣೆ ಸಮಸ್ಯೆ ಆಗದಂತೆ ಮೆಟ್ರೋ, ಆಟೋಗಳು, ಬಸ್​ಗಳ ಓಡಾಟ ಸೇರಿದಂತೆ ಹಲವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಎಂ.ಜಿ.ರಸ್ತೆ, ಬ್ರಿಗೇಡ್​ ರಸ್ತೆಯಲ್ಲಿ ಸಂಭ್ರಮಾಚರಣೆಗೆ ನಿರ್ಬಂಧ ಇಲ್ಲ. ಮಹಿಳಾ‌ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು

ಸಿ.ಟಿ.ರವಿ ಕೇಸ್: ಸಭಾಪತಿಗಳು ಅನುಮತಿ ನೀಡಿದರೆ ಸ್ಥಳ ಮಹಜರು -ಗೃಹ ಸಚಿವ ಡಾ.ಜಿ ಪರಮೇಶ್ವರ್

 ಬೆಂಗಳೂರು: ಸ್ಥಳ ಮಹಜರು ನಡೆಸಲು ಅನುಮತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಸಭಾಪತಿಗಳು ಅನುಮತಿ ಇಲ್ಲದೆ ಸದನದ ಮಹಜರು ಮಾಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸೋಮವಾರ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಥಳ ಮಹಜರಿಗೆ ಪೊಲೀಸರು ಅನುಮತಿ ಕೇಳಿದ್ದಾರೆ. ಪರಿಷತ್ ಅಧ್ಯಕ್ಷರ ಅನುಮತಿ ಇಲ್ಲದೆ ಮಾಡಲಾಗುವುದಿಲ್ಲ. ಪರಿಷತ್ತಿಗೆ ತನ್ನದೇ ಆದ ನಿಯಮಗಳಿದ್ದು, ಪೊಲೀಸರು ಆ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಾರೆ ಎಂದು ಹೇಳಿದರು.



ಪರಿಷತ್ತಿನ ನಕಲಿ ವಿಡಿಯೋಗಳ ಕುರಿತು ಸಭಾಧ್ಯಕ್ಷರು ಪೊಲೀಸರಿಗೆ ಪತ್ರ ಬರೆದಿದ್ದಾರೆಂಬ ಪ್ರಶ್ನೆಗೆ ಉತ್ತರಿಸಿ, ಪೊಲೀಸರು ವಿಡಿಯೋಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಬಹುದು. ಪೊಲೀಸ್ ಅಧಿಕಾರಿಗಳು ತಮ್ಮ ಕಾರ್ಯವಿಧಾನಗಳನ್ನು ಅನುಸರಿಸಬೇಕಾಗಿರುವುದರಿಂದ ಪ್ರತಿಯೊಂದ ಕ್ಕೂ ಸರ್ಕಾರವನ್ನು ಕೇಳಬೇಕಾಗಿಲ್ಲ. ಪೊಲೀಸ್ ಆಯುಕ್ತರೊಂದಿಗೆ ಸಮಾ ಲೋಚಿಸಿ ಸ್ಥಳದಲ್ಲೇ ನಿರ್ಧಾರಗಳನ್ನು ತೆಗೆದುಕೊಂಡು ಸರ್ಕಾರ ಕೇಳಿದರೆ ವರದಿ ಸಲ್ಲಿಸಬಹುದು ಎಂದು ಹೇಳಿದರು.

ಪೊಲೀಸರು ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನಿರ್ದೇಶನದಂತೆ ವರ್ತಿಸುತ್ತಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿ, ಅವರ ಬಳಿ ಮಾಹಿತಿಗಳಿದ್ದರೆ ನೀಡಲಿ, ಪರಿಶೀಲನೆ ಮಾಡು ತ್ತೇವೆಂದು ತಿಳಿಸಿದರು.

ಇಂತಹ ಸನ್ನಿವೇಶಗಳಲ್ಲಿ ಪೊಲೀಸರು ಸಿಎಂಂ ಹಾಗೂ ಗೃಹ ಸಚಿವ ಸೂಚನೆಗಳನ್ನು ಅನುಸರಿಸುತ್ತಾರೆ. ಈ ವಿಚಾರಗಳಲ್ಲಿ ಪೊಲೀಸರು ಕೂಡ ಜವಾಬ್ದಾರರಾಗಿರುವುದರಿಂದ ಅವರು ಇತರರ ಮಾತನ್ನು ಕೇಳುವುದಿಲ್ಲ. ಇತರರ ಮಾತು ಕೇಳಿದ್ದೇ ಆದರೆ, ಅವರನ್ನು ಅವರು ಸಮರ್ಥಿಸಿಕೊಳ್ಳಬೇಕು ಎಂದರು.

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...