ads

Search This Blog

Friday, 3 January 2025

2024ರ ಲೋಕಸಭಾ ಚುನಾವಣೆಯ ಕುರಿತು ವಿಶೇಷ ಲೇಖನ ವಿಶ್ವದ ಅತಿದೊಡ್ಡ ಚುನಾವಣೆಯ ಕುರಿತು ಭಾರತ ಚುನಾವಣಾ ಆಯೋಗದಿಂದ ದತ್ತಾಂಶ ಪ್ರಕಟ

 ಬೀದರ :- 2024ರ ಲೋಕಸಭಾ ಚುನಾವಣೆ ಮತ್ತು ಜೊತೆಯಲ್ಲಿ ನೆಡೆದ 4 ರಾಜ್ಯಗಳ ವಿಧಾನಸಭಾ ಚುನಾವಣೆಗಳ ಸಂಕ್ಷಿಪ್ತ ಡೇಟಾವನ್ನು ಆಯೋಗ ಬಿಡುಗಡೆ ಮಾಡಿದೆ. ವಿಶ್ವಾದ್ಯಂತ ಶಿಕ್ಷಣ ತಜ್ಞರು, ಸಂಶೋಧಕರು, ಚುನಾವಣಾ ವೀಕ್ಷಕರು ಸೇರಿದಂತೆ ಮತದಾರರಿಗೆ ಇದು ಅನುಕೂಲವಾಗಬಲ್ಲದು ಎಂದು ಭಾರತ ಚುನಾವಣಾ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತದ ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಗೆ ಸಂಬAಧಿಸಿದAತೆ 42 ಅಂಕಿ ಅಂಶಗಳ ವರದಿಗಳು ಮತ್ತು ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ಸೇರಿ ನಾಲ್ಕು ರಾಜ್ಯಗಳಲ್ಲಿ ಏಕಕಾಲದಲ್ಲಿ ನಡೆದ ವಿಧಾನಸಭಾ ಚುನಾವಣೆಗಳಿಗೆ ಸಂಬAಧಿಸಿದAತೆ 14 ಅಂಕಿಅAಶಗಳ ವರದಿಗಳ ಸಮಗ್ರ ದತ್ತಾಂಶಗಳನ್ನು ಬಿಡುಗಡೆ ಮಾಡಿದೆ. ಆಯೋಗದ ಈ ಸ್ವಯಂ ಪ್ರೇರಿತ ಕಾರ್ಯವು ಭಾರತದ ಚುನಾವಣಾ ವ್ಯವಸ್ಥೆಯ ಆಧಾರವಾಗಿರುವ ಸಾರ್ವಜನಿಕ ನಂಬಿಕೆಯನ್ನು ಹೆಚ್ಚಿಸುವ ಉದ್ದೇಶವನ್ನು ಹೊಂದಿದ್ದು, ವ್ಯಾಪಕವಾದ, ಸವಿವರವಾದ ದತ್ತಾಂಶ ಬಿಡುಗಡೆಯು, ಶೈಕ್ಷಣಿಕ, ಸಂಶೋಧನೆ ಮತ್ತು ಸಾರ್ವಜನಿಕರು ಸೇರಿದಂತೆ ಎಲ್ಲಾ ಪಾಲುದಾರರಿಗೆ ಚುನಾವಣೆಗೆ ಸಂಬAಧಿಸಿದ ದತ್ತಾಂಶದ ಪ್ರತಿ ವಿವರಗಳನ್ನು ಬಹಿರಂಗಪಡಿಸುವಿಕೆಯ ಮೂಲಕ ಹೆಚ್ಚಿನ ಪಾರದರ್ಶಕತೆ ಕಾಪಾಡಿಕೊಳ್ಳುವುದು ಆಯೋಗದ ನೀತಿಯ ಮುಂದುವರಿಕೆಯಾಗಿದೆ.
ಈ ದತ್ತಾಂಶ ವಿವರಗಳು ವಿವಿಧ ರೀತಿಯ ಮಾಹಿತಿಗಳನ್ನು ಒಳಗೊಂಡಿವೆ, ಉದಾಹರಣೆಗೆ ಲೋಕಸಭಾ ಕ್ಷೇತ್ರ, ವಿಧಾನಸಭಾ ಕ್ಷೇತ್ರ, ರಾಜ್ಯವಾರು ಮತದಾರರ ವಿವರಗಳು, ಮತದಾನ ಕೇಂದ್ರಗಳ ಸಂಖ್ಯೆ ರಾಜ್ಯ, ಲೋಕಸಭಾ ಕ್ಷೇತ್ರವಾರು ಮತದಾರರ ಮತದಾನ, ಪಕ್ಷವಾರು ಮತ ಹಂಚಿಕೆ, ಲಿಂಗ ಆಧಾರಿತ ಮತದಾನದ ನಡವಳಿಕೆ, ರಾಜ್ಯವಾರು ಮಹಿಳಾ ಮತದಾರರ ಭಾಗವಹಿಸುವಿಕೆ, ಪ್ರಾದೇಶಿಕ ವ್ಯತ್ಯಾಸಗಳು, ಕ್ಷೇತ್ರವಾರು ದತ್ತಾಂಶ ಸಾರಾಂಶ ವರದಿ, ರಾಷ್ಟ್ರೀಯ, ರಾಜ್ಯ ಪಕ್ಷಗಳು, ಆರ್ಯುಪಿಪಿಗಳ ಕಾರ್ಯಕ್ಷಮತೆ, ವಿಜೇತ ಅಭ್ಯರ್ಥಿಗಳ ವಿಶ್ಲೇಷಣೆ, ಕ್ಷೇತ್ರವಾರು ಸೇರಿದಂತೆ ವಿವರವಾದ ಫಲಿತಾಂಶಗಳು ಮತ್ತು ಇನ್ನೂ ಅನೇಕ ಆಳವಾದ ಒಳನೋಟಗಳು ಮತ್ತು ವಿಶ್ಲೇಷಣೆಗಳನ್ನು ನಡೆಸಲು ಸಿದ್ಧಪಡಿಸಲಾದ ಈ ದತ್ತಾಂಶವನ್ನು ಸಂಶೋಧಕರು, ನೀತಿ ನಿರೂಪಕರು ಮತ್ತು ಪತ್ರಕರ್ತರು ಈಗ ಬಳಸಿಕೊಳ್ಳಬಹುದಾಗಿದೆ.
2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆ ದತ್ತಾಂಶಗಳ ಸವಿವರವಾದ ವರದಿ ಮತ್ತು ಅಂಕಿ-ಅAಶಗಳನ್ನು ಭಾರತ ಚುನಾವಣಾ ಆಯೋಗದ ವೆಬ್ ಸೈಟ್  https://www.ect.gov.in/statistical-reports     ಮೂಲಕ ಪಡೆದುಕೊಳ್ಳಬಹುದು. ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬAಧಿಸಿದAತೆ ಕೆಲವು ಮುಖ್ಯ ಅಂಶಗಳನ್ನು ವರದಿಯಲ್ಲಿ ಗಮನಿಸಬಹುದಾಗಿದೆ.
ಮತದಾರರ ವಿವರ: ಲೋಕಸಭೆ ಚುನಾವಣೆ 2019 ರಲ್ಲಿ 91,19,50,734 ಕ್ಕೆ ಹೊಲಿಸಿದರೆ, 2024 ರಲ್ಲಿ 97,97,51,847 ನೋಂದಾಯಿತ ಮತದಾರರಿದ್ದಾರೆ. 2019 ಕ್ಕಿಂತ 2024 ರಲ್ಲಿ ಒಟ್ಟು ಮತದಾರರಲ್ಲಿ ಶೇ. 7.43 ರಷ್ಟು ಹೆಚ್ಚಳವಾಗಿದೆ. 2024 ರಲ್ಲಿ 64.64 ಕೋಟಿ ಮತಗಳು ಚಲಾವಣೆಯಾಗಿವೆ. ಆದರೆ 2019 ರಲ್ಲಿ 61.4 ಕೋಟಿ ಮತಗಳು ಚಲಾವಣೆಯಾಗಿದ್ದವು. ಇವಿಎಂ ಮತ್ತು ಅಂಚೆ ಮತಗಳು ಸೇರಿ 64,64,20,869 ಮತಗಳು ಚಲಾವಣೆಯಾಗಿದ್ದವು ಇದರಲ್ಲಿ 64,21,39,275 ಇವಿಎಂ ಮತಗಳು ಇದರಲ್ಲಿ 32,93,61,948 ಪುರುಷರು ಮತ್ತು 31,27,64,269 ಮಹಿಳೆಯರು ಮತ್ತು 13,058 ತೃತೀಯ ಲಿಂಗ ಮತದಾರರು ಮತ ಚಾಲಿಯಿಸಿದ್ದಾರೆ. 42,81,594 ಅಂಚೆ ಮತ ಪತ್ರಗಳು ಬಂದಿವೆ.
ಆಸ್ಸಾಂ ರಾಜ್ಯದ ಧುಬ್ರಿ ಲೋಕಸಭಾ ಮತಕ್ಷೇತ್ರದಲ್ಲಿ ಅತಿ ಹೆಚ್ಚು ಶೇ. 92.3 ರಷ್ಟು ಮತದಾನವಾಗಿದೆ. ಹಾಗೂ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಲೋಕಸಭಾ ಮತಕ್ಷೇತ್ರದಲ್ಲಿ ಅತಿ ಕಡಿಮೆ ಶೇ. 38.7 ರಷ್ಟು ಮತದಾನವಾಗಿದೆ. ಇಲ್ಲಿ 2019 ರ ಲೋಕಸಭಾ ಚುನಾವಣೆಯಲ್ಲಿ ಶೇ. 14.4 ರಷ್ಟು ಮತದಾನವಾಗಿತ್ತು. ದೇಶದಲ್ಲಿ 11 ಲೋಕಸಭಾ ಮತಕ್ಷೇತ್ರದಲ್ಲಿ ಶೇ. 50 ಕ್ಕಿಂತ ಕಡಿಮೆ ಮತದಾನವಾಗಿದೆ. 2024 ರಲ್ಲಿ 63,71,839 (ಶೇ.0.99) ನೋಟಾ ಮತಗಳಾಗಿವೆ. ಇದು 2019 ರಲ್ಲಿ ಶೇ. 1.06 ರಷ್ಟಿತ್ತು. ಶೇ. 27.09 ರಷ್ಟು ಲಿಂಗ ಪರಿವರ್ತಿತ ಮತದಾರರು ಮತದಾನ ಮಾಡಿದ್ದಾರೆ.
ಮತದಾನ ಕೇಂದ್ರಗಳು: 2019 ರಲ್ಲಿ 10,37,848 ಕ್ಕೆ ಹೋಲಿಸಿದರೆ 2024 ರಲ್ಲಿ 10,52,664 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. 40 ಮತಗಟ್ಟೆಗಳಲ್ಲಿ ಮಾತ್ರ ಮರುಮತದಾನ ಮಾಡಲಾಗಿದೆ. ಒಂದು ಮತಗಟ್ಟೆಗೆ ಮತದಾರರ ಸರಾಸರಿ ಸಂಖ್ಯೆ, 931 ಆಗಿದೆ. ಅತಿ ಹೆಚ್ಚು ಮತಗಟ್ಟೆ 1,62,069 ಹೊಂದಿರುವ ರಾಜ್ಯ ಉತ್ತರ ಪ್ರದೇಶವಾಗಿದ್ದು, ಕಡಿಮೆ ಸಂಖ್ಯೆಯ 55 ಮತಗಟ್ಟೆ ಹೊಂದಿರುವ ಲಕ್ಷದ್ವೀಪ ಕೇಂದ್ರಾಡಳಿತ ಪ್ರದೇಶವಾಗಿದೆ. 1000 ಗಿಂತ ಕಡಿಮೆ ಮತಗಟ್ಟೆ ಇರುವ ಸಂಸದೀಯ ಕ್ಷೇತ್ರಗಳ ಸಂಖ್ಯೆ, 11 ಆಗಿದೆ. 3000 ಗಿಂತ ಹೆಚ್ಚಿನ ಮತಗಟ್ಟೆ ಇರುವ ಸಂಸದೀಯ ಕ್ಷೇತ್ರಗಳ ಸಂಖ್ಯೆ, 3 ಆಗಿದ್ದು, 2019 ಕ್ಕೆ ಹೋಲಿಸಿದರೆ 2024 ರಲ್ಲಿ ಅತಿ ಹೆಚ್ಚು ಹೊಸ ಮತದಾನ ಕೇಂದ್ರಗಳನ್ನು ಹೊಂದಿರುವ ಬಿಹಾರ (4739) ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಾಗಿವೆ (1731).
ನಾಮನಿರ್ದೇಶನಗಳು: 2019 ರಲ್ಲಿ ಸಲ್ಲಿಕೆಯಾಗಿದ್ದ 11,692 ನಾಮಪತ್ರಗಳಿಗೆ ಹೋಲಿಸಿದರೆ 2024 ರಲ್ಲಿ 12,459 ನಾಮಪತ್ರಗಳು ಸಲ್ಲಿಕೆಯಾಗಿವೆ. ದೇಶದಲ್ಲಿಯೇ ಅತಿ ಹೆಚ್ಚು ನಾಮಪತ್ರಗಳನ್ನು ತೆಲಂಗಾಣ ಜಿಲ್ಲೆಯ ಮಲ್ಕಾಜ್ಗಿರಿ ಲೋಕಸಭಾ ಮತಕ್ಷೇತ್ರದಲ್ಲಿ 114 ನಾಮಪತ್ರಗಳು ಸ್ವೀಕೃತವಾಗಿದ್ದರೆ. ಆಸ್ಸಾಂ ರಾಜ್ಯದ ದಿಬ್ರುಗಡ್ ಲೋಕಸಭಾ ಕ್ಷೇತ್ರದಲ್ಲಿ 3 ನಾಮಪತ್ರಗಳು ಸಲ್ಲಿಕೆಯಾಗಿವೆ.
ಮಹಿಳಾ ಶಕ್ತಿ: ನೋಂದಾಯಿತ ಮತದಾರರು: 2024 ರಲ್ಲಿ ಒಟ್ಟು 97,97,51,847 ಮತದಾರರಿದ್ದು, ಇದರಲ್ಲಿ ಮಹಿಳಾ ಮತದಾರರಿದ್ದರು. 2019 ರಲ್ಲಿ ಶೇ. 48.09 (43,85,37,911) ರಷ್ಟು ಇದ್ದ ಒಟ್ಟು ಮಹಿಳಾ ಮತದಾರರಿಗೆ ಹೋಲಿಸಿದರೆ 2024 ರಲ್ಲಿ ಶೇ. 48.62 (47,63,11,240) ಮಹಿಳಾ ಮತದಾರರಿದ್ದರು. 2024 ರಲ್ಲಿ ಅತಿ ಹೆಚ್ಚು ಮಹಿಳಾ ಮತದಾರರನ್ನು ಪುದುಚೇರಿ (53.03%), ಕೇರಳ (51.56%) ರಾಜ್ಯಗಳು ಹೊಂದಿವೆ. 2024 ರಲ್ಲಿ, ಪ್ರತಿ 1000 ಪುರುಷ ಮತದಾರರಿಗೆ ಮಹಿಳಾ ಮತದಾರರ ಸಂಖ್ಯೆ ಗರಿಷ್ಠ ಅಂದರೆ 946 ಆಗಿದ್ದು, ಅದು 2019 ರಲ್ಲಿ ಪ್ರತಿ ಸಾವಿರ ಪುರುಷರಿಗೆ 926 ಮಹಿಳಾ ಮತದಾರರಾಗಿತ್ತು.
ಮಹಿಳಾ ಮತದಾನ: ಶೇ. 65.55 ರಷ್ಟಿರುವ ಪುರುಷ ಮತದಾರರಿಗೆ ಹೋಲಿಸಿದರೆ ಶೇ. 65.78 ಮಹಿಳಾ ಮತದಾರರು 2024 ರಲ್ಲಿ (ಸೂರತ್ ಹೊರತುಪಡಿಸಿ) ಮತ ಚಲಾಯಿಸಿದ್ದಾರೆ. 2019 ರಂತೆಯೇ 2024 ರಲ್ಲಿಯೂ ಮಹಿಳೆಯರ ಸಂಖ್ಯೆಯು ಪುರುಷರಿಗಿಂತ ಹೆಚ್ಚಾಗಿದೆ. ಸಾರ್ವತ್ರಿಕ ಲೋಕಸಭಾ ಚುನಾವಣೆಯ ಇತಿಹಾಸದಲ್ಲಿ ಇದು ಎರಡನೇ ಬಾರಿ. ಮಹಿಳಾ ಮತದಾರರಲ್ಲಿ ಅತಿ ಹೆಚ್ಚು ವಿಟಿಆರ್ ಹೊಂದಿರುವ ಸಂಸದೀಯ ಕ್ಷೇತ್ರ ಶೇ. 92.17 ರಷ್ಟು ಮಹಿಳಾ ಮತದಾನದೊಂದಿಗೆ ಧುಬಿ (ಅಸ್ಸಾಂ), ಶೇ. 87.57 ರೊಂದಿಗೆ ತಮ್ಮುಕ್ (ಪಶ್ಚಿಮ ಬಂಗಾಳ) ಸ್ಥಾನ ಪಡೆದಿದೆ.
ಮಹಿಳಾ ಅಭ್ಯರ್ಥಿಗಳು: 2019 ರಲ್ಲಿ 726 ಮಹಿಳಾ ಸ್ಪರ್ಧಿ ಅಭ್ಯರ್ಥಿಗಳಿಗೆ ಹೋಲಿಸಿದರೆ, 2024 ರಲ್ಲಿ ಮಹಿಳಾ ಸ್ಪರ್ಧಿ ಅಭ್ಯರ್ಥಿಗಳ ಸಂಖ್ಯೆ 800 ಆಗಿತ್ತು. ಅತಿ ಹೆಚ್ಚು ಮಹಿಳಾ ಅಭ್ಯರ್ಥಿಗಳನ್ನು ಹೊಂದಿರುವ ರಾಜ್ಯ ಮಹಾರಾಷ್ಟ್ರ ಆಗಿತ್ತು.
ಎಲ್ಲರನ್ನೂ ಒಳಗೊಳ್ಳುವ ಚುನಾವಣೆಗಳು: 2019 ರಲ್ಲಿ 39,075 ರಷ್ಟಿದ್ದ ತೃತೀಯ ಲಿಂಗ ಮತದಾರರನ್ನು 2024 ರಲ್ಲಿ 48,272 ಹೊಸದಾಗಿ ತೃತೀಯ ಲಿಂಗ ಮತದಾರರನ್ನು ನೋಂದಾಯಿಸಲಾಗಿದೆ. ಐದು ವರ್ಷಗಳ ಅವಧಿಯಲ್ಲಿ ಶೇ. 23.5 ರಷ್ಟು ಹೆಚ್ಚಳವಾಗಿದೆ. ಅತಿ ಹೆಚ್ಚು ನೋಂದಾಯಿತ ತೃತೀಯ ಲಿಂಗ ಮತದಾರರನ್ನು (8,467) ಹೊಂದಿರುವ ರಾಜ್ಯ ತಮಿಳುನಾಡು ಆಗಿದೆ. 2019 ರಲ್ಲಿ 61,67,482 ಇದ್ದ ನೋಂದಾಯಿತ ದಿವ್ಯಾಂಗ ಮತದಾರರ ಸಂಖ್ಯೆ 2024 ರಲ್ಲಿ 90,28,696 ಕ್ಕೆ ಆಗಿದೆ. 2019 ರಲ್ಲಿದ್ದ ಶೇ. 14.64 ಕ್ಕೆ ಹೋಲಿಸಿದರೆ 2024 ರ ಲೋಕಸಭಾ ಚುನಾವಣೆಯಲ್ಲಿ ಶೇ. 27.09 ತೃತೀಯ ಲಿಂಗ ಮತದಾರರು ಮತ ಚಲಾಯಿಸಿದ್ದಾರೆ. ಇದು ಬಹುತೇಕ ದ್ವಿಗುಣವಾಗಿದೆ. 2019 ರಲ್ಲಿ 99,844 ನೋಂದಾಯಿತ ಸಾಗರೋತ್ತರ ಮತದಾರರಿಗೆ ಹೋಲಿಸಿದರೆ 2024 ರಲ್ಲಿ 1,19,374 (ಪುರುಷ: 1,06,411; ಮಹಿಳೆ: 12,950; ತೃತೀಯ ಲಿಂಗ:13) ನೋಂದಾಯಿತ ಸಾಗರೋತ್ತರ ಮತದಾರರು ಆಗಿದ್ದಾರೆ.
ಫಲಿತಾಂಶಗಳು: 2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಒಟ್ಟು 6 ರಾಷ್ಟ್ರೀಯ ಪಕ್ಷಗಳು ಭಾಗವಹಿಸಿದ್ದವು. ಈ 6 ಪಕ್ಷಗಳ ಒಟ್ಟು ಮತ ಹಂಚಿಕೆಯು ಒಟ್ಟು ಮಾನ್ಯ ಮತಗಳ ಶೇ. 63.35 ರಷ್ಟು ಆಗಿತ್ತು. 2019 ರಲ್ಲಿ 6,923 ಅಭ್ಯರ್ಥಿಗಳಿಗೆ ಹೋಲಿಸಿದರೆ 2024 ರ ಚುನಾವಣೆಯಲ್ಲಿ 7,190 ಅಭ್ಯರ್ಥಿಗಳು ಠೇವಣಿಗಳನ್ನು ಕಳೆದುಕೊಂಡಿದ್ದಾರೆ. ಮತ್ತು ಗುಜರಾತ್ ರಾಜ್ಯದ ಸೂರತ್ (ಒಂದು) ಲೋಕಸಭಾ ಕ್ಷೇತ್ರಕ್ಕೆ ಅವಿರೋಧ ಆಯ್ಕೆಯಾಗಿತ್ತು. 3,921 ಸ್ವತಂತ್ರ ಅಭ್ಯರ್ಥಿಗಳು ಸ್ಪರ್ಧಿಸಿದ್ದು, 7 ಮಂದಿ ಮಾತ್ರ ಆಯ್ಕೆಯಾಗಿದ್ದಾರೆ. ಅದರಲ್ಲಿ 3,905 ಸ್ವತಂತ್ರ ಅಭ್ಯರ್ಥಿಗಳು ಠೇವಣಿ ಕಳದುಕೊಂಡಿದ್ದಾರೆ. ಸ್ವತಂತ್ರ ಅಭ್ಯರ್ಥಿಗಳು ಪಡೆದ ಮತ ಹಂಚಿಕೆ ಒಟ್ಟು ಮಾನ್ಯ ಮತಗಳಲ್ಲಿ ಶೇ. 2.79 ಆಗಿತ್ತು. ಇದರಲ್ಲಿ 279 ಸ್ವತಂತ್ರ ಮಹಿಳಾ ಅಭ್ಯರ್ಥಿಗಳಿದ್ದರು.
ಈ ಮೇಲೆ ನೀಡಿರುವ ಪ್ರತಿ ದತ್ತಾಂಶಗಳ ಸ್ವವಿವರವಾದ ವರದಿ ಮತ್ತು ಅಂಕಿ ಅಂಶಗಳನ್ನು ಭಾರತ ಚುನಾವಣಾ ಆಯೋಗದ  MEDIA & PUBLICATIONS>>Election Results & Statics<https://www.eci.in/staticals-reporsts ದಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದು ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.

ಸಮಾಜದ ಕಟ್ಟಕಡೆಯ ಮಗುವಿಗೂ ಶಿಕ್ಷಣ ದೊರೆಯಲಿ: ಶಶಿಧರ್ ಕೋಸಂಬೆ

 ಬಳ್ಳಾರಿ : ಶಿಕ್ಷಣ ಮೂಲಭೂತ ಹಕ್ಕಾಗಿದ್ದು, ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009ರ ಅನ್ವಯ ಸಮಾಜದಲ್ಲಿನ 6-14 ವಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ದೊರೆಯಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ಹೇಳಿದರು.




ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣಾ ಮತ್ತು ಸಾಕ್ಷಾರತಾ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್‌ನ ನಜೀರ್ ಸಭಾಂಗಣದಲ್ಲಿ  ‘ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009’ ರ ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಗುರುವಾರ ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಹಕ್ಕುಗಳ ರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕಿದ್ದು, ಮಕ್ಕಳ ಹಕ್ಕುಗಳಿಗೆ ಚ್ಯುತಿಯಾಗದಂತೆ ಕಾರ್ಯನಿರ್ವಹಿಸುವುದು ವಿವಿಧ ಇಲಾಖೆ ಅಧಿಕಾರಿಗಳ ಜವಬ್ದಾರಿಯಾಗಿದೆ ಎಂದರು.
ಆರ್‌ಟಿಇ-2009 ಸೆಕ್ಸನ್ 10 ಪ್ರಕಾರ ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಇಲ್ಲವಾದಲ್ಲಿ ಆರ್‌ಟಿಇ ಕಾಯ್ದೆ ಸೆಕ್ಷನ್ 11ರ ಪ್ರಕಾರ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಕರೆತರುವ ಕೆಲಸ ಮಾಡಬೇಕು. ಜೊತೆಗೆ ಯಾವ ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ವಿಫಲಗೊಂಡಲ್ಲಿ ಶಿಸ್ತು ಕ್ರಮಕೈಗೊಳ್ಳಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜನಸಾಮಾನ್ಯರಿಗೆ ಮನವರಿಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಮಕ್ಕಳ ಮೇಲಿನ ದೌರ್ಜನ್ಯ, ಹಲ್ಲೆ, ಶೋಷಣೆ ತಾರತಮ್ಯ ಹಾಗೂ ಮಕ್ಕಳ ರಕ್ಷಣೆಗಾಗಿ ಮಕ್ಕಳ ರಕ್ಷಣಾ ನೀತಿ-2016, ತಿದ್ದುಪಡಿ ಕಾಯ್ದೆ-2023ರ ನಿಯಮಗಳನ್ನು ಪಾಲಿಸಬೇಕು. ಗ್ರಾಮ ಪಂಚಾಯತ್ ಮಟ್ಟದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳು ಸಕಾಲದಲ್ಲಿ ಸಭೆ ನಡೆಸಿ, ಮಕ್ಕಳ ಶಿಕ್ಷಣ ಕಾರ್ಯಪಡೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮಕ್ಕಳ ರಕ್ಷಣೆಯಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದು ಹೇಳಿದರು.
ಮಕ್ಕಳ ರಕ್ಷಣಾ ನೀತಿ ಅನ್ವಯ ಪ್ರತಿಯೊಂದು ಶಾಲಾ-ಕಾಲೇಜು, ವಸತಿ ನಿಲಯಗಳಲ್ಲಿ ಮಕ್ಕಳ ಸಹಾಯವಾಣಿ 1098 ಫಲಕ ಹಾಗೂ ಸಲಹಾ ಪೆಟ್ಟಿಗೆ ಅಳವಡಿಸಬೇಕೆಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಮಾಜಿ ಸದಸ್ಯರಾದ ಹೆಚ್.ಸಿ ರಾಘವೇಂದ್ರ ಅವರು ಉಪನ್ಯಾಸದಲ್ಲಿ ಮಾತನಾಡುತ್ತಾ, ಮಕ್ಕಳ ಬಾಲ್ಯ ಅಮೂಲ್ಯವಾಗಿದ್ದು, ಅವರ ಬಾಲ್ಯತನವನ್ನು ಸುಂದರಗೊಳಿಸಲು ಶಿಕ್ಷಣ ಮುಖ್ಯವಾಗಿದೆ ಎಂದರು.
ಜೀವಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಸ್ವಾತಂತ್ರö್ಯ, ಸಮಾನತೆ, ಆರೋಗ್ಯ, ವಸತಿ ಸೇರಿದಂತೆ ಸಂವಿಧಾನದಲ್ಲಿ 21ಎ ಅಡಿ ಶಿಕ್ಷಣವೂ ಸೇರ್ಪಡೆಯಾಗಿದೆ. ಈ ನಿಟ್ಟಿನಲ್ಲಿ ಯಾವುದೇ ಮಕ್ಕಳು ಶಿಕ್ಷಣ ವಂಚಿತರಾಗದAತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಮಕ್ಕಳಿಗೆ ದೈಹಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸೇರಿದಂತೆ ಇತರೆ ವಿಷಯಗಳಲ್ಲಿ ವಂಚನೆಗೆ ಒಳಗಾದಲ್ಲಿ, ಅಭಿಪ್ರಾಯ ವ್ಯಕ್ತ ಪಡಿಸುವ ಮುಕ್ತ ಅವಕಾಶದ ವಾತವರಣ ಹಾಗೂ ಪ್ರಶ್ನೆ ಕೇಳುವ ಮನೋಭಾವನೆ ಬೆಳೆಸಿಕೊಳ್ಳಲು ಮಕ್ಕಳಿಗೆ ಧೈರ್ಯ ತುಂಬಬೇಕು ಎಂದು ಹೇಳುತ್ತಾ, ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009 ಹಾಗೂ ವಿವಿಧ ವಿಷಯಗಳು ಕುರಿತು ವಿವರಿಸಿದರು.
ಈ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷಿö್ಮ ಮೈದೂರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರು, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗಮೂರ್ತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಮತ್ತು ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಯ ಅಧೀಕ್ಷಕರುಗಳು ಹಾಗೂ ಇತರರು ಉಪಸ್ಥಿತರಿದ್ದರು.

Thursday, 26 December 2024

1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ್ ಶತಮಾನೊತ್ಸವ


ವೀರಸೌಧದಲ್ಲಿ ಗಾಂಧೀ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಳಗಾವಿ :  ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೊತ್ಸವದ ಅಂಗವಾಗಿ ನಗರದ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಗುರುವಾರ (ಡಿ.26) ಮಹಾತ್ಮಾ ಗಾಂಧೀಜಿಯವರ ನೂತನ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ‌ ಅವರು ಅನಾವರಣಗೊಳಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.


ತದನಂತರ ವೀರಸೌಧದ ಆವರಣದಲ್ಲಿನ ಗಾಂಧೀ ಸ್ಮಾರಕ ಭವನದಲ್ಲಿನ ನವೀಕೃತ ಪೋಟೋ ಗ್ಯಾಲರಿಯನ್ನು‌ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು  ಉದ್ಘಾಟಿಸಿದರು.

ಇದೇ ವೇಳೆ ವೀರಸೌಧ(ಕಾಂಗ್ರೆಸ್ ಬಾವಿ) ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಸಸಿ ನೆಟ್ಟು ನೀರೆರೆದರು.

ಈ ಸಂದರ್ಭದಲ್ಲಿ ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಎಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳಕರ್, ಶರಣಬಸಪ್ಪ ದರ್ಶನಾಪುರ,  ಕೆ.ಎಚ್.ಮುನಿಯಪ್ಪ, ಶಾಸಕರಾದ ಆಸಿಫ್ (ರಾಜು) ಸೇಠ್, ಪರಿಷತ್ ಸದಸ್ಯ‌ ಚನ್ನರಾಜ್ ಹಟ್ಟಿಹೊಳಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಆರ್.ವಿ.ದೇಶಪಾಂಡೆ, ಸರಕಾರದ ಮುಖ್ಯ ಸಚೇತಕ ಅಶೋಕ‌‌ ಪಟ್ಟಣ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ವಾರ್ತಾ ಇಲಾಖೆಯ ಕಾರ್ಯದರ್ಶಿ ಕಾವೇರಿ ಬಿ.ಬಿ., ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಒಂ ಸಿಇಓ ರಾಹುಲ್ ಶಿಂಧೆ, ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ, ಉಪ ನಿರ್ದೆಶಕರಾದ ಗುರುನಾಥ ಕಡಬೂರ ಮತ್ತಿತರರು ಉಪಸ್ಥಿತರಿದ್ದರು.

ಗಂಗಾಧರ್ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿ ಉದ್ಘಾಟನೆ ಸ್ಮಾರಕ ಭವನ ಉದ್ಘಾಟಿಸಿದ ಸಿ.ಎಂ ಸಿದ್ದರಾಮಯ್ಯ

ಬೆಳಗಾವಿ :  "ಗಾಂಧಿ ಭಾರತ" ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿಯ ರಾಮತೀರ್ಥ ನಗರದಲ್ಲಿ ಗುರುವಾರ (ಡಿ.26) ಗಂಗಾಧರ ದೇಶಪಾಂಡೆ ಅವರ ಸ್ಮಾರಕ ಭವನ‌ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.


ಸ್ಮಾರಕ ಭವನ ಅಂದಾಜು 15 ಗುಂಟೆ ಜಾಗೆಯಲ್ಲಿ 1.58 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಸ್ಥಳದಲ್ಲಿ ಸ್ಮಾರಕ ಭವನ, ದೇಶಪಾಂಡೆ ಅವರ ಪುತ್ಥಳಿ, ಫೋಟೋ ಗ್ಯಾಲರಿ,  ಆವರಣದ ಕಾಂಪೌಂಡ್, ತಂತಿಬೇಲಿ, ಪೇವರ್ಸ್ ಹಾಗೂ ಉದ್ಯಾನವನ ನಿರ್ಮಿಸಲಾಗಿದೆ.



ಈ ಸಂದರ್ಭದಲ್ಲಿ ಕಾನೂನು, ನ್ಯಾಯ, ಮಾನವ ಹಕ್ಕುಗಳ, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಎಚ್.ಕೆ ಪಾಟೀಲ, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರು ವೀರಪ್ಪ ಮೊಯ್ಲಿ, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಆಸೀಫ್(ರಾಜು)ಸೇಠ, ಚಿಕ್ಕೋಡಿ-ಸದಲಗಾ ಶಾಸಕ ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ. ಧರಣಿ ದೇವಿ ಮಾಲಗತ್ತಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ , ಮಹಾನಗರ ಪಾಲಿಕೆ ಆಯುಕ್ತರಾದ ಶುಭಾ. ಬಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಜಂಟಿ ನಿರ್ದೇಶಕ ಕೆ. ಎಚ್ ಚನ್ನೂರು, ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಹಾಜರಿದ್ದರು.


ಸ್ವಾತಂತ್ರ್ಯ ಹೋರಾಟದಲ್ಲಿ ಗಂಗಾಧರ್ ರಾವ್ ದೇಶಪಾಂಡೆ ಪಾತ್ರ:



ಕರ್ನಾಟಕ ಸಿಂಹ ಎಂದೇ ಖ್ಯಾತಿ ಪಡೆದಿದ್ದ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದ ಹೆಮ್ಮೆಯ ಸುಪುತ್ರ, ಕೆಚ್ಚೆದೆಯ ಹೋರಾಟಗಾರ ಗಂಗಾಧರರಾವ್ ದೇಶಪಾಂಡೆ ಅವರೇ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಯಲು ಮತ್ತು ಗಾಂಧೀಜಿ ಅಧ್ಯಕ್ಷತೆ ವಹಿಸಲು ಕಾರಣೀಕರ್ತರು.


ಗಂಗಾಧರರಾವ್ ಅವರ ಮುತ್ಸದ್ದೀತನ, ಸಮರ್ಥ ನಾಯಕತ್ವದ ಫಲವಾಗಿ ಬೆಳಗಾವಿ ಇತಿಹಾಸದಲ್ಲಿ ದಾಖಲಾಯಿತು. ಅಂದು ಕಾಂಗ್ರೆಸ್ ಪಕ್ಷದಲ್ಲಿ ಜವಾಹರಲಾಲ್ ನೆಹರು ಅವರಿಗೆ ಸರಿಸಮಾನವಾದ ಅಧಿಕಾರ ಹೊಂದಿದ್ದರು. ಗಂಗಾಧರರಾವ್ ಅವರು ಮನಸ್ಸು ಮಾಡಿದ್ದರೆ ಸ್ವಾತಂತ್ರ್ಯಾ ನಂತರ ಭಾರತ ಸರ್ಕಾರದಲ್ಲಿ ಪ್ರಮುಖ ಸ್ಥಾನ ಪಡೆಯುತ್ತಿದ್ದರು. ಆದರೆ, ನನ್ನ ಹೋರಾಟ ಮತ್ತು ಸೇವೆ ದೇಶದ ಸ್ವಾತಂತ್ರ್ಯಕ್ಕೆ ಮಾತ್ರ ಸಿಮೀತ ಎಂದು ಹೇಳಿ ಆಧ್ಯಾತ್ಮಿಕತೆ ಕಡೆಗೆ ಸಾಗಿದ ನಿಸ್ವಾರ್ಥಿ.


ವೈಯಕ್ತಿಕ ವಿವರ:



ಬೆಳಗಾವಿ ತಾಲ್ಲೂಕಿನ ಹುದಲಿ ಗ್ರಾಮದ ಶ್ರೀಮಂತ ಮನೆತನದ ಬಾಲಕೃಷ್ಣ ಮತ್ತು ರಾಧಾಬಾಯಿ ದಂಪತಿಗಳ‌ ಉದರದಲ್ಲಿ 1871ರ ಮಾರ್ಚ 31ರಂದು ಜನಿಸಿದ ಗಂಗಾಧರರಾವ್ ದೇಶಪಾಂಡೆ ಅವರು, ಮಾಧ್ಯಮಿಕ ಶಿಕ್ಷಣವನ್ನು ಬೆಳಗಾವಿ ಸರ್ದಾರ್ಸ್ ಹೈಸ್ಕೂಲ್ ನಲ್ಲಿ ಪಡೆದಿದ್ದಾರೆ. ಪುಣೆ ಡೆಕ್ಕನ್ ಕಾಲೇಜಿನಲ್ಲಿ ಪದವಿ ಮತ್ತು ಬಿಎ ಎಎಲ್ ಬಿ ಪೂರ್ಣಗೊಳಿಸಿದ್ದಾರೆ. ಪತ್ನಿ ಲಕ್ಷ್ಮೀಬಾಯಿ, ಪುತ್ರ ಬಾಲಕೃಷ್ಣ. 1960ರ ಜುಲೈ‌ 30ರಂದು ಗಂಗಾಧರಾವ್ ಅವರು ನಿಧನರಾದರು.


1922ರಲ್ಲಿ ಚರಕ ಸಂಘ, 1937ರಲ್ಲಿ ಹುದಲಿಯಲ್ಲಿ ಗಾಂಧಿಸೇವಾ ಸಂಘ ಸ್ಥಾಪಿಸಿದ್ದರು. ಈಗಲೂ‌ ಖಾದಿ ಗ್ರಾಮೋದ್ಯೋಗ ನೂರಾರು ಜನರಿಗೆ ಉದ್ಯೋಗ ಕೊಟ್ಟಿದೆ. 1920ರಲ್ಲಿ ಬೆಳಗಾವಿಯಲ್ಲಿ ಮುನ್ಸಿಪಲ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಆರಂಭದಲ್ಲಿ ಗಂಗಾಧರಾವ್ ಅವರು, ಗೋಪಾಲಕೃಷ್ಣ ಗೋಕಲೆ, ಬಾಲಗಂಗಾಧರ ಟಿಳಕರ ಅನುಯಾಯಿಯಾಗಿದ್ದರು. ಅವರು ಕಾಲವಾದ ಬಳಿಕ‌ ಮಹಾತ್ಮಾ ಗಾಂಧೀಜಿ ಸಂಪರ್ಕಕ್ಕೆ ಬರುತ್ತಾರೆ. ಗಾಂಧೀಜಿ ಐವರು ಅತ್ಯಾಪ್ತರಲ್ಲಿ ಇವರು ಒಬ್ಬರಾಗುತ್ತಾರೆ. ಅಪ್ಪಟ ಗಾಂಧಿವಾದಿಯಾಗಿದ್ದ ಗಂಗಾಧರರಾವ್ ಖಾದಿ ಬಟ್ಟೆಯನ್ನೇ ಧರಿಸುತ್ತಿದ್ದರು. ಶ್ರೀಮಂತಿಕೆ‌ ಇದ್ದರೂ ಸರಳ ಜೀವನ ನಡೆಸಿದ ಹೆಗ್ಗಳಿಕೆ ಇವರದ್ದು. 


ಗಾಂಧೀಜಿ ಮನವೊಲಿಸಿದ ದೇಶಪಾಂಡೆ:



ಮಹಾತ್ಮ ಗಾಂಧೀಜಿ ಹಿಂದಿನ ಅಧಿವೇಶನದಲ್ಲಿ ಭಾಗಿಯಾಗಿರಲಿಲ್ಲ. ಅಲ್ಲದೇ ಅಧ್ಯಕ್ಷತೆ ವಹಿಸಲು ನಿರಾಕರಿಸಿದ್ದರು.‌ ನಾನು ಅಧ್ಯಕ್ಷ ಇರಲಿ, ಬಿಡಲಿ. ಜನ ನನ್ನ‌ ಚಳುವಳಿಯಲ್ಲಿ ಪಾಲ್ಗೊಳ್ಳುತ್ತಾರೆ ಎನ್ನುತ್ತಾರೆ. ಆದರೆ, ಗಂಗಾಧರರಾವ್ ಅವರು‌ ಮಾತ್ರ ಬಿಡಲಿಲ್ಲ‌. ಗಾಂಧೀಜಿ ಮನವೊಲಿಸಿ ಅಧ್ಯಕ್ಷರಾಗುವಂತೆ ಮಾಡಿದ್ದು ಇತಿಹಾಸ. ಬೆಳಗಾವಿ ಅಧಿವೇಶನದಲ್ಲೂ ಜವಾಹರಲಾಲ್ ನೆಹರು ಮತ್ತು ಗಂಗಾಧರಾವ್ ದೇಶಪಾಂಡೆ ಪ್ರಧಾನ ಕಾರ್ಯದರ್ಶಿಯಾಗಿದ್ದರು.


ಹುಟ್ಟೂರಿಗೂ ಗಾಂಧೀಜಿ ಕರೆಸಿದ್ದರು:



ತಮ್ಮ ಹುಟ್ಟೂರು ಹುದಲಿಗೂ ಗಾಂಧೀಜಿ‌ ಅವರನ್ನು ಗಂಗಾಧರಾವ್ ಕರೆಸಿದ್ದರು. ಏಳು‌ ದಿನ ಅಲ್ಲಿಯೇ ಬಾಪು ವಾಸ್ತವ್ಯ ಹೂಡಿದ್ದರು. ಗಾಂಧಿ ಸೇವಾ ಸಂಘದ ಸಮ್ಮೇಳನ ಏರ್ಪಡಿಸಲಾಗಿತ್ತು. ಗಾಂಧೀಜಿ‌ ಅವರ ಜೊತೆಗೆ ಡಾ.ಬಾಬು ರಾಜೇಂದ್ರಪ್ರಸಾದ, ಅಬ್ದುಲ್ ಗಫಾರ್‌ಖಾನ್ ಗಾಂಧಿ, ಸರ್ದಾರ್ ವಲ್ಲಭಬಾಯಿ ಪಟೇಲ್, ಶೌಕತ್ ಅಲಿ, ಸರೋಜಿನಿ ನಾಯ್ಡು, ಹಿರಿಯ ಸಾಹಿತಿಗಳಾದ ಬೆಟಗೇರಿ ಕೃಷ್ಣಶರ್ಮ, ಜಿ. ನಾರಾಯಣ ಸೇರಿ ಅನೇಕ‌ ನಾಯಕರ ದಂಡೇ ಹುದಲಿಗೆ ಬಂದಿತ್ತು.

ಇನ್ನು ಭಾಷಾವಾರು ಪ್ರಾಂತ ರಚನೆ ವೇಳೆ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕು ಅಂತಾ ಗಂಗಾಧರರಾವ್ ದೇಶಪಾಂಡೆ ಧ್ವನಿ ಎತ್ತಿದ್ದರು.

Tuesday, 24 December 2024

ಯಲದಗುಂಡಿ ಶ್ರೀ ಪರಮೇಶ್ವರ ಜಾತ್ರಾ ಮಹೋತ್ಸವ - ಜಗತ್ತು ಪರಮೇಶ್ವರನ ಪ್ರವಾಸಿ ತಾಣ - ಹಾರಕೂಡ ಶ್ರೀ

ಬಸವಕಲ್ಯಾಣ : ಈ ಜಗತ್ತು ಸೃಷ್ಟಿಕರ್ತ ಪರಮೇಶ್ವರನ ಪ್ರವಾಸಿ ತಾಣವಾಗಿದ್ದು, ನಾವೆಲ್ಲ ಕೆಲ ದಿನಗಳವರೆಗೆ ಸೌಂದರ್ಯವನ್ನು ಅನುಭವಿಸಿ ಮತ್ತೆ ಹಿಂತಿರುಗಲು ಬಂದ ಪ್ರವಾಸಿಗರು ಎಂದು ಹಾರಕೂಡದ ಪೂಜ್ಯಶ್ರೀ ಡಾ. ಚನ್ನವೀರ ಶಿವಾಚಾರ್ಯರು ನುಡಿದರು.


 ತಾಲೂಕಿನ ಯಲದಗುಂಡಿ ಗ್ರಾಮದ ಶ್ರೀ ಪರಮೇಶ್ವರ ಜಾತ್ರೆಯ ಅಂಗವಾಗಿ ಏರ್ಪಡಿಸಿದ ಧರ್ಮಸಭೆಯ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀಗಳು ಪ್ರಕೃತಿ ಸಹಜವಾಗಿ ಜನಿಸಿದ ಪ್ರತಿ ಮನುಷ್ಯ ಭವಚಕ್ರದಲ್ಲಿ ಸಿಲುಕಿ ನರಳದೆ ಸುಖ ಯಾತ್ರಿಕನಾಗಿ ಜೀವನ ಪಯಣ ಸಾಗಿಸಲು, ಮೋಹದ ಪರದೆ ಕಳಚಲು ಭಗವದ್ ದರ್ಶನ ಪಡೆಯಲು ನಿತ್ಯ ಸಂತುಷ್ಟನಾಗಿರುವಂತಹ ಕುಶಲ ಪ್ರಜ್ಞೆ ಬೆಳೆಸಿಕೊಳ್ಳಬೇಕು.

 ದೇವನ ಅದ್ಭುತ ಚಿತ್ತಾರವನ್ನು ಕಂಡು ಆನಂದಿಸಬೇಕೆ ವಿನ: ತನ್ನದಾಗಬೇಕೆಂಬ ಹಪಾಹಪಿತನ ಇರಬಾರದು. ದೇವರ ಛತ್ರ ಮುಂದಿನ ಪೀಳಿಗೆಗೆ ವ್ಯವಸ್ಥಿತವಾಗಿ ಬಿಟ್ಟು ಹೋಗಬೇಕಾದ ಗುರುತರ ಜವಾಬ್ದಾರಿ ನಮ್ಮ ಮೇಲಿದೆ ಎಂಬುದನ್ನು ಪ್ರತಿಯೊಬ್ಬರೂ ಮನಗಾಣಲೇಬೇಕಾದ ಸಂಗತಿ.

 ನಾವೆಲ್ಲ ಬಂದು ಹೋಗುವ ನೆಂಟರು ಎನ್ನುವುದಕ್ಕೆ ಪರಮೇಶ್ವರನ ಜಾತ್ರೆಯೇ ದೊಡ್ಡ ನಿದರ್ಶನ, ಎಲ್ಲರ ಜೀವನ ಯಾತ್ರೆ ಸಿರಿಸೌಖ್ಯದಿಂದ ಕೂಡಿರಲಿ ಎಂದು ಶುಭ ಹಾರೈಸಿದರು.

 ತಾಲೂಕಿನ ಮಾನ್ಯ ಶಾಸಕರಾದ ಶರಣು ಸಲಗರ ಮಾತನಾಡಿ ಜಾತ್ರೆಗಳು ಮಾಡುವುದರ ಜೊತೆಗೆ ಮಕ್ಕಳಿಗೆ ಶಿಕ್ಷಣ ಹಾಗೂ ಸಂಸ್ಕಾರ ಕೊಡುವುದು ಅವಶ್ಯಕವಾಗಿದೆ.

 ಜಾತ್ರೆಗಳಲ್ಲಿ ಸಾಮಾಜಿಕ ನಾಟಕಗಳ ಜೊತೆಗೆ ಧಾರ್ಮಿಕ ಹಾಗೂ ನೀತಿ ಪ್ರದಾನವಾದ  ನಾಟಕಗಳು ಮಾಡುವುದರಿಂದ ಮಕ್ಕಳನ್ನು ಸುಸಂಸ್ಕೃತರನ್ನಾಗಿ ಮಾಡಬಹುದು ಎಂದು ನುಡಿದರು. ಹಿರೇನಾಗಾಂವನ ಜಯಶಾಂತಲಿಂಗ ಮಹಾಸ್ವಾಮಿಗಳು, ನೀರಾವರಿ ನಿಗಮ ಮಂಡಳಿ ಬೆಂಗಳೂರಿನ ನಿವೃತ್ತ ವ್ಯವಸ್ಥಾಪಕ  ನಿರ್ದೇಶಕರಾದ ಮಲ್ಲಿಕಾರ್ಜುನ ಗುಂಗೆ, ಮುಖಂಡರಾದ ಶಿವಕುಮಾರ ಸೆಟಗಾರ, ಹುಮನಾಬಾದಿನ ಪಿಎಸ್ಐ  ಸುರೇಶ ಚೌಹಾಣ ಮಾತನಾಡಿದರು.

 ಬಸ್ವತತ್ವ ಪ್ರಚಾರಕರಾದ ಬಸವರಾಜ ಪಂಡಿತ, ಶಿಕ್ಷಕರಾದ ಮಲ್ಲಿನಾಥ ಹಿರೇಮಠ ಹಾರಕೂಡ,  ಮುಖಂಡರಾದ ಬಾಬು ಹೊನ್ನಾನಾಯಕ, ಸಂಜು ಸುಗರೆ, ಸಂತೋಷ ಪಾಟೀಲ ಹಾರಕೂಡ, ಸಿದ್ರಾಮಪ್ಪ ಗುದಗೆ, ಸಿದ್ರಾಮಪ್ಪ ಕವಳೆ, ರತಿಕಾಂತ ಕೊಹಿನೂರ, ಸದಾನಂದ ಪಾಟೀಲ, ನಾಗೇಶ ಮಹಾಜನ ಮುಂತಾದವರು ಉಪಸ್ಥಿತರಿದ್ದರು. ಮಲ್ಲಪ್ಪ ಕೋಟೆ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು.

ಬುದ್ಧ, ಬಸವ, ಗಾಂಧಿ ಹಾಗೂ ಅಂಬೇಡ್ಕರ್ ನನಗೆ ಆದರ್ಶ – ಡಾ. ಬಿ.ಟಿ. ಲಲಿತಾ ನಾಯಕ್

ಬೆಂಗಳೂರು : ಬುದ್ಧ, ಬಸವ, ಗಾಂಧಿ ಹಾಗೂ ಅಂಬೇಡ್ಕರ್ ಅವರುಗಳೇ ನನಗೆ ಆದರ್ಶ ಎಂದು ಹಿರಿಯ ಸಾಹಿತಿ, ಚಿಂತಕರು ಹಾಗೂ ಮಾಜಿ ಸಚಿವರಾದ ಡಾ. ಬಿ. ಲಲಿತಾ ನಾಯಕ್ ಅವರು ತಿಳಿಸಿದರು.



ಬಂಜಾರ ಸಂಸ್ಕøತಿ ಮತ್ತು ಭಾಷಾ ಅಕಾಡೆಮಿಯ ವತಿಯಿಂದ ಮಹಿಳಾ ವಿಶ್ರಾಂತಿ ಕೊಠಡಿ, ರವೀಂದ್ರ ಕಲಾಕ್ಷೇತ್ರ, ಬೆಂಗಳೂರು ಇಲ್ಲಿ ಕಳತಾವೂರ್ ಮಳಾವ್ - 03(ಸಜ್ಜನರ ಸಲ್ಲಾಪ -03) ಮೀನಾರೋ ಪಾಮಣೋ(ತಿಂಗಳ ಅತಿಥಿ) ಸಮಾರಂಭದ ತಿಂಗಳ ಅಥಿತಿಯಾಗಿ ಭಾಗವಹಿಸಿ ಮಾತನಾಡಿದ ಅವರು ತಮ್ಮ ಬಾಲ್ಯದ ದಿನಗಳಲ್ಲಿಯೇ ವ್ಯಾಸಂಗದಲ್ಲಿ ಹೆಚ್ಚು ಆಸಕ್ತಿಯಿಂದ ತೊಡಗಿಸಿಕೊಂಡು. ವಿದ್ಯಾಭ್ಯಾಸ ಪೂರ್ಣಗೊಳಿಸಿದ ನಂತರ ಸಂಸಾರಿಕ ತೊಂದರೆಯಿಂದ 8ನೇ ತರಗತಿಗೆ ಶಾಲೆ ಬಿಟ್ಟು ಸಂಸಾರದ ಕೆಲ ಸಂಗತಿಗಳನ್ನೇ ಬರಹ ರೂಪದಲ್ಲಿ ತರಲಾಯಿತು. ಬಹುಮುಖ್ಯವಾಗಿ ವೈಚಾರಿಕ ನೆಲಗಟ್ಟಿನಲ್ಲಿ ಚಿಂತಿಸುತ್ತಾ ಈ ಕುರಿತಾಗಿ ಹೆಚ್ಚು ಬರಹಗಳನ್ನು ಬರೆಯಲು ಉತ್ಸುಕಳಾದೆ ಎಂದು ತಿಳಿಸಿದರು.

ನನ್ನ ಬರಹಕ್ಕೆ ನನ್ನ ತಂದೆಯ ಒತ್ತಾಸೆ ಹಾಗೂ ಮೊದಲ ವೇದಿಕೆಯಾಗಿದ್ದು ಲಂಕೇಶ್ ಹಾಗೂ ಇತರೆ ಪತ್ರಿಕೆಗಳು ಇದ್ದವು ಎಂಬುದನ್ನು ಮರೆಯುವಂತಿಲ್ಲ. ರಾಜಕೀಯ ಕ್ಷೇತ್ರಕ್ಕೆ ಬಂದು ಕೆಲವರ ಪಿತೂರಿಗಳಿಂದ ಅಧಿಕಾರ ಕಳೆದುಕೊಂಡೆ. ನಜೀರ್ ಸಾಭ್ ಅವರು ನನ್ನನ್ನು ಎಂ.ಎಲ್.ಸಿ ಮಾಡಲು ಕಾರಣರಾದರೂ ಆ ನಂತರ ಸಚಿವೆಯಾದೆ. ಈ ಸಂದರ್ಭದಲ್ಲೂ ಕೂಡ ನನಗೆ ಸಾಹಿತ್ಯ ರಚನೆ ಬಗ್ಗೆಯೇ ಹೆಚ್ಚಿನ ತುಡಿತವಿತ್ತು. ಜೊತೆಗೆ ನನ್ನ ಸತ್ಯ ನಿಷ್ಠೆ, ಸರಳ ಜೀವನ ಇವುಗಳು ಸಚಿವೆಯಾಗಿ ಹೆಚ್ಚು ದಿನ ಮುಂದುವರೆಯದಂತೆ ಮಾಡಿದವು. ಆದರೂ ಧೃತಿಗೆಡಲಿಲ್ಲ, ಹಲವು ಬಗೆಯಲ್ಲಿ ಸಮಾಜ ಸೇವೆಗೆ ತೊಡಗಿಸಿಕೊಂಡಿರುವೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಂಜಾರಾ ಸಂಸ್ಕøತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷರಾದ ಡಾ.ಎ.ಆರ್ ಗೋವಿಂದಸ್ವಾಮಿ ಅವರು ಮಾತನಾಡಿ, ಕಳೆದ ಆರು ತಿಂಗಳಿಂದ ಅಕಾಡೆಮಿಯು ನಿರಂತರ 28ಕ್ಕೂ ಹೆಚ್ಚಿನ ಕಾರ್ಯಕ್ರಮಗಳನ್ನು ರಾಜ್ಯದಾದ್ಯಂತ ನಡೆಸಿದ ಕಾರ್ಯ ಚಟುವಟಿಕೆ ವಿವರಿಸುತ್ತಾ ಪ್ರಸ್ತುತ ಬಂಜಾರ ವಿಶ್ವಕೋಶ (ಎನ್‍ಸೈಕ್ಲೋಪೀಡಿಯಾ) ರಚಿಸುವ ಅಕಾಡೆಮಿ ತೊಡಗಿದ್ದು ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಸಮಿತಿರಚಿಸಲಾಗಿದೆ. ಕಾರ್ಯದಲ್ಲಿ ಪ್ರಥಮ ಸಾಹಿತಿ ಹಾಗೂ ಕಲಾವಿದರ ಬಗ್ಗೆ ಸಾಕ್ಷ್ಯ ಚಿತ್ರ ನಿರ್ಮಾಣವಾಗುತ್ತಿವೆ ಎಂದು ತಿಳಿಸಿದರು.
 
ರಾಜ್ಯದ ಬಹುತೇಕ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿದೆ ಹಾಗೂ ಬಂಜಾರ ಯುವಕ ಯುವತಿಯರಿಗೆ ಕಸೂತಿ, ತರಬೇತಿ ಶಿಬಿರ ಯಶಸ್ವಿ ಆಯೋಜಿಸಲಾಗಿದೆ ಹಾಗೂ ವಿಜಯಪುರದಲ್ಲಿ ಹತ್ತು ದಿನಗಳ ಬಂಜಾರ ಆಭರಣ ತಯಾರಿಕೆ ಕಾರ್ಯಾಗಾರ ನಡೆಸಲಾಗಿದೆ ಬೆಂಗಳೂರು ನಗರದಲ್ಲಿ ಪ್ರತಿ ತಿಂಗಳು ನಾಡಿನ ಸಾಹಿತಿಗಳು ಚಿಂತಕರು ಪ್ರಗತಿಪರರು, ಸಮುದಾಯದ ಎಲೆಮರೆ ಕಾಯಿಗಳು ಮತ್ತು ಗಣ್ಯ ವ್ಯಕ್ತಿಗಳನ್ನು ಕರೆಸಿ ತಿಂಗಳ ಅತಿಥಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇವುಗಳ ಜೊತೆಗೆ ಅಕಾಡೆಮಿಯು ಬಂಜಾರ ಸಮುದಾಯದ ಸಾಧಕರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ಗೌರವಗಳನ್ನು ನೀಡುವ, ಕೊಡಿಸುವ ಕೆಲಸವನ್ನು ಮಾಡುತ್ತಿದೆ ಎಂದು ತಿಳಿಸಿದರು.

ಮಾನ್ಯ ಪ್ರಧಾನ ಮಂತ್ರಿ ಅವರನ್ನು ಬಂಜಾರ ಭಾಷೆಯನ್ನೂ ಪ್ರಸಾರ ಭಾರತೀಯ ಅಕಾಶವಾಣಿ, ದೂರದರ್ಶನ ಹಾಗೂ ಇತರೆ ಕಡೆ ಬೆಳಸಲು ಅವಕಾಶ ಹಾಗೂ ಬಂಜಾರ ಭಾಷೆಗೆ ಸಂವಿಧಾನಿಕ ಸ್ಥಾನ ಮಾನಕ್ಕೆ ಕೋರಲಾಗಿದೆ. ಜೊತೆಗೆ ಬಂಜಾರ ಮ್ಯೂಸಿಯಂ ಹಾಗೂ ಮಾದರಿ ತಾಂಡ ಅಲ್ಲದೆ ಲಿಪಿ ಇಲ್ಲದ ಬಂಜಾರ ಭಾಷೆಯನ್ನು ಆಯಾ ರಾಜ್ಯಗಳ ಪ್ರಾದೇಶಿಕ ಭಾಷೆಯಲ್ಲಿಯೂ ಮತ್ತು ರಾಷ್ಟ್ರಮಟ್ಟದಲ್ಲಿ ನಾಗರೀಕ ಲಿಪಿಯಲ್ಲಿ ಬರೆಯುತ್ತಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಆಂಗ್ಲ ಭಾಷೆ  ಬಳಕೆ ಇದೆ. ಇದನ್ನೇ ಅನೇಕ ಬಂಜಾರ ಭಾಷಾ ತಜ್ಞರು ಅಖೈರು ಗೊಳಿಸಲು ತಮ್ಮ ಸಮರ್ಥನೆ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಅಕಾಡೆಮಿ ಹೆಚ್ಚಿನ ಸಂಶೋಧನೆ ಮಾಡಲಿದೆ ಮತ್ತು ಅಖೈರು ಗೊಳಿಸಲಿದೆ ಎಂದರು.

ಹಿರಿಯ ಸಾಂಸ್ಕøತಿಕ ಚಿಂತಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ವಿಶ್ರಾಂತ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮಿನ್ ಮಟ್ಟು ಮಾತನಾಡಿ, ಲಲಿತನಾಯಕ್ ಸಾಹಿತಿಯಾಗಿ ಗುರುತಿಸಿಕೊಂಡು ಆನಂತರ ರಾಜಕಾರಣಿಯಾದವರು. ಅನುವಾದಕಿ ಕೂಡ ಆಗಿದ್ದರು ಬಿ. ಟಿ. ಲಲಿತಾ ನಾಯಕ ಅವರು ಒಬ್ಬರು ರಾಜಕಾರಣಿ, ಸಾಹಿತಿ, ಪತ್ರಕರ್ತೆ ಅಂತ ತಿಳಿದುಕೊಂಡರೆ ಅಷ್ಟೇ ಅಲ್ಲ, ಎಲ್ಲವನ್ನು ಒಳಗೊಂಡು ಸಾರ್ವಜನಿಕ ಹಿತಕ್ಕಾಗಿ ಯಾವ ಯಾವ ಕ್ಷೇತ್ರದಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತದೆಯೋ ಆ ಎಲ್ಲಾ ಕ್ಷೇತ್ರದಲ್ಲಿಯೂ ಅವರು ಕಾಣಿಸಿಕೊಂಡಿದ್ದಾರೆ ಅವರು ಮೊದಲ ಬಾರಿ ಸಚಿವರಾಗಿದ್ದಾಗ ಬಹಳ ದೊಡ್ಡ ಸಂಚು ನಡೆದು ಅದನ್ನು ಕಳೆದುಕೊಳ್ಳಬೇಕಾಯಿತು. ಎಲ್ಲವನ್ನೂ ಕೂಡ ಸಾರ್ವಜನಿಕ ಹಿತಾಶಕ್ತಿಯಲ್ಲಿಯೇ ತೆಗೆದುಕೊಂಡವರು. ನನಗೆ ಆಶ್ಚರ್ಯ ಆಗಿರುವುದು ಏನೆಂದರೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಅವರ ಹೆಸರು ಕಾಣಿಸಿಕೊಂಡಾಗ, ಅವರಿಗೆ 10 ವರ್ಷದ ಹಿಂದೆಯೇ ರಾಜ್ಯೋತ್ಸವ ಪ್ರಶಸ್ತಿ ಬಂದಿರಬಹುದು ಎಂದು ತಿಳಿದುಕೊಂಡಿದ್ದೆ. ಆದರೆ ಇಲ್ಲಿಯವರೆಗೆ ಬರದಿರುವುದು ಶೋಚನೀಯ, ಪ್ರಸಕ್ತ ಸಾಲಿನಲ್ಲಿ ಬಂಜಾರ ಅಕಾಡೆಮಿಯ ಅಧ್ಯಕ್ಷರ ಹಾಗೂ ಇತರರ ಶಿಫಾರಸ್ಸು, ತಜ್ಞರ ಸಮಿತಿ ಶಿಫಾರಸ್ಸಿನಿಂದ ಪ್ರಶಸ್ತಿ ಸಿಕ್ಕಿದದಕ್ಕಾಗಿ ಅಭಿನಂದಿಸಿದರು.

ಸಮಾರಂಭದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕೆ. ಎಲ್. ಮುಕುಂದ್ ರಾಜ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ, ಶಿಕ್ಷಣ ತಜ್ಞ ಪೆÇ್ರ. ಪಾಂಡುನಾಯಕ್, ಪತ್ರಕರ್ತೆ ಮಂಜು ಶ್ರೀ ಅಕಾಡೆಮಿಯ ಸದಸ್ಯ ಸಂಚಾಲಕ ಡಾ. ಉತ್ತಮ್ ರಾಥೋಡ್ ಹಾಗೂ ಇತರೆ ಸದಸ್ಯರು, ದಲಿತ ಕಾರ್ಮಿಕ ಮುಖಂಡರಾದ ಗವಿಕುಮಾರ್, ಸಾಹಿತಿ ಬಾಲುನಾಯಕ್ ಮುಂತಾದವರು ಉಪಸ್ಥಿತರಿದ್ದರು.

ನಿಗದಿತ ಅವಧಿಯೊಳಗೆ ಸಾರ್ವಜನಿಕರ ಅರ್ಜಿಗಳನ್ನು ವಿಲೇವಾರಿಗೊಳಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ :- ಡಿಸೆಂಬರ್.19 ರಿಂದ 24 ರವರೆಗೆ ದೇಶಾದ್ಯಂತ ಗುಡ್ ಗರ‍್ನನ್ಸ್ ಉತ್ತಮ ಆಡಳಿತ ಆಚರಣೆ ಮಾಡಲಾಗುತ್ತಿದ್ದು, ಅಧಿಕಾರಿಗಳು ತಮ್ಮ ಹಂತದಲ್ಲಿಯೇ ನಿಗದಿತ ಅವಧಿ ಒಳಗಾಗಿ ಸಾರ್ವಜನಿಕರ ಅಹವಾಲುಗಳನ್ನು ವಿಲೇವಾರಿಗೊಳಿಸುವಂಎ ಜಿಲ್ಲಾಧಿಕಾರಿ ಶಿಲ್ಪಾ ಶಮಾ ತಿಳಿಸಿದರು.



 ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿAದು ಹಮ್ಮಿಕೊಂಡ ಉತ್ಮತ ಆಡಳಿತ ಗುಡ್ ಗರ‍್ನನ್ಸ್ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಈಲ್ಲಾಡಳಿತದ ಜಿಲ್ಲಾ ಪಂಚಾಯತನ ವಿವಿಧ ಇಲಾಖೆಗಳು ತಳಮಟ್ಟದಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡದಲ್ಲಿ ತಾಲ್ಲೂಕು ಅಥವಾ ಜಿಲ್ಲಾ ಮಟ್ಟಕ್ಕೆ ಯಾವುದೇ ಸಮಸ್ಯೆ ಇರುವುದಿಲ್ಲ. ಸಾರ್ವಜನಿಕರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಕ್ರೀಯಾಶೀಲರಾಗಿರಬೇಕು. ಅರ್ಜಿಗಳು ಸಲ್ಲಿಯಾದ ತಕ್ಷಣವೇ ತಮ್ಮ ಮಟ್ಟದಲ್ಲಿ ಪರಿಶೀಲಿಸಿ ಪರಿಹರಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಎಲ್ಲ ಸಹಾಯ ಸೌಲಭ್ಯಗಳನ್ನು ನಿಗದಿತ ಸಮಯದೊಳಗೆ ಒದಗಿಸಬೇಕೆಂದು ತಿಳಿಸಿದರು.
 ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮಾತನಾಡಿ, ಅಧಿಕಾರಿಗಳು ಸಕಾಲ ಹಾಗೂ ಐಪಿಜಿಆರ್‌ಎಸ್ ತಂತ್ರಾAಶದಲ್ಲಿ ಬಾಕಿಯಿರುವ ಅರ್ಜಿಗಳನ್ನು ತಕ್ಷಣವೇ ವಿಲೇವಾರಿ ಮಾಡುವಂತೆ ತಿಳಿಸಿದರು.
 ಬೀದರ ನಗರಸಭೆ 43 ಪ್ರಕರಣಗಳು ಬಾಕಿ ಇವೆ. ಸೇವಾ ಸಿಂಧು (ಎಸ್.ಸಿ./ಎಸ್.ಟಿ/ಓಬಿಸಿ) ಅಡಿ 181 ಪ್ರಕರಣಗಳು, ಸಹಕಾರ ಇಲಾಖೆಯ 25, ಕಾರ್ಮಿಕ ಇಲಾಖೆಯ 43, ಜಿಲ್ಲಾ ನೋಂದಣಿ 213, ಗ್ರಾಮಿಣ ಅಭಿವೃದ್ಧಿ ಪಂಚಾಯತರಾಜ್ 2, ಆರ್‌ಟಿಓ 15 ಸೇರಿದಂತೆ ಒಟ್ಟು 899 ವಿವಿಧ ಪ್ರಕರಣಗಳು ಬಾಕಿಯಿದ್ದು, ಅವುಗಳನ್ನು ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
 ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಮೊಹಮ್ಮದ ಶಕೀಲ, ಬೀದರ ವಿಶ್ವವಿದ್ಯಾಲಯದ ರಜಿಸ್ಟಾçರ್ ಸುರೇಖಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...