ಬೀದರ :- 2024ರ ಲೋಕಸಭಾ ಚುನಾವಣೆ ಮತ್ತು ಜೊತೆಯಲ್ಲಿ ನೆಡೆದ 4 ರಾಜ್ಯಗಳ ವಿಧಾನಸಭಾ ಚುನಾವಣೆಗಳ ಸಂಕ್ಷಿಪ್ತ ಡೇಟಾವನ್ನು ಆಯೋಗ ಬಿಡುಗಡೆ ಮಾಡಿದೆ. ವಿಶ್ವಾದ್ಯಂತ ಶಿಕ್ಷಣ ತಜ್ಞರು, ಸಂಶೋಧಕರು, ಚುನಾವಣಾ ವೀಕ್ಷಕರು ಸೇರಿದಂತೆ ಮತದಾರರಿಗೆ ಇದು ಅನುಕೂಲವಾಗಬಲ್ಲದು ಎಂದು ಭಾರತ ಚುನಾವಣಾ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.
ads
Search This Blog
Friday, 3 January 2025
2024ರ ಲೋಕಸಭಾ ಚುನಾವಣೆಯ ಕುರಿತು ವಿಶೇಷ ಲೇಖನ ವಿಶ್ವದ ಅತಿದೊಡ್ಡ ಚುನಾವಣೆಯ ಕುರಿತು ಭಾರತ ಚುನಾವಣಾ ಆಯೋಗದಿಂದ ದತ್ತಾಂಶ ಪ್ರಕಟ
ಸಮಾಜದ ಕಟ್ಟಕಡೆಯ ಮಗುವಿಗೂ ಶಿಕ್ಷಣ ದೊರೆಯಲಿ: ಶಶಿಧರ್ ಕೋಸಂಬೆ
ಬಳ್ಳಾರಿ : ಶಿಕ್ಷಣ ಮೂಲಭೂತ ಹಕ್ಕಾಗಿದ್ದು, ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009ರ ಅನ್ವಯ ಸಮಾಜದಲ್ಲಿನ 6-14 ವಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ದೊರೆಯಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ಹೇಳಿದರು.
Thursday, 26 December 2024
1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ್ ಶತಮಾನೊತ್ಸವ
ವೀರಸೌಧದಲ್ಲಿ ಗಾಂಧೀ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ
ಬೆಳಗಾವಿ : ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೊತ್ಸವದ ಅಂಗವಾಗಿ ನಗರದ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಗುರುವಾರ (ಡಿ.26) ಮಹಾತ್ಮಾ ಗಾಂಧೀಜಿಯವರ ನೂತನ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಅನಾವರಣಗೊಳಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ತದನಂತರ ವೀರಸೌಧದ ಆವರಣದಲ್ಲಿನ ಗಾಂಧೀ ಸ್ಮಾರಕ ಭವನದಲ್ಲಿನ ನವೀಕೃತ ಪೋಟೋ ಗ್ಯಾಲರಿಯನ್ನು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸಿದರು.
ಇದೇ ವೇಳೆ ವೀರಸೌಧ(ಕಾಂಗ್ರೆಸ್ ಬಾವಿ) ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಸಸಿ ನೆಟ್ಟು ನೀರೆರೆದರು.
ಈ ಸಂದರ್ಭದಲ್ಲಿ ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಎಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳಕರ್, ಶರಣಬಸಪ್ಪ ದರ್ಶನಾಪುರ, ಕೆ.ಎಚ್.ಮುನಿಯಪ್ಪ, ಶಾಸಕರಾದ ಆಸಿಫ್ (ರಾಜು) ಸೇಠ್, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಆರ್.ವಿ.ದೇಶಪಾಂಡೆ, ಸರಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ವಾರ್ತಾ ಇಲಾಖೆಯ ಕಾರ್ಯದರ್ಶಿ ಕಾವೇರಿ ಬಿ.ಬಿ., ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಒಂ ಸಿಇಓ ರಾಹುಲ್ ಶಿಂಧೆ, ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ, ಉಪ ನಿರ್ದೆಶಕರಾದ ಗುರುನಾಥ ಕಡಬೂರ ಮತ್ತಿತರರು ಉಪಸ್ಥಿತರಿದ್ದರು.
ಗಂಗಾಧರ್ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿ ಉದ್ಘಾಟನೆ ಸ್ಮಾರಕ ಭವನ ಉದ್ಘಾಟಿಸಿದ ಸಿ.ಎಂ ಸಿದ್ದರಾಮಯ್ಯ
ಬೆಳಗಾವಿ : "ಗಾಂಧಿ ಭಾರತ" ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿಯ ರಾಮತೀರ್ಥ ನಗರದಲ್ಲಿ ಗುರುವಾರ (ಡಿ.26) ಗಂಗಾಧರ ದೇಶಪಾಂಡೆ ಅವರ ಸ್ಮಾರಕ ಭವನ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.
ಸ್ಮಾರಕ ಭವನ ಅಂದಾಜು 15 ಗುಂಟೆ ಜಾಗೆಯಲ್ಲಿ 1.58 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಸ್ಥಳದಲ್ಲಿ ಸ್ಮಾರಕ ಭವನ, ದೇಶಪಾಂಡೆ ಅವರ ಪುತ್ಥಳಿ, ಫೋಟೋ ಗ್ಯಾಲರಿ, ಆವರಣದ ಕಾಂಪೌಂಡ್, ತಂತಿಬೇಲಿ, ಪೇವರ್ಸ್ ಹಾಗೂ ಉದ್ಯಾನವನ ನಿರ್ಮಿಸಲಾಗಿದೆ.
ಈ ಸಂದರ್ಭದಲ್ಲಿ ಕಾನೂನು, ನ್ಯಾಯ, ಮಾನವ ಹಕ್ಕುಗಳ, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಎಚ್.ಕೆ ಪಾಟೀಲ, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರು ವೀರಪ್ಪ ಮೊಯ್ಲಿ, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಆಸೀಫ್(ರಾಜು)ಸೇಠ, ಚಿಕ್ಕೋಡಿ-ಸದಲಗಾ ಶಾಸಕ ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ. ಧರಣಿ ದೇವಿ ಮಾಲಗತ್ತಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ , ಮಹಾನಗರ ಪಾಲಿಕೆ ಆಯುಕ್ತರಾದ ಶುಭಾ. ಬಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಜಂಟಿ ನಿರ್ದೇಶಕ ಕೆ. ಎಚ್ ಚನ್ನೂರು, ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಹಾಜರಿದ್ದರು.
ಸ್ವಾತಂತ್ರ್ಯ ಹೋರಾಟದಲ್ಲಿ ಗಂಗಾಧರ್ ರಾವ್ ದೇಶಪಾಂಡೆ ಪಾತ್ರ:
ಕರ್ನಾಟಕ ಸಿಂಹ ಎಂದೇ ಖ್ಯಾತಿ ಪಡೆದಿದ್ದ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದ ಹೆಮ್ಮೆಯ ಸುಪುತ್ರ, ಕೆಚ್ಚೆದೆಯ ಹೋರಾಟಗಾರ ಗಂಗಾಧರರಾವ್ ದೇಶಪಾಂಡೆ ಅವರೇ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಯಲು ಮತ್ತು ಗಾಂಧೀಜಿ ಅಧ್ಯಕ್ಷತೆ ವಹಿಸಲು ಕಾರಣೀಕರ್ತರು.
ಗಂಗಾಧರರಾವ್ ಅವರ ಮುತ್ಸದ್ದೀತನ, ಸಮರ್ಥ ನಾಯಕತ್ವದ ಫಲವಾಗಿ ಬೆಳಗಾವಿ ಇತಿಹಾಸದಲ್ಲಿ ದಾಖಲಾಯಿತು. ಅಂದು ಕಾಂಗ್ರೆಸ್ ಪಕ್ಷದಲ್ಲಿ ಜವಾಹರಲಾಲ್ ನೆಹರು ಅವರಿಗೆ ಸರಿಸಮಾನವಾದ ಅಧಿಕಾರ ಹೊಂದಿದ್ದರು. ಗಂಗಾಧರರಾವ್ ಅವರು ಮನಸ್ಸು ಮಾಡಿದ್ದರೆ ಸ್ವಾತಂತ್ರ್ಯಾ ನಂತರ ಭಾರತ ಸರ್ಕಾರದಲ್ಲಿ ಪ್ರಮುಖ ಸ್ಥಾನ ಪಡೆಯುತ್ತಿದ್ದರು. ಆದರೆ, ನನ್ನ ಹೋರಾಟ ಮತ್ತು ಸೇವೆ ದೇಶದ ಸ್ವಾತಂತ್ರ್ಯಕ್ಕೆ ಮಾತ್ರ ಸಿಮೀತ ಎಂದು ಹೇಳಿ ಆಧ್ಯಾತ್ಮಿಕತೆ ಕಡೆಗೆ ಸಾಗಿದ ನಿಸ್ವಾರ್ಥಿ.
ವೈಯಕ್ತಿಕ ವಿವರ:
ಬೆಳಗಾವಿ ತಾಲ್ಲೂಕಿನ ಹುದಲಿ ಗ್ರಾಮದ ಶ್ರೀಮಂತ ಮನೆತನದ ಬಾಲಕೃಷ್ಣ ಮತ್ತು ರಾಧಾಬಾಯಿ ದಂಪತಿಗಳ ಉದರದಲ್ಲಿ 1871ರ ಮಾರ್ಚ 31ರಂದು ಜನಿಸಿದ ಗಂಗಾಧರರಾವ್ ದೇಶಪಾಂಡೆ ಅವರು, ಮಾಧ್ಯಮಿಕ ಶಿಕ್ಷಣವನ್ನು ಬೆಳಗಾವಿ ಸರ್ದಾರ್ಸ್ ಹೈಸ್ಕೂಲ್ ನಲ್ಲಿ ಪಡೆದಿದ್ದಾರೆ. ಪುಣೆ ಡೆಕ್ಕನ್ ಕಾಲೇಜಿನಲ್ಲಿ ಪದವಿ ಮತ್ತು ಬಿಎ ಎಎಲ್ ಬಿ ಪೂರ್ಣಗೊಳಿಸಿದ್ದಾರೆ. ಪತ್ನಿ ಲಕ್ಷ್ಮೀಬಾಯಿ, ಪುತ್ರ ಬಾಲಕೃಷ್ಣ. 1960ರ ಜುಲೈ 30ರಂದು ಗಂಗಾಧರಾವ್ ಅವರು ನಿಧನರಾದರು.
1922ರಲ್ಲಿ ಚರಕ ಸಂಘ, 1937ರಲ್ಲಿ ಹುದಲಿಯಲ್ಲಿ ಗಾಂಧಿಸೇವಾ ಸಂಘ ಸ್ಥಾಪಿಸಿದ್ದರು. ಈಗಲೂ ಖಾದಿ ಗ್ರಾಮೋದ್ಯೋಗ ನೂರಾರು ಜನರಿಗೆ ಉದ್ಯೋಗ ಕೊಟ್ಟಿದೆ. 1920ರಲ್ಲಿ ಬೆಳಗಾವಿಯಲ್ಲಿ ಮುನ್ಸಿಪಲ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಆರಂಭದಲ್ಲಿ ಗಂಗಾಧರಾವ್ ಅವರು, ಗೋಪಾಲಕೃಷ್ಣ ಗೋಕಲೆ, ಬಾಲಗಂಗಾಧರ ಟಿಳಕರ ಅನುಯಾಯಿಯಾಗಿದ್ದರು. ಅವರು ಕಾಲವಾದ ಬಳಿಕ ಮಹಾತ್ಮಾ ಗಾಂಧೀಜಿ ಸಂಪರ್ಕಕ್ಕೆ ಬರುತ್ತಾರೆ. ಗಾಂಧೀಜಿ ಐವರು ಅತ್ಯಾಪ್ತರಲ್ಲಿ ಇವರು ಒಬ್ಬರಾಗುತ್ತಾರೆ. ಅಪ್ಪಟ ಗಾಂಧಿವಾದಿಯಾಗಿದ್ದ ಗಂಗಾಧರರಾವ್ ಖಾದಿ ಬಟ್ಟೆಯನ್ನೇ ಧರಿಸುತ್ತಿದ್ದರು. ಶ್ರೀಮಂತಿಕೆ ಇದ್ದರೂ ಸರಳ ಜೀವನ ನಡೆಸಿದ ಹೆಗ್ಗಳಿಕೆ ಇವರದ್ದು.
ಗಾಂಧೀಜಿ ಮನವೊಲಿಸಿದ ದೇಶಪಾಂಡೆ:
ಮಹಾತ್ಮ ಗಾಂಧೀಜಿ ಹಿಂದಿನ ಅಧಿವೇಶನದಲ್ಲಿ ಭಾಗಿಯಾಗಿರಲಿಲ್ಲ. ಅಲ್ಲದೇ ಅಧ್ಯಕ್ಷತೆ ವಹಿಸಲು ನಿರಾಕರಿಸಿದ್ದರು. ನಾನು ಅಧ್ಯಕ್ಷ ಇರಲಿ, ಬಿಡಲಿ. ಜನ ನನ್ನ ಚಳುವಳಿಯಲ್ಲಿ ಪಾಲ್ಗೊಳ್ಳುತ್ತಾರೆ ಎನ್ನುತ್ತಾರೆ. ಆದರೆ, ಗಂಗಾಧರರಾವ್ ಅವರು ಮಾತ್ರ ಬಿಡಲಿಲ್ಲ. ಗಾಂಧೀಜಿ ಮನವೊಲಿಸಿ ಅಧ್ಯಕ್ಷರಾಗುವಂತೆ ಮಾಡಿದ್ದು ಇತಿಹಾಸ. ಬೆಳಗಾವಿ ಅಧಿವೇಶನದಲ್ಲೂ ಜವಾಹರಲಾಲ್ ನೆಹರು ಮತ್ತು ಗಂಗಾಧರಾವ್ ದೇಶಪಾಂಡೆ ಪ್ರಧಾನ ಕಾರ್ಯದರ್ಶಿಯಾಗಿದ್ದರು.
ಹುಟ್ಟೂರಿಗೂ ಗಾಂಧೀಜಿ ಕರೆಸಿದ್ದರು:
ತಮ್ಮ ಹುಟ್ಟೂರು ಹುದಲಿಗೂ ಗಾಂಧೀಜಿ ಅವರನ್ನು ಗಂಗಾಧರಾವ್ ಕರೆಸಿದ್ದರು. ಏಳು ದಿನ ಅಲ್ಲಿಯೇ ಬಾಪು ವಾಸ್ತವ್ಯ ಹೂಡಿದ್ದರು. ಗಾಂಧಿ ಸೇವಾ ಸಂಘದ ಸಮ್ಮೇಳನ ಏರ್ಪಡಿಸಲಾಗಿತ್ತು. ಗಾಂಧೀಜಿ ಅವರ ಜೊತೆಗೆ ಡಾ.ಬಾಬು ರಾಜೇಂದ್ರಪ್ರಸಾದ, ಅಬ್ದುಲ್ ಗಫಾರ್ಖಾನ್ ಗಾಂಧಿ, ಸರ್ದಾರ್ ವಲ್ಲಭಬಾಯಿ ಪಟೇಲ್, ಶೌಕತ್ ಅಲಿ, ಸರೋಜಿನಿ ನಾಯ್ಡು, ಹಿರಿಯ ಸಾಹಿತಿಗಳಾದ ಬೆಟಗೇರಿ ಕೃಷ್ಣಶರ್ಮ, ಜಿ. ನಾರಾಯಣ ಸೇರಿ ಅನೇಕ ನಾಯಕರ ದಂಡೇ ಹುದಲಿಗೆ ಬಂದಿತ್ತು.
ಇನ್ನು ಭಾಷಾವಾರು ಪ್ರಾಂತ ರಚನೆ ವೇಳೆ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕು ಅಂತಾ ಗಂಗಾಧರರಾವ್ ದೇಶಪಾಂಡೆ ಧ್ವನಿ ಎತ್ತಿದ್ದರು.
Tuesday, 24 December 2024
ಯಲದಗುಂಡಿ ಶ್ರೀ ಪರಮೇಶ್ವರ ಜಾತ್ರಾ ಮಹೋತ್ಸವ - ಜಗತ್ತು ಪರಮೇಶ್ವರನ ಪ್ರವಾಸಿ ತಾಣ - ಹಾರಕೂಡ ಶ್ರೀ
ಬಸವಕಲ್ಯಾಣ : ಈ ಜಗತ್ತು ಸೃಷ್ಟಿಕರ್ತ ಪರಮೇಶ್ವರನ ಪ್ರವಾಸಿ ತಾಣವಾಗಿದ್ದು, ನಾವೆಲ್ಲ ಕೆಲ ದಿನಗಳವರೆಗೆ ಸೌಂದರ್ಯವನ್ನು ಅನುಭವಿಸಿ ಮತ್ತೆ ಹಿಂತಿರುಗಲು ಬಂದ ಪ್ರವಾಸಿಗರು ಎಂದು ಹಾರಕೂಡದ ಪೂಜ್ಯಶ್ರೀ ಡಾ. ಚನ್ನವೀರ ಶಿವಾಚಾರ್ಯರು ನುಡಿದರು.
ತಾಲೂಕಿನ ಯಲದಗುಂಡಿ ಗ್ರಾಮದ ಶ್ರೀ ಪರಮೇಶ್ವರ ಜಾತ್ರೆಯ ಅಂಗವಾಗಿ ಏರ್ಪಡಿಸಿದ ಧರ್ಮಸಭೆಯ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀಗಳು ಪ್ರಕೃತಿ ಸಹಜವಾಗಿ ಜನಿಸಿದ ಪ್ರತಿ ಮನುಷ್ಯ ಭವಚಕ್ರದಲ್ಲಿ ಸಿಲುಕಿ ನರಳದೆ ಸುಖ ಯಾತ್ರಿಕನಾಗಿ ಜೀವನ ಪಯಣ ಸಾಗಿಸಲು, ಮೋಹದ ಪರದೆ ಕಳಚಲು ಭಗವದ್ ದರ್ಶನ ಪಡೆಯಲು ನಿತ್ಯ ಸಂತುಷ್ಟನಾಗಿರುವಂತಹ ಕುಶಲ ಪ್ರಜ್ಞೆ ಬೆಳೆಸಿಕೊಳ್ಳಬೇಕು.
ದೇವನ ಅದ್ಭುತ ಚಿತ್ತಾರವನ್ನು ಕಂಡು ಆನಂದಿಸಬೇಕೆ ವಿನ: ತನ್ನದಾಗಬೇಕೆಂಬ ಹಪಾಹಪಿತನ ಇರಬಾರದು. ದೇವರ ಛತ್ರ ಮುಂದಿನ ಪೀಳಿಗೆಗೆ ವ್ಯವಸ್ಥಿತವಾಗಿ ಬಿಟ್ಟು ಹೋಗಬೇಕಾದ ಗುರುತರ ಜವಾಬ್ದಾರಿ ನಮ್ಮ ಮೇಲಿದೆ ಎಂಬುದನ್ನು ಪ್ರತಿಯೊಬ್ಬರೂ ಮನಗಾಣಲೇಬೇಕಾದ ಸಂಗತಿ.
ನಾವೆಲ್ಲ ಬಂದು ಹೋಗುವ ನೆಂಟರು ಎನ್ನುವುದಕ್ಕೆ ಪರಮೇಶ್ವರನ ಜಾತ್ರೆಯೇ ದೊಡ್ಡ ನಿದರ್ಶನ, ಎಲ್ಲರ ಜೀವನ ಯಾತ್ರೆ ಸಿರಿಸೌಖ್ಯದಿಂದ ಕೂಡಿರಲಿ ಎಂದು ಶುಭ ಹಾರೈಸಿದರು.
ತಾಲೂಕಿನ ಮಾನ್ಯ ಶಾಸಕರಾದ ಶರಣು ಸಲಗರ ಮಾತನಾಡಿ ಜಾತ್ರೆಗಳು ಮಾಡುವುದರ ಜೊತೆಗೆ ಮಕ್ಕಳಿಗೆ ಶಿಕ್ಷಣ ಹಾಗೂ ಸಂಸ್ಕಾರ ಕೊಡುವುದು ಅವಶ್ಯಕವಾಗಿದೆ.
ಜಾತ್ರೆಗಳಲ್ಲಿ ಸಾಮಾಜಿಕ ನಾಟಕಗಳ ಜೊತೆಗೆ ಧಾರ್ಮಿಕ ಹಾಗೂ ನೀತಿ ಪ್ರದಾನವಾದ ನಾಟಕಗಳು ಮಾಡುವುದರಿಂದ ಮಕ್ಕಳನ್ನು ಸುಸಂಸ್ಕೃತರನ್ನಾಗಿ ಮಾಡಬಹುದು ಎಂದು ನುಡಿದರು. ಹಿರೇನಾಗಾಂವನ ಜಯಶಾಂತಲಿಂಗ ಮಹಾಸ್ವಾಮಿಗಳು, ನೀರಾವರಿ ನಿಗಮ ಮಂಡಳಿ ಬೆಂಗಳೂರಿನ ನಿವೃತ್ತ ವ್ಯವಸ್ಥಾಪಕ ನಿರ್ದೇಶಕರಾದ ಮಲ್ಲಿಕಾರ್ಜುನ ಗುಂಗೆ, ಮುಖಂಡರಾದ ಶಿವಕುಮಾರ ಸೆಟಗಾರ, ಹುಮನಾಬಾದಿನ ಪಿಎಸ್ಐ ಸುರೇಶ ಚೌಹಾಣ ಮಾತನಾಡಿದರು.
ಬಸ್ವತತ್ವ ಪ್ರಚಾರಕರಾದ ಬಸವರಾಜ ಪಂಡಿತ, ಶಿಕ್ಷಕರಾದ ಮಲ್ಲಿನಾಥ ಹಿರೇಮಠ ಹಾರಕೂಡ, ಮುಖಂಡರಾದ ಬಾಬು ಹೊನ್ನಾನಾಯಕ, ಸಂಜು ಸುಗರೆ, ಸಂತೋಷ ಪಾಟೀಲ ಹಾರಕೂಡ, ಸಿದ್ರಾಮಪ್ಪ ಗುದಗೆ, ಸಿದ್ರಾಮಪ್ಪ ಕವಳೆ, ರತಿಕಾಂತ ಕೊಹಿನೂರ, ಸದಾನಂದ ಪಾಟೀಲ, ನಾಗೇಶ ಮಹಾಜನ ಮುಂತಾದವರು ಉಪಸ್ಥಿತರಿದ್ದರು. ಮಲ್ಲಪ್ಪ ಕೋಟೆ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು.
ಬುದ್ಧ, ಬಸವ, ಗಾಂಧಿ ಹಾಗೂ ಅಂಬೇಡ್ಕರ್ ನನಗೆ ಆದರ್ಶ – ಡಾ. ಬಿ.ಟಿ. ಲಲಿತಾ ನಾಯಕ್
ಬೆಂಗಳೂರು : ಬುದ್ಧ, ಬಸವ, ಗಾಂಧಿ ಹಾಗೂ ಅಂಬೇಡ್ಕರ್ ಅವರುಗಳೇ ನನಗೆ ಆದರ್ಶ ಎಂದು ಹಿರಿಯ ಸಾಹಿತಿ, ಚಿಂತಕರು ಹಾಗೂ ಮಾಜಿ ಸಚಿವರಾದ ಡಾ. ಬಿ. ಲಲಿತಾ ನಾಯಕ್ ಅವರು ತಿಳಿಸಿದರು.
ನಿಗದಿತ ಅವಧಿಯೊಳಗೆ ಸಾರ್ವಜನಿಕರ ಅರ್ಜಿಗಳನ್ನು ವಿಲೇವಾರಿಗೊಳಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ :- ಡಿಸೆಂಬರ್.19 ರಿಂದ 24 ರವರೆಗೆ ದೇಶಾದ್ಯಂತ ಗುಡ್ ಗರ್ನನ್ಸ್ ಉತ್ತಮ ಆಡಳಿತ ಆಚರಣೆ ಮಾಡಲಾಗುತ್ತಿದ್ದು, ಅಧಿಕಾರಿಗಳು ತಮ್ಮ ಹಂತದಲ್ಲಿಯೇ ನಿಗದಿತ ಅವಧಿ ಒಳಗಾಗಿ ಸಾರ್ವಜನಿಕರ ಅಹವಾಲುಗಳನ್ನು ವಿಲೇವಾರಿಗೊಳಿಸುವಂಎ ಜಿಲ್ಲಾಧಿಕಾರಿ ಶಿಲ್ಪಾ ಶಮಾ ತಿಳಿಸಿದರು.
ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!
ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...
.jpg)
-
ಹೈದರಾಬಾದ್ : ಇಂದು ಬೆಳಿಗ್ಗೆ ಬೀದರನಲ್ಲಿ ನಡೆದ ಎಟಿಎಂ ದರೋಡೆಕೋರರೆ ನಗರದ ಅಫ್ಜಲಗಂಜನಲ್ಲಿರುವ ರೋಷನ ಟ್ರಾವೆಲ್ ಕಛೆರಿಯಲ್ಲಿ ಪೊಲೀಸ್ ಮತ್ತು ದರೋಡೆಕೋರ ಮಧ್ಯೆ ಗುಂಡಿನ ...
-
ಬೀದರ್: ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆಸಿರುವ ಘಟನೆಯೊಂದು ಬೀದರ್ನ ಎಸ್ಬಿಐ ಮುಖ್ಯ ಕಚೇರಿ ಮುಂದೆ ಗುರುವಾರ ನಡೆದಿದೆ. ...
-
ಶೋಧವಾಣಿ ಜಾಲಲೋಕ ಹೈದರಾಬಾದ್ : ಸಂಘಟಿತ ಹೋರಾಟ ಇಂದಿನ ದಿನಮಾನದ ಜರೂರು ಹೊರನಾಡು ಗಡಿನಾಡಿನ ಕನ್ನಡಿಗರ ಹಿತಕಾಯಲು ಯಾರೂ ಇಲ್ಲವೆನ್ನುವ ಅನಾಥಪ್ರಜ್ಞೆ ಸರಿಯಲ್ಲ. ಭಾಷೆಯ...