ads

Search This Blog

Saturday, 4 January 2025

ಕನ್ನಡಿಗರ ವರ್ತಮಾನದ ಸಂಕಷ್ಟಕ್ಕೆ ಗಡಿ ರೇಖೆಗಳಿಲ್ಲ - ಡಾ.ಪುರುಷೋತ್ತಮ ಬಿಳಿಮಲೆ

 

ಶೋಧವಾಣಿ ಜಾಲಲೋಕ

ಹೈದರಾಬಾದ್ : ಸಂಘಟಿತ ಹೋರಾಟ ಇಂದಿನ ದಿನಮಾನದ ಜರೂರು ಹೊರನಾಡು ಗಡಿನಾಡಿನ ಕನ್ನಡಿಗರ ಹಿತಕಾಯಲು ಯಾರೂ ಇಲ್ಲವೆನ್ನುವ ಅನಾಥಪ್ರಜ್ಞೆ ಸರಿಯಲ್ಲ. ಭಾಷೆಯ ಕುರಿತಂತೆ ಹೆಮ್ಮೆಯನ್ನು ಹೊಂದಿರುವ ಕನ್ನಡಿಗರು ಒಳನಾಡಿನಲ್ಲಿಯೂ ಸಂಕಷ್ಟದಲ್ಲಿದ್ದು, ಕನ್ನಡದ ಸಮಸ್ಯೆಗಳನ್ನು ಎಲ್ಲ ಕನ್ನಡಿಗರು ಸಂಘಟಿತರಾಗಿ ಪರಿಹರಿಸಿಕೊಳ್ಳಬೇಕಾದ ಸಂದರ್ಭ ಇದಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಭಿಪ್ರಾಯ ವ್ಯಕ್ತಪಡಿಸಿದರು.  ಹೊರರಾಜ್ಯದಲ್ಲಿ ನಿಜವಾದ ಕನ್ನಡ ಉಳಿಯುತ್ತಿದೆ. ಹಾಗೂ ಕನ್ನಡ ಭಾಷೆಯನ್ನು ದೇವರಿಗೆ ಕಲಿಸಿದವರು ವಚನಕಾರರು ಎಂದು ಕನ್ನಡ ಭಾಷೆಯ ಬಗ್ಗೆ ಹೆಮ್ಮೆಯ ವಿಷಯ ಎಂದು ಡಾ ಪುರುಷೋತ್ತಮ ಬಿಳಿಮಲೆ ನುಡಿದರು. ನಾವು ವೇಗವಾಗಿ ಬೆಳೆಯುತ್ತಿರುವ ಸಂದರ್ಭಗಳಲ್ಲಿ ನಾವು ಹಿಂದಿನ ನೆನಪುಗಳ ಮಾಡಿಕೊಳ್ಳುವ ಇದು ಸಂದರ್ಭ ಹೀಗಾಗಿ ನಮ್ಮ ಕನ್ನಡ ಭಾಷೆಯ ಬೆಳವಣಿಗೆಯ ವೇಗವನ್ನು 3 ಪ್ರತಿಶತ ಇರುವುದು ಕಳವಳಕಾರಿ ವಿಷಯವಾಗಿದೆ ಎಂದರು.



ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಶನಿವಾರ ಹೈದರಾಬಾದಿನ ಉಸ್ಮಾನಿಯ ವಿಶ್ವವಿದ್ಯಾಲಯದ ಸಿಲ್ವರ್ ಜೂಬಿಲಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2023-24ನೇ ಸಾಲಿನ ಕನ್ನಡ ಮಾಧ್ಯಮ ಪ್ರಶಸ್ತಿ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ದೇಶದ ಯಾವುದೇ ಭಾಗದಲ್ಲಿ ವಾಸಿಸುತ್ತಿರುವ ಕನ್ನಡಿಗರ ಹಿತಕಾಯಲು ಸಿದ್ಧವಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ತನ್ನ ಸಂಪರ್ಕಕೊಂಡಿಯ ಕೆಲಸವನ್ನು ಮುಂದುವರೆಸಲಿದೆ ಎಂದರು.


ರಾಜ್ಯದಲ್ಲಿ ಏಳು ಸಾವಿರ ಏಕೋಪಾಧ್ಯಾಯ ಶಾಲೆಗಳು, ಐವತ್ತೈದು ಸಾವಿರ ಶಿಕ್ಷಕರ ಖಾಲಿ ಹುದ್ದೆಗಳು, ಆಂಗ್ಲ ಮಾಧ್ಯಮ ಶಾಲೆಗಳಾಗಿ ಪರಿವರ್ತಿತವಾಗುತ್ತಿರುವ ಸರ್ಕಾರಿ ಕನ್ನಡ ಶಾಲೆಗಳನ್ನು ಗಮನಿಸಿದಲ್ಲಿ ಕನ್ನಡದ ಮುಂದಿನ ದಿನಗಳ ಸ್ಥಿತಿ ಕಳವಳಕಾರಿ ಎಂದು ಆತಂಕ ವ್ಯಕ್ತಪಡಿಸಿದ ಡಾ.ಬಿಳಿಮಲೆ, ಇದು ಪ್ರವಾಹದ ವಿರುದ್ಧ ಈಜುವ ಕೆಲಸವಾಗಿದ್ದು, ಸಂಘಟಿತ ಹೋರಾಟವೇ ಪರಿಣಾಮಕಾರಿಯಾದ ಫಲಿತಾಂಶವನ್ನು ಒದಗಿಸಲು ಸಾಧ್ಯವೆಂದರು.



ದೇಶದ ಯಾವುದೇ ಮೂಲೆಯಲ್ಲಿ ವಾಸಿಸುತ್ತಿರುವ ಕನ್ನಡಿಗ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ವಸತಿನಿಲಯಗಳಲ್ಲಿ ಉಚಿತ ಪ್ರವೇಶ ಕರ್ನಾಟಕದಲ್ಲಿ ತಮ್ಮ ವ್ಯಾಸಂಗವನ್ನು ಮುಂದುವರೆಸ ಬಯಸುವ ಗಡಿನಾಡು, ಹೊರನಾಡು ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಹಿಂದುಳಿದ ವರ್ಗಗಳ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಯಾವುದೇ ನಿರ್ಬಂಧಗಳನ್ನು ಹೇರದೆ ಅವಕಾಶ ಕಲ್ಪಿಸಿಕೊಡಲು ಈಗಾಗಲೇ ರಾಜ್ಯ ಸರ್ಕಾರವು ತೀರ್ಮಾನಿಸಿದೆ ಎಂಬ ಮಾಹಿತಿಯನ್ನು ಹಂಚಿಕೊಂಡ ಡಾ.ಬಿಳಿಮಲೆ, ಈ ಕುರಿತಂತೆ ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪನವರು ತಮಗೆ ಸ್ಪಷ್ಟ ಭರವಸೆಯನ್ನು ನೀಡಿದ್ದು, ಮುಂಬರುವ ಶೈಕ್ಷಣಿಕ ಸಾಲಿನಲ್ಲಿ ಇದು ಅನುಷ್ಠಾನಗೊಳ್ಳಲಿದೆ ಎಂದರು




ಆಂಗ್ಲ ಭಾಷೆಯ ವ್ಯಾಮೋಹ ಬೇಡ- ಡಾ. ಬೈರಮಂಗಲ ರಾಮೇಗೌಡ

ಕನ್ನಡದ ಪ್ರಾಚೀನತೆಗೆ ಮತ್ತು ಅದರ ಶ್ರೀಮಂತಿಕೆಗೆ ಯಾವುದೇ ಸಾಟಿಯಲ್ಲದ ಇಂಗ್ಲಿಷ್ ಭಾಷೆಯನ್ನು ಓಲೈಸುವ ವಾತಾವರಣ ಎಲ್ಲ ಕಡೆ ಸೃಷ್ಟಿಯಾಗಿರುವುದು ದುರದೃಷ್ಟಕರವೆಂದ ಸಾಹಿತಿ ಡಾ.ಬೈರಮಂಗಲ ರಾಮೇಗೌಡ, ಎಲ್ಲ ಭಾಷೆಗಳಿಗೆ ಕಂಟಕಪ್ರಾಯವಾಗಿರುವ ಇಂಗ್ಲಿಷ್ ಅನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ವಿಶೇಷ ಮಹತ್ವ ಹೊಂದಿದೆ. ಕನ್ನಡ ಭಾಷೆಯ ಜೀವಂತಿಕೆಯನ್ನು ಉಳಿಸುವ ಮೂಲಕ ಮುಂದಿನ ಪೀಳಿಗೆಗೆ ಅದನ್ನು ದಾಟಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತದೆ ಎಂದರು. 


ಕನ್ನಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಕಬ್ಬಿಣದ ಕಡಲೆಯಲ್ಲ -ಶ್ರೀ ರಾಜಶೇಖರ .ಎನ್

ಹೈದರಾಬಾದ್ ನ ಕೇಂದ್ರೀಯ ಪತ್ತೇದಾರಿ ತರಬೇತಿ ಸಂಸ್ಥೆಯ ನಿರ್ದೇಶಕ ಶ್ರೀ ರಾಜಶೇಖರ .ಎನ್ (ಭಾ.ಪೋ.ಸೇ.) ರವರು, ಕನ್ನಡ ಮಾಧ್ಯಮದಲ್ಲಿ ಓದಿದರೆ ಉನ್ನತ ವ್ಯಾಸಂಗವಾಗಲಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಲಿ ಸಾಧ್ಯವಿಲ್ಲವೆನ್ನುವ ನಂಬಿಕೆಯನ್ನು ಮಕ್ಕಳು ಮತ್ತು ಪೋಷಕರು ಬಿಡಬೇಕು. ಕನ್ನಡದ ಮೂಲಕವೂ ಯಶಸ್ಸು ಸಾಧ್ಯವೆನ್ನುವುದಕ್ಕೆ ಮಾದರಿಯಾಗಿ ತಾನೇ ಇದ್ದೇನೆಂದರು.


ಇಂದು ಸಾಕ್ಷಿಯಾಗಿದ್ದೇನೆ. ಮಕ್ಕಳು ಕನ್ನಡ ಮಾಧ್ಯಮ ಎಂಬ ಕಿಳರಿಮೆಯನ್ನು ಮನಸ್ಸಿನಿಂದ ಕಿತೊಗೆಯಬೇಕು. ಕನ್ನಡ ಭಾಷೆಯಲ್ಲಿ ನೀವು ಓದಿದರೆ ಏನೆಲ್ಲವೂ ಸಾಧಿಸಲು ಸಾಧ್ಯವಾಗುತ್ತದೆ. ವಚನ ಕಾರರು ಕನ್ನಡ ಭಾಷೆಯನ್ನು ಜನಸಾಮಾನ್ಯರ ಭಾಷೆಯಾಗಿ ಮಾಡಿದರು. ಮನೆಯೊಳಗೆ ಮನೆಯೊಡೆಯ ಇದ್ದಾನೋ ಇಲ್ಲವೋ ಎಂಬ ಬಸವೇಶ್ವರ ವಚನವನ್ನು ಉಲ್ಲೇಖಿಸಿದರು. ಕನ್ನಡ ಭಾಷೆಯು ಸರಳ ಸುಲಭವಾದ ಭಾಷೆಯಾಗಿದೆ ಕವಿಯು ಹೇಳುವಂತೆ ಸುಲಿದ ಬಾಳೆಯ ಹಣ್ಣಿನಂತೆ ಕನ್ನಡ ಭಾಷೆ ಎಂದು ರಾಜಶೇಖರ ನುಡಿದರು. 

ಹಾಗೆ ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಲ್ಲಿ ಧೈರ್ಯ ಸಾಹಸ ಒಳಗೊಂಡಿರುತ್ತದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸುವ ಎದೆಗಾರಿಕೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮಾತ್ರ ಇರುವುದು.. ಹೀಗಾಗಿ ವಿದ್ಯಾರ್ಥಿಗಳು ದಿನನಿತ್ಯದಲ್ಲಿ ಒಂದು ಶಿಕ್ಷಣ ಮಾಡುವುದು. ಪ್ರತಿನಿತ್ಯ ದಿನಪತ್ರಿಕೆ ಓದುವುದು. ಟಿವಿಯಲ್ಲಿ ಪ್ರಸಾರವಾಗುವ ವರದಿಯನ್ನು ನೋಡುವುದರಿಂದ ನೀವು ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಉದ್ಯೋಗ ಪಡೆದುಕೊಳ್ಳಬಹುದು ಹೀಗಾಗಿ ಕಿಳರಿಮೆಯನ್ನು ಮನಸ್ಸಿನಿಂದ ತೆಗೆದು ಹಾಕಿ ನಿರಂತರವಾಗಿ ಅಧ್ಯಯನ ಮಾಡಿ ಎಂದು ಕಿವಿ ಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಎಸ್.ಎಸ್.ಸಿ ಹಾಗೂ ಎಚ್.ಎಸ್.ಸಿ ತರಗತಿಗಳನ್ನು ಕನ್ನಡ ಮಾಧ್ಯಮದಲ್ಲಿ ಅಭ್ಯಸಿಸಿ ಅತಿಹೆಚ್ಚು ಅಂಕಗಳಿಸಿದ ಆಂಧ್ರ ಪ್ರದೇಶ ರಾಜ್ಯದ 52 ಹಾಗೂ ತೆಲಂಗಾಣ ರಾಜ್ಯದ 17 ವಿದ್ಯಾರ್ಥಿಗಳು ಸೇರಿ 69 ವಿದ್ಯಾರ್ಥಿಗಳಿಗೆ ನಗದು ಪ್ರಶಸ್ತಿ ನೀಡಿ ಪ್ರೋತ್ಸಾಹಿಸಲಾಯಿತು.


ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯ ಶ್ರೀ ಟಿ. ತಿಮ್ಮೇಶ್, ಡಾ.ರವಿಕುಮಾರ್ ನೀಹ, ಹೈದರಾಬಾದ್ ಉಸ್ಮಾನಿಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಂ.ಲಿಂಗಪ್ಪ ಗೋನಾಳ್, ತೆಲಂಗಾಣ ಘಟಕದ ಕಸಾಪ ಅಧ್ಯಕ್ಷ ಡಾ. ವಿಠ್ಠಲ ಜೋಶಿ, ಗಡಿನಾಡು ಕನ್ನಡ ಸಂಘ (ಕೃಷ್ಣಾ) ಗೌರವಾಧ್ಯಕ್ಷ ಶ್ರೀ ಎಸ್.ರಾಮಲಿಂಗಪ್ಪ, ಅನಂತಪುರ ಜಿಲ್ಲೆಯ ಜಿಲ್ಲಾ ಪರಿಷತ್ ಪ್ರೌಢಶಾಲೆ ಶಿಕ್ಷಕ ಶ್ರೀ ಗಿರಿಜಾಪತಿ ಮಠ್ ಮಾತನಾಡಿದರು,  ಉಪನ್ಯಾಸಕ ಶ್ರೀ ಎಲ್. ಅಕ್ಷಯ್ ಕುಮಾರ್, ಕರ್ನಾಟಕ ಸಾಹಿತ್ಯ ಮಂದಿರದ ಕಾರ್ಯದರ್ಶಿ ನರಸಿಂಹ ಮೂರ್ತಿ ಜೋಯಿಸ.  ಹಾಜರಿದ್ದರು. ಹೈದರಾಬಾದ್ ಕನ್ನಡಿಗರ ಕಲ್ಯಾಣ ಅಭಿವೃದ್ಧಿ ಸಂಘದ ಅಧ್ಯಕ್ಷ ಶ್ರೀ ಧರ್ಮೇಂದ್ರ ಪೂಜಾರಿ ಬಗ್ದೂರಿ ವಂದಿಸಿದರು. ಪರಿಮಳ ದೇಶಪಾಂಡೆ ನಿರೂಪಿಸಿದರು. ಸಮಾರಂಭದಲ್ಲಿ ಡಾ. ವಿನಯ ನಾಯರ ಅವರಿಂದ ಸುಗಮ ಸಂಗೀತ ನಡೆಯಿತು. ಕನ್ನಡ ಗೀತೆಗೆ  ಚನ್ನರಾಯಪಟ್ಟಣದ ಬಿ.ವಿ. ಶೈಲಜಾ ಮತ್ತು ತಂಡದಿಂದ ಅದ್ಭುತ ನೃತ್ಯ ಪ್ರದರ್ಶನ ನೀಡಿದರು.

Friday, 3 January 2025

2025ನೇ ಸಾಲಿನ ವರ್ಷದ ಕನ್ನಡಿಗ ಪ್ರಶಸ್ತಿಗೆ ಸಂಗಮೇಶ ಎನ್ ಜವಾದಿ ಆಯ್ಕೆ

ಬೆಂಗಳೂರು : ಸರಳ ಸಜ್ಜನಿಕೆಯ ವ್ಯಕ್ತಿತ್ವದವರು,  ಕಲ್ಯಾಣ ಕರ್ನಾಟಕದ ಹೆಮ್ಮೆಯ ಸಾಹಿತಿಗಳು, ಸಂವೇದನಾಶೀಲ ಬರಹಗಾರರು , ವೈಚಾರಿಕ ಚಿಂತಕರು, ಅಂಕಣಕಾರರು, ಪತ್ರಕರ್ತರು, ಸಂಘಟಕರು , ಪರಿಸರ ಸಂರಕ್ಷಕರು, ಹೋರಾಟಗಾರರು, ಸಾಂಸ್ಕೃತಿಕ ಸಂಘಟಕರಾದ ಸಂಗಮೇಶ ಎನ್ ಜವಾದಿ ರವರನ್ನು 2025ನೇ ಸಾಲಿನ ವರ್ಷದ ಕನ್ನಡಿಗ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಸಂಯುಕ್ತ ರಂಗ ಬೆಂಗಳೂರು ಅಧ್ಯಕ್ಷ ಹೆಚ್ ಸದಾಶಿವ ತಿಳಿಸಿದರು.

 


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು  ಜವಾದಿಯವರ ವಿಶಿಷ್ಟ ಪ್ರಗತಿಪರ ವಿಚಾರಧಾರೆಗಳ ಸಂವೇದನ ಶೀಲತೆಯಿಂದ ಈ ನಾಡಿನಲ್ಲಿ ತಮ್ಮದೇ ಆದಂತ ವೈಚಾರಿಕ ಛಾಪು ಮೂಡಿಸಿದ ಹೊಸ ತಲೆಮಾರಿನ ಬರಹಗಾರರು,ಚಿಂತಕರು.
ಮೂಲತ ಸಾಮಾಜಿಕ ಸೇವಕರು, ಪರಿಸರ ಸಂರಕ್ಷಕರು, ಹೋರಾಟಗಾರರಾಗಿ ಗುರುತಿಸಿಕೊಂಡರೂ ಅದರಾಚೆಗೆ ವೈಜ್ಞಾನಿಕ ಲೇಖನಗಳನ್ನು, ಜೀವನಚರಿತ್ರೆ ವಿಮರ್ಶೆ ಸಂಶೋಧನೆಗಳಲ್ಲೂ ಕಾರ್ಯನಿರ್ವಹಿಸಿ ಬಹುಶ್ರುತ ಬರಹಗಾರರು ಎನಿಸಿದ್ದಾರೆ. ಸತ್ಯ ತತ್ವ ಪರ ನೆಲೆಗಳಲ್ಲಿ  ವ್ಯಾಖ್ಯಾನ ಮಾಡುವ ಮುಖಾಂತರ ಪ್ರಖರ ವಿಚಾರವಾದಿ ಎನಿಸಿದ್ದಾರೆ. ಒಂದು ದಶಕಗಳಿಂದ ಸಾಹಿತ್ಯ ರಚನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದುಡಿಯುತ್ತಿದ್ದಾರೆ. ಅವರಿಗೆ ಸಂದ ಪ್ರಶಸ್ತಿ ಪುರಸ್ಕಾರ ಬಹುಮಾನಗಳು ಅನೇಕ.  ಶ್ರೀಯುತ ಸಂಗಮೇಶ ಎನ್ ಜವಾದಿ ಅವರು ಅನೇಕ ಸಾಹಿತ್ಯ,ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರಗಳ ಪದಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದ್ದಾರೆ ಮತ್ತು ಪ್ರಸ್ತುತ ನಿರ್ವಹಣೆ ಮಾಡುತ್ತಿದ್ದಾರೆ. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಬೀದರ್ ಜಿಲ್ಲಾಧ್ಯಕ್ಷ, ರಾಷ್ಟ್ರೀಯ ದೇಹಾಂಗದಾನ ಜಾಗೃತಿ ಸಮಿತಿ ಬೀದರ ಜಿಲ್ಲೆಯ ಅಧ್ಯಕ್ಷರಾಗಿ, ಬೀದರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಹಾಗೂ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೀದರ್ ಜಿಲ್ಲೆಯ ಕಾರ್ಯದರ್ಶಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. 
 
ಕವಿತೆ , ಲೇಖನ, ಅಂಕಣ, ವೈಜ್ಞಾನಿಕ ವಿಮರ್ಶೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಂಗಮೇಶ ಎನ್ ಜವಾದಿ  ಅವರು ವೈಚಾರಿಕ ಲೇಖನಗಳು ಬರೆಯುವ ಮೂಲಕ ತಮ್ಮ ಛಾಪನ್ನು ಮೂಡಿಸಿದ್ದಾರೆ.ಈದಿಗ ಇವರ ಎರಡು ದಶಕಗಳ ಜನಪರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಕರ್ನಾಟಕ ಸಂಯುಕ್ತ ರಂಗ ಬೆಂಗಳೂರು ರವರು ಕೊಡುಮಾಡುವ 2025ನೇ ಸಾಲಿನ ವರ್ಷದ ಕನ್ನಡಿಗ ಪ್ರಶಸ್ತಿಗೆ ಸಂಗಮೇಶ ಎನ್ ಜವಾದಿ ರವರನ್ನು ಆಯ್ಕೆ ಮಾಡಲಾಗಿದೆ.  
ದಿ.08-01-2025 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಐತಿಹಾಸಿಕ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.

ಮಲ್ಲಣ್ಣ ದೇವರ ಜಾತ್ರೆಗೆ ಸಂಭ್ರಮದ ತೆರೆ

ಬೀದರ್: ಭಾಲ್ಕಿ ತಾಲ್ಲೂಕಿನ ಖಾನಾಪುರ ಗ್ರಾಮದಲ್ಲಿ ಒಂದು ತಿಂಗಳ ಮಲ್ಲಣ್ಣ ದೇವರ ಜಾತ್ರಾ ಮಹೋತ್ಸವ ಶುಕ್ರವಾರ ಸಂಭ್ರಮದ ಮಧ್ಯೆ ತೆರೆ ಕಂಡಿತು.

ಜಾತ್ರೆಯ ಕೊನೆಯ ದಿನ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ದೇಗುಲದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ವಿವಿಧೆಡೆಯ ಅಪಾರ ಭಕ್ತರು ದೇವರ ದರ್ಶನ ಪಡೆದರು.


ಭಾಲ್ಕಿ ತಾಲ್ಲೂಕಿನ ಖಾನಾಪುರದ ಮಲ್ಲಣ್ಣ ದೇವರ ಜಾತ್ರೆಯ ಅಂತಿಮ ದಿನವಾದ ಶುಕ್ರವಾರ ಪೂಜೆ ಕಾರ್ಯಕ್ರಮ ನೆರವೇರಿತು

ಆಧುನಿಕ ಹಾಗೂ ಪಾರಂಪರಿಕ ವೈದ್ಯ ಪದ್ದತಿಯ ಮಿಶ್ರಣದಿಂದ ಮಾನಸಿಕ ಕಾಯಿಲೆಗಳ ಚಿಕಿತ್ಸೆ ಫಲಕಾರಿ – ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು : ಮನುಷ್ಯ ಆರೋಗ್ಯಕರ ಮನಸ್ಸನ್ನು ಹೊಂದಿದ್ದಲ್ಲಿ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುವುದರಲ್ಲಿ ಸಂದೇಹವಿಲ್ಲ. ಆಧುನಿಕ ಮತ್ತು ಪಾರಂಪರಿಕ ವೈದ್ಯ ಪದ್ದತಿಗಳ ಮಿಶ್ರಣದಿಂದಾಗಿ ಮಾನವನ ಮಾನಸಿಕ ಕಾಯಿಲೆಗಳಿಗೆ ನೀಡುವ ಚಿಕಿತ್ಸೆ ಫಲಕಾರಿಯಾಗುವುದು ಎಂದು ಭಾರತದ ಗೌರವನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ತಿಳಿಸಿದರು.



ಇಂದು ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ನಿಮ್ಹಾನ್ಸ್ ಸುವರ್ಣ ಮಹೋತ್ಸವ ಆಚರಿಸುತ್ತಿರುವುದು ಹೆಮ್ಮೆ ತಂದಿದೆ. ಇಡೀ ದೇಶದಲ್ಲಿಯೇ ಇದು ಒಂದು ಉತ್ಕøಷ್ಟ ಸಂಸ್ಥೆಯಾಗಿ ಹೆಸರು ಮಾಡಿದೆ ಎಂದರು.

ಶಿಕ್ಷಣ, ಸಂಶೋಧನೆ,  ರೋಗಿಗಳ ಚಿಕಿತ್ಸೆ, ಪುರ್ನವಸತಿ ಕಲ್ಪಿಸುವ ನಿಟ್ಟಿನಲ್ಲಿ ನಿಮಾನ್ಸ್ ಸಂಸ್ಥೆಯು ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿದೆ. ದೇಶದಲ್ಲಿ 53 ಟೆಲಿ ಮಾನಸ್ ಸಹಾಯವಾಣಿ ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ನಿಮ್ಹಾನ್ಸ್‍ಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ನೆಲ್ಸನ್ ಮಂಡೇಲಾ ಪ್ರಶಸ್ತಿ ಸಹ ಲಭಿಸಿರುವುದು ಸಂತೋಷಕರ ವಿಷಯವಾಗಿದೆ ಎಂದರು.

ಯೋಗ ಹಾಗೂ ಆರ್ಯುವೇದ ಪದ್ದತಿಗಳು ಮಾನಸಿಕ ವ್ಯಾಧಿಗಳನ್ನು ಹತೋಟಿಗೆ ತರುವಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿತ್ತಿವೆ. ನಾವು ಮನಸ್ಸನ್ನು ಸಮಚಿತ್ತದಿಂದ ಇಟ್ಟುಕೊಳ್ಳಬೇಕು. ಇಂದು ಗೃಹಣಿಯರು, ಉದ್ಯೋಗಸ್ಥರು, ವಿದ್ಯಾರ್ಥಿಗಳು, ವಯೋವೃದ್ಧರು ತಮ್ಮದೇ ಆದ ಮಾನಸಿಕ ಒತ್ತಡದಿಂದ ಬಳಲುತ್ತಿದ್ದಾರೆ. ಕೋವಿಡ್ – 19ರ ನಂತರ ಜನರಿಗೆ ಮಾನಸಿಕ ಒತ್ತಡಗಳು ಹೆಚ್ಚಿವೆ. ನಿಮಾನ್ಸ್‍ನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರಲ್ಲಿ ಹೆಚ್ಚು ಮಹಿಳೆಯರೇ ಇರುವುದು ಸಂತಸದ ಸಂಗತಿ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ನಿಮ್ಹಾನ್ಸ್‍ನಲ್ಲಿ ಕೇಂದ್ರೀಯ ಪ್ರಯೋಗಾಲಯ ಸಂಕೀರ್ಣ, ವಿಶೇಷ ಮನೋಶಾಸ್ತ್ರ ಬ್ಲಾಕ್, ಭೀಮಾ ಹಾಸ್ಟೆಲ್, ಅತ್ಯಾಧುನಿಕ ರೋಗ ಪತ್ತೆ ಸೌಲಭ್ಯಗಳ ಸುಧಾರಿತ ಐಟಿಎಂ, ಆರ್‍ಐ ಸ್ಕ್ಯಾನರ್ ಮತ್ತು ಅತ್ಯಾಧುನಿಕ ಡಿ.ಎನ್.ಎ ವ್ಯವಸ್ಥೆ ಘಟಕ ಮುಂತಾದುವುಗಳನ್ನು ಗೌರವಾನ್ವಿತ ರಾಷ್ಟ್ರಪತಿಗಳು ಉದ್ಘಾಟಿಸಿದರು.

ಮಾನಸಿಕ ಆರೋಗ್ಯ ಹಾಗೂ ನರ ರೋಗಗಳ ಕ್ಷೇತ್ರದಲ್ಲಿ ನಿಮಾನ್ಸ್ ಸಂಸ್ಥೆಯಿಂದ ಅಪರಿಮಿತ ಸಾಧನೆ – ಮುಖ್ಯಮಂತ್ರಿ ಸಿದ್ದರಾಮಯ್ಯ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ ನಿಮ್ಹಾನ್ಸ್ ಐದು ದಶಕಗಳಿಂದ ಮಾನಸಿಕ ಆರೋಗ್ಯ ಹಾಗೂ ನರರೋಗಗಳ ಕ್ಷೇತ್ರದಲ್ಲಿ ಅಪರಿಮಿತ ಸಾಧನೆ ಮಾಡಿದೆ, ನಿಮಾನ್ಸ್ ಮಾನಸಿಕ ಆರೋಗ್ಯ ಮತ್ತು ಶಿಕ್ಷಣಕ್ಕೆ ಮೀಸಲಾದ ಭಾರತದ ಪ್ರಪ್ರಥಮ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮಾನಸಿಕ ರೋಗ, ರೋಗಿ ಹಾಗೂ ಆರೈಕೆಯ ಕುರಿತಾದ ಜನರ ನಕಾರಾತ್ಮಕ ದೃಷ್ಟಿಕೋನವನ್ನು ನಿವಾರಿಸುವಲ್ಲಿ ನಿಮಾನ್ಸ್ ಶ್ರಮಿಸುತ್ತಿದೆ ಎಂದು ತಿಳಿಸಿದರು.




ಮೆದುಳು, ನರಗಳ ಖಾಯಿಲೆಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವಲ್ಲಿ ನಿಮಾನ್ಸ್ ಸಂಸ್ಥೆ ಹೆಸರುವಾಸಿಯಾಗಿದೆ. ರಾಜ್ಯದಲ್ಲಿ ಟೆಲಿ ಮಾನಸ್ ಸಹಾಯವಾಣಿ ಯಶಸ್ವಿಯಾಗಿದ್ದು, ದೂರವಾಣಿ ಆಪ್ತ ಸಮಾಲೋಚನೆ ಮೂಲಕ ಸುಮಾರು 17 ಲಕ್ಷ ಜನರು ಪ್ರಯೋಜನ ಪಡೆದಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಸಹ ನರರೋಗ ಮತ್ತು ಇತರ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ತಜ್ಞರ ಸೇವೆಯನ್ನು ವಿಸ್ತರಿಸಲಾಗಿದೆ. ಸರ್ಕಾರವು ನಿಮ್ಹಾನ್ಸ್ ಸಂಸ್ಥೆಯ ಕಾರ್ಯನಿರ್ವಹಣೆಗಾಗಿ ಪ್ರತಿ ವರ್ಷ 137 ಕೋಟಿ ರೂಪಾಯಿಗಳನ್ನು ಒದಗಿಸುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಲದ ಮರ ಪೌಂಡೇಷನ್ ಸಹಯೋಗದಲ್ಲಿ ನಗರದ ಸಿ.ವಿ. ರಾಮನ್ ಆಸ್ಪತ್ರೆಯಲ್ಲಿ 25 ಹಾಸಿಗೆ ಸಾಮಥ್ರ್ಯದ ತುರ್ತು ಚಿಕಿತ್ಸೆ ಮತ್ತು ರಿಕವರಿ ಕೇಂದ್ರದಲ್ಲಿ ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವ ಬಡವರಿಗೆ ಪುನರ್ವಸತಿ ಸ್ಥಾಪಿಸಲಾಗಿದೆ. ಜಿಲ್ಲಾ ಉಪ ಕೇಂದ್ರ ಆಸ್ಪತ್ರೆಗಳಲ್ಲಿ ಮನೋ ಚೈತನ್ಯ ಮಾನಸಿಕ ಆರೋಗ್ಯ ಚಿಕಿತ್ಸಾ ಕಾರ್ಯಕ್ರಮಗಳ ಮೂಲಕ 146 ತಾಲ್ಲೂಕುಗಳ 5 ಲಕ್ಷ ಜನರು ಪ್ರಯೋಜನ ಪಡೆದಿದ್ದಾರೆ. ಒಟ್ಟನಲ್ಲಿ ಈ ಸಂಸ್ಥೆಯ ಸರ್ವತೋಮುಖ ಬೆಳವಣಿಗೆಗೆ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಜನರ ಮಾನಸಿಕ ರೋಗಕ್ಕೆ ಚಿಕಿತ್ಸೆ ನೀಡುವಲ್ಲಿ ನಿಮಾನ್ಸ್‍ನಿಂದ ಹೊಸ ಮೈಲುಗಲ್ಲು ಸೃಷ್ಟಿ -  ಜೆ.ಪಿ. ನಡ್ಡಾ
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವರಾದ ಜಗತ್ ಪ್ರಕಾಶ್ ನಡ್ಡಾ ಅವರು ಮಾತನಾಡಿ ನಿಮ್ಹಾನ್ಸ್ ಜನರಿಗೆ ಮಾನಸಿಕ ರೋಗ ಚಿಕಿತ್ಸೆಗೆ ಸಂಬಂಧಿಸಿದಂತೆ ಹೊಸ ಮೈಲುಗಲ್ಲು ಸೃಷ್ಟಿಸಿದೆ. ದೇಶದ ಉನ್ನತ ಮಟ್ಟದ 200 ಆಸ್ಪತ್ರೆಗಳಲ್ಲಿ ನಿಮಾನ್ಸ್ ಸಹ ಒಂದು ಸ್ಥಾನ ಅಲಂಕರಿಸಿದೆ. ಲಕ್ಷಾಂತರ ಜನರು ಇಲ್ಲಿ ಮಾನಸಿಕ ಖಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯ ಉತ್ತಮ ಪ್ರಯೋಗಾಲಯ ಮತ್ತು ಅತ್ಯಾಧುನಿಕ ಚಿಕಿತ್ಸೆಗಳು ಜನರಿಗೆ ಲಭ್ಯವಾಗಿದೆ. ದೇಶದಲ್ಲಿಯೇ ಈ ಸಂಸ್ಥೆ ಹೆಸರು ಮಾಡಿದ್ದು, ಮುಂದೆ ಜಾಗತಿಕ ಮಟ್ಟದಲ್ಲೂ ಸಹ ಗುರುತಿಸಲ್ಪಡುತ್ತದೆ ಎಂದು ತಿಳಿಸಿದರು.
 
ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್, ಸಂಸದರಾದ ತೇಜಸ್ವಿ ಸೂರ್ಯ, ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಪಿ.ಸಿ.ಮೋಹನ್, ಡಾ. ಸಿ.ಎನ್. ಮಂಜುನಾಥ್, ನಿಮ್ಹಾನ್ಸ್  ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ ಸೇರಿದಂತೆ ಗಣ್ಯರುಗಳು ಹಾಗೂ ನಿಮ್ಹಾನ್ಸ್ ಸಮಸ್ಥೆಯ ಹಿರಿಯ ಅಧಿಕಾರಿಗಳು, ವೈದ್ಯರುಗಳು ಉಪಸ್ಥಿತರಿದ್ದರು.

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು  ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಆತ್ಮೀಯವಾಗಿ ಬೀಳ್ಕೊಟ್ಟ  ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು  ಜನವರಿ 03 ರಂದು ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ  (ನಿಮಾನ್ಸ್) ಯಿಂದ ಆಯೋಜಿಸಲಾದ  ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ  ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಬೆಳಗಾವಿಗೆ ಪ್ರಯಾಣಿಸಿದರು.  

ಗೌರವಾನ್ವಿತ ರಾಷ್ಟ್ರಪತಿಗಳನ್ನು ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಬೀಳ್ಕೊಟ್ಟರು
ಈ ಸಮಯದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಏರ್ ಮಾರ್ಷಲ್ ನಾಗೇಶ್ ಕಪೂರ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಲೆಫ್ಟಿನೆಂಟ್ ಜನರಲ್ ಜಿತೇಂದ್ರ ಕುಮಾರ್ ಗೇರಾ, ಕರ್ನಾಟಕ ಪೆÇಲೀಸ್ ಮಹಾನಿರ್ದೇಶಕರಾದ ಡಾ. ಅಲೋಕ್ ಮೋಹನ್, ಬೆಂಗಳೂರು ನಗರ  ಪೆÇಲೀಸ್ ಆಯುಕ್ತರಾದ ಬಿ. ದಯಾನಂದ್, ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್. ಜಿ ಸೇರಿದಂತೆ ಇತರೆ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ಪೂಜ್ಯಶ್ರೀ ಸದ್ಗುರು ಬಸವ ಪ್ರಭು ಸ್ವಾಮೀಜಿಗೆ ಮಹಾತ್ಮ ಜ್ಯೋತಿ ಬಾ ಫುಲೆ ಪ್ರಶಸ್ತಿ ಪ್ರಧಾನ

ರಾಯಚೂರು : ಸಮತಾ ಗ್ರಾಮೀಣಾಭಿವೃದ್ಧಿ ಸಂಘ ಮತ್ತು ಶಿಕ್ಷಣ ಸಂಸ್ಥೆ ವತಿಯಿಂದ "ಸಂವಿದಾನದ ಕಡೆ ವಿದ್ಯಾರ್ಥಿಗಳ ನಡೆ" ಕಾರ್ಯಕ್ರಮದಲ್ಲಿ ಮಹಾತ್ಮ ಜ್ಯೋತಿ ಬಾ ಫುಲೆ ಪ್ರಶಸ್ತಿಯನ್ನು ಸಮಾಜ ಸೇವೆ ಗುರುತಿಸಿ ಬಸವಕಲ್ಯಾಣ ಗುಣತೀರ್ಥ ವಾಡಿಯ ಕಲ್ಯಾಣ ಮಹಾಮನೆಯ ಪೂಜ್ಯಶ್ರೀ ಸದ್ಗುರು ಬಸವ ಪ್ರಭು ಸ್ವಾಮೀಜಿ ಅವರಿಗೆ ನೀಡಲಾಯಿತು. ರಾಯಚೂರು ಸಂಸದರಾದ ಕುಮಾರ ನಾಯಕರು ಪ್ರಧಾನ ಮಾಡಿದರು. ಅನೇಕ ನಾಯಕರು ಹಾಜರಿದ್ದರು.


ಪೂಜ್ಯಶ್ರೀ ಸದ್ಗುರು ಬಸವ ಪ್ರಭು ಸ್ವಾಮೀಜಿಗೆ ಮಹಾತ್ಮ ಜ್ಯೋತಿ ಬಾ ಫುಲೆ ಪ್ರಶಸ್ತಿ ಪ್ರಧಾನ

ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಯ ಹಣ ಕೆಯುಡಬ್ಲೂಜೆ ದತ್ತಿಗೆ ಡಾ.ರಾಜಾ ರಾಮಣ್ಣ ಪ್ರಶಸ್ತಿ ಸ್ಥಾಪನೆಗೆ ನಿರ್ಧರಿಸಿದ ಗಿರೀಶ್ ಲಿಂಗಣ್ಣ

ಬೆಂಗಳೂರು: ವಾರ್ತಾ ಇಲಾಖೆ ಕೊಡ ಮಾಡುವ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಅಂಕಣಕಾರ ಗಿರೀಶ್ ಲಿಂಗಣ್ಣ ಅವರು ಪ್ರಶಸ್ತಿ ಮೊತ್ತ ಒಂದು ಲಕ್ಷ ರೂಗಳನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ದ್ತತಿನಿಧಿ ಪ್ರಶಸ್ತಿಗೆ ನೀಡಲು ನಿರ್ಧರಿಸಿದ್ದಾರೆ.


ಅಂಕಣಕಾರ ಗಿರೀಶ್ ಲಿಂಗಣ್ಣ


ಈ ಬಗ್ಗೆ ಸಂಘಕ್ಕೆ ಅಧಿಕೃತವಾಗಿ ಪತ್ರ ಬರೆದು ತಮ್ಮ ನಿರ್ಧಾರ ತಿಳಿಸಿರುವುದನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸ್ವಾಗತಿಸಿದ್ದಾರೆ.
ಕರ್ನಾಟಕದಲ್ಲಿ ವಿಜ್ಞಾನ ಬರಹಗಾರರಿಗೆ, ವಿಜ್ಞಾನ ಸಂವಾಹಕರಿಗೆ ಹೆಚ್ಚಿನ ಉತ್ತೇಜನ, ಬೆಂಬಲ ನೀಡುವ ನಿಟ್ಟಿನಲ್ಲಿ, ನಾನು ಈ ಪ್ರಶಸ್ತಿಯೊಡನೆ ನೀಡಲಾಗುವ ಒಂದು ಲಕ್ಷ ರೂ ಮೊತ್ತವನ್ನು
ಕರ್ನಾಟಕ ವೃತ್ತಿನಿರತ ಪತ್ರಕರ್ತರ ಸಂಘಕ್ಕೆ (ಕೆಯುಡಬ್ಲ್ಯುಜೆ) ಹಸ್ತಾಂತರಿಸುತ್ತೇನೆ. ಈ ಮೊತ್ತದಿಂದ ನಮ್ಮ ರಾಜ್ಯದ ಪ್ರಸಿದ್ಧ ವಿಜ್ಞಾನಿ ಡಾ. ರಾಜಾ ರಾಮಣ್ಣನವರ ಹೆಸರಿನಲ್ಲಿ ದತ್ತಿ ನಿಧಿ ಪ್ರಶಸ್ತಿಯನ್ನು ಸ್ಥಾಪಿಸಬೇಕೆಂದು ಗಿರೀಶ್ ಲಿಂಗಣ್ಣ ಮನವಿ ಮಾಡಿದ್ದಾರೆ.
ವಿಜ್ಞಾನ, ರಕ್ಷಣೆ, ಬಾಹ್ಯಾಕಾಶದಂತಹ ಸಂಕೀರ್ಣ ವಿಚಾರಗಳನ್ನು ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಬರೆಯುವ (ಕನ್ನಡ ಅಥವಾ ಇಂಗ್ಲೀಷ್)ಪತ್ರಕರ್ತರು, ಅಂಕಣಕಾರರಿಗೆ ಪ್ರತಿ ವರ್ಷ ಪ್ರಶಸ್ತಿ ನೀಡಬೇಕು. ಹೆಚ್ಚು ಬರಹಗಾರರು ಇಂತಹ ಪ್ರಮುಖ ವಿಚಾರಗಳ ಕುರಿತು ಬರೆಯುವಂತೆ ಮಾಡುವುದು ಮತ್ತು ಯುವ ಮನಸ್ಸುಗಳನ್ನು ಆಸಕ್ತಿಕರ ವೈಜ್ಞಾನಿಕ ಬರಹಗಳಿಂದ ಸೆಳೆಯುವಂತೆ ಮಾಡುವುದು ತಮ್ಮ ಉದ್ದೇಶವಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಡಾ.ರಾಜರಾಮಣ್ಣ ಪ್ರಶಸ್ತಿ ಕೆಯುಡಬ್ಲೂಜೆ ಅಭಿನಂದನೆ:
ಅಂಕಣಕಾರ ಗಿರೀಶ್ ಲಿಂಗಣ್ಣ ಅವರ ಆಶಯದಂತೆಯೇ ಕೆಯುಡಬ್ಲೂಜೆ ಡಾ.ರಾಜರಾಮಣ್ಣ ಹೆಸರಿನಲ್ಲಿ ದತ್ತಿನಿಧಿಯನ್ನು ಸ್ಥಾಪಿಸಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.
ಕರ್ನಾಟಕದ ಹೆಮ್ಮೆಯ ಪುತ್ರರಾದ ಡಾ. ರಾಜಾ ರಾಮಣ್ಣ ಜಗತ್ತು ಕಂಡ ಶ್ರೇಷ್ಠ ಪರಮಾಣು ವಿಜ್ಞಾನಿಗಳಲ್ಲಿ ಒಬ್ಬರು. ಭಾರತದ ವೈಜ್ಞಾನಿಕ ಪ್ರಗತಿಯ ಹಿಂದೆ ಡಾ. ರಾಜಾ ರಾಮಣ್ಣನವರ ಕೊಡುಗೆ ಅಪಾರವಾಗಿದೆ. ಈ ಬಹುಮಾನವನ್ನು ವಿಜ್ಞಾನ ವಿಚಾರಗಳು ಎಲ್ಲರಿಗೂ ತಲುಪುವಂತೆ ಮಾಡುವ ಪತ್ರಕರ್ತರಿಗೆ ಪ್ರತಿ ವರ್ಷವೂ ನೀಡಲಾಗುವುದು ಎಂದು ತಿಳಿಸಿರುವ ತಗಡೂರು,  ಗಿರೀಶ್ ಲಿಂಗಣ್ಣ ಅವರನ್ನು ಅಭಿನಂದಿಸಿದ್ದಾರೆ.

"ಅಲ್ನೋಡಿ ಮತ್ತೆ ಕಲ್ಯಾಣಕ್ಕೆ ಬರುತ್ತಿರುವ ಶರಣರು" ಸಂಪಾದಿತ ಕವನ ಸಂಕಲನ ಪುಸ್ತಕ ಬಿಡುಗಡೆ

ಬಸವಕಲ್ಯಾಣ : ಸ್ಥಳೀಯ ತ್ರಿಪುರಾಂತ ಗವಿಮಠದಲ್ಲಿ ಶರಣ ಕಾಯಕ ಪ್ರಶಸ್ತಿ ಹಾಗೂ ವೀರಶೆಟಿ ಪಾಟೀಲ ಅವರ ಸಂಪಾದಿತ ಕವನ ಸಂಕಲನ ಅಲ್ನೋಡಿ ಮತ್ತೆ ಕಲ್ಯಾಣಕ್ಕೆ ಬರುತ್ತಿರುವ ಶರಣರು ಪುಸ್ತಕ ವನ್ನು ಪೂಜ್ಯ ಘನಲಿಂಗ ರುದ್ರಮೂನಿ ಶಿವಾಚಾರ್ಯ  ಮಹಾಸ್ವಾಮಿಗಳು ಬಿಡುಗಡೆ ಮಾಡಿದರು. 

ಬಸವಕಲ್ಯಾಣ ಗವಿಮಠದಲ್ಲಿ "ಶರಣ ಕಾಯಕ ಪ್ರಶಸ್ತಿ " ಹಾಗೂ ವೀರಶೆಟ್ಟಿ ಎಂ.ಪಾಟೀಲ್  ಅವರ ಅಗೋ "ಅಲ್ನೋಡಿ ಮತ್ತೆ ಕಲ್ಯಾಣಕ್ಕೆ ಬರುತ್ತಿರುವ ಶರಣರು" ಸಂಪಾದಿತ ಕವನ ಸಂಕಲನ ಪುಸ್ತಕ ಬಿಡುಗಡೆ ಸಮಾರಂಭ ಜರುಗಿತು. ಸಮಾರಂಭದಲ್ಲಿ ವೀರಶೆಟ್ಟಿ ಪಾಟೀಲ್ ಹಾಗೂ ಅನೇಕ ಸಾಹಿತಿಗಳು ಭಾಗವಹಿಸಿದ್ದರು.  


ಬಸವಕಲ್ಯಾಣ : ಸ್ಥಳೀಯ ತ್ರಿಪುರಾಂತ ಗವಿಮಠದಲ್ಲಿ ಶರಣ ಕಾಯಕ ಪ್ರಶಸ್ತಿ ಹಾಗೂ ವೀರಶೆಟಿ ಪಾಟೀಲ ಅವರ ಸಂಪಾದಿತ ಕವನ ಸಂಕಲನ ಅಲ್ನೋಡಿ ಮತ್ತೆ ಕಲ್ಯಾಣಕ್ಕೆ ಬರುತ್ತಿರುವ ಶರಣರು ಪುಸ್ತಕ ವನ್ನು ಪೂಜ್ಯ ಘನಲಿಂಗ ರುದ್ರಮೂನಿ ಶಿವಾಚಾರ್ಯ ಮಹಾಸ್ವಾಮಿಗಳು ಬಿಡುಗಡೆ ಮಾಡಿದರು. 

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...