ads

Search This Blog

Tuesday, 7 January 2025

ನೀರಾವರಿ ಯೋಜನೆಗಳನ್ನು ಕಾಲಮಿತಿಯಲ್ಲಿ ಮುಗಿಸಿ- ಸಚಿವ ಶಿವರಾಜ ಎಸ್. ತಂಗಡಗಿ

ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ನಡೆಯುತ್ತಿರುವ ನೀರಾವರಿ ಯೋಜನೆಯನ್ನು ಕಾಲಮಿತಿಯಲ್ಲಿ ಮುಗಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಹೇಳಿದರು.

ಅವರು ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಕರೆದ ಕೊಪ್ಪಳ ಜಿಲ್ಲೆಯ ವಿವಿಧ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಕಾಲಮಿತಿಯಲ್ಲಿ ನೀರಾವರಿ ಯೋಜನೆಗಳು ಆಗದಿದ್ದರೆ ರೈತರಿಗೆ ನೀರು ಕೊಡಲು ಹೇಗೆ ಸಾಧ್ಯ ಕೆಲವೊಂದು ಯೋಜನೆಗಳು ಸುಮಾರು ವರ್ಷಗಳಿಂದ ಹಾಗೆ ನಡೆಯುತ್ತಲೆ ಇವೆ. ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಿದಾಗ ಅವುಗಳು ಕಾಲಮಿತಿಯಲ್ಲಿ ಮುಗಿಯುತ್ತವೆ. ಅಳವಂಡಿ ಬೆಟಗೇರಿ ಏತ ನೀರಾವರಿ ಯೋಜನೆಯ ಜನವರಿ 30ರ ಒಳಗಡೆ ಮುಗಿಯಬೇಕು. ಸಿಂಗಟಾಲೂರು ಏತ ನೀರಾವರಿ ಯೋಜನೆ ನಮ್ಮ ಜಿಲ್ಲೆಯಲ್ಲಿ ಏನಾಗಿದೆ ಯಾವ ಹಂತದಲ್ಲಿದೆ ಎಂದು ಸಚಿವರು ನೀರಾವರಿ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದು, ಈ ಯೋಜನೆಯ ಕಾಮಗಾರಿಯನ್ನು ವಿಳಂಭ ಮಾಡದೇ ಪೂರ್ಣಗೊಳಿಸಬೇಕೆಂದರು.
ಮತ್ತೆ ಸಭೆ ಕರೆಯುತ್ತೆನೆ ಆಗ ಗುತ್ತಿಗೆದಾರರಿಗೂ ಸಭೆಗೆ ಕರೆಯಬೇಕು. ಕಾಲಮಿತಿಯಲ್ಲಿ ಕೆಲಸ ಮುಗಿಸದ ಗುತ್ತಿಗೆದಾರರಿಗೆ ನೋಟೀಸ್ ನೀಡಿ ಬ್ಲ್ಯಾಕ್ ಲಿಸ್ಟಗೆ ಸೇರಿಸಬೇಕು. ಕೆರೆಗಳ ವೀಕ್ಷಣೆಗೂ ಬರುತ್ತೆನೆ. ಕಾಟಾಪುರ. ಶಿರವಾರ. ಕರಡೋಣ ಕೆರೆಗಳಿಗೆ ನೀರು ಬಿಡಬೇಕು. ಈಗ ಕೆರೆಗಳು ತುಂಬಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆಗಳಾಗುವುದಿಲ್ಲ. ಸಭೆಯಲ್ಲಿ ಚರ್ಚೆಯಾದ ಎಲ್ಲಾ ವಿಷಯಗಳನ್ನು ಅಧಿಕಾರಿಗಳು ಪಾಲನೆ ಮಾಡಬೇಕು ಎಂದು ಹೇಳಿದರು.
ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಮಾತನಾಡಿ ನೀರಾವರಿ ಯೋಜನೆಯ ಯಾವುದೇ ಕೆಲಸ ಮತ್ತು ಕಾಮಗಾರಿಗಳ ಕುರಿತು ಮೂರು ತಿಂಗಳಿಗೊಮ್ಮೆ ಆದರು ಸಭೆ ನಡೆಯಬೇಕು. 18 ತಿಂಗಳಲ್ಲಿ ಮುಗಿಯುವ ಕೆಲಸಗಳು ಹಲವಾರು ವರ್ಷಗಳು ತೆಗೆದುಕೊಳ್ಳುತ್ತವೆ. ಆಗಾಗ ನೀರಾವರಿ ಯೋಜನೆಗಳ ಸಭೆ ನಡೆಸಿದರೆ ಅವುಗಳ ಸಮಸ್ಯೆಗಳನ್ನು ಬಗೆಹರಿಸಲು ಅನುಕೂಲವಾಗುತ್ತದೆ ಎಂದು ಹೇಳಿದರು.
ಈ ಸಭೆಯಲ್ಲಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ. ಜಿಲ್ಲಾಧಿಕಾರಿ ನಲಿನ್ ಅತುಲ್. ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ. ಸಹಾಯಕ ಆಯುಕ್ತರಾದ ಮಹೇಶ್ ಮಾಲಗಿತ್ತಿ ಸೇರಿದಂತೆ ಕೃಷ್ಣ ಭಾಗ್ಯ ಜಲ ನಿಗಮ. ಕರ್ನಾಟಕ ನೀರಾವರಿ ನಿಗಮ ನಿಯಮಿತ. ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Monday, 6 January 2025

ಕಲಾವಿದರ ಏಳ್ಗೆಗಾಗಿ ಶ್ರಮಿಸುತ್ತಿರುವ ರಾಜಕುಮಾರ ಕಾರ್ಯ ಅಭಿನಂದನೀಯ: ಸಾಗರ ಖಂಡ್ರೆ

 ಬೀದರ: ಕರ್ನಾಟಕ ತೆಲಂಗಾಣ ಗಡಿಯಲ್ಲಿ ಸಾಂಸ್ಕೃತಿಕ ಹಬ್ ಸ್ಥಾಪನೆ ಹಾಗೂ ಬೀದರ ಜಿಲ್ಲೆಯಲ್ಲಿ ಅಂತರಾಷ್ಟಿಯ ಜಾನಪದ ಸಮ್ಮೇಳನ ಆಯೋಜನೆಯ ಬೇಡಿಕೆ ನಮ್ಮ ಮುಂದಿದೆ. ಇವುಗಳ ಸಫಲತೆಗೆ ಸಂಬ0ಧಪಟ್ಟ ಸಚಿವರಿಗೆ ಮಾತನಾಡಿ ಸಾಕಾರಗೊಳಿಸುವ ಪ್ರಯತ್ನ ಮಾಡಲಾಗುವುದು. ಈ ನಿಟ್ಟಿನಲ್ಲಿ ಕಲಾವಿದರ ಏಳ್ಗೆಗಾಗಿ ಹಗಲಿರುಳು ಶ್ರಮಿಸುತ್ತಿರುವ ರಾಷ್ಟಿಯ ಜನಪದ ಬುಡಕಟ್ಟು ಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಡಾ. ರಾಜಕುಮಾರ ಹೆಬ್ಬಾಳೆಯವರ ಕಾರ್ಯ ಅಭಿನಂದನೀಯ ಎಂದು ಲೋಕಸಭಾ ಸದಸ್ಯ ಸಾಗರ ಖಂಡ್ರೆ ತಿಳಿಸಿದರು.


ಲೋಕಸಭಾ ಸದಸ್ಯ ಸಾಗರ ಖಂಡ್ರೆ 

 ಡಾ. ರಾಜಕುಮಾರ ಹೆಬ್ಬಾಳೆ ಅಭಿನಂದನಾ ಸಮಿತಿ ವತಿಯಿಂದ ನಗರದ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ ಭವನದಲ್ಲಿ ನೂತನವಾಗಿ ರಾಷ್ಟಿಯ ಜನಪದ ಬುಡಕಟ್ಟು ಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಗೊಂಡ ಡಾ. ರಾಜಕುಮಾರ ಹೆಬ್ಬಾಳೆಯವರಿಗೆ ಆಯೋಜಿಸಿದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. 
ಎಷ್ಟೊ ಜನ ಕಲಾವಿದರಿಗೆ ವೇದಿಕೆ ಸಿಗುವುದಿಲ್ಲ. ಅಂತಹ ಅವಕಾಶವಂಚಿತ ಕಲಾವಿದರಿಗೆ ವೇದಿಕೆ ಒದಗಿಸಿ ಸರ್ಕಾರದ ವತಿಯಿಂದ ಮಾಶಾಸನ, ಗೌರವ ಸಂಭಾವನೆ ಕೊಡಿಸುವುತ್ತಿರುವುದು ಶ್ಲಾಘನೀಯ. ಸಣ್ಣ ನಾವದಗೇರಿ ಗ್ರಾಮದಲ್ಲಿ ಜನಿಸಿ, ದೆಹಲಿವರೆಗೆ ಬೆಳೆದ ರಾಜಕುಮಾರ ಅವರು ಕಲಾವಿದರ ಬಾಳಿನ ಬೆಳಕಾಗಿದ್ದಾರೆ. ನಗರದಲ್ಲಿ ಅಂತರಾಷ್ಟಿçÃಯ ಜನಪದ ಸಮ್ಮೇಳನ ಆಯೋಜನೆ, ಗಡಿಯಲ್ಲಿ ಕಲ್ಚರಲ್ ಹಬ್ ಸ್ಥಾಪನೆ ಕುರಿತು ಸಚಿವರೊಂದಿಗೆ ನಾವೆಲ್ಲರೂ ಹೋಗಿ ಚರ್ಚಿಸೋಣ. ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ಜಿಲ್ಲೆಯ ಜನತೆಗೆ ತಲುಪಿಸುವ ನಿಟ್ಟಿನಲ್ಲಿ ನಾವೆಲ್ಲರೂ ಪ್ರಯತ್ನಿಸೋಣ. ಡಾ. ರಾಜಕುಮಾರ ಹೆಬ್ಬಾಳೆ ಉತ್ತರೋತ್ತರವಾಗಿ ಬೆಳೆಯಲೆಂದು ಶುಭ ಹಾರೈಸಿದರು.
 ದಿವ್ಯ ಸಾನಿಧ್ಯ ವಹಿಸಿದ್ದ ಭಾಲ್ಕಿಯ ಹಿರೇಮಠದ ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿ ಕಲಾವಿದರ ಕಣ್ಣೀರು ಒರೆಸುವ ಕಾರ್ಯ ಮಾಡುತ್ತಿರುವ ರಾಜಕುಮಾರ ಅವರ ಕಲಾಸೇವೆ ನಿಜಕ್ಕೂ ಯುವಕರಿಗೆ ಮಾದರಿ. ಅವರ ಸಾಧನೆಗೆ ಎಲ್ಲರ ಸಹಕಾರವಿರಲಿ ಎಂದರು.



 ಬೀದರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಎಸ್.ಬಿರಾದಾರ ಮಾತನಾಡಿ ಕಲಾವಿದರು ಬೆಳೆದರೆ ದೇಶದ ಸಂಸ್ಕೃತಿ, ಆಚಾರ ವಿಚಾರಗಳು ಬೆಳೆಯುತ್ತವೆ. ಜನಪದ ಸಂಸ್ಕೃತಿ ಉಳಿಯುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಭಾರತದ ಕಲಾವಿದರನ್ನು ಉತ್ತರ ಭಾರತದ ಕಡೆಗೆ, ಉತ್ತರ ಭಾರತದ ಕಲಾವಿದರನ್ನು ದಕ್ಷಿಣ ಭಾರತದ ಕಡೆಗೆ ಕಳುಹಿಸುತ್ತಿದ್ದಾರೆ. ಇದರಿಂದ ಸಾಂಸ್ಕೃತಿಕ ವಿನಿಮಯ, ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಕಲೆಗಳ ಪರಿಚಯವಾಗುತ್ತದೆ. ಇಂತಹ ಕಲಾವಿದರಿಗೆ ಸರ್ಕಾರಿ ಸೌಲಭ್ಯಗಳನ್ನು ಒದಗಿಸುತ್ತಿರುವ ಡಾ. ರಾಜಕುಮಾರ ಹೆಬ್ಬಾಳೆಯವರ ಮೇಲೆ ಅವರ ಅಜ್ಜಿ ಲಿಂ. ರತ್ನಮ್ಮನವರ ಹಾಗೂ ಕುಟುಂಬದ ಮತ್ತು ಕಲಾವಿದರ ಆಶಿರ್ವಾದವಿದೆ. ಜಾನಪದ ಸಂರಕ್ಷಕ ಡಾ. ರಾಜಕುಮಾರ ಅವರಿಗೆ ದೇವರು ಇನ್ನೂ ಎತ್ತರಕ್ಕೆ ಬೆಳೆಯುವಂತೆ ಮಾಡಲಿ ಎಂದರು.
 ಅಭಿನಂದನಾ ನುಡಿಗಳನ್ನಾಡಿದ ಕ.ಜಾ.ಪ. ಔರಾದ ತಾಲೂಕಾಧ್ಯಕ್ಷ ಡಾ.ಸಂಜೀವಕುಮಾರ ಜುಮ್ಮಾ ಮಾತನಾಡಿ ಡಾ. ರಾಜಕುಮಾರ ಅವರು ಕೇಂದ್ರದ 4 ಅರ್ಹ ಸಾಧಕರಿಗೆ ಜೂನಿಯರ್ ಫೇಲೋಶಿಪ್, 5 ಸಾಧಕರಿಗೆ ಸೀನಿಯರ್ ಫೇಲೋಶಿಪ್, ಕಲಾವೇತನ ಹಾಗೂ ವಿವಿಧ ಪ್ರಶಸ್ತಿಗಳನ್ನು ಕೊಡಿಸಿದ್ದಾರೆ. ವೇದಿಕೆ ಒದಗಿಸಿ ಸಾವಿರಾರು ಕಲಾವಿದರಿಗೆ ರಾಜ್ಯ ಸರ್ಕಾರದ ಮಾಶಾಸನ ಮಾಡಿಸಿದ್ದಾರೆ. ಇದೀಗ ಕೇಂದ್ರದ ಮಾಶಾಸನ ಕೊಡಿಸಲು ಶತಪ್ರಯತ್ನ ಮಾಡುತ್ತಿದ್ದಾರೆ. ಹತ್ತು ಹಲವಾರು ಸಂಘ-ಸAಸ್ಥೆಗಳಿAದ ಪ್ರಶಸ್ತಿಗಳನ್ನು ಗಿಟ್ಟಿಸಿಕೊಂಡ ಇವರು ಹಲವು ಸಂಸ್ಥೆಗಳ ಪದಾಧಿಕಾರಿಯಾಗಿ ಕಲೆ ಸಾಹಿತ್ಯ ಸಂಸ್ಕೃತಿ ಸಂವರ್ಧನೆ ಮಾಡುತ್ತಿದ್ದಾರೆ. ಕ್ರಿಯಾಶೀಲತೆ, ಸಂಘಟನೆ, ಪರಸ್ಪರ ಪ್ರೀತಿ ವಿಶ್ವಾಸ ಇವರ ಗುಟ್ಟು. ಇದುವರೆಗೆ ಕಲಾವಿದರಿಗೆ ಒಟ್ಟು 1 ಕೋಟಿಗೂ ಅಧಿಕ ಸಂಭಾವನೆ ಕೊಡಿಸಿದ್ದಾರೆ ಎಂದರು. 
ಅಭಿನಂದನೆ ಸ್ವೀಕರಿಸಿದ ಡಾ. ರಾಜಕುಮಾರ ಹೆಬ್ಬಾಳೆ ಮಾತನಾಡಿ ಒಂದು ಕಾಲದಲ್ಲಿ ಗಡಿಜಿಲ್ಲೆ ಬೀದರನಲ್ಲಿ ಜನಪದ ಸಾಹಿತ್ಯದ ಪ್ರಚಾರ ಕಡಿಮೆಯಿತ್ತು. ಹೀಗಾಗಿ ಕರ್ನಾಟಕ ಜಾನಪದ ಪರಿಷತ್ತಿನ ಮೂಲಕ ಜಿಲ್ಲೆಯ ಸಾವಿರಾರು ಕಲಾವಿದರನ್ನು ಗುರುತಿಸಿ, ಅವರಿಗೆ ವೇದಿಕೆ ಒದಗಿಸಿ, ಎಲ್ಲರ ಸಹಕಾರದಿಂದ ಕಲೆ ಸಾಹಿತ್ಯ ಸಂಸ್ಕೃತಿ ಸಂವರ್ಧನೆಗಾಗಿ ಶ್ರಮಿಸಲಾಗುತ್ತಿದೆ. ಗಡಿಭಾಗದ ಬೀದರ ಹಾಗೂ ತೆಲಂಗಾಣದ ಕೆಲವು ಗ್ರಾಮಗಳಲ್ಲಿ ಉತ್ತರ ಭಾರತದ ಪಂಜಾಬ, ಹರಿಯಾಣ, ಜಮ್ಮುಕಾಶ್ಮೀರ, ಉತ್ತರ ಪ್ರದೇಶ, ಮಹಾರಾಷ್ಟç, ಆಸ್ಸಾಂ, ತೆಲಂಗಾಣ ಸೇರಿದಂತೆ ಹಲವು ರಾಜ್ಯದ ಕಲಾವಿದರಿಗೆ ಬೀದರ ಜಿಲ್ಲೆಗೆ ಕರೆಸಿ ಉತ್ಸವ ಮಾಡಲಾಗಿದೆ. ಹಲವು ಸೌಲಭ್ಯಗಳ ಬಗ್ಗೆ ನಮ್ಮ ಭಾಗದ ಜನರಿಗೆ, ಕಲಾವಿದರಿಗೆ ಗೊತ್ತಿಲ್ಲ. ಅಂತಹ ಕೇಂದ್ರ ಸರ್ಕಾರ ಸೌಲಭ್ಯ ಜಿಲ್ಲೆಗೆ ತಂದು ಒದಗಿಸಲಾಗುತ್ತಿದೆ ಎಂದರು.
ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಡಾ. ಜಗನ್ನಾಥ ಹೆಬ್ಬಾಳೆ ಮಾತನಾಡಿ ಜನಪದ ಕಲೆ ಉಳಿವೆಗಾಗಿ ನಗರದಲ್ಲಿ ಅಂತರಾಷ್ಟಿçÃಯ ಜನಪದ ಸಮ್ಮೇಳನ ನಡೆಸಬೇಕಾಗಿದೆ. ಕಲಾವಿದರ ಏಳ್ಗೆಗಾಡಿ ಗಡಿಯಲ್ಲಿ ಕಲ್ಚರಲ್ ಹಬ್ ಸ್ಥಾಪಿಸಬೇಕು. ಪ್ರತಿ ತಿಂಗಳಿಗೊಮ್ಮೆ ಆಯ್ದ ತಜ್ಞರ ಸಭೆ ಕರೆಸಿ ಜಿಲ್ಲೆಯ ಆಗುಹೋಗುಗಳ ಬಗ್ಗೆ ಹಾಗೂ ಸಾಧಿಸಬೇಕಾದ ಕಾರ್ಯಗಳ ಬಗ್ಗೆ ಚರ್ಚಿಸಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಾಗರ ಖಂಡ್ರೆಯವರು ಶ್ರಮಿಸಬೇಕು. ಬೀದರ ವಿಶ್ವವಿದ್ಯಾಲಯದ ಏಳ್ಗೆಗೆ ಸಹಕಾರ ನೀಡಬೇಕೆಂದು ಸಂಸದರಲ್ಲಿ ಮನವಿ ಮಾಡಿಕೊಂಡರು.
ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಡಾ.ಸೋಮನಾಥ ಯಾಳವಾರ್ ಹಾಗೂ ಬಿಡಿಎ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಮಾತನಾಡಿದರು. ವೇದಿಕೆ ಮೇಲೆ ಕ.ಸಾ.ಸಂಘದ ಟ್ರಸ್ಟ್ ಅಧ್ಯಕ್ಷ ಶಂಕ್ರೆಪ್ಪ ಹೊನ್ನಾ, ಸಂತೋಷ ಪಾಟೀಲ, ಅಶೋಕ ಹೆಬ್ಬಾಳೆ, ಸಮಿತಿ ಅಧ್ಯಕ್ಷ ಪ್ರೊ.ಎಸ್.ಬಿ.ಬಿರಾದಾರ, ಉಪಾಧ್ಯಕ್ಷ ನಿಜಲಿಂಗಪ್ಪ ತಗಾರೆ, ಪ್ರಧಾನ ಕಾರ್ಯದರ್ಶಿ ಸಂಘಟನಾ ಕಾರ್ಯದರ್ಶಿ ಎಸ್.ಬಿ.ಕುಚಬಾಳ, ಕಾರ್ಯದರ್ಶಿ ಶಿವಶರಣಪ್ಪ ಗಣೇಶಪುರ, ಕೋಶಾಧ್ಯಕ್ಷ ಅಶೋಕ ಹೆಬ್ಬಾಳೆ, ಸಂಚಾಲಕ ವೈಜಿನಾಥ ಪಾಟೀಲ, ಸಂಯೋಜಕಿ ಆಶಾ ರಾಠೋಡ್, ಸದಸ್ಯರಾದ ಪ್ರಕಾಶ ಕನ್ನಾಳೆ, ಧನರಾಜ ಆನೆಕಲೆ, ನೀಲಕಂಠ ಸ್ವಾಮಿ ಸೇರಿದಂತೆ ಸಮಿತಿಯ ಸರ್ವಸದಸ್ಯರು ಹಾಜರಿದ್ದರು. ನವಲಿಂಗ ಪಾಟೀಲ ನಿರೂಪಿಸಿದರೆ, ಸ್ವಾಗತಿಸಿ ಮತ್ತು ಪ್ರಾಸ್ತಾವಿಕವಾಗಿ ಮಹಾರುದ್ರ ಡಾಕುಳಗೆ ಮಾತನಾಡಿದರು. ಡಾ.ಸುನಿತಾ ಕೂಡ್ಲಿಕರ್ ವಂದಿಸಿದರು.

ಮೆರವಣಿಗೆ: ನಗರದ ಬಸವೇಶ್ವರ ವೃತ್ತದಿಂದ ಆರಂಭವಾದ ಶ್ರೀಮತಿ ಮಹಾನಂದ ಡಾ.ರಾಜಕುಮಾರ ಹೆಬ್ಬಾಳೆ ದಂಪತಿಗಳ ಮೆರವಣಿಗೆ ಅಲಂಕೃತ ಸಾರೋಟಿನಲ್ಲಿ ಭವ್ಯ ರೀತಿಯಲ್ಲಿ ಜರುಗಿತು. ಡೊಳ್ಳು ಕುಣಿತ, ಬಂಜಾರಾ ನೃತ್ಯ, ಕೋಲಾಟ ಸೇರಿದಂತೆ ಹಲವು ಜನಪದ ಕಲಾವಿದರ ಕಲಾಪ್ರದರ್ಶನ ಸಭೀಕರ ಗಮನ ಸೆಳೆಯಿತು. ಮೆರವಣಿಗೆಗೆ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ ಚಾಲನೆ ನೀಡಿದರು. ಇದೇ ವೇಳೆ ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಮಂಡಳ ಅಧ್ಯಕ್ಷೆ ಡಾ.ಗುರಮ್ಮಾ ಸಿದ್ದಾರೆಡ್ಡಿ, ಪ್ರಮುಖರಾದ ದಿಲಿಪಕುಮಾರ ಡೊಂಗರಗೆ, ಕೆ.ಸತ್ಯಮೂರ್ತಿ, ಚಂದ್ರಶೇಖರ ಹೆಬ್ಬಾಳೆ, ಸುಧಾಕರ ಹೆಬ್ಬಾಳೆ, ಬಸವರಾಜ ಹೆಬ್ಬಾಳೆ, ಡಾ.ಸುನಿತಾ ಕೂಡ್ಲಿಕರ, ಮಹಾನಂದ ಮಡಕಿ, ಡಾ.ಸಾವಿತ್ರಿಬಾಯಿ ಹೆಬ್ಬಾಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕನ್ನಡ ಹೊರಾಟಗಾರ ಶರಣಪ್ಪ ಮುಡಿಗೆರಿದ ಗೌರವ ಡಾಕ್ಟರೇಟ್

 ಶೋಧವಾಣಿ ಜಾಲಲೋಕ

ಬೆಂಗಳೂರು : ಅಪ್ಪಟ ಕನ್ನಡಿಗ ಮಹಾರಾಷ್ಟ್ರ ಮರಾಠಿ ಪ್ರಭಾವ ಇರುವ ನಾಡಿನಲ್ಲಿ ಕನ್ನಡ ಕೈಂಕರ್ಯ ಗೈಯುತ್ತ ಅನೇಕ ಪ್ರಕರಣಗಳು ಎದ್ದುರಿಸಿದ ಧೀಮಂತ ಹೋರಾಟಗಾರ ಬಸವಕಲ್ಯಾಣ ಪ್ರಾಂತ್ಯದಲ್ಲಿ ಅನೇಕ ಸಾಮಾಜಿ. ಸಾಂಸ್ಕೃತಿಕ ಕನ್ನಡ ಸಮಾರಂಭ ಆಯೋಜನೆ ಮಾಡುತ್ತ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಕನ್ನಡ ಹೊರಾಟಗಾರ ಶರಣಪ್ಪ ಕೆ ಗದಲೆಗಾಂವ ಅವರಿಗೆ ತಮಿಳನಾಡಿನ ಅಸೀಯನ ಅಂತರರಾಷ್ಟ್ರೀಯ ಸಂಸ್ಕೃತಿಯ ಸಂಶೋಧನೆ ವಿಶ್ವವಿದ್ಯಾಲಯ ಅವರ ಸಮಾಜಿಕ ಕೊಡುಗೆಯನ್ನು ಗುರುತಿಸಿ ಶನಿವಾರ ಬೆಂಗಳೂರನಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. 

ಕನ್ನಡ ಹೊರಾಟಗಾರ ಶರಣಪ್ಪ ಕೆ ಗದಲೆಗಾಂವ ಅವರಿಗೆ ತಮಿಳನಾಡಿನ ಅಸೀಯನ ಅಂತರರಾಷ್ಟ್ರೀಯ ಸಂಸ್ಕೃತಿಯ ಸಂಶೋಧನೆ ವಿಶ್ವವಿದ್ಯಾಲಯ ಅವರ ಸಮಾಜಿಕ ಕೊಡುಗೆಯನ್ನು ಗುರುತಿಸಿ ಶನಿವಾರ ಬೆಂಗಳೂರನಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. 

ಶರಣಪ್ಪ ಗದಲೆಗಾಂವ ಮೂಲತ ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ಬರುವ  ಗದಲೆಗಾಂವ ಎಂಬ ಕುಗ್ರಾಮದಲ್ಲಿ ಜನಿಸಿದರು. ಚಿಕ್ಕ ವಯಸ್ಸಿನಲ್ಲೇ ಬಡತನದ ಬೇಗೆಯಿಂದ ಬಳಲಿ. ಜೀವನದಲ್ಲಿ ಬಡತನ ಹೋಗಲಾಡಿಸಲು ಶಿಕ್ಷಣ ಒಂದೇ ಉಪಾಯ ಎಂದು ತಿಳಿದು ಬಸವಕಲ್ಯಾಣ ತಾಲೂಕಿನಲ್ಲಿ ಮುಗಿಸಿ ಇಂದು ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಲೇ ಇಂದು ಬಸವಕಲ್ಯಾಣ ತಾಲೂಕಿನಲ್ಲಿ ಕನ್ನಡಿಗರನ್ನು ಸಂಘಟಿಸಿ ಅನೇಕ ಮಾದರಿಯ ಕಾರ್ಯಕ್ರಮ ನೀಡಿದ ಹೆಗ್ಗಳಿಕೆ ಶರಣಪ್ಪ  ಅವರದು. 

ಶೋಧವಾಣಿ ನ್ಯೂಸ್ ನೊಂದಿಗೆ ಮಾತನಾಡಿದ ಶರಣಪ್ಪ ಅವರು ನಮ್ಮ ಚಿಕ್ಕ ವಯಸ್ಸಿನಲ್ಲೇ ಎಲ್ಲವನ್ನೂ ಕಂಡುಕೊಂಡೆ ಗ್ರಾಮದಲ್ಲಿ ಜೀವನ ನಡೆಸಲು ಆಗದಂತಹ ಪರಿಸ್ಥಿತಿಯಲ್ಲಿ ನಮಗೆ ಅನೇಕರು ಗ್ರಾಮದ ಪ್ರಮುಖ ವ್ಯಕ್ತಿಗಳು ನನ್ನ ಜೀವನದ ತಿರುವಿಗೆ ಸಹಕಾರ ನೀಡಿದ ಎಲ್ಲಾ ಆತ್ಮೀಯ ಹಿರಿಯರಿಗೆ ಈ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು  ಗದಲೆಗಾಂವ ಗ್ರಾಮದ ಹಿರಿಯರಿಗೆ ಅರ್ಪಿಸುತ್ತೇನೆ ಎಂದು ಭಾವುಕರಾಗಿ  ಶರಣಪ್ಪ ನುಡಿದರು.  ನನಗೆ ಕಾಲೇಜು ಫೀಸ್ ಕಟ್ಟಲು ಆಗದ ಪರಿಸ್ಥಿತಿಯಲ್ಲಿ ನನಗೆ ಸಹಾಯ ಮಾಡಿದ ಹಿರಿಯರಿಗೆ ಯಾವತ್ತೂ ಜೀವನದಲ್ಲಿ ಮರೆಯುವುದಿಲ್ಲ. ಅವರ ಋಣಭಾರದಿಂದ ಮಾತ್ರ ನಾನು ಇಂದು ಒಬ್ಬ ಉನ್ನತವಾದ ಮಟ್ಟಕ್ಕೆ ಬೆಳೆಯಲು ಕಾರಣರಾದರು. ಅವರು ನನಗೆ ಸಹಾಯ ಮಾಡಲಿಲ್ಲ ಅಂದು ಅಂದರೆ ಇಂದು ನಾನು ಗ್ರಾಮದಲ್ಲಿಯೇ ರೈತನಾಗಿ ದುಡಿಯಬೇಕಾಗಿತು.  ಬಂದುಕಬೇಕಾಗಿತು ಹೀಗಾಗಿ ನನಗೆ ಜೀವನದಲ್ಲಿ ಸಹಾಯ ಸಹಕಾರ ನೀಡಿದ ಎಲ್ಲಾ ಮಹನೀಯರಿಗೂ ತುಂಬುಹೃದಯದಿಂದ ಧನ್ಯವಾದಗಳು ತಿಳಿಸುವೆ ಎಂದು ನುಡಿದರು.

 ರಾಜ್ಯಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅನೇಕ ಅನುಭವಕ್ಕೆ ಕೈಬಿಸಿ ಕರೆಯುತ್ತಿವೆ ಹೀಗಾಗಿ ಇಂದು ಯುವ ಜನಾಂಗಕ್ಕೆ ಶರಣಪ್ಪ ಗದಲೆಗಾಂವ ಅವರು ಮಾದರಿಯ ವ್ಯಕ್ತಿಯಾಗಿದ್ದಾರೆ. ತಮ್ಮನ್ನು ಕಾಣಲು ಬಂದ ಜನ ಸಾಮಾನ್ಯರಿಗೂ ತಮ್ಮ ಕೈಲಾದ ಸಹಾಯವನ್ನು ಮಾಡುವುದು ಮರೆಯುವುದಿಲ್ಲ. ಎಲ್ಲರೊಂದಿಗೆ ತಾವೊಬ್ಬರು ಎಂದು ಎಲ್ಲರೊಂದಿಗೆ ಬೆರೆಯುವ ಮನೋಭಾವ ಹೊಂದಿದ್ದ ಶರಣಪ್ಪ ಗದಲೆಗಾಂವ ಮಾದರಿ ವ್ಯಕ್ತಿ ಎಂದರು ಉತ್ಪ್ರೇಕ್ಷೆ ಯಾಗದು.. ಹಾಗೇ ಶರಣಪ್ಪ ಗದಲೆಗಾಂವ ಅವರ ಸೇವೆಗೆ ಇನ್ನೂ ಅನೇಕ ಪ್ರಶಸ್ತಿಗಳನ್ನು ಬರಲಿ ಎಂದು ಶುಭೋದಯ ಮೀಡಿಯಾ ಹಾರೈಸುತ್ತದೆ.

Sunday, 5 January 2025

ಕಾವ್ಯ ಎನ್ನುವುದು ಜನಪರ, ಜೀವಪರವಾಗಿರಬೇಕು – ಡಾ. ಚಂದ್ರಕಲಾ ಬಿದ್ರಿ

ಬೀದರ್   : ಇತ್ತಿಚಿನ ದಿನಮಾನಗಳಲ್ಲಿ ಇಂಗ್ಲೀಷ ಪಾಚಿಮಾತ್ಯ ಸಂಸ್ಕೃತಿಗೆ ಮಾರು ಹೋಗಿ ನಮ್ಮ ಸಂಸ್ಕೃತಿಯನ್ನು ಮರೆಯುತ್ತಿರುವುದು ವಿಷಾದನೀಯವಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೇಮಿ ಸದಸ್ಯರಾದ ಡಾ. ಚಂದ್ರಕಲಾ ಬಿದ್ರಿ ಅವರು ಕಳವಳ ವ್ಯಕ್ತಪಡಿಸಿದರು.

ರವಿವಾರ ಬೆಳಿಗ್ಗೆ ಬೀದರ ನಗರದ ಹೋಟೆಲ್ ಕೃಷ್ಣ ರೇಜೆನ್ಸಿ ಸಭಾಂಗಣದಲ್ಲಿ ರಂಗಮAಡಲ ಬೆಂಗಳೂರು, ಅತಿವಾಳೆ ಸಾಂಸ್ಕೃತಿಕ ಪ್ರತಿಷ್ಠಾನ ಬೀದರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೀದರ ಹಾಗೂ ಪ್ರತಿ ಜಿಲ್ಲೆ ಮತ್ತು ಕನ್ನಡ ಪ್ರದೇಶದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ "ಕಾವ್ಯ ಸಂಸ್ಕೃತಿ ಯಾನ" ಬೀದರ, ರಾಷ್ಟ್ರ ಕವಿ ಕುವೆಂಪು ಅವರ ಜನ್ಮದಿನೋತ್ಸವ ಪ್ರಯುಕ್ತ "ಶರಣರ ನಾಡಿನಲ್ಲಿ ಜನರೆಡೆಗೆ ಕಾವ್ಯ" ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.


ಇವತ್ತು ಎಲ್ಲರೀಗೂ ಒಂದು ಪ್ರಶ್ನೆಯನ್ನು ಕಾಡುತ್ತಿದೆ ಅದೆನೆಂದರೇ ಇಂಗ್ಲೀಷನಲ್ಲಿ ಅಭ್ಯಾಸ ಮಾಡಿದವರಿಗೆ ಎಲ್ಲರೀಗೂ ನೌಕರಿ ಸಿಗುವುದು ಎಂದು ಜನರು ತಮ್ಮ ಮಕ್ಕಳಿಗೆ ಇಂಗ್ಲೀಷ ಮಾಧ್ಯಮ ಶಾಲೆಗೆ ಸೇರಿಸುವುದು ನೋಡುತ್ತಿದ್ದೆವೆ. ಕನ್ನಡ ಮಾದ್ಯಮದಲ್ಲಿ ವಿದ್ಯಾಭ್ಯಾಸ ಮಾಡಿದರೇ ಉದ್ಯೋಗ ಸಿಗುತ್ತಿಲ್ಲವೇ? ಇವತ್ತಿಗೂ ಕೂಡ ಕನ್ನಡ ಮಾದ್ಯಮದಲ್ಲಿ ಓದುತ್ತಿರುವ ಮಕ್ಕಳು ಈ ಜಾಗತೀಕರಣ ಯುಗದಲ್ಲಿ ಅದರಲ್ಲೂ ತುಂಬಾನೇ ಸ್ಪರ್ದೆಗಳ ನಡುವೆ ಕನ್ನಡ ಮಾದ್ಯಮದ ಮಕ್ಕಳು ಉತ್ತಮ ರೀತಿಯಲ್ಲಿ ಉತ್ತಿರ್ಣರಾಗುತ್ತಿರುವುದು ನೋಡಿದರೇ ತುಂಬಾನೆ ಖುಷಿಯಾಗುತ್ತಿದೆ ಕಾವ್ಯ ಎನ್ನುವುದು ಜನಪರ, ಜೀವಪರ ವಾಗಿರಬೇಕೆಂದರು. 


ಕಸಾಪ ಮಾಜಿ ಅಧ್ಯಕ್ಷರಾದ ಪ್ರೋ.ಸಿದ್ರಾಮಪ್ಪಾ ಮಾಸಿಮಾಡೆ ಮಾತನಾಡಿ, ನಮ್ಮ ಭಾಗದಲ್ಲಿ ಕವಿಗಳ ಸಾಧನೆಯ ವಿಚಾರದಲ್ಲಿ ಬೀದರ ಜಿಲ್ಲೆಯಲ್ಲಿ ಸಾವಿರ ಕವಿಗಳು ಇದ್ದಾರೆ. ಯಾರಲ್ಲಿ ಮಾನವಿಯತೆ ಕಳಕಳಿ ಇರುತ್ತದೆಯೋ ಅವರು ಕವಿಯಾಗಲು ಸಾಧ್ಯ. ಇಲ್ಲಿ ಯಾವೂದೆ ಅಹಿತಕರ ಘಟನೆಗಳು ನಡೆದರೇ ಅವರಿಗೆ ಸಹಿಸಿಕೊಳ್ಳಲು ಆಗುವುದಿಲ್ಲ. ಘಟನೆಯ ವಿಷಯವು ಏನಾದರು ಪತ್ರಿಕೆಯಲ್ಲಿ ಬಂದರೇ ಮರುದಿನವೇ ಅದರ ಬಗ್ಗೆ ಕವಿತೆ ಬರೆಯುತ್ತಾರೆ. ಕವಿಯಾದವನಿಗೆ ಅಂಥಹ ಘಟನೆಯ ವಿಚಾರಗಳು ಸಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಒಬ್ಬ ಕವಿ ತನ್ನ ಕಾವ್ಯ ರಚಿಸಿ ಅದರ ಮೂಲಕವೇ ಪಾತ್ರಧಾರಿಯನ್ನಾಗಿದ್ದಾಗ ಅದರಲ್ಲಿರುವ ಗ್ರಾಮೀಣ ಭಾಗದ ಜನರು ಅನಕ್ಷರಸ್ಥರಿದ್ದರು ಕೂಡ ಅಲ್ಲಿರುವ ಪ್ರಾತ್ರಧಾರಿಗಳ ಕುರಿತು ಮಾತನಾಡುತ್ತಾರೆ. ಸತ್ಯ ಹರಿಶ್ಚಂದ್ರ, ಕರ್ಣನ, ದುರ್ಯೋಧನ ಪಾತ್ರದ ಬಗ್ಗೆ ಮಾತನಾಡುತ್ತಾರೆ ಎಂದರು.

ಕಾರ್ಯಕ್ರಮದ ಸರ್ವಾಧ್ಯಕ್ಷರಾದ ಬೀದರ್ ಕಾವ್ಯ ಸಂಸ್ಕೃತಿ ಯಾನ ಹಿರಿಯ ಸಾಹಿತಿ ಡಾ. ವಿಜಯಶ್ರೀ ಸಬರದ ಮಾತನಾಡಿ, ಕಾವ್ಯ ಸಂಸ್ಕೃತಿಯಾನ ದಿವಟಿಗೆ ಬೆಂಗಳೂರಿನಿAದ ಹೊರಟು ಬೀದರ ಶರಣರ ನಾಡಿನಲ್ಲಿ ಜನರೆಡೆಗೆ ಕಾವ್ಯ ಆರನೆ ಕವಿಗೋಷ್ಠಿ ಹಮ್ಮಿಕೊಂಡಿದ್ದು ಖುಷಿಯಾಗಿದೆ ಎಂದರು.  


ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಸಂಜೀವಕುಮಾರ ಅತಿವಾಳೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿರಿಯ ಸಾಹಿತಿ  ಶ್ರೀಮತಿ ಪುಣ್ಯವತಿ ವಿಸಾಜಿ, ರಂಗಕರ್ಮಿ  ಪ್ರಧಾನ ಸಂಚಾಲಕರಾದ ಮಲ್ಲಿಕಾರ್ಜುನ ಮಹಾಮನೆ ಮಾತನಾಡಿದರು. ವೇದಿಕೆ ಮೇಲೆ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಸುರೇಶ ಚೆನ್ನಶೆಟ್ಟಿ,  ಕಾಶಿನಾಥರಾವ ಚಲ್ವಾ, ಬೆಳಗು ಸಾಮಾಜಿಕ ಸಾಂಸ್ಕೃತಿಕ ಟ್ರಸ್ಟನ ಅಧ್ಯಕ್ಷರಾದ ಅನೀಲಕುಮಾರ ದೇಶಮುಖ ಸೇರಿದಂತೆ ಮುಂತಾದ ಅತಿಥಿ ಗಣ್ಯರು ಉಪಸ್ಥಿತರಿದ್ದರು. ಮೊದಲಿಗೆ ಯುವ ಸಾಹಿತಿ ಅಜೀತ ಎನ್ ಸ್ವಾಗತಿಸಿದರು. ಕು.ಸೃಜನ್ಯ ಅತಿವಾಳೆ ನೀರುಪಿಸಿ ವಂದಿಸಿದರು.


ಕಾರ್ಯಕ್ರಮದ ನಂತರ ಪ್ರಥಮ ಕವಿಗೋಷ್ಠಿ ನಡೆಯಿತು. ಈ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಎಂ. ಜಿ. ದೇಶಪಾಂಡೆ ಅವರು ವಹಿಸಿ ಮಾತನಾಡಿದರು.  ಗೌರವ ಉಪಸ್ಥಿತಿ  ಬಿ.ಎಮ್. ಅಮರವಾಡಿ,  ಹಿರಿಯ ಸಾಹಿತಿ ಶಕೀಲ್ ಐ.ಎಸ್. ಅವರು ಆಶಯ ನುಡಿ ಹೇಳಿದರು. ವೇದಿಕೆ ಮೇಲೆ ಅನೇಕ  ಕವಿಗಳು,  ಕಾರ್ಯಕ್ರಮಕ್ಕೆ  ಭಾಗಿಯಾಗಿ  ತಮ್ಮ  ಸ್ವರಚಿತ  ಕವನ  ವಾಚನ  ಮಾಡಿದರು.


ಸ್ವಾಮೀಜಿ, BJP ನಾಯಕರ ಹತ್ಯೆಗೆ ಮಹಾರಾಷ್ಟ್ರ ಗೂಂಡಾಗಳಿಗೆ ಸುಪಾರಿ: ಬಿವೈ ವಿಜಯೇಂದ್ರ ಆರೋಪ

 ಶಿವಮೊಗ್ಗ: ಸ್ವಾಮೀಜಿಗಳು, ಬಿಜೆಪಿ ಶಾಸಕರು ಮತ್ತು ಕಲಬುರಗಿ ಬಿಜೆಪಿ ನಗರ ಘಟಕದ ಅಧ್ಯಕ್ಷರನ್ನು ಹತ್ಯೆ ಮಾಡಲು ಮಹಾರಾಷ್ಟ್ರದ ಗೂಂಡಾಗಳಿಗೆ ಸುಪಾರಿ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗುತ್ತಿಗೆದಾರ ಸಚಿವ್ ಪಾಂಚಾಳ್ ಡೆತ್ ನೋಟ್ ನಲ್ಲಿ ಸ್ವಾಮೀಜಿಗಳು, ಬಿಜೆಪಿ ಶಾಸಕರು ಮತ್ತು ಕಲಬುರಗಿ ಬಿಜೆಪಿ ನಗರ ಘಟಕದ ಅಧ್ಯಕ್ಷರನ್ನು ಹತ್ಯೆ ಮಾಡಲು ಮಹಾರಾಷ್ಟ್ರದ ಗೂಂಡಾಗಳಿಗೆ ಸುಪಾರಿ ನೀಡಲಾಗಿದೆ ಎಂದು ಬರೆದಿದ್ದಾರೆ. ಪ್ರಭಾವಿ ರಾಜಕಾರಣಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಹೀಗಾಗಿ ಸಚಿನ್ ಅವರು ಪ್ರಕರಣನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್​ ಮುಖಂಡ ರಾಜು ಕಪ್ಪನೂರ್ ಪ್ರಿಯಾಂಕ ಖರ್ಗೆಯ ಎಡಗೈ ಬಂಟ. ಈ ಪುಡಾಯರಿಯ ಬೆದರಿಕೆಯಿಂದ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಪ್ರಕರಣದ ಪ್ರಾಮಾಣಿಕ ತನಿಖೆ ಸಾಧ್ಯವಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ. ಇದರಿಂದ ಪ್ರಿಯಾಂಕ್​ ಖರ್ಗೆ ತುಂಬಾ ಭಯಭೀತರಾಗಿದ್ದಾರೆ. ಮಹಾರಾಷ್ಟ್ರದಿಂದ ಸುಪಾರಿ ಕಿಲ್ಲರ್ ಗಳನ್ನು ಕರೆಸಿ ಸ್ವಾಮಿಜಿಗಳನ್ನು ಟಾರ್ಗೆಟ್ ಮಾಡಿದ್ದಾರೆ. ನಮ್ಮ ಶಾಸಕ ಹಾಗೂ ಚಂದು ಪಾಟೀಲ್ ಹತ್ಯೆ ಮಾಡಲು ಪ್ಲಾನ್ ಮಾಡಿದ್ದಾರೆ. ವಿರೋಧ ಪಕ್ಷದವರು ಬೆಳೆದರೆ ಇವರ ಬೆಳೆ ಬೇಯಿಸಿಕೊಳ್ಳಲು ಸಾಧ್ಯವಿಲ್ಲ ಅಂತ ಹೀಗೆ ಮಾಡಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರು ಮಾತಾಡುತ್ತಿರುವುದು ಸರಿಯಲ್ಲ, ಪ್ರಿಯಾಂಕ್ ಖರ್ಗೆಯವರೇ ನಿಮ್ಮ ಸ್ನೇಹಿತನಾಗಿ ಸಲಹೆ ಕೊಡುತ್ತಿದ್ದೇನೆ, ನಿಮ್ಮ ಪಾತ್ರ ಇಲ್ಲ ಎಂದರೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಿ. ಸಿಬಿಐ ತನಿಖೆ ಬಗ್ಗೆ ಅನುಮಾನ ಪಡಬೇಡಿ, ಈ ಹಿಂದೆ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್'ಗೆ ಕ್ಲೀನ್​ಚಿಟ್​ ಕೊಟ್ಟಿದ್ದು ಸಿಬಿಐ. ಜೊತೆಗೆ ನೀವು ಸಿದ್ದರಾಮಯ್ಯರನ್ನು ನಂಬಬೇಡಿ, ನಿಮ್ಮ ವಿರುದ್ದವೇ ನಿಮ್ಮ ಪಕ್ಷದಲ್ಲೆ ಷಡ್ಯಂತ್ರ ನಡೆಯುತ್ತಿದೆ. ನೀವು ಮುಖ್ಯಮಂತ್ರಿ ಆದರೂ ನಮಗೆ ಸಮಸ್ಯೆ ಇಲ್ಲ. ಆದರೆ, ತನಿಖೆಯನ್ನು ಸಿಬಿಐಗೆ ಕೊಡಿ ಎಂದು ತಿಳಿಸಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ನಾ.ಡಿಸೋಜ ಇನ್ನಿಲ್ಲ

 ಮಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ನಾ. ಡಿಸೋಜ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. 88 ವರ್ಷದ ಡಿಸೋಜ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 1937ರ ಜೂನ್ 6ರಂದು ಡಿಸೋಜ ಜನಿಸಿದರು. ಪರಿಸರ ಕಾಳಜಿ ಜೊತೆಗೆ ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಅಲ್ಲದೆ ಅವರು ಬರೆದಿರುವ ಹಲವು ಕಾದಂಬರಿಗಳು ಸಿನಿಮಾಗಳಾಗಿ ಮೂಡಿಬಂದಿವೆ. ಇವುಗಳಲ್ಲಿ 'ಕಾಡಿನ ಬೆಂಕಿ' ಚಿತ್ರ ರಜತ ಕಮಲ ಪ್ರಶಸ್ತಿಯನ್ನ ಪಡೆದರೆ 'ದ್ವೀಪ' ಚಿತ್ರ ಸ್ವರ್ಣ ಕಮಲ ಪ್ರಶಸ್ತಿ ಗಳಿಸಿತ್ತು.


ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ಚಾಲನೆ ಯುವ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ


ದಾವಣಗೆರೆ : ದೇಶಕ್ಕೆ ನನ್ನ ಕೊಡುಗೆ ಏನು ಎಂಬುದು ಯುವಕರ ಕರ್ತವ್ಯವಾಗಬೇಕು, ಧರ್ಮ ಹಾಗೂ ಜಾತಿ ಹೆಸರಿನಲ್ಲಿ ಶಾಂತಿಗೆ ಭಂಗ ತರುವ ದುಸ್ಕøತ್ಯಗಳಿಗೆ ಮಾರು ಹೋಗಬಾರದು
ದೇಶ ನನಗೇನು ಕೊಡ್ತು ಅಲ್ಲ, ನಾನು ದೇಶಕ್ಕಾಗಿ ನನ್ನ ಕರ್ತವ್ಯವೇನು ಎಂದು ಯುವಕರು ಅರಿತುಕೊಳ್ಳಬೇಕು. ಅನೇಕ ಶಕ್ತಿಗಳು ಧರ್ಮ ಹಾಗೂ ಜಾತಿ ಹೆಸರಿನಲ್ಲಿ ಶಾಂತಿಗೆ ಭಂಗ ತರುವ ಕೆಲಸ ಮಾಡುತ್ತಿವೆ. ಯಾವ ಧರ್ಮಕ್ಕೂ ವಿಶೇಷ ಸ್ಥಾನಮಾನ ಇಲ್ಲ, ಎಲ್ಲರಿಗೂ ಸಂವಿಧಾನ ಒಂದೇ, ಆದ್ದರಿಂದ ಸಂವಿಧಾನ ರಕ್ಷಿಸುವ ಕೆಲಸ ಯುವಕರು ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಯುವಜನತೆಗೆ ಕರೆ ನೀಡಿದರು. 



 ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಬಾಪೂಜಿ ಎಂಬಿಎ ಮೈದಾನದಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಯುವ ಜನೋತ್ಸವವನ್ನು ನಗಾರಿ ಬಾರಿಸಿ ಹಾಗೂ ಹೊಂಬಾಳೆ ಬಿಡಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.  
 ಬಾಬಾ ಸಾಹೇಬ್ ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದ ಇಂದು ಎಲ್ಲರೂ ಶಿಕ್ಷಣ ಪಡೆದು ಉದ್ಯೋಗ ಗಳಿಸಿ, ಗೌರವ ಮತ್ತು ಸಮಾನತೆಯಿಂದ ಬಾಳಲು ಸಾಧ್ಯವಾಗಿದೆ. ಸಂವಿಧಾನ ಇದ್ದುದರಿಂದಲೇ ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಯಿತು. ಸಂವಿಧಾನ ರಕ್ಷಿಸಿ, ಉಳಿಸುವುದು ನಮ್ಮಲ್ಲರ ಕರ್ತವ್ಯವಾಗಿದೆ. ಪ್ರಜಾಪ್ರಭುತ್ವ ಒಪ್ಪಿ ದೇಶದಲ್ಲಿ ಆಡಳಿತ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ, ಎಲ್ಲಾ ವ್ಯಕ್ತಿಗಳಿಗೆ ಆರ್ಥಿಕ, ರಾಜಕೀಯ ಹಾಗೂ ಸಾಮಾಜಿಕ ಸಮಾನತೆ ದೊರಕಬೇಕು ಎಂಬುವುದು ಡಾ.ಅಂಬೇಡ್ಕರ್ ಆಶಯವಾಗಿತ್ತು. ಸಂವಿಧಾನ ಈ ಸಾರ ಪ್ರತಿಯೊಬ್ಬರಿಗೂ ಅರ್ಥವಾಗಬೇಕು. ಇದರ ಹಿನ್ನಲೆಯಲ್ಲಿ ಸರ್ಕಾರ ಪ್ರತಿ ಶಾಲೆಯಲ್ಲಿ ಸಂವಿಧಾನ ಓದು ಕಾರ್ಯಕ್ರಮ ಜಾರಿ ಮಾಡಿದೆ. ಮಕ್ಕಳಿಗೆ ಸಂವಿಧಾನದ ಪೀಠಿಕೆ ಬಗ್ಗೆ ಪರಿಚಯ ಮಾಡಿಕೊಡಲಾಗುತ್ತಿದೆ.  ಅಂಬೇಡ್ಕರ್ ಅವರ ಆರ್ಥಿಕ ಸಮಾನತೆಯ ಆಶಯವನ್ನು ಈಡೇರಿಸುವ ದೃಷ್ಟಿಯಿಂದ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹೇಳಿದರು. 
ದೇಶದಲ್ಲಿ ಶೇ.35 ರಷ್ಟು ಯುವ ಜನರಿದ್ದಾರೆ, ಯುವಜನರೇ ನಮ್ಮ ದೇಶದ ಆಸ್ತಿ. ಪ್ರತಿಯೊಬ್ಬ ಯುವಕ, ಯವತಿ ಸಮಾಜಮುಖಿ ಮನೋಭಾವ ಬೆಳಸಿಕೊಳ್ಳಬೇಕು. ವಿವಿಧ ಭಾμÉ, ಧರ್ಮ, ಸಂಸ್ಕøತಿ ಇವರುವುದರಿಂದ ವೀದ್ಯಾರ್ಥಿಗಳಿಗೆ ವೈಚಾರಿಕ ಹಾಗೂ ವೈಜ್ಞಾನಿಕ ಶಿಕ್ಷಣ ಅತ್ಯಗತ್ಯವಾಗಿದೆ. ಯುವಜನರು ದೇಶವನ್ನು ಮುಂದೆ ಕೊಂಡೊಯ್ಯಲು ಹಾಗೂ ಬದಲಾವಣೆ ತರುವ ಪ್ರಯತ್ನ ಮಾಡಬೇಕು. ಭವಿಷ್ಯ ನಿರ್ಮಾಣ ಮಾಡುವವರು ಯುವಜನರು, ಇದನ್ನು ಮನಗಂಡಿದ್ದ ಸ್ವಾಮಿ ವಿವೇಕಾನಂದರು 'ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ' ಎಂದು ಯುವ ಜನರಿಗೆ ಕರೆ ನೀಡಿದರು. ಯುವಕರಿಗೆ ಜೀವನದಲ್ಲಿ ಗುರಿ ಇರಬೇಕು. ಇದನ್ನು ಸಾಧಿಸಲು ಪರಿಶ್ರಮ ಪಡಬೇಕು. ಆಗ ಮಾತ್ರ ಗುರಿ ಸಾಧನೆ ಮಾಡಬಹುದು. ಯುವ ಜನತೆ ದೇಶಕ್ಕೆ ಸಂಪತ್ತಾಗಬೇಕು, ಹೊರೆಯಾಗಬಾರದು. ರಾಜ್ಯದಲ್ಲಿ 1.62 ಲಕ್ಷ ಯವಕ ಯುವತಿಯರಿಗೆ ಯುವನಿಧಿ ಯೋಜನೆಯಡಿ ರೂ.216 ಕೋಟಿ ನಿರುದ್ಯೋಗ ಭತ್ಯೆಯನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಇದರೊಂದಿಗೆ ಯುವ ಜನರಿಗೆ ಕೌಶಲ್ಯ ತರಬೇತಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. 
ಇದೇ ವೇಳೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸಂವಿಧಾನ ಬಗ್ಗೆ ಪರಿಚಯಿಸುವ ಏಙಅ (ಏಟಿoತಿ ಥಿouಡಿ ಛಿoಟಿsಣiಣuಣioಟಿ) ಚಾಲನೆ ನೀಡಿದರು. ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಹಾಗೂ ರಾಜ್ಯ ಎನ್.ಎನ್.ಎಸ್ ಘಟಕದ ಕ್ಯಾಲೆಂಡರ್‍ನ್ನು  ಬಿಡುಗಡೆ ಮಾಡಿದರು. 
ಸುಳ್ಳು ಸುದ್ದಿ ಹಾಗೂ ಸಮೂಹ ಸನ್ನಿಯಿಂದ ದೂರವಿರಿ; 
ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಪ್ರಾಸ್ತಾವಿಕವಾಗಿ ಮಾತನಾಡಿ, ದೇಶದ ಜನಸಂಖ್ಯೆಯಲ್ಲಿ ಶೇ.35 ರಷ್ಟು ಯುವಜನರಿದ್ದಾರೆ. ಕೆಲ ದುಷ್ಟ ಶಕ್ತಿಗಳು ಸಾಮಾಜಿಕ ಜಾಲತಾಣ ಮೂಲಕ ದೇಶದ ಯುವ ಜನತೆಯನ್ನು ದಾರಿ ತಪ್ಪಿಸುತ್ತಿದ್ದಾರೆ. ಯುವ ಜನತೆ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುದ್ದಿಗಳನ್ನು ಒರೆಗೆ ಹಚ್ಚಿ, ಸತ್ಯಾಸತ್ಯೆಯನ್ನು ತಿಳಿದುಕೊಳ್ಳಬೇಕು. ದ್ವೇಷವನ್ನು ಬಿತ್ತುವ ವಿಚಾರ ಹಾಗೂ ಸಮೂಹ ಸನ್ನಿಯಿಂದ ದೂರವಿರಬೇಕು. ದೇಶದ ಬಹುತ್ವ ಅರ್ಥೈಸಿಕೊಳ್ಳಬೇಕು ಎಂದು ಯುವಕರಿಗೆ ಸಲಹೆ ನೀಡಿದರು. 
ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವನಾಗಿದ್ದಾಗ ದಾವಣಗೆರೆಯಲ್ಲಿ ಪ್ರಥಮವಾಗಿ ಯುವಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.  2 ದಶಕಗಳ ತರುವಾಯ ಮತ್ತೊಮ್ಮೆ ರಾಜ್ಯಮಟ್ಟದ ಯುವಜನೋತ್ಸವ ಆಯೋಜಿಸಿರುವುದು ಸಂತಸ ತಂದಿದೆ. ಕ್ರೀಡಾ ಸಚಿವನಾಗಿದ್ದಾಗ ದಾವಣಗೆರೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಈಜುಕೋಳ, ಟೆನ್ನಿಸ್, ಬಾಸ್ಕೆಟ್‍ಬಾಲ್ ಕ್ರೀಡಾಂಗಣಗಳನ್ನು ನಿರ್ಮಿಸಿದ್ದೆ. ಸದ್ಯ ರಾಜ್ಯ ಸರ್ಕಾರದಿಂದ ಸಂಸದ ನೆರವಿನಿಂದ ಕ್ರೀಡಾ ಸಂಕೀರ್ಣ ನಿರ್ಮಿಸಲಾಗುತ್ತಿದೆ. ಜೆ.ಹೆಚ್.ಪಾಟೀಲ್ ನಗರದಲ್ಲಿ ಕ್ರಿಕೇಟ್ ಕ್ರೀಡಾಂಗಣ ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿವೆ. ದಾವಣಗೆರೆ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ 5802 ಯುವಜನರಿಗೆ ರೂ.8.5 ಕೋಟಿ ನಿರುದ್ಯೋಗ ಭತ್ಯೆ ನೀಡಲಾಗಿದೆ. ದಾವಣಗೆರೆ ನಗರದಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸುವಂತೆ ಕಸಾಪ ಸದಸ್ಯರು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. 
ಸಂಸದೆ ಪ್ರಭಾ ಮಲ್ಲಿಕಾರ್ಜುನ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿವೃದ್ಧಿ ಯೋಜನೆಗಳು ಜನತೆಯ ಮನಮುಟ್ಟಿವೆ. ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯನ್ನು ಯುವ ಜನತೆಗೆ ನೀಡಿ, ಯುವ ಜನಾಂಗಕ್ಕೆ ಸರ್ಕಾರ ಪ್ರಾಮುಖ್ಯತೆ ನೀಡಿದೆ.ಯುವಕರ ದೇಶದ ಆಸ್ತಿ. ಅವರ ಪ್ರತಿಭೆ ಗುರುತಿಸಿ ಅದಕ್ಕೆ ಪೂರಕವಾದ ವಾತಾವರಣ ಸೃಷ್ಠಿಸುವ ಕಾರ್ಯ ನಾವೆಲ್ಲರೂ ಮಾಡಬೇಕಿದೆ. ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ನಮ್ಮ ಸಂವಿಧಾನದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಹಾಗೂ ಶಿಕ್ಷಣ ಅಧಿಕಾರಿಗಳೊಂದಿಗೆ ಚರ್ಚಿಸಿ, ಕ್ರಿಯಾಯೋಜನೆ ರೂಪಿಸಿ, ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಸವರಾಜು ವಿ ಶಿವಗಂಗಾ, ಬಿ.ದೇವೇಂದ್ರಪ್ಪ, ಬಿ.ಪಿ.ಹರೀಶ್, ಶಾಂತನಗೌಡ.ಡಿ.ಜಿ. ವಿಧಾನ ಪರಿಷತ್ ಸದಸ್ಯರಾದ  ಕೆ.ಅಬ್ದುಲ್ ಜಬ್ಬಾರ್, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ, ದಾವಣಗೆರೆ ಮಹಾನಗರ ಪಾಲಿಕೆ ಮಹಾಪೌರರಾದ ಚಮನ್ ಸಾಬ್.ಕೆ, ರಾಜ್ಯ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವ್ ನಾಯ್ಕ್, ದಾವಣಗೆರೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರ್ಯದರ್ಶಿ ರಂದೀಪ್.ಡಿ, ಪೆÇಲೀಸ್ ಉಪ ಮಹಾನಿರೀಕ್ಷಕ ರಮೇಶ್.ಬಿ, ಜಿಲ್ಲಾ ಪಂಚಾಯಿತಿ ಸಿಇಓ ಸುರೇಶ್ ಇಟ್ನಾಳ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಉಮಾ ಪ್ರಶಾಂತ್, ಮಾಜಿ ಸಚಿವ ಹೆಚ್.ಆಂಜನೇಯ ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಚೇತನ್ ಸ್ವಾಗತಿಸಿದರು. ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ. ವಂದಿಸಿದರು.

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...