ads

Search This Blog

Friday, 10 January 2025

ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆ : 68.30 ಕೋಟಿ ರೂ.ಮೊತ್ತದ ಬಂಡವಾಳ ಹೂಡಿಕೆಯ ಹೊಸ ಯೋಜನೆಗಳ ಮಂಜೂರಾತಿಗೆ ಅನುಮೋದನೆ


ರಾಯಚೂರು : ಜಿಲ್ಲಾಮಟ್ಟದ ಏಕಗವಾಂಕ್ಷಿ ಸಮಿತಿ ಸಭೆಯು ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 9ರಂದ ನಡೆಯಿತು.

100 ಲಕ್ಷ ರೂ ವೆಚ್ಚದಲ್ಲಿ ಕ್ಯಾಟಲ್ ಫೀಡ್ ಹೆಚ್ಚುವರಿಯಾಗಿ ಕ್ಯಾಟಲ್ ಫೀಡ್ ಹಾಗೂ ಆಯಿಲ್ ಮಿಲ್ಲಿಂಗ್ ಚಟುವಟಿಕೆ, 55 ಲಕ್ಷ ರೂ ವೆಚ್ಚದಲ್ಲಿ ವೇರ್‌ಹೌಸ್ ಹೆಚ್ಚುವರಿಯಾಗಿ ಫ್ಲೆಯಾಸ್ ಬ್ರಿಕ್ಸ್ ತಯಾರಿಕೆ ಚಟುವಟಿಕೆ, 540 ಲಕ್ಷ ರೂ. ವೆಚ್ಚದಲ್ಲಿ ಕಾಟನ್ ಜಿನ್ನಿಂಗ್ ಅಂಡ್ ಸೀಡ್ಸ್ ಪ್ರೊಸಸ್ಸಿಂಗ್ ಚಟುವಟಿಕೆ, 1446 ಲಕ್ಷ ರೂ ವೆಚ್ಚದಲ್ಲಿ ರೈಸ್ ಮಿಲ್ಲಿಂಗ್ ಚಟುವಟಿಕೆ, 1481 ಲಕ್ಷ ರೂ. ವೆಚ್ಚದಲ್ಲಿ ಆಯಿಲ್ ರಿಫೈನರಿ ಚಟುವಟಿಕೆ, 1050 ಲಕ್ಷ ರೂ ವೆಚ್ಚದಲ್ಲಿ ರೈಸ್ ಮಿಲ್ಲಿಂಗ್ ಚಟುವಟಿಕೆ, 303 ಲಕ್ಷ ರೂ ವೆಚ್ಚದಲ್ಲಿ ವೇಸ್ಟ್ ಆಯಿಲ್ ರಿಸೈಕ್ಲಿಂಗ್ ಚಟುವಟಿಕೆ, 400 ಲಕ್ಷ ರೂ ವೆಚ್ಚದಲ್ಲಿ ಗ್ರೌನ್ ನೆಟ್ ಡಿಕಾರ್ಟಿಕೇಟಿಂಗ್ ಚಟುವಟಿಕೆ, 1455 ಲಕ್ಷ ರೂ ವೆಚ್ಚದಲ್ಲಿ ರೈಸ್ ಮಿಲ್ಲಿಂಗ್ ಚಟುವಟಿಕೆ ಸೇರಿದಂತೆ ಹೊಸ ಯೋಜನೆಯ ಮಂಜೂರಾತಿಯ ಬಗ್ಗೆ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಆಗಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಸಭೆಗೆ ವಿವರಿಸಿದರು. ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಒಟ್ಟು 68.30 ಕೋಟಿ ರೂ.ಗಳ ಬಂಡವಾಳ ಹೂಡಿಕೆಯ ಹೊಸ ಯೋಜನೆಗಳ ಮಂಜೂರಾತಿಗೆ ಸಭೆಯಲ್ಲಿ ಅನುಮೋದಿಸಲಾಯಿತು.

ಸಭೆಯಲ್ಲಿ ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಕ್ಕಾಗಿ ಗುರುತಿಸಿರುವ ಜಮೀನು ಸ್ವಾಧೀನಕ್ಕಾಗಿ ಶೀಫಾರಸ್ಸು ಮಾಡುವ ಬಗ್ಗೆ, ಕೆಐಎಡಿಬಿಯಿಂದ ನಿರ್ಮಿಸಲಾದ ವಸತಿ ಗೃಹ ಮತ್ತು ನಿವೇಶನಗಳ ಹಂಚಿಕೆ, ದೇವದುರ್ಗ ವಿಶ್ವ ಮಳಿಗೆಗಳ ಹಂಚಿಕೆ, ರಾಯಚೂರು ಇಂಡಸ್ಟ್ರಿಯಲ್ ಏರಿಯಾ ಮತ್ತು ಗ್ರೋಥ್ ಸೆಂಟರನಲ್ಲಿರುವ ಘಟಕಗಳಿಗೆ ನೀರು ಸರಬರಾಜು ಮಾಡುವ ಬಗ್ಗೆ, ಕೆಎಸ್‌ಎಸ್‌ಐಡಿಸಿ ನಿವೇಶನಗಳ ಹಂಚಿಕೆ, ಮೆಗಾ ಪಾರ್ಕ್ ಸ್ಥಾಪನೆ, ರೈಸ್ ಕ್ಲಸ್ಟರ್ ಸ್ಥಾಪನೆಯ ಸಲುವಾಗಿ ಸುಮಾರು 10 ಎಕರೆ ಜಮೀನು ಒದಗಿಸುವ ಕುರಿತು, ಮೇ:ವಿಕಾಸ್ ಇಂಡಸ್ಟ್ರಿಸ್

ಕೈಗಾರಿಕಾ ಪ್ರದೇಶ ಮಾನವಿ ಇವರಿಗೆ ರೆಡಿಪ್ಲಾಸ್ಟ್ ತಯಾರಿಕೆಯ ಸಲುವಾಗಿ ಸರ್ಕಾರದ ನಿಯಮಗಳ ಪ್ರಕಾರ ಮರಳು ಹಂಚಿಕೆಯ ಕುರಿತು, ಯೋಜನಾ ಮಂಜೂರಾತಿ ಮತ್ತು ಚಟುವಟಿಕೆಯ ಬದಲಾವಣೆಯ ಬಗ್ಗೆ, ರಾಯಚೂರು ಕಾಟನ್ ಮಿಲ್ರ‍್ಸ ಅಸೋಸಿಯನ್ ರಾಯಚೂರು ಅವರ ಪತ್ರ, ಮೇ:ರಾಜೇಂದ್ರ ಇಂಡಸ್ಟ್ರಿಸ್ ಪ್ಲಾಟ್ ನಂ.6 ಯರಮರಸ್ ಇಂಡಸ್ಟಿçಯಲ್ ಏರಿಯಾ ರಾಯಚೂರು ಅವರ ಪತ್ರ, ಕೆಐಎಡಿಬಿಯಲ್ಲಿ ಖಾಲಿ ಇರುವ ನಿವೇಶನದ ಹಂಚಿಕೆ ಸೇರಿದಂತೆ ನಾನಾ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ದೇವದುರ್ಗ ಕೈಗಾರಿಕಾ ಪ್ರದೇಶದ ಬಗ್ಗೆ ಜಮೀನಿನ ಚಕ್‌ಬಂದಿ ಹಾಗೂ ಹಂಚಿಕೆಗೆ ಲಭ್ಯವಾಗುವ ಜಮೀನು ಮತ್ತು ರಾಯಚೂರು ಗ್ರೋಥ್ ಸೆಂಟರನಲ್ಲಿರುವ ಜಮೀನು ಒತ್ತುವರಿಯ ಬಗ್ಗೆ ಸಹ ಸಭೆಯಲ್ಲಿ ಚರ್ಚಿಸಲಾಯಿತು. ಹಂತಹಂತವಾಗಿ ಸರ್ವೆ ಕಾರ್ಯಕೈಗೊಂಡು ಯಾವ ಕಡೆಗಳಲ್ಲಿ ಜಮೀನು ಒತ್ತುವರಿಯಾಗಿದೆ ಎಂಬುದನ್ನು ಸರಿಯಾಗಿ ಗುರುತಿಸಬೇಕು. ಕೆಐಎಡಿಬಿಯಿಂದ ನಿರ್ಮಿಸಲಾದ ನಿವೇಶನಗಳ ಹಂಚಿಕೆ ಪ್ರಕ್ರಿಯೆಗಾಗಿ ಸ್ಕ್ರಿನಿಂಗ್ ಕಮೀಟಿ ರಚಿಸಿ ಅಧಿಸೂಚನೆ ಹೊರಡಿಸಿ ಕೆಐಎಡಿಬಿಯಿಂದ ನಿರ್ಮಿಸಲಾದ ನಿವೇಶನಗಳ ಹಂಚಿಕೆ ಪ್ರಕ್ರಿಯೆಯನ್ನು ತುರ್ತಾಗಿ ನಡೆಸಲು ಜಿಲ್ಲಾಧಿಕಾರಿಗಳು ಇದೆ ವೇಳೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ, ರಾಯಚೂರು ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷರು, ರಾಯಚೂರು ಜಿಲ್ಲಾ ಕಾಟನ್ ಜಿನ್ನರ್ಸ್ ಅಸೋಸಿಯೇಶನ್ ಅಧ್ಯಕ್ಷರು, ರೈಸ್ ಮಿಲ್ಲರ್ಸ ಓನರ್ಸ್ ಅಸೋಶಿಯೇಶನ್ ಅಧ್ಯಕ್ಷರು, ಕೆಐಎಡಿಬಿಯ ಬಳ್ಳಾರಿ ಮತ್ತು ರಾಯಚೂರು ಕಾರ್ಯನಿರ್ವಾಹಕ ಅಭಿಯಂತರರು, ಕೆಎಸ್‌ಎಸ್‌ಐಡಿಸಿಯ ಸಹಾಯಕ ಪ್ರಧಾನ ವ್ಯವಸ್ಥಾಪಕರು, ರಾಯಚೂರು ಜಿಲ್ಲಾ ಕೆಎಸ್‌ಪಿಸಿಬಿಯ ಪರಿಸರ ಅಭಿಯಂತರರು, ರಾಯಚೂರು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರು, ಕೆಎಸ್‌ಎಫ್‌ಸಿಯ ಸಹಾಯಕ ಪ್ರಧಾನ ವ್ಯವಸ್ಥಾಪಕರು, ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ಕಾರ್ಖಾನೆಯ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಜಿಲ್ಲಾ ಅಧಿಕಾರಿಗಳು, ಕೆಯುಡಬ್ಲೂö್ಯಎಸ್‌ಎಸ್‌ಬಿಯ ಕಾರ್ಯನಿರ್ವಾಹಕ ಅಭಿಯಂತರರು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಸೇರಿದಂತೆ ಇತರರು ಇದ್ದರು

ಜಿಪಂ ಸಿಇಓ ಅವರಿಂದ ಜಲಜೀವನ್ ಮಿಷನ್ ಯೋಜನೆಯ ಬಹುಗ್ರಾಮ ಕುಡಿವ ನೀರಿನ ಕಾಮಗಾರಿಗಳ ಕ್ಷೇತ್ರ ಭೇಟಿ; ಪರಿಶೀಲನೆ



ರಾಯಚೂರು :- ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ ಡಿಬಿಟಿಎಮ್‌ವಿಎಸ್ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಗಳ ಭೌತಿಕ ಪ್ರಗತಿಯನ್ನು ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಮ ಪಾಂಡ್ವೆ ಅವರು ಜನವರಿ 8ರಂದು ನಾರಾಯಣಪುರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಜಲ ಜೀವನ್ ಮಿಷನ್ ಯೋಜನೆಯಡಿ ನಾರಾಯಣಪುರ ಜಲಾಶಯದ ಹಿನ್ನೀರಿನ ಭಾಗದಲ್ಲಿ ಇನ್‌ಟೆಕ್ ಕಂ ಜಾಕ್‌ವೆಲ್ ಹೆಡ್‌ವರ್ಕ್ ಸಂಪರ್ಕ ಸೇತುವೆಯನ್ನು ವೀಕ್ಷಿಸಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಗುಣಮಟ್ಟದೊಂದೊಗೆ ಪೂರ್ಣಗೊಳಿಸಲು ಸೂಚಿಸಿದರು. ಚಿತ್ತಾಪೂರ ಗ್ರಾಮದ ನಾರಾಯಣಪೂರ ಜಲಾಶಯದ ವ್ಯಾಪ್ತಿಯಲ್ಲಿ ಕೈಗೊಂಡಿರುವ 160 ಎಂಎಲ್ಡಿ ನೀರು ಸಂಸ್ಕರಣಾ ಘಟಕನ ಏರೇಟರ್, ಕ್ಲಾರಿಫ್ಲೋಕ್ಯುಲೇಟರ್, ಶೋಧನೆ, ಕ್ಲೋರಿನೇಷನ್ 16 ಶೋಧನೆ ಹಾಸಿಗೆ ಪೂರ್ಣಗೊಳಿಸಿರುವುದನ್ನು ಹಾಗೂ ನಿರ್ಮಾಣದ ವಿವಿಧ ಹಂತಗಳಲ್ಲಿರುವ ವಿವಿಧ ಘಟಕಗಳ ಕಾಮಗಾರಿಗಳನ್ನು ಪರಿಶೀಲಿಸಿದರು. ನಂತರ ನಾಗರಾಳ ಹಾಗೂ ನರಕಲದಿನ್ನಿ ಮಾರ್ಗದಲ್ಲಿ ಕೈಗೊಂಡ ಎಂಎಸ್ ಪೈಪ್ಲೈನ್ ಅಳವಡಿಕೆ ಕಾಮಗಾರಿ ಹಾಗೂ ಸದರಿ ಯೋಜನೆಯಡಿ ಕಾನಾಪುರ ಹಟ್ಟಿ ಗ್ರಾಮದಲ್ಲಿ ನಿರ್ಮಾಣ ಮಾಡಲಾದ ಪ್ರಿಕಾಸ್ಟ್ ಒಎಚ್ಟಿ ಕಾಮಗಾರಿಗಳನ್ನು ಪರಿಶೀಲಿಸಿದರು. ಮುಂದುವರೆದು ಮುದಗಲ್ ಗ್ರಾಮದ ಹತ್ತಿರ ಗುತ್ತಿಗೆದಾರರ ಕ್ಯಾಂಪಗೆ ಭೇಟಿ ನೀಡಿ ಈ ಕ್ಯಾಂಪ್ ನಲ್ಲಿ ಯೋಜನೆಗೆ ಅವಶ್ಯಕವಿರುವ ಪ್ರಿಕಾಸ್ಟ್ ಟ್ಯಾಂಕ್ ಕಾಸ್ಟಿಂಗ್ ಕಾಮಗಾರಿಯನ್ನು ಪರಿಶೀಲಿಸಿದರು. ನಂತರ ಮುದಗಲ್ ಕ್ಯಾಂಪಿನಲ್ಲಿ ಎಸ್‌ಎನ್ಸಿ-ವಿಇಐಪಿಎಲ್-ಎಸ್ಪಿಎಂಎಲ್-ಜೆವಿ ಪ್ರಾಜೆಕ್ಟ್ನ ತಾಂತ್ರಿಕ ಅಧಿಕಾರಿಗಳೊಂದಿಗೆ ಯೋಜನೆಯ ಭೌತಿಕ ಪ್ರಗತಿ ಹಾಗೂ ಅನುಷ್ಠಾನದ ಬಗ್ಗೆ ಪ್ರಾತ್ಯಕ್ಷಿತೆ ಮೂಲಕ ಮಾಹಿತಿ ಪಡೆಯಲಾಯಿತು. ತಾಂತ್ರಿಕ ಬೆಂಬಲ ಹಾಗೂ ಗುಣಮಟ್ಟ ನಿಯಂತ್ರಣ ಏಜೆನ್ಸಿ ಪಿ.ಎಮ್.ಸಿ., ಇ.ಜಿ.ಐ.ಎಸ್. ಇಂಡಿಯಾ ಕನ್ಸಲ್ಟಿಂಗ್ ಇಂಜಿನಿಯರ್ಸ್ ಪ್ರೈವೆಟ್ ಲಿಮಿಟೆಡ್ ರಿಂದ ಮಾಹಿತಿ ಪಡೆಯಲಾಯಿತು. ಪಿಎಂಸಿ, ಇಜಿಐಎಸ್ ಇಂಡಿಯಾ ಕನ್ಸಲ್ಟಿಂಗ್ ಇಂಜಿನಿಯರ್ಸ್ ಪ್ರೈವೇಟ್ ಲಿಮಿಟೆಡ್ ಹೆಡ್ವರ್ಕ್ ನಲ್ಲಿ ಜ್ಯಾಕ್ವೆಲ್ ಕಮ್ ಪಂಪ್ಹೌಸ್ ಎಲ್ಲ 22 ಪೈಲಿಂಗ್ ಕಾಮಗಾರಿಗಳನ್ನು ಫೂರ್ಣಗೊಳಿಸಿರುವುದನ್ನು ಪರಿವೀಕ್ಷಿಸಲಾಯಿತು. ಸಂಪರ್ಕ ಸೇತುವೆ ಪ್ರಗತಿ, ಡಬ್ಲೂಟಿಪಿ ಅಡಿ ವಿವಿಧ ರಚನಾತ್ಮಕ ಘಟಕಗಳ ನಿರ್ಮಾಣದ ವಿವಿಧ ಹಂತಗಳ ಪ್ರಗತಿ, ಪೈಪ್‌ಲೈನ್ ಸೇರಿದಂತೆ ನಾನಾ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. ಪ್ರಗತಿ ಹಂತದಲ್ಲಿರುವ ಬಾಕಿ ವಿವಿಧ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಶೀಘ್ರವಾಗಿ ಫೂಣಗೊಳಿಸಲು ಇದೆ ವೇಖೆ ಸಿಇಓ ಅವರು ಸೂಚನೆ ನೀಡಿದರು.







Shodhavani Kannada Daily 10-01-2025

https://drive.google.com/file/d/1HAX4ZO4QGmKGvXU7F2dYyhcDpSR7QtoL/preview?

Thursday, 9 January 2025

Shodhavani Kannada Daily 09-01-2025 newspaper

https://drive.google.com/file/d/10qX40PrHpdUTLgX2A-2HT2imy6ZLN8OA/preview?

Shodhavani Kannada Daily 08-01-2025

https://drive.google.com/file/d/1-DRskjdXJl3P0bAVfoBiUOHs0uA0jT4W/preview?

shodhavani kannada Daily

https://drive.google.com/file/d/1LWt5OYOCzWRDo6xtN8tMPcmaCBCQ5t5e/preview?

ಪತ್ರಿಕಾಗೋಷ್ಠಿ ತಾತ್ಕಾಲಿಕ ಮುಂದುಡಿಕೆ,ಕರವೇ ರಾಜ್ಯ ವಕ್ತಾರ ಬಿ.ಎಂ.ಪಾಟೀಲ್"

ಬಾಗಲಕೋಟೆ  : ನವನಗರದ ಪತ್ರಿಕಾ ಭವನದಲ್ಲಿ ದಿನಾಂಕ:01-01-2025 ರಂದು  ನಡೆಯಬೇಕಿದ್ದ ಪತ್ರಿಕಾಗೋಷ್ಠಿ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕರವೇ ರಾಜ್ಯ ವಕ್ತಾರ ಹಾಗೂ ಜಿಲ್ಲಾಧ್ಯಕ್ಷ ಬಿ.ಎಂ.ಪಾಟೀಲ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಹಾಗೂ ಹಿರಿಯ ಉಪನೋಂದಣಾಧಿಕಾರಿಗಳ ಕಛೇರಿಯಲ್ಲಿ ಬಿ.ಟಿ.ಡಿ.ಎ ಪ್ರಾಧಿಕಾರಕ್ಕೆ ಸಂಬಂಧಿಸಿದ ಹಲವು ಮಾಹಿತಿಯ ದೃಢೀಕೃತ ಪ್ರತಿಗಳನ್ನು ಮಾಹಿತಿ ಹಕ್ಕು ಅಧಿನಿಯಮ 2005 ರಡಿ ಪೊರೈಸಲು ಅರ್ಜಿ ಸಲ್ಲಿಸಲಾಗಿತ್ತು. ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ನಿಗದಿತ ಸಮಯದೊಳಗೆ ಮಾಹಿತಿ ನೀಡಲು ವಿಫಲರಾದ ಹಿನ್ನೆಲೆ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಹಾಗೂ ಹಿರಿಯ ಉಪನೋಂದಣಾಧಿಕಾರಿಗಳ ಕಛೇರಿಯ ಪ್ರಥಮ ಮೇಲ್ಮನವಿ (ಹಿರಿಯ) ಅಧಿಕಾರಿಗಳಿಗೆ ಪ್ರಥಮ ಮೇಲ್ಮನವಿ ಸಲ್ಲಿಸಲಾಗಿತ್ತು. ಪ್ರಥಮ ಮೇಲ್ಮನವಿ ವಿಚಾರಣೆಯ ಅಧಿಕಾರಿಗಳು ನಿನ್ನೆಯ ದಿನ ದಿನಾಂಕ: 07-01-2025 ರಂದು ಪ್ರಥಮ ಮೇಲ್ಮನವಿ ವಿಚಾರಣೆ ನಡೆಸಿ  ಅರ್ಜಿದಾರರು ಕೇಳಿರುವ ಮಾಹಿತಿಯ  ದೃಢೀಕೃತ ಪ್ರತಿಗಳನ್ನು ಪೂರೈಸಲು ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ತಿಳಿಸಿದ್ದರ ಪ್ರಯುಕ್ತ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಅರ್ಜಿದಾರರು ಕೇಳಿರುವ ಮಾಹಿತಿಗಳು ಬೃಹತ್ತ ಗಾತ್ರದ್ದಾಗಿರುವುದರಿಂದ ಮತ್ತು ದೃಢೀಕರಿಸಿ ಪೊರೈಸಲು ಒಂದು ವಾರಗಳ ಕಾಲಾವಕಾಶ ಕೋರಿದರು ಅದಕ್ಕೆ ಅರ್ಜಿದಾರರಾದ ಬಿಎಂ ಪಾಟೀಲರು ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಹಾಗೂ ಸಮರ್ಪಕ ಮಾಹಿತಿ ತಲುಪಿಸುವ ಕಾರಣ ದಿನಾಂಕ: 08-01-2025  ರಂದು ನಡೆಯಬೇಕಾಗಿದ್ದ ಪತ್ರಿಕಾಗೋಷ್ಠಿ ಕಾರ್ಯಕ್ರಮ ವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕರವೇ ರಾಜ್ಯ ವಕ್ತಾರ ಹಾಗೂ ಜಿಲ್ಲಾಧ್ಯಕ್ಷ ಬಿ.ಎಮ್ .ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...