ads

Search This Blog

Sunday, 19 January 2025

ಕಲ್ಯಾಣ ಕರ್ನಾಟಕ ಈಡಿಗ ಪ್ರಮುಖರ ಸಭೆಯಲ್ಲಿ ಎಚ್ಚರಿಕೆ: ಬಜೆಟ್ ನಲ್ಲಿ ಬೇಡಿಕೆ ಈಡೇರಿಸಿ ಇಲ್ಲವೇ ಹೋರಾಟದ ಬಿಸಿ ಎದುರಿಸಿ

ಕಲಬುರಗಿ : ರಾಜ್ಯದ ಈಡಿಗ ಬಿಲ್ಲವ ನಾಮಧಾರಿ ಸೇರಿದಂತೆ 26 ಪಂಗಡಗಳ ಬೇಡಿಕೆಗಳನ್ನು ಈ ಬಾರಿ ಬಜೆಟ್ ನಲ್ಲಿ ಘೋಷಿಸದಿದ್ದರೆ ಸರಕಾರವು ಸಮುದಾಯದ ಜನತೆಯ ಉಗ್ರ ಹೋರಾಟದ ಬಿಸಿಯನ್ನು ಎದುರಿಸಬೇಕಾಗುತ್ತದೆ ಎಂದು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಈಡಿಗ ನಾಯಕರ ಸಭೆಯಲ್ಲಿ ಒಮ್ಮತದಿಂದ ನಿರ್ಣಯ ಅಂಗೀಕರಿಸಲಾಗಿದೆ. 
    ಕಲಬುರಗಿ ಜಗತ್ ವೃತದಲ್ಲಿರುವ ಆಮಂತ್ರಣ ಹೋಟೆಲ್ ಸಭಾಂಗಣದಲ್ಲಿ ಜನವರಿ 19ರಂದು ನಡೆದ ಕಲ್ಯಾಣ ಕರ್ನಾಟಕ ಆರ್ಯ ಈಡಿಗ ಜಿಲ್ಲಾ, ತಾಲೂಕು ಪದಾಧಿಕಾರಿಗಳ ಹಾಗೂ ಸಮಾಜದ ಮುಖಂಡರ ಸಭೆಯಲ್ಲಿ 13 ಬೇಡಿಕೆಗಳ ಒಮ್ಮತದ ನಿರ್ಣಯವನ್ನು ಅಂಗೀಕರಿಸಲಾಗಿದೆ. 



   ಚಿತ್ತಾಪುರ ತಾಲೂಕು ಬ್ರಹ್ಮ ಶ್ರೀ ನಾರಾಯಣ ಗುರು ಶಕ್ತಿಪೀಠದ ಪೂಜ್ಯರು ಹಾಗೂ ಈಡಿಗ ಸಮಾಜದ ಗುರುಗಳಾದ ಡಾ. ಪ್ರಣವಾನಂದ ಸ್ವಾಮೀಜಿಯವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಒಟ್ಟು 12 ನಿರ್ಣಯಗಳನ್ನು ಅಂಗೀಕರಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ಬಜೆಟ್ ಮಂಡನೆಯಾದರೂ ಈಡಿಗ ಸಮುದಾಯಕ್ಕೆ ನಯಾ ಪೈಸೆ ಯ ಅನುದಾನ ಸಿಕ್ಕಿಲ್ಲ ಬ್ರಹ್ಮಶ್ರೀ ನಾರಾಯಣ ಗುರು ಈಡಿಗ ನಿಗಮಕ್ಕೆ 500 ಕೋಟಿ ರೂಪಾಯಿ ನಿಗದಿಪಡಿಸಬೇಕು ಹಾಗೂ ನಿಗಮಕ್ಕೆ ಅಧ್ಯಕ್ಷರು ಮತ್ತು ನಿರ್ದೇಶಕರನ್ನು ಕೂಡಲೇ ಘೋಷಣೆ ಮಾಡಬೇಕು. ಸೇಂದಿ ಇಳಿಸುವ ಕುಲಕಸುಬು ಕಳೆದುಕೊಂಡ ಸಮುದಾಯದ ಜನರಿಗೆ ಪುನರ್ವಸತಿ ಕೂಡಲೇ ಘೋಷಣೆ ಮಾಡಬೇಕು ಹಾಗೂ ಸರಕಾರದಿಂದ ತಲಾ ಎರಡು ಎಕರೆ ಜಮೀನು ನೀಡಿ ಸೇಂದಿ ಗಿಡ ಬೆಳೆಸಲು ಅನುಮತಿ ನೀಡಬೇಕು. ರಾಜ್ಯ ಸರ್ಕಾರವು ಈ ಹಿಂದೆ ಘೋಷಣೆ ಮಾಡಿದ ಕುಲಶಾಸ್ತ್ರೀಯ ಅಧ್ಯಯನದ 25 ಲಕ್ಷ ರೂಪಾಯಿಯನ್ನು ಬಿಡುಗಡೆ ಮಾಡಿ ಕೂಡಲೇ ಅಧ್ಯಯನ ಪ್ರಾರಂಭಿಸಬೇಕು. ಗುಲ್ಬರ್ಗ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದಲ್ಲ ವಿಶ್ವವಿದ್ಯಾಲಯಗಳಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಆರಂಭಿಸಬೇಕು. ವಿಧಾನಸೌಧದ ಆವರಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಮೆ ಸ್ಥಾಪಿಸಬೇಕು, ಈಡಿಗ ಬಿಲ್ಲವ ನಾಮಧಾರಿ ಸೇರಿದಂತೆ 26 ಪಂಗಡಗಳಿಗೆ ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಎಕರೆ ಸರಕಾರಿ ಭೂಮಿ ನೀಡಿ ಸಮಾಜದ ಕೆಲಸ ಕಾರ್ಯಕ್ಕೆ ಬಳಸುವಂತೆ ಹಣಕಾಸು ನೆರವು ಮಂಜೂರು ಮಾಡಬೇಕು. ಮಹಾರಾಷ್ಟ್ರ, ತೆಲಂಗಾಣ, ಕೇರಳ ಹಾಗೂ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈಗ ಇರುವಂತೆ ಸೇಂದಿ ನೀರಾ ಇಳಿಸಲು ಇಡೀ ರಾಜ್ಯದಲ್ಲಿ ಅನುಮತಿ ನೀಡಬೇಕು. ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ವಸತಿಯುತ ಹಾಸ್ಟೆಲ್ ಪ್ರಾರಂಭಿಸಬೇಕು ಹಾಗೂ ಇದಕ್ಕೆ ಕೆಕೆಆರ್‌ಡಿಬಿಯಿಂದ ಅನುದಾನ ಒದಗಿಸಬೇಕು. ಕಲ್ಯಾಣ ಕರ್ನಾಟಕ ಭಾಗದ ಸಮುದಾಯದ ಪದವೀಧರ ವಿದ್ಯಾರ್ಥಿಗಳಿಗೆ ಸಿಮೆಂಟ್ ಕಂಪೆನಿ ಸೇರಿದಂತೆ ಇಲ್ಲಿನ ಕೈಗಾರಿಕೆಗಳಲ್ಲಿ ಉದ್ಯೋಗ ಅವಕಾಶಗಳನ್ನು ನೀಡಬೇಕು. ಬಜೆಟ್ ವೇಳೆ ಸಮುದಾಯದ ಬೇಡಿಕೆಗಳ ಮನವಿಯನ್ನು ಸಲ್ಲಿಸಲು ಮುಖ್ಯಮಂತ್ರಿಗಳ ಬಳಿಗೆ ನಿಯೋಗ ಕೊಂಡೊಯ್ಯುವುದು. ಈ ಸಾಲಿನ ಬಜೆಟ್ ನಲ್ಲಿ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟಕ್ಕೆ ಸಜ್ಜಾಗುವುದು. ಕಲಬುರ್ಗಿಯಲ್ಲಿ ಶೀಘ್ರದಲ್ಲೆ ಈಡಿಗ ಮತ್ತು ಅತಿ ಹಿಂದುಳಿದ ವರ್ಗಗಳ ಸಮಾವೇಶವನ್ನು ನಡೆಸುವುದು ಮತ್ತು ಕಲ್ಯಾಣ ಕರ್ನಾಟಕದಲ್ಲಿ ಅವಧಿ ಪೂರ್ಣಗೊಳಿಸಿದ ಆರ್ಯ ಈಡಿಗ ಸಮಾಜದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪುನರ್ ರಚನೆ ಮಾಡಲಾಗುವುದು ಎಂದು ನಿರ್ಣಯ ಕೈಗೊಳ್ಳಲಾಯಿತು. ಡಾ. ಸದಾನಂದ ಪೆರ್ಲ ಮಂಡಿಸಿದ ನಿರ್ಣಯವನ್ನು ಯುವ ಮುಖಂಡರಾದ ಬಾಲರಾಜ್ ಗುತ್ತೇದಾರ್ ಅನುಮೋದನೆ ಮಾಡಿ ಒಪ್ಪಿಗೆ ಪಡೆಯಲಾಯಿತು. 
---_--------------------------
ಪ್ರಾಮಾಣಿಕ ಸ್ಪಂದನೆ ನೀಡಿ ಸಮುದಾಯದ ಕಲ್ಯಾಣ ಮಾಡಿ: ಡಾ.ಪ್ರಣವಾನಂದ ಶ್ರೀ

ರಾಜ್ಯದ ಹಿಂದುಳಿದ ಸಮಾಜವಾದ ಈಡಿಗ ಸೇರಿದಂತೆ 26 ಪಂಗಡಗಳ ನ್ಯಾಯೋಚಿತ ಬೇಡಿಕೆಗಳನ್ನು ಪರಿಗಣಿಸಿ ಶೀಘ್ರ ಅನುಷ್ಠಾನ ಉಳಿಸಿ ಸಮುದಾಯದ ಕಲ್ಯಾಣ ಮಾಡಬೇಕು. ಸಮುದಾಯದ ಜನರ ನೋವಿಗೆ ರಾಜ್ಯ ಸರ್ಕಾರವು ಸ್ಪಂದನೆ ನೀಡುವ ವಿಶ್ವಾಸವಿದೆ ಎಂದು ಡಾ. ಪ್ರಣವಾನಂದ ಶ್ರೀಗಳು ತಿಳಿಸಿದರು. 
 ಕಲ್ಯಾಣ ಕರ್ನಾಟಕ ಈಡಿಗ ಸಮುದಾಯದ ಪ್ರಮುಖರ ಸಭೆಯನ್ನು ಎಲ್ಲಮ್ಮ ದೇವಿ, ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಶರಣ ಹೆಂಡದ ಮಾರಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ನಂತರ ಮಾತನಾಡುತ್ತ ಈ ಹಿಂದಿನ ಎರಡು ಬಜೆಟ್ ಗಳಲ್ಲಿ ರಾಜ್ಯ ಸರ್ಕಾರವು ಸಮುದಾಯಕ್ಕೆ ಪಂಗನಾಮ ಹಾಕಿದ್ದು ಮುಂದಿನ ಬಜೆಟ್ ನಲ್ಲಿ ಬೇಡಿಕೆಗಳನ್ನು ಈಡೇರಿಸಿ ಹಿಂದುಳಿದ ವರ್ಗವನ್ನು ಮೇಲೆತ್ತಬೇಕು ಎಂದು ಆಗ್ರಹಿಸಿದರು. ಇಲ್ಲವಾದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪ್ರಮುಖರ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ರಾಜ್ಯಾದ್ಯಂತ ಉಗ್ರ ಹೋರಾಟಕ್ಕೆ ರೂಪುರೇಷೆ ಸಿದ್ದಪಡಿಸಲಾಗುವುದು. ಈಡಿಗ ಸಮಾಜವು ಯಾವುದೇ ಸರಕಾರ ಅಥವಾ ಪಕ್ಷಗಳ ವಿರೋಧಿಯಲ್ಲ ಬದಲಾಗಿ ಸಮುದಾಯದ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ತಮ್ಮ ನೇತೃತ್ವದಲ್ಲಿ ಹಿರಿಯರ ತಂಡವು ಕಲ್ಯಾಣ ಕರ್ನಾಟಕ ಭಾಗದ 58 ತಾಲೂಕುಗಳಲ್ಲಿ ಪ್ರವಾಸ ಮಾಡಿ ಸಂಘಟನೆ ಮಾಡಲಾಗುವುದು ಎಂದರು. ಸಮುದಾಯದ ಬಗ್ಗೆ ಯಾವುದೇ ಒಡಕಿನ ಮಾತುಗಳನ್ನಾಡದೆ ಎಲ್ಲರೂ ಒಗ್ಗಟ್ಟಿನಿಂದ ಸಮುದಾಯದ ಅಭಿವೃದ್ಧಿಗೆ ಶ್ರಮಿಸಬೇಕು. ಯಾವುದೇ ಟೀಕೆ ಟಿಪ್ಪಣಿಗಳಿಗೆ ಸ್ಪಂದಿಸದೆ ಈಡಿಗ ಸಮುದಾಯದ ಮಕ್ಕಳ ಭವಿಷ್ಯಕ್ಕೆ ನಾವೆಲ್ಲರೂ ಕಂಕಣಬದ್ಧರಾಗಬೇಕು. ಸಮುದಾಯದ ಬಗ್ಗೆಯಾಗಲಿ ಅಥವಾ ಸ್ವಾಮೀಜಿಯವರ ಬಗ್ಗೆಯಾಗಲಿ ನಿಕೃಷ್ಟವಾಗಿ ಮಾತನಾಡಿ ಮಾನಹಾನಿ ಮಾಡುವುದರ ವಿರುದ್ಧ ಇಡೀ ಸಮಾಜ ಎದ್ದು ನಿಲ್ಲುತ್ತದೆ. ಅಂತಹ ಶಕ್ತಿಗಳು ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. 
     ಈ ವಿಶೇಷ ಚರ್ಚಾ ಸಭೆಯಲ್ಲಿ ಮಾಜಿ ಶಾಸಕರಾದ ಸುಭಾಷ್ ಆರ್ ಗುತ್ತೇದಾರ್, ಸತೀಶ್ ವಿ ಗುತ್ತೇದಾರ್, ಬಾಲರಾಜ್ ಗುತ್ತೇದಾರ್, ಡಾ. ರಾಜಶೇಖರ ಸೇಡಂಕರ್ ಬೀದರ ,ಇ ಎನ್ ಕೃಷ್ಣಮೂರ್ತಿ, ಡಾ. ಸದಾನಂದ ಪೆರ್ಲ ಬಳ್ಳಾರಿ, ಅಶೋಕ್ ಯಾದಗಿರಿ ನಾಗಯ್ಯ ಗುತ್ತೇದಾರ್ ಚಿತ್ತಾಪುರ, ಸುನಿಲ್ ರಾಯಚೂರು ಶೇಖರ್ ಗಾರಂಪಳ್ಳಿ ಚಿಂಚೋಳಿ, ರಾಜಕುಮಾರ್ ಗುತ್ತೇದಾರ್, ದೇವೇಂದ್ರಪ್ಪ ಗುತ್ತೇದಾರ್, ಮಲ್ಲಿಕಾರ್ಜುನ ಹುಣಸಗಿ, ಸಂಗಯ್ಯ ಸುಲ್ತಾನ್ ಪುರ್ ಶಂಕರ್ ಲೀಡರ್ ಮಾತನಾಡಿ ದರು. ವೆಂಕಟೇಶ ಗೂಂಡಾ, ರಾಜೇಶ್ ಗುತ್ತೇದಾರ್, ವೆಂಕಟೇಶ ಕಡೇ ಚೂರ್, ಮಹೇಶ ಗುತ್ತೇದಾರ್ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಈಡಿಗ ಸಮುದಾಯದ ಸುಮಾರು 175 ರಷ್ಟು ಪ್ರಮುಖರು ಪಾಲ್ಗೊಂಡಿದ್ದರು.
***********
ಡಾ. ಪ್ರಣವಾನಂದ ಶ್ರೀಗಳು ಈಡಿಗ ಸಮಾಜದ ಶಕ್ತಿಯಾಗಿದ್ದು ಅವರ ನೇತೃತ್ವದ ಎಲ್ಲಾ ಕಾರ್ಯಗಳಿಗೆ ಕಲ್ಯಾಣ ಕರ್ನಾಟಕ ಭಾಗದಿಂದ ಶಕ್ತಿ ತುಂಬುವ ಕೆಲಸ ಆಗಬೇಕಾಗಿದೆ. ಈ ಭಾಗದ ಸಮುದಾಯದ ಜನರು ಬೇಡಿಕೆ ಈಡೇರಿಕೆಗಾಗಿ ಸಂಧಾನಕ್ಕೂ ಸೈ ಹೋರಾಟಕ್ಕೂ ಸೈ. 

*ಸತೀಶ್ ವಿ ಗುತ್ತೇದಾರ್, ಅಧ್ಯಕ್ಷರು ಕಲ್ಯಾಣ ಕರ್ನಾಟಕ ಆರ್ಯ ಈಡಿಗ ಹೋರಾಟ ಸಮಿತಿ*
-------------------

ಈಡಿಗ ಸಮುದಾಯ ಒಗ್ಗಟ್ಟನ್ನು ಕಾಪಾಡಿಕೊಂಡು ಕುಲಕಸುಬು ಮರಳಿ ಪಡೆಯಲು ಒಕ್ಕೊರಳಿನಿಂದ ಧ್ವನಿ ಎಬ್ಬಿಸಿ ಹೋರಾಟ ಮಾಡಬೇಕಲ್ಲದೆ ಈಡಿಗ ವಿರೋಧಿ ನೀತಿಯನ್ನು ಅನುಸರಿಸುವ ಸರಕಾರಕ್ಕೆ ಬಿಸಿ ಮುಟ್ಟಿಸಬೇಕಾಗಿದೆ. ಅನಿವಾರ್ಯವಾದರೆ "ಬೆಂಗಳೂರು ಚಲೋ" ಕೂಡ ನಡೆಸಲು ಸಿದ್ದರಾಗ ಬೇಕಾಗುತ್ತದೆ. ಸರಕಾರದ ಮದ್ಯದ ಅಂಗಡಿ ಎಂಎಸ್ಐಎಲ್ ನಲ್ಲಿ ಕುಲಬ ಕಸುಬು ಕಳೆದುಕೊಂಡವರಿಗೆ ನೌಕರಿಗೆ ನೇಮಿಸಬೇಕು. ಇದಕ್ಕಾಗಿ ಸೇಂದಿ ಕುಲಕಸುಬು ಕಳೆದುಕೊಂಡವರು ಶಕ್ತಿಯುತ ಹೋರಾಟ ಮಾಡಿ.ಅದಕ್ಕಾಗಿ ನಾಯಕರ ಮೇಲೆ ಕೂಡಾ ಒತ್ತಡ ಹೇರಬೇಕು. ಬೇಡಿಕೆಗಳ ಕುರಿತಾಗಿ ನಿತ್ಯ ಸರಕಾರಕ್ಕೆ ಅರ್ಜಿಗಳನ್ನು ಬರೆಯಬೇಕು.

*ಬಾಲರಾಜ್ ಗುತ್ತೇದಾರ್ ಜಿಲ್ಲಾಧ್ಯಕ್ಷರು ಜೆಡಿಎಸ್*
------------------------------
ಹಿಂದುಳಿದ ಈಡಿಗ ಸಮುದಾಯದ ಕಲ್ಯಾಣಕ್ಕಾಗಿ ಇಂತಹ ಮಹತ್ವದ ಸಭೆ ನಡೆಸಿ ನಿರ್ಣಯ ಅಂಗೀಕರಿಸಿದ್ದನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಬೇಡಿಕೆ ಈಡೇರಿಸಬೇಕು ಈಡಿಗ ಸಮುದಾಯದ ಸಂಘಟನೆ ಬಲಗೊಂಡು ಪ್ರತಿ ಜಿಲ್ಲೆಗಳಲ್ಲಿ ಈಡಿಗ ಸಮಾಜದ ಸಮಿತಿ ಪುನರ್ ರಚನೆಗೊಳ್ಳಬೇಕು ಸಮುದಾಯದ ಎಲ್ಲಾ ಹೋರಾಟಗಳಿಗೆ ಪೂರ್ಣ ಬೆಂಬಲವಿದೆ.
...ಸುಭಾಷ್ ಆರ್ ಗುತ್ತೇದಾರ್ ಮಾಜಿ ಶಾಸಕರು ಅಳಂದ

ಅಲ್ಪಸಂಖ್ಯಾತರ ಸಮುದಾಯದ ಕುಂದು ಕೊರತೆಗಳು ಹಂತ ಹಂತವಾಗಿ ಬಗೆಹರಿಸಲಾಗುವುದು-ಇಕ್ಬಾಲ್‌ಸಿಂಗ್

;ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನವದೆಹಲಿಯ ರಾಷ್ಟಿçÃಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಇಕ್ಬಾಲ್‌ಸಿಂಗ್ ಲಾಲಪುರಾ ಅವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಸಮುದಾಯದ ಮುಖಂಡರೊAದಿಗೆ ಸಭೆಯಲ್ಲಿ ಮಾತನಾಡಿದರು.

 ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಮತ್ತು ಪಾರ್ಸಿ ಜನಾಂಗದವರಿಗೆ ಅನೇಕ ಸೌಲಭ್ಯಗಳಿದ್ದು ಅವುಗಳ ಸದುಪಯೋಗ ಮಾಡಿಕೊಳ್ಳುವಂತೆ ಅಧ್ಯಕ್ಷರು ತಿಳಿಸಿದರು. ಭಾರತವು ಪ್ರಪಂಚದಲ್ಲಿಯೇ ಸಹಿಷ್ಟಂತೆ ಹೊಂದಿರುವ ಏಕೈಕ ದೇಶವಾಗಿದ್ದು, ನಾವೆಲ್ಲರೂ ಒಂದಾಗಿ, ಸುರಕ್ಷಿತರಾಗಿ ದೇಶದ ಏಳ್ಗೆಗಾಗಿ ವಿಚಾರ ಮಾಡಿದರೆ ದೇಶದ ಅಭಿವೃದ್ಧಿಯಾಗುವುದರಲ್ಲಿ ಸಂಶಯವಿಲ್ಲ ಎಂದು ತಿಳಿಸಿದರು.

 ಅಲ್ಪಸಂಖ್ಯಾತರನ್ನು ಎಲ್ಲಾ ಹಂತಗಳಲ್ಲಿ ಸ್ಥಾನಮಾನಗಳು ಸಿಗುತ್ತಿದ್ದು ಉನ್ನತ ಸ್ಥಾನದಲ್ಲಿರುವವರು ಕ್ರೀಯಾಶೀಲರಾಗಿ ಕರ್ತವ್ಯ ನಿರ್ವಹಿಸಿದ್ದಲ್ಲಿ ಯೋಜನೆಗಳಲ್ಲಿ ಪಾರದರ್ಶಕತೆಯನ್ನು ತರಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಹಾಗೂ ಜಿಲ್ಲಾ ಹಂತದ ಸಮಸ್ಯೆ ಮತ್ತು ಕುಂದು ಕೊರತೆಗಳನ್ನು ಆಯಾ ಅಧಿಕಾರಿಗಳಿಗೆ ಭೇಟಿ ಮಾಡಿಕೊಂಡು ಬಗೆಹರಿಸಿಕೊಳ್ಳಲು ಸೂಚಿಸಿದರು.

 ಬೀದರ ಜಿಲ್ಲೆ ಎಲ್ಲಾ ಧರ್ಮದವರಿಂದ ಕೂಡಿದ್ದು ಇದು ಏಕತೆ ನಾಡಾಗಿದೆ. ಇಲ್ಲಿರುವ ಏಕತಾಭಾವ ಎಲ್ಲಾ ಗಡಿಭಾಗದ ರಾಜ್ಯಗಳಲ್ಲಿ ಪಸಲಿಸಲಿ ಎಂದು ಹಾರೈಸಿದರು.

ಸಭೆಯಲ್ಲಿ ಭಾಗವಹಿಸಿದ ಎಲ್ಲಾ ಮುಖಂಡರುಗಳು ವಿವಿಧ ರೀತಿಯಲ್ಲಿ ಸಮುದಾಯವರು ಅನುಭವಿಸುತ್ತಿರುವ ಸಮಸ್ಯೆಗಳು ಮತ್ತು ಕುಂದು ಕೊರತೆಗಳ ಬಗ್ಗೆ ತಮ್ಮ ಅಹವಾಲುಗಳನ್ನು ನೀಡಿದರು.

 ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಲು ಮತ್ತು ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ಮನ ಪರಿವರ್ತನೆಗೊಂಡು ಮಹಾಯೋಗಿಯಾದ ವೇಮನ

ಬಾಗಲಕೋಟೆ : ಜೀವನದಲ್ಲಿ ಬರುವ ಬೋಗ, ಭಾಗ್ಯಗಳು ಕ್ಷಣಿಕ ಸುಖದವು ಎಂದರಿತು ಮನ ಪರಿವರ್ತನೆಗೊಂಡ ಮಹಾಯೋಗಿ ವೇಮನ ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಹೇಳಿದರು.

ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ವiತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಮಹಾಯೋಗಿ ವೇಮನನ ೬೧೩ನೇ ಜಯಂತಿ ಕರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವೇಮನರು ನಾಲ್ಕು ಸಾಲುಗಳ್ಳುಳ ಚೌಪದಿ ವಚನಕಾರರಾಗಿದ್ದು, ಲೋಕದಲ್ಲಿ ಜನಿಸಿದ ಪ್ರತಿಯೊಬ್ಬರು ಜಾತಿ-ಮತ ಪಂಥಗಳನ್ನು ಬದಿಗಿರಿಸಿ ಸ್ನೇಹ ಸೌಹಾರ್ದತೆಯಿಂದ ಬದುಕಬೇಕೆಂದು ಸಾರಿ ಸಾರಿ ಹೇಳಿದ್ದಾರೆ. 

ಪ್ರತಿಯೊಬ್ಬರು ಜವಾಬ್ದಾರಿಯ ಬದುಕು ಕಟ್ಟಿಕೊಳ್ಳಬೇಕೆಂಬ ಸಂದೇಶ ನೀಡಿ ತಂದೆ-ತಾಯಿಯರಲ್ಲಿ ದಯೆ ತೋರದ ಪುತ್ರ ಹುಟ್ಟಿದರೇನು, ಸತ್ತರೇನು. ಹುತ್ತದಲ್ಲಿ ಗೆದ್ದಲು ಹುಟ್ಟವೇ? ಸಾಯವೇ? ಎಂದು ವಚನ ರಚಿಸಿದ್ದು, ಮಾತಾ-ಪಿತೃರ ಮೇಲಿರುವ ಭಕ್ತಿ ಎಂತಹದು ಎಂದು ತೋರುತ್ತದೆ. ಇಂತಹ ಮಹಾನ ಯೋಗಿಯ ತತ್ವಗಳನ್ನು ಮೈಗೂಡಿಸಿಕೊಂಡಾಗ ಜಯಂತಿ ಆಚರಣೆ ಅರ್ಥಪೂರ್ಣವಾಗುತ್ತದೆ ಎಂದರು. ನವನಗರದಲ್ಲಿ ನಿರ್ಮಿಸಲಾಗುತ್ತಿರುವ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ತಮ್ಮ ಅನುದಾನದಲ್ಲಿ ೫ ಲಕ್ಷ ರೂ.ಗಳನ್ನು ನೀಡುವದಾಗಿ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿಟಿಡಿಎ ಅಧ್ಯಕ್ಷ ಎಚ್.ವೈ.ಮೇಟಿ ಮಾತನಾಡುತ್ತ ಮಹಾಯೋಗಿ ವೇಮನ ಮತ್ತು ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಇಬ್ಬರು ಒಂದೇ ಕುಟುಂಬದವರಾಗಿದ್ದು, ಸಾಮಾಜಿಕ ಧಾರ್ಮಿಕ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡಿದ್ದಾರೆ. ಇವರು ಲೋಕಾರೂಡಿಯಂತೆ ಒಂದು ಕುಲದಲ್ಲಿ ಜನಿಸಿದ್ದರೂ ಜಾತಿ ರಹಿತವಾದ ಜೀವನ ಸಾಗಿಸಿ ಮಾನವರೆಲ್ಲ ಒಂದೇ ಎಂಬ ಸಂದೇಶವನ್ನು ಸಾರಿದ್ದಾರೆ.

ನಾನು ಚಿಕ್ಕವನಿದ್ದಾಗ ನಮ್ಮ ಊರಲ್ಲಿ ಪ್ರದರ್ಶನಗೊಂಡ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ನಾಟಕ ನನ್ನ ಜೀವನದಲ್ಲಿ ಪರಿಣಾಮ ಬೀರಿತು. ಮಲ್ಲಮ್ಮ ಹಾಗೂ ವೇಮನರಂತಹವರ ತತ್ವ ಆದರ್ಶಗಳು ಮುಂದಿನ ಜನಾಂಗಕ್ಕೆ ತಿಳಿಯಲೆಂದು ಇದನ್ನು ಸರಕಾರಿ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದೆ. ನವನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಹೇಮರಡ್ಡಿ ದೇವಸ್ಥಾನಕ್ಕೆ ೧೦ ಲಕ್ಷ ರೂ.ಗಳನ್ನು ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ನೀಡುವದಾಗಿ ಹೇಳಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆನ್ನವರ ಮಾತನಾಡಿ ವೇಮನ ಹೆತ್ತವರಿಂದ ಒಡಹುಟ್ಟಿದವರಿಂದ ಸಂಬAಧಿಕರಿAದ ಅನಾದರಕ್ಕೆ ಗುರಿಯಾಗಿ ದುಶ್ಚಟಗಳ ದಾಸನಾಗಿದ್ದ ಸಂದರ್ಭದಲ್ಲಿ ಪರಸ್ತಿçà ಸಂಗದಲ್ಲಿ ತೊಡಗಿ ಸಂಪತ್ತನ್ನೆಲ್ಲ ಹಾಳು ಮಾಡುತ್ತಿರುವ ಸಮಯದಲ್ಲಿ ಇವನನ್ನು ಹೇಮರಡ್ಡಿ ಮಲ್ಲಮ್ಮ ಪರಿವರ್ತನೆ ಮಾಡುವಲ್ಲಿ ಸಫಲಳಾಗಿದ್ದಾಳೆ ವೇಮನರ ಹಲವಾರು ವಚನಗಳು ಲೌಕಿಕದ ಅಂಕು-ಡೊAಕುಗಳನ್ನು ತಿದ್ದುವ ದಾರಿದೀಪಗಳಾಗಿದ್ದು ನಾವೆಲ್ಲರೂ ಅವರ ತತ್ವಗಳನ್ನು ಅಳವಡಿಸಿಕೊಳ್ಳೋಣ ಎಂದರು. ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಬಾಗಲಕೋಟೆ ಆಧ್ಯಾತ್ಮಿಕ ಚಿಂತಕ ಪ್ರದೀಪ ಗುರೂಜಿ ವೇಮನನ ಸಮಗ್ರ ಜೀವನದ ಬಗ್ಗೆ ಉಪನ್ಯಾಸ ನೀಡಿದರು.

ಕರ‍್ಯಕ್ರಮದಲ್ಲಿ ಹೇಮ-ವೇಮ ಸಂಸ್ಥೆಯ ಅಧ್ಯಕ್ಷ ಆರ್.ಎಲ್.ಕಟಗೇರಿ, ನಾರಾಯಣ ಹಾದಿಮನಿ, ಎಚ್.ಎಸ್.ನಾಲತ್ವಾಡ, ಎಸ್.ಬಿ.ಮಾಚಾ, ಈಶ್ವರ ಕೋನಪ್ಪನವರ ಹಾಜರಿದ್ದರು. ಪ್ರಾರಂಭದಲ್ಲಿ ಕನ್ನಡ ಮತ್ತು ಸಂಸ್ಕçತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಸ್ವಾಗತಿಸಿದರು. ಕೊನೆಗೆ ರಡ್ಡಿ ಸಮಾಜದ ಅಧ್ಯಕ್ಷ ಮಹೇಶ ಕಕರಡ್ಡಿ ವಂದಿಸಿದರು. ಶಂಕರಲಿAಗ ದೇಸಾಯಿ, ಉಮಾ ಕೆಳಗಿನಮನಿ ಕರ‍್ಯಕ್ರಮ ನಿರೂಪಿಸಿದರು.

ಕರ‍್ಯಕ್ರಮದ ಆರಂಭದ ಮುನ್ನ ಜಿಲ್ಲಾಡಳಿತ ಭವನದ ಎದುರು ಬೀಳಗಿ ಶಾಸಕ ಜೆ.ಟಿ.ಪಾಟೀಲ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ವೇಮನರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು. ಕುಂಭಹೊತ್ತ ಮುತೈದೆಯರು ಹಾಗೂ ವಿವಿಧ ಕಲಾತಂಡಗಳು ಮೆರವಣಿಗೆಯೊಂದಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಡಾ.ಅಂಬೇಡ್ಕರ ಭವನಕ್ಕೆ ಮುಕ್ತಾಯಗೊಂಡಿತು. ಅಪರ್ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಅಲ್ಪಸಂಖ್ಯಾತ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಾನಂದ ಪಟ್ಟಣಶೆಟ್ಟಿ ಮೆರವಣಿಗೆಂiÀiಲ್ಲಿ ಪಾಲ್ಗೊಂಡಿದ್ದರು.


ಮಹಾಯೋಗಿ ವೇಮನ ಜಯಂತಿ


ಬೀದರ  ಜನವರಿ.19:- ಇಂದು ಮಹಾಯೋಗಿ ವೇಮನ ಜಯಂತಿ ನಿಮಿತ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ ಅವರು ವೇಮನರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ರೆಡ್ಡಿ ಸಮಾಜದ ಅಧ್ಯಕ್ಷ ಶಂಕರರೆಡ್ಡಿ ಚಿಟ್ಟಾ, ಕಾರ್ಯದರ್ಶಿ ಗೋಪಾಲರೆಡ್ಡಿ, ಉಪಾಧ್ಯಕ್ಷ ರಾಜರೆಡ್ಡಿ ಸಮಾಜದ ಮುಖಂಡರಾದ ಸಂಜುರೆಡ್ಡಿ ಜಂಪ್ಪಾ, ರಾಜು ಚಿಂತಾಮಣಿ, ಸಂಗ್ರಾಮರೆಡ್ಡಿ, ಸಂಚಾಲಕ ಡಾ. ಶ್ರೀನಿವಾಸ್ ರೆಡ್ಡಿ, ಓಂರೆಡ್ಡಿ, ಸಮಾಜದ ಬಂದುಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.





ಡಾ. ನಾಗರಾಜುಗೆ : ಡಿ.ಲಿಟ್ ಪದವಿ ಪ್ರದಾನ‌

ಬಾಗಲಕೋಟೆ :ಜನವರಿ 19 ಇಲ್ಲಿನ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ ಆರ್ ನಾಗರಾಜು ಅವರು ಸಲ್ಲಿಸಿದ “ಕನ್ನಡ ಸಂಗೀತ ಕ್ಷೇತ್ರಕ್ಕೆ ಶರಣ ಸಾಹಿತ್ಯ ಮತ್ತು ದಾಸ ಸಾಹಿತ್ಯದ ಕೊಡುಗೆ” ಒಂದು ತೌಲನಿಕ ಅಧ್ಯಯನ ಎಂಬ ಪ್ರೌಢ ಪ್ರಬಂಧಕ್ಕೆ ಮೈಸೂರಿನ, ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ಡಿ.ಲಿಟ್ ಪದವಿಯನ್ನು ಘೋಷಿಸಿದ್ದು, ಶನಿವಾರ ಮೈಸೂರಿನಲ್ಲಿ‌ ಜರುಗಿದ ವಿವಿ ಘಟಿಕೋತ್ಸವ ಸಮಾರಂಭದಲ್ಲಿ ಕುಲಾಧಿಪತಿಯೂ ಆಗಿರುವ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.‌ ಎಂ ಸಿ ಸುಧಾಕರ್ ಅವರು ಡಿ.ಲಿಟ್ ಪದವಿ ಪ್ರದಾನ‌ ಮಾಡಿದರು. ಘಟಿಕೋತ್ಸವದಲ್ಲಿ ವಿವಿ ಕುಲಪತಿಗಳಾದ ಪ್ರೊ. ನಾಗೇಶ ವಿ ಬೆಟ್ಟಕೋಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಪರಿಚಯ: ಮೂಲತಃ ತುಮಕೂರು ಜಿಲ್ಲೆಯವರಾದ ಡಾ. ನಾಗರಾಜು ಅವರು ಕಳೆದ ಎರಡು ದಶಕಗಳಿಂದ ಬಾಗಲಕೋಟೆ ಜಿಲ್ಲೆಯಲ್ಲಿರುವ ಬಿ ವಿ ವಿ ಸಂಘದ ಪದವಿ ಮಹಾವಿದ್ಯಾಲಯಗಳಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಪಾರವಾಗಿ ಸೇವೆ ಸಲ್ಲಿಸಿರುವ ಇವರು ಹತ್ತಾರು ಕೃತಿಗಳನ್ನು ರಚಿಸಿದ್ದಾರೆ. ಇವರ ನೂರಾರು ಲೇಖನಗಳು ರಾಜ್ಯದ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ವಿವಿಧ ಸಂಘಸಂಸ್ಥೆಗಳಿಂದ ಹತ್ತಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಡಿಲಿಟ್ ಪದವಿ ಪಡೆದ ಮೊದಲಿಗರಾಗಿದ್ದಾರೆ.
 

Shodhavani Kannada Daily 19-01-2025

http://shodhavani.in/#/e-paper CLICK FOR e-paper - Shodhavani E-Paper ಇಂದಿನ ಶೋಧವಾಣಿ ಕನ್ನಡ ದಿನಪತ್ರಿಕೆ ಪಿಡಿಎಫ್ ಪ್ರತಿಯನ್ನು ಓದಲು ಇ ಲಿಂಕ್ ಮೇಲೆ ಕ್ಲಿಕ್ ಮಾಡಿ. ಎಲ್ಲಾ ಸುದ್ದಿಯನ್ನು ಓದಿ. ಹಾಗೇ ದಯವಿಟ್ಟು ನಮ್ಮ ಚಾನೆಲ್ ಸದಸ್ಯರಾಗಿ ಪ್ರೋತ್ಸಾಹ ನೀಡಿ. ನಿಮ್ಮ ಆತ್ಮೀಯ ಸ್ನೇಹಿತರಿಗೆ ಲಿಂಕ್ ಶೇರ ಮಾಡಿ. ಕಾಮೆಂಟ್ ಮಾಡಿ. ಲೈಕ್ ಮಾಡಿ. ಪ್ರೋತ್ಸಾಹ ನೀಡಿ. ಧನ್ಯವಾದಗಳು

Saturday, 18 January 2025

Shodhavani Kannada Daily 18-01-2025

                           


Click for e-paper   -  Shodhavani E-paper

ಇಂದಿನ ಶೋಧವಾಣಿ ಕನ್ನಡ ದಿನಪತ್ರಿಕೆ ಪಿಡಿಎಫ್ ಪ್ರತಿಯನ್ನು ಓದಲು ಇ ಲಿಂಕ್ ಮೇಲೆ ಕ್ಲಿಕ್ ಮಾಡಿ. ಎಲ್ಲಾ ಸುದ್ದಿಯನ್ನು ಓದಿ. ಹಾಗೇ ದಯವಿಟ್ಟು ನಮ್ಮ ಚಾನೆಲ್ ಸದಸ್ಯರಾಗಿ ಪ್ರೋತ್ಸಾಹ ನೀಡಿ. ನಿಮ್ಮ ಆತ್ಮೀಯ ಸ್ನೇಹಿತರಿಗೆ ಲಿಂಕ್ ಶೇರ ಮಾಡಿ. ಕಾಮೆಂಟ್ ಮಾಡಿ. ಲೈಕ್ ಮಾಡಿ. ಪ್ರೋತ್ಸಾಹ ನೀಡಿ. ಧನ್ಯವಾದಗಳು


ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...