
ads
Search This Blog
Sunday, 19 January 2025
ಕಲ್ಯಾಣ ಕರ್ನಾಟಕ ಈಡಿಗ ಪ್ರಮುಖರ ಸಭೆಯಲ್ಲಿ ಎಚ್ಚರಿಕೆ: ಬಜೆಟ್ ನಲ್ಲಿ ಬೇಡಿಕೆ ಈಡೇರಿಸಿ ಇಲ್ಲವೇ ಹೋರಾಟದ ಬಿಸಿ ಎದುರಿಸಿ

ಅಲ್ಪಸಂಖ್ಯಾತರ ಸಮುದಾಯದ ಕುಂದು ಕೊರತೆಗಳು ಹಂತ ಹಂತವಾಗಿ ಬಗೆಹರಿಸಲಾಗುವುದು-ಇಕ್ಬಾಲ್ಸಿಂಗ್
ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಮತ್ತು ಪಾರ್ಸಿ ಜನಾಂಗದವರಿಗೆ ಅನೇಕ ಸೌಲಭ್ಯಗಳಿದ್ದು ಅವುಗಳ ಸದುಪಯೋಗ ಮಾಡಿಕೊಳ್ಳುವಂತೆ ಅಧ್ಯಕ್ಷರು ತಿಳಿಸಿದರು. ಭಾರತವು ಪ್ರಪಂಚದಲ್ಲಿಯೇ ಸಹಿಷ್ಟಂತೆ ಹೊಂದಿರುವ ಏಕೈಕ ದೇಶವಾಗಿದ್ದು, ನಾವೆಲ್ಲರೂ ಒಂದಾಗಿ, ಸುರಕ್ಷಿತರಾಗಿ ದೇಶದ ಏಳ್ಗೆಗಾಗಿ ವಿಚಾರ ಮಾಡಿದರೆ ದೇಶದ ಅಭಿವೃದ್ಧಿಯಾಗುವುದರಲ್ಲಿ ಸಂಶಯವಿಲ್ಲ ಎಂದು ತಿಳಿಸಿದರು.
ಅಲ್ಪಸಂಖ್ಯಾತರನ್ನು ಎಲ್ಲಾ ಹಂತಗಳಲ್ಲಿ ಸ್ಥಾನಮಾನಗಳು ಸಿಗುತ್ತಿದ್ದು ಉನ್ನತ ಸ್ಥಾನದಲ್ಲಿರುವವರು ಕ್ರೀಯಾಶೀಲರಾಗಿ ಕರ್ತವ್ಯ ನಿರ್ವಹಿಸಿದ್ದಲ್ಲಿ ಯೋಜನೆಗಳಲ್ಲಿ ಪಾರದರ್ಶಕತೆಯನ್ನು ತರಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಹಾಗೂ ಜಿಲ್ಲಾ ಹಂತದ ಸಮಸ್ಯೆ ಮತ್ತು ಕುಂದು ಕೊರತೆಗಳನ್ನು ಆಯಾ ಅಧಿಕಾರಿಗಳಿಗೆ ಭೇಟಿ ಮಾಡಿಕೊಂಡು ಬಗೆಹರಿಸಿಕೊಳ್ಳಲು ಸೂಚಿಸಿದರು.
ಬೀದರ ಜಿಲ್ಲೆ ಎಲ್ಲಾ ಧರ್ಮದವರಿಂದ ಕೂಡಿದ್ದು ಇದು ಏಕತೆ ನಾಡಾಗಿದೆ. ಇಲ್ಲಿರುವ ಏಕತಾಭಾವ ಎಲ್ಲಾ ಗಡಿಭಾಗದ ರಾಜ್ಯಗಳಲ್ಲಿ ಪಸಲಿಸಲಿ ಎಂದು ಹಾರೈಸಿದರು.
ಸಭೆಯಲ್ಲಿ ಭಾಗವಹಿಸಿದ ಎಲ್ಲಾ ಮುಖಂಡರುಗಳು ವಿವಿಧ ರೀತಿಯಲ್ಲಿ ಸಮುದಾಯವರು ಅನುಭವಿಸುತ್ತಿರುವ ಸಮಸ್ಯೆಗಳು ಮತ್ತು ಕುಂದು ಕೊರತೆಗಳ ಬಗ್ಗೆ ತಮ್ಮ ಅಹವಾಲುಗಳನ್ನು ನೀಡಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಲು ಮತ್ತು ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಮನ ಪರಿವರ್ತನೆಗೊಂಡು ಮಹಾಯೋಗಿಯಾದ ವೇಮನ
ಬಾಗಲಕೋಟೆ : ಜೀವನದಲ್ಲಿ ಬರುವ ಬೋಗ, ಭಾಗ್ಯಗಳು ಕ್ಷಣಿಕ ಸುಖದವು ಎಂದರಿತು ಮನ ಪರಿವರ್ತನೆಗೊಂಡ ಮಹಾಯೋಗಿ ವೇಮನ ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಹೇಳಿದರು.
ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ವiತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಮಹಾಯೋಗಿ ವೇಮನನ ೬೧೩ನೇ ಜಯಂತಿ ಕರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವೇಮನರು ನಾಲ್ಕು ಸಾಲುಗಳ್ಳುಳ ಚೌಪದಿ ವಚನಕಾರರಾಗಿದ್ದು, ಲೋಕದಲ್ಲಿ ಜನಿಸಿದ ಪ್ರತಿಯೊಬ್ಬರು ಜಾತಿ-ಮತ ಪಂಥಗಳನ್ನು ಬದಿಗಿರಿಸಿ ಸ್ನೇಹ ಸೌಹಾರ್ದತೆಯಿಂದ ಬದುಕಬೇಕೆಂದು ಸಾರಿ ಸಾರಿ ಹೇಳಿದ್ದಾರೆ.
ಪ್ರತಿಯೊಬ್ಬರು ಜವಾಬ್ದಾರಿಯ ಬದುಕು ಕಟ್ಟಿಕೊಳ್ಳಬೇಕೆಂಬ ಸಂದೇಶ ನೀಡಿ ತಂದೆ-ತಾಯಿಯರಲ್ಲಿ ದಯೆ ತೋರದ ಪುತ್ರ ಹುಟ್ಟಿದರೇನು, ಸತ್ತರೇನು. ಹುತ್ತದಲ್ಲಿ ಗೆದ್ದಲು ಹುಟ್ಟವೇ? ಸಾಯವೇ? ಎಂದು ವಚನ ರಚಿಸಿದ್ದು, ಮಾತಾ-ಪಿತೃರ ಮೇಲಿರುವ ಭಕ್ತಿ ಎಂತಹದು ಎಂದು ತೋರುತ್ತದೆ. ಇಂತಹ ಮಹಾನ ಯೋಗಿಯ ತತ್ವಗಳನ್ನು ಮೈಗೂಡಿಸಿಕೊಂಡಾಗ ಜಯಂತಿ ಆಚರಣೆ ಅರ್ಥಪೂರ್ಣವಾಗುತ್ತದೆ ಎಂದರು. ನವನಗರದಲ್ಲಿ ನಿರ್ಮಿಸಲಾಗುತ್ತಿರುವ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ತಮ್ಮ ಅನುದಾನದಲ್ಲಿ ೫ ಲಕ್ಷ ರೂ.ಗಳನ್ನು ನೀಡುವದಾಗಿ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿಟಿಡಿಎ ಅಧ್ಯಕ್ಷ ಎಚ್.ವೈ.ಮೇಟಿ ಮಾತನಾಡುತ್ತ ಮಹಾಯೋಗಿ ವೇಮನ ಮತ್ತು ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಇಬ್ಬರು ಒಂದೇ ಕುಟುಂಬದವರಾಗಿದ್ದು, ಸಾಮಾಜಿಕ ಧಾರ್ಮಿಕ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡಿದ್ದಾರೆ. ಇವರು ಲೋಕಾರೂಡಿಯಂತೆ ಒಂದು ಕುಲದಲ್ಲಿ ಜನಿಸಿದ್ದರೂ ಜಾತಿ ರಹಿತವಾದ ಜೀವನ ಸಾಗಿಸಿ ಮಾನವರೆಲ್ಲ ಒಂದೇ ಎಂಬ ಸಂದೇಶವನ್ನು ಸಾರಿದ್ದಾರೆ.
ನಾನು ಚಿಕ್ಕವನಿದ್ದಾಗ ನಮ್ಮ ಊರಲ್ಲಿ ಪ್ರದರ್ಶನಗೊಂಡ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ನಾಟಕ ನನ್ನ ಜೀವನದಲ್ಲಿ ಪರಿಣಾಮ ಬೀರಿತು. ಮಲ್ಲಮ್ಮ ಹಾಗೂ ವೇಮನರಂತಹವರ ತತ್ವ ಆದರ್ಶಗಳು ಮುಂದಿನ ಜನಾಂಗಕ್ಕೆ ತಿಳಿಯಲೆಂದು ಇದನ್ನು ಸರಕಾರಿ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದೆ. ನವನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಹೇಮರಡ್ಡಿ ದೇವಸ್ಥಾನಕ್ಕೆ ೧೦ ಲಕ್ಷ ರೂ.ಗಳನ್ನು ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ನೀಡುವದಾಗಿ ಹೇಳಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆನ್ನವರ ಮಾತನಾಡಿ ವೇಮನ ಹೆತ್ತವರಿಂದ ಒಡಹುಟ್ಟಿದವರಿಂದ ಸಂಬAಧಿಕರಿAದ ಅನಾದರಕ್ಕೆ ಗುರಿಯಾಗಿ ದುಶ್ಚಟಗಳ ದಾಸನಾಗಿದ್ದ ಸಂದರ್ಭದಲ್ಲಿ ಪರಸ್ತಿçà ಸಂಗದಲ್ಲಿ ತೊಡಗಿ ಸಂಪತ್ತನ್ನೆಲ್ಲ ಹಾಳು ಮಾಡುತ್ತಿರುವ ಸಮಯದಲ್ಲಿ ಇವನನ್ನು ಹೇಮರಡ್ಡಿ ಮಲ್ಲಮ್ಮ ಪರಿವರ್ತನೆ ಮಾಡುವಲ್ಲಿ ಸಫಲಳಾಗಿದ್ದಾಳೆ ವೇಮನರ ಹಲವಾರು ವಚನಗಳು ಲೌಕಿಕದ ಅಂಕು-ಡೊAಕುಗಳನ್ನು ತಿದ್ದುವ ದಾರಿದೀಪಗಳಾಗಿದ್ದು ನಾವೆಲ್ಲರೂ ಅವರ ತತ್ವಗಳನ್ನು ಅಳವಡಿಸಿಕೊಳ್ಳೋಣ ಎಂದರು. ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಬಾಗಲಕೋಟೆ ಆಧ್ಯಾತ್ಮಿಕ ಚಿಂತಕ ಪ್ರದೀಪ ಗುರೂಜಿ ವೇಮನನ ಸಮಗ್ರ ಜೀವನದ ಬಗ್ಗೆ ಉಪನ್ಯಾಸ ನೀಡಿದರು.
ಕರ್ಯಕ್ರಮದಲ್ಲಿ ಹೇಮ-ವೇಮ ಸಂಸ್ಥೆಯ ಅಧ್ಯಕ್ಷ ಆರ್.ಎಲ್.ಕಟಗೇರಿ, ನಾರಾಯಣ ಹಾದಿಮನಿ, ಎಚ್.ಎಸ್.ನಾಲತ್ವಾಡ, ಎಸ್.ಬಿ.ಮಾಚಾ, ಈಶ್ವರ ಕೋನಪ್ಪನವರ ಹಾಜರಿದ್ದರು. ಪ್ರಾರಂಭದಲ್ಲಿ ಕನ್ನಡ ಮತ್ತು ಸಂಸ್ಕçತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಸ್ವಾಗತಿಸಿದರು. ಕೊನೆಗೆ ರಡ್ಡಿ ಸಮಾಜದ ಅಧ್ಯಕ್ಷ ಮಹೇಶ ಕಕರಡ್ಡಿ ವಂದಿಸಿದರು. ಶಂಕರಲಿAಗ ದೇಸಾಯಿ, ಉಮಾ ಕೆಳಗಿನಮನಿ ಕರ್ಯಕ್ರಮ ನಿರೂಪಿಸಿದರು.
ಕರ್ಯಕ್ರಮದ ಆರಂಭದ ಮುನ್ನ ಜಿಲ್ಲಾಡಳಿತ ಭವನದ ಎದುರು ಬೀಳಗಿ ಶಾಸಕ ಜೆ.ಟಿ.ಪಾಟೀಲ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ವೇಮನರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು. ಕುಂಭಹೊತ್ತ ಮುತೈದೆಯರು ಹಾಗೂ ವಿವಿಧ ಕಲಾತಂಡಗಳು ಮೆರವಣಿಗೆಯೊಂದಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಡಾ.ಅಂಬೇಡ್ಕರ ಭವನಕ್ಕೆ ಮುಕ್ತಾಯಗೊಂಡಿತು. ಅಪರ್ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಅಲ್ಪಸಂಖ್ಯಾತ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಾನಂದ ಪಟ್ಟಣಶೆಟ್ಟಿ ಮೆರವಣಿಗೆಂiÀiಲ್ಲಿ ಪಾಲ್ಗೊಂಡಿದ್ದರು.
ಮಹಾಯೋಗಿ ವೇಮನ ಜಯಂತಿ
ಬೀದರ ಜನವರಿ.19:- ಇಂದು ಮಹಾಯೋಗಿ ವೇಮನ ಜಯಂತಿ ನಿಮಿತ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ ಅವರು ವೇಮನರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ರೆಡ್ಡಿ ಸಮಾಜದ ಅಧ್ಯಕ್ಷ ಶಂಕರರೆಡ್ಡಿ ಚಿಟ್ಟಾ, ಕಾರ್ಯದರ್ಶಿ ಗೋಪಾಲರೆಡ್ಡಿ, ಉಪಾಧ್ಯಕ್ಷ ರಾಜರೆಡ್ಡಿ ಸಮಾಜದ ಮುಖಂಡರಾದ ಸಂಜುರೆಡ್ಡಿ ಜಂಪ್ಪಾ, ರಾಜು ಚಿಂತಾಮಣಿ, ಸಂಗ್ರಾಮರೆಡ್ಡಿ, ಸಂಚಾಲಕ ಡಾ. ಶ್ರೀನಿವಾಸ್ ರೆಡ್ಡಿ, ಓಂರೆಡ್ಡಿ, ಸಮಾಜದ ಬಂದುಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಡಾ. ನಾಗರಾಜುಗೆ : ಡಿ.ಲಿಟ್ ಪದವಿ ಪ್ರದಾನ
Shodhavani Kannada Daily 19-01-2025
Saturday, 18 January 2025
Shodhavani Kannada Daily 18-01-2025

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!
ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...
.jpg)
-
ಹೈದರಾಬಾದ್ : ಇಂದು ಬೆಳಿಗ್ಗೆ ಬೀದರನಲ್ಲಿ ನಡೆದ ಎಟಿಎಂ ದರೋಡೆಕೋರರೆ ನಗರದ ಅಫ್ಜಲಗಂಜನಲ್ಲಿರುವ ರೋಷನ ಟ್ರಾವೆಲ್ ಕಛೆರಿಯಲ್ಲಿ ಪೊಲೀಸ್ ಮತ್ತು ದರೋಡೆಕೋರ ಮಧ್ಯೆ ಗುಂಡಿನ ...
-
ಬೀದರ್: ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆಸಿರುವ ಘಟನೆಯೊಂದು ಬೀದರ್ನ ಎಸ್ಬಿಐ ಮುಖ್ಯ ಕಚೇರಿ ಮುಂದೆ ಗುರುವಾರ ನಡೆದಿದೆ. ...
-
ಶೋಧವಾಣಿ ಜಾಲಲೋಕ ಹೈದರಾಬಾದ್ : ಸಂಘಟಿತ ಹೋರಾಟ ಇಂದಿನ ದಿನಮಾನದ ಜರೂರು ಹೊರನಾಡು ಗಡಿನಾಡಿನ ಕನ್ನಡಿಗರ ಹಿತಕಾಯಲು ಯಾರೂ ಇಲ್ಲವೆನ್ನುವ ಅನಾಥಪ್ರಜ್ಞೆ ಸರಿಯಲ್ಲ. ಭಾಷೆಯ...