ads

Search This Blog

Sunday, 19 January 2025

ಮನ ಪರಿವರ್ತನೆಗೊಂಡು ಮಹಾಯೋಗಿಯಾದ ವೇಮನ

ಬಾಗಲಕೋಟೆ : ಜೀವನದಲ್ಲಿ ಬರುವ ಬೋಗ, ಭಾಗ್ಯಗಳು ಕ್ಷಣಿಕ ಸುಖದವು ಎಂದರಿತು ಮನ ಪರಿವರ್ತನೆಗೊಂಡ ಮಹಾಯೋಗಿ ವೇಮನ ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಹೇಳಿದರು.

ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ವiತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಮಹಾಯೋಗಿ ವೇಮನನ ೬೧೩ನೇ ಜಯಂತಿ ಕರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವೇಮನರು ನಾಲ್ಕು ಸಾಲುಗಳ್ಳುಳ ಚೌಪದಿ ವಚನಕಾರರಾಗಿದ್ದು, ಲೋಕದಲ್ಲಿ ಜನಿಸಿದ ಪ್ರತಿಯೊಬ್ಬರು ಜಾತಿ-ಮತ ಪಂಥಗಳನ್ನು ಬದಿಗಿರಿಸಿ ಸ್ನೇಹ ಸೌಹಾರ್ದತೆಯಿಂದ ಬದುಕಬೇಕೆಂದು ಸಾರಿ ಸಾರಿ ಹೇಳಿದ್ದಾರೆ. 

ಪ್ರತಿಯೊಬ್ಬರು ಜವಾಬ್ದಾರಿಯ ಬದುಕು ಕಟ್ಟಿಕೊಳ್ಳಬೇಕೆಂಬ ಸಂದೇಶ ನೀಡಿ ತಂದೆ-ತಾಯಿಯರಲ್ಲಿ ದಯೆ ತೋರದ ಪುತ್ರ ಹುಟ್ಟಿದರೇನು, ಸತ್ತರೇನು. ಹುತ್ತದಲ್ಲಿ ಗೆದ್ದಲು ಹುಟ್ಟವೇ? ಸಾಯವೇ? ಎಂದು ವಚನ ರಚಿಸಿದ್ದು, ಮಾತಾ-ಪಿತೃರ ಮೇಲಿರುವ ಭಕ್ತಿ ಎಂತಹದು ಎಂದು ತೋರುತ್ತದೆ. ಇಂತಹ ಮಹಾನ ಯೋಗಿಯ ತತ್ವಗಳನ್ನು ಮೈಗೂಡಿಸಿಕೊಂಡಾಗ ಜಯಂತಿ ಆಚರಣೆ ಅರ್ಥಪೂರ್ಣವಾಗುತ್ತದೆ ಎಂದರು. ನವನಗರದಲ್ಲಿ ನಿರ್ಮಿಸಲಾಗುತ್ತಿರುವ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ತಮ್ಮ ಅನುದಾನದಲ್ಲಿ ೫ ಲಕ್ಷ ರೂ.ಗಳನ್ನು ನೀಡುವದಾಗಿ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿಟಿಡಿಎ ಅಧ್ಯಕ್ಷ ಎಚ್.ವೈ.ಮೇಟಿ ಮಾತನಾಡುತ್ತ ಮಹಾಯೋಗಿ ವೇಮನ ಮತ್ತು ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಇಬ್ಬರು ಒಂದೇ ಕುಟುಂಬದವರಾಗಿದ್ದು, ಸಾಮಾಜಿಕ ಧಾರ್ಮಿಕ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡಿದ್ದಾರೆ. ಇವರು ಲೋಕಾರೂಡಿಯಂತೆ ಒಂದು ಕುಲದಲ್ಲಿ ಜನಿಸಿದ್ದರೂ ಜಾತಿ ರಹಿತವಾದ ಜೀವನ ಸಾಗಿಸಿ ಮಾನವರೆಲ್ಲ ಒಂದೇ ಎಂಬ ಸಂದೇಶವನ್ನು ಸಾರಿದ್ದಾರೆ.

ನಾನು ಚಿಕ್ಕವನಿದ್ದಾಗ ನಮ್ಮ ಊರಲ್ಲಿ ಪ್ರದರ್ಶನಗೊಂಡ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ನಾಟಕ ನನ್ನ ಜೀವನದಲ್ಲಿ ಪರಿಣಾಮ ಬೀರಿತು. ಮಲ್ಲಮ್ಮ ಹಾಗೂ ವೇಮನರಂತಹವರ ತತ್ವ ಆದರ್ಶಗಳು ಮುಂದಿನ ಜನಾಂಗಕ್ಕೆ ತಿಳಿಯಲೆಂದು ಇದನ್ನು ಸರಕಾರಿ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದೆ. ನವನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಹೇಮರಡ್ಡಿ ದೇವಸ್ಥಾನಕ್ಕೆ ೧೦ ಲಕ್ಷ ರೂ.ಗಳನ್ನು ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ನೀಡುವದಾಗಿ ಹೇಳಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆನ್ನವರ ಮಾತನಾಡಿ ವೇಮನ ಹೆತ್ತವರಿಂದ ಒಡಹುಟ್ಟಿದವರಿಂದ ಸಂಬAಧಿಕರಿAದ ಅನಾದರಕ್ಕೆ ಗುರಿಯಾಗಿ ದುಶ್ಚಟಗಳ ದಾಸನಾಗಿದ್ದ ಸಂದರ್ಭದಲ್ಲಿ ಪರಸ್ತಿçà ಸಂಗದಲ್ಲಿ ತೊಡಗಿ ಸಂಪತ್ತನ್ನೆಲ್ಲ ಹಾಳು ಮಾಡುತ್ತಿರುವ ಸಮಯದಲ್ಲಿ ಇವನನ್ನು ಹೇಮರಡ್ಡಿ ಮಲ್ಲಮ್ಮ ಪರಿವರ್ತನೆ ಮಾಡುವಲ್ಲಿ ಸಫಲಳಾಗಿದ್ದಾಳೆ ವೇಮನರ ಹಲವಾರು ವಚನಗಳು ಲೌಕಿಕದ ಅಂಕು-ಡೊAಕುಗಳನ್ನು ತಿದ್ದುವ ದಾರಿದೀಪಗಳಾಗಿದ್ದು ನಾವೆಲ್ಲರೂ ಅವರ ತತ್ವಗಳನ್ನು ಅಳವಡಿಸಿಕೊಳ್ಳೋಣ ಎಂದರು. ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಬಾಗಲಕೋಟೆ ಆಧ್ಯಾತ್ಮಿಕ ಚಿಂತಕ ಪ್ರದೀಪ ಗುರೂಜಿ ವೇಮನನ ಸಮಗ್ರ ಜೀವನದ ಬಗ್ಗೆ ಉಪನ್ಯಾಸ ನೀಡಿದರು.

ಕರ‍್ಯಕ್ರಮದಲ್ಲಿ ಹೇಮ-ವೇಮ ಸಂಸ್ಥೆಯ ಅಧ್ಯಕ್ಷ ಆರ್.ಎಲ್.ಕಟಗೇರಿ, ನಾರಾಯಣ ಹಾದಿಮನಿ, ಎಚ್.ಎಸ್.ನಾಲತ್ವಾಡ, ಎಸ್.ಬಿ.ಮಾಚಾ, ಈಶ್ವರ ಕೋನಪ್ಪನವರ ಹಾಜರಿದ್ದರು. ಪ್ರಾರಂಭದಲ್ಲಿ ಕನ್ನಡ ಮತ್ತು ಸಂಸ್ಕçತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಸ್ವಾಗತಿಸಿದರು. ಕೊನೆಗೆ ರಡ್ಡಿ ಸಮಾಜದ ಅಧ್ಯಕ್ಷ ಮಹೇಶ ಕಕರಡ್ಡಿ ವಂದಿಸಿದರು. ಶಂಕರಲಿAಗ ದೇಸಾಯಿ, ಉಮಾ ಕೆಳಗಿನಮನಿ ಕರ‍್ಯಕ್ರಮ ನಿರೂಪಿಸಿದರು.

ಕರ‍್ಯಕ್ರಮದ ಆರಂಭದ ಮುನ್ನ ಜಿಲ್ಲಾಡಳಿತ ಭವನದ ಎದುರು ಬೀಳಗಿ ಶಾಸಕ ಜೆ.ಟಿ.ಪಾಟೀಲ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ವೇಮನರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು. ಕುಂಭಹೊತ್ತ ಮುತೈದೆಯರು ಹಾಗೂ ವಿವಿಧ ಕಲಾತಂಡಗಳು ಮೆರವಣಿಗೆಯೊಂದಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಡಾ.ಅಂಬೇಡ್ಕರ ಭವನಕ್ಕೆ ಮುಕ್ತಾಯಗೊಂಡಿತು. ಅಪರ್ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಅಲ್ಪಸಂಖ್ಯಾತ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಾನಂದ ಪಟ್ಟಣಶೆಟ್ಟಿ ಮೆರವಣಿಗೆಂiÀiಲ್ಲಿ ಪಾಲ್ಗೊಂಡಿದ್ದರು.


ಮಹಾಯೋಗಿ ವೇಮನ ಜಯಂತಿ


ಬೀದರ  ಜನವರಿ.19:- ಇಂದು ಮಹಾಯೋಗಿ ವೇಮನ ಜಯಂತಿ ನಿಮಿತ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ ಅವರು ವೇಮನರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ರೆಡ್ಡಿ ಸಮಾಜದ ಅಧ್ಯಕ್ಷ ಶಂಕರರೆಡ್ಡಿ ಚಿಟ್ಟಾ, ಕಾರ್ಯದರ್ಶಿ ಗೋಪಾಲರೆಡ್ಡಿ, ಉಪಾಧ್ಯಕ್ಷ ರಾಜರೆಡ್ಡಿ ಸಮಾಜದ ಮುಖಂಡರಾದ ಸಂಜುರೆಡ್ಡಿ ಜಂಪ್ಪಾ, ರಾಜು ಚಿಂತಾಮಣಿ, ಸಂಗ್ರಾಮರೆಡ್ಡಿ, ಸಂಚಾಲಕ ಡಾ. ಶ್ರೀನಿವಾಸ್ ರೆಡ್ಡಿ, ಓಂರೆಡ್ಡಿ, ಸಮಾಜದ ಬಂದುಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.





ಡಾ. ನಾಗರಾಜುಗೆ : ಡಿ.ಲಿಟ್ ಪದವಿ ಪ್ರದಾನ‌

ಬಾಗಲಕೋಟೆ :ಜನವರಿ 19 ಇಲ್ಲಿನ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ ಆರ್ ನಾಗರಾಜು ಅವರು ಸಲ್ಲಿಸಿದ “ಕನ್ನಡ ಸಂಗೀತ ಕ್ಷೇತ್ರಕ್ಕೆ ಶರಣ ಸಾಹಿತ್ಯ ಮತ್ತು ದಾಸ ಸಾಹಿತ್ಯದ ಕೊಡುಗೆ” ಒಂದು ತೌಲನಿಕ ಅಧ್ಯಯನ ಎಂಬ ಪ್ರೌಢ ಪ್ರಬಂಧಕ್ಕೆ ಮೈಸೂರಿನ, ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ಡಿ.ಲಿಟ್ ಪದವಿಯನ್ನು ಘೋಷಿಸಿದ್ದು, ಶನಿವಾರ ಮೈಸೂರಿನಲ್ಲಿ‌ ಜರುಗಿದ ವಿವಿ ಘಟಿಕೋತ್ಸವ ಸಮಾರಂಭದಲ್ಲಿ ಕುಲಾಧಿಪತಿಯೂ ಆಗಿರುವ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.‌ ಎಂ ಸಿ ಸುಧಾಕರ್ ಅವರು ಡಿ.ಲಿಟ್ ಪದವಿ ಪ್ರದಾನ‌ ಮಾಡಿದರು. ಘಟಿಕೋತ್ಸವದಲ್ಲಿ ವಿವಿ ಕುಲಪತಿಗಳಾದ ಪ್ರೊ. ನಾಗೇಶ ವಿ ಬೆಟ್ಟಕೋಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಪರಿಚಯ: ಮೂಲತಃ ತುಮಕೂರು ಜಿಲ್ಲೆಯವರಾದ ಡಾ. ನಾಗರಾಜು ಅವರು ಕಳೆದ ಎರಡು ದಶಕಗಳಿಂದ ಬಾಗಲಕೋಟೆ ಜಿಲ್ಲೆಯಲ್ಲಿರುವ ಬಿ ವಿ ವಿ ಸಂಘದ ಪದವಿ ಮಹಾವಿದ್ಯಾಲಯಗಳಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಪಾರವಾಗಿ ಸೇವೆ ಸಲ್ಲಿಸಿರುವ ಇವರು ಹತ್ತಾರು ಕೃತಿಗಳನ್ನು ರಚಿಸಿದ್ದಾರೆ. ಇವರ ನೂರಾರು ಲೇಖನಗಳು ರಾಜ್ಯದ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ವಿವಿಧ ಸಂಘಸಂಸ್ಥೆಗಳಿಂದ ಹತ್ತಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಡಿಲಿಟ್ ಪದವಿ ಪಡೆದ ಮೊದಲಿಗರಾಗಿದ್ದಾರೆ.
 

Shodhavani Kannada Daily 19-01-2025

http://shodhavani.in/#/e-paper CLICK FOR e-paper - Shodhavani E-Paper ಇಂದಿನ ಶೋಧವಾಣಿ ಕನ್ನಡ ದಿನಪತ್ರಿಕೆ ಪಿಡಿಎಫ್ ಪ್ರತಿಯನ್ನು ಓದಲು ಇ ಲಿಂಕ್ ಮೇಲೆ ಕ್ಲಿಕ್ ಮಾಡಿ. ಎಲ್ಲಾ ಸುದ್ದಿಯನ್ನು ಓದಿ. ಹಾಗೇ ದಯವಿಟ್ಟು ನಮ್ಮ ಚಾನೆಲ್ ಸದಸ್ಯರಾಗಿ ಪ್ರೋತ್ಸಾಹ ನೀಡಿ. ನಿಮ್ಮ ಆತ್ಮೀಯ ಸ್ನೇಹಿತರಿಗೆ ಲಿಂಕ್ ಶೇರ ಮಾಡಿ. ಕಾಮೆಂಟ್ ಮಾಡಿ. ಲೈಕ್ ಮಾಡಿ. ಪ್ರೋತ್ಸಾಹ ನೀಡಿ. ಧನ್ಯವಾದಗಳು

Saturday, 18 January 2025

Shodhavani Kannada Daily 18-01-2025

                           


Click for e-paper   -  Shodhavani E-paper

ಇಂದಿನ ಶೋಧವಾಣಿ ಕನ್ನಡ ದಿನಪತ್ರಿಕೆ ಪಿಡಿಎಫ್ ಪ್ರತಿಯನ್ನು ಓದಲು ಇ ಲಿಂಕ್ ಮೇಲೆ ಕ್ಲಿಕ್ ಮಾಡಿ. ಎಲ್ಲಾ ಸುದ್ದಿಯನ್ನು ಓದಿ. ಹಾಗೇ ದಯವಿಟ್ಟು ನಮ್ಮ ಚಾನೆಲ್ ಸದಸ್ಯರಾಗಿ ಪ್ರೋತ್ಸಾಹ ನೀಡಿ. ನಿಮ್ಮ ಆತ್ಮೀಯ ಸ್ನೇಹಿತರಿಗೆ ಲಿಂಕ್ ಶೇರ ಮಾಡಿ. ಕಾಮೆಂಟ್ ಮಾಡಿ. ಲೈಕ್ ಮಾಡಿ. ಪ್ರೋತ್ಸಾಹ ನೀಡಿ. ಧನ್ಯವಾದಗಳು


ಯಾರಿಗೂ ನೊಟೀಸ್ ನೀಡಿಲ್ಲ, ಸುಮ್ಮನೆ ವದಂತಿ ಹಬ್ಬಿಸುತ್ತಿದ್ದಾರೆ - ಸುರ್ಜೇವಾಲಾ

 ಬೆಳಗಾವಿ: ಸಾರ್ವಜನಿಕ ವೇದಿಕೆಯಲ್ಲಿ ಪಕ್ಷದ ವಿಷಯದ ಬಗ್ಗೆ ಮಾತನಾಡದಂತೆ ಸಚಿವ ಸತೀಶ ಜಾರಕಿಹೊಳಿ ಅವರಿಗೆ ನೋಟಿಸ್ ಕೊಟ್ಟಿದ್ದು ನನಗೆ ಗೊತ್ತಿಲ್ಲ. ಯಾರು ಈ ವದಂತಿ ಹಬ್ಬಿಸುತ್ತಿದ್ದಾರೆ' ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲ ಪ್ರಶ್ನಿಸಿದರು.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಯಾವ ಸಚಿವರಿಗೂ, ಈ ಎಲ್ಲಾ ವದಂತಿಗಳನ್ನು ಯಾರು ಹರಡುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಯಾವುದೇ ಸಚಿವರು ಅಥವಾ ವ್ಯಕ್ತಿಗೆ ಯಾವುದೇ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಎಂದು ಸುರ್ಜೇವಾಲ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಬಿಜೆಪಿ ಪ್ರಾಯೋಜಿತ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸವಿಡಬೇಡಿ ಎಂದಿದ್ದಾರೆ.

ಈ ವದಂತಿಗಳನ್ನೆಲ್ಲ ಯಾರು ಹಬ್ಬಿಸುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇನ್ನೂ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಚರ್ಚೆ ವಿಚಾರವಾಗಿ, ಅಧ್ಯಕ್ಷರ ಬದಲಾವಣೆ ಆಗುತ್ತಿದ್ರೆ ಇಲ್ಲೇಕೆ ಬರುತ್ತಿದ್ದರು ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ವಿಚಾರ ಸೇರಿದಂತೆ, ಸಿಎಂ ಸೀಟಿನ ಬಗ್ಗೆ ಮಾತಾಡುತ್ತಿದ್ದ ಸಚಿವರಿಗೆ ನೋಟಿಸ್ ನೀಡುವ ವದಂತಿಗೆ ತೆರೆ ಎಳೆದಿದ್ದಾರೆ.


ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು: ಮಲ್ಲಿಕಾರ್ಜುನ ಖರ್ಗೆ

 

ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು: ಮಲ್ಲಿಕಾರ್ಜುನ ಖರ್ಗೆ

ಬೆಳಗಾವಿ: 'ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರ ಬದಲಾವಣೆಯ ಜಟಾಪಟಿ ಜೋರಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಶುಕ್ರವಾರ ಖಡಕ್ ಎಚ್ಚರಿಕೆ ನೀಡಿದ್ದಾರೆ.



ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಬಹಿರಂಗ ಆಗ್ರಹ ಕೇಳಿ ಬರುತ್ತಿರುವ ಬಗ್ಗೆ ಇಂದು ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಖರ್ಗೆ, ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ, ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್ ಗೆ ಗೊತ್ತಿದೆ ಎಂದರು.

ಕೆಲವರು ಹೇಳಿದ್ದಾರೆ, ಆ ಪ್ರಕಾರ ಹೈಕಮಾಂಡ್ ನಡೆಯೋದಿಲ್ಲ ಅಲ್ವಾ, ಎಲ್ಲರೂ ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ, ಯಾವಾಗ ಏನು ನಿರ್ಣಯ ತೆಗೆದುಕೊಳ್ಳಬೇಕು ಅದು ನಮಗೆ ಬಿಟ್ಟಿದ್ದು. ಇದೆಲ್ಲ ಮಾತಾಡುವುದು ಪ್ರಯೋಜ‌ನಕ್ಕೆ ಬರುವುದಿಲ್ಲ. ಇದನ್ನೆಲ್ಲಾ ನೋಡಿಕೊಳ್ಳಲು ಹೈಕಮಾಂಡ್ ಇದೆ, ನಾವೆಲ್ಲ ಇದ್ದೇವೆ, ನಾವು ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದರು.

ನೀವು ಹೇಳಿದಾಗ ಬದಲಾವಣೆ ಮಾಡಲು ಆಗಲ್ಲ, ಹೈಕಮಾಂಡ್ ಯಾವಾಗ ನಿರ್ಣಯ ತೆಗೆದುಕೊಳ್ಳಬೇಕು ಆಗ ತೆಗೆದುಕೊಳ್ಳುತ್ತದೆ. ಈ ರೀತಿ ಹೇಳಿಕೆ ನೀಡಬೇಡಿ. ಇದರಿಂದ ಪಕ್ಷಕ್ಕೆ ದೊಡ್ಡ ಹಾನಿಯಾಗುತ್ತದೆ, ದಯವಿಟ್ಟು ಕಾಂಟ್ರವರ್ಸಿ ರಾಜ್ಯದಲ್ಲಿ ನಡೆಯಬಾರದು ಎಂದು ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದರು.


ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...