ads
Search This Blog
Saturday, 22 February 2025
ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವ ಯೋಜನೆಗಳ ಲಾಭ ಅರ್ಹರಿಗೆ ತಲುಪಿಸಿ* *ಜಂಟಿ ಕಾರ್ಯದರ್ಶಿ ಸಮೀರ್ ಶುಕ್ಲಾ*
ಕಷ್ಟದ ಜೀವನ ಶಿಸ್ತಿನ ಪಾಠಶಾಲೆ: ಶ್ರೀ ರಂಭಾಪುರಿ ಜಗದ್ಗುರುಗಳು
ಶರಣರು ಸಾಧಿಸಿದ ಲಿಂಗಯೋಗವು ಸರ್ವಶ್ರೇಷ್ಠ ಯೋಗ: ಪೂಜ್ಯ ಶ್ರೀ ಡಾ. ಸಿದ್ಧರಾಮೇಶ್ವರ ಬೆಲ್ದಾಳ ಶರಣರು
ಬಸವಕಲ್ಯಾಣ: “ಹನ್ನೆರಡನೇ ಶತಮಾನದಲ್ಲಿ ಗುರು ಬಸವಾದಿ ಶರಣರು ಸಾಧಿಸಿದ ಲಿಂಗಯೋಗ ಜಗತ್ತಿನಲ್ಲಿಯೇ ಸರ್ವಶ್ರೇಷ್ಟ ಯೋಗವಾಗಿದೆ” ಎಂದು ಪೂಜ್ಯ ಶ್ರೀ ಡಾ. ಸಿದ್ಧರಾಮೇಶ್ವರ ಬೆಲ್ದಾಳ ಶರಣರು ಅಭಿಮತ ವ್ಯಕ್ತಪಡಿಸಿದ್ದಾರೆ.
ಅವರು ಬಸವ ಮಹಾಮನೆ ಟ್ರಸ್ಟ್ ಬಸವಕಲ್ಯಾಣದ ವತಿಯಿಂದ ಹಮ್ಮಿಕೊಂಡ ಅನುಭವ ಮಂಟಪ ಸಂಸತ್ತು 7ನೇ ಅದಿವೇಶನದ ಮೊದಲನೇ ಗೋಷ್ಟಿಯಲ್ಲಿ ಮಾತನಾಡುತ್ತಾ. “ಲಿಂಗಯೋಗವೆಂದರೆ ಕೇವಲ ಆಧ್ಯಾತ್ಮಿಕ ಸಾಧನೆಗೆ ಮಾತ್ರ ಸೀಮಿತವಲ್ಲ. ಇದು ಜೀವನ ಪರಿವರ್ತನೆಯ ಶಕ್ತಿ ಹೊಂದಿರುವ ಪ್ರಾತ್ಯಕ್ಷಿಕ ಯೋಗವಾಗಿದೆ” ಎಂದು ಅವರು ವಿದ್ವತ್ತಿನಿಂದ ವಿವರಿಸಿದರು.
ಶರಣರು ವಚನಸಾಹಿತ್ಯದಲ್ಲಿ ಬೋಧಿಸಿದ ಷಟಸ್ಥಲವು ಅಂಗ ಲಿಂಗರ ಸಾಮರಸ್ಯಕ್ಕೆ ಭದ್ರ ಬುನಾದಿಯಾಗಿದೆಯಲ್ಲದೆ ಇದರಲ್ಲಿ ವಿಜ್ಞಾನ ಅಡಗಿದೆ. ಪ್ರತಿಯೊಬ್ಬ ಸಾಧಕರು ಶಿವಯೋಗ ಮಾರ್ಗವನ್ನು ಅನುಸರಿಸಿದರೆ ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಬಹುದೆಂದರು.
ಇಷ್ಟಲಿಂಗ ಸಾಧನೆಯಿಂದ ದೇಹ ಶುದ್ಧಿಯಾಗುತ್ತದೆ. ಪ್ರಾಣಲಿಂಗ ಸಾಧನೆಯಿಂದ ಮನ ಶುದ್ಧಿಯಾಗುತ್ತದೆ. ಭಾವಲಿಂಗ ಸಾಧನೆಯಿಂದ ಆತ್ಮಶುದ್ಧಿಯಾಗಿ ಸಾಧಕನ ಇಡೀ ದೇಹ ಸರ್ವಾಂಗ ಲಿಂಗವಾಗಲು ಸಹಕಾರಿಯಾಗಿದೆ ಪ್ರತಿಯೊಬ್ಬರು ಸಾಧಿಸಲು ಮುಂದಾಗಬೇಕು ಎಂದರು.
ಕೇವಲ ಧಾರ್ಮಿಕ ಕ್ರಿಯೆಗೆ ಸೀಮಿತರಾಗಬಾರದು ಎಂದು ಕಿವಿ ಮಾತು ಹೇಳಿದರಲ್ಲದೆ ಶಿವಯೋಗ ಸಾಧಿಸುವ ಸಾಧಕರಿಗೆ ವಿಶೇಷ ತರಬೇತಿ ನೀಡಲು ನಾವು ಕಾರ್ಯಯೋಜನೆ ಹಾಕಿಕೊಳ್ಳುತ್ತಿದ್ದೇವೆ. ಶರಣರು ಮಠ ಸಂಸ್ಕೃತಿ ಹುಟ್ಟು ಹಾಕಿಲ್ಲ, ಜಗದ್ಗುರು ಪದವಿ ಹುಟ್ಟು ಹಾಕಿಲ್ಲ. ಶರಣರದು ಮಹಾಮನೆ ಕಲ್ಪನೆ ಇದೆ. ಮಹಾಮನೆ ಎಂಬುದು ವಿಶಾಲವಾಗಿತ್ತು, ಅದರೊಳಗೆ ಅನುಭವ ಮಂಟಪ ಚಿಂತನೆ ನಡೆಯುತ್ತಿತ್ತು ಎಂದರು.
ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ ಗುಣತೀರ್ಥ ವಾಡಿ ಕಲ್ಯಾಣ ಮಹಾಮನೆಯ ಪೂಜ್ಯಶ್ರೀ ಬಸವ ಪ್ರಭು ಸ್ವಾಮೀಜಿ ಮಾತನಾಡಿ “ಇಂದಿನ ಯುಗದಲ್ಲಿ ಮಾನವನಿಗೆ ಶಾಂತಿ, ಸಮಾನತೆ ಮತ್ತು ನೈತಿಕತೆಯ ಅವಶ್ಯಕತೆ ಇದೆ. ಶರಣರ ಲಿಂಗಯೋಗವೇ ಅದಕ್ಕೆ ಮೂಲ ಪರಿಹಾರ” ಎಂದು ಅವರು ಅಭಿಪ್ರಾಯಪಟ್ಟರು.
ಅನುಭವ ಮಂಟಪದ ಆಶಯವು ಸಂಸ್ಕಾರ, ಸಹೋದರ, ಸಮಾನತೆ, ಸಂಘಟನೆಯಿಂದ ಕೂಡಿತ್ತು. ಬಸವಣ್ಣನವರು ಒಬ್ಬ ಮನಃಶಾಸ್ತ್ರೀಯ ಗುಣ ಹೊಂದಿದ್ದರಿಂದಲೇ ಸರ್ವರನ್ನು ತನ್ನತ್ತ ಸೆಳೆದು ಸಮುದಾಯಿಕ ಲಿಂಗಯೋಗ ಸಾಧನೆ ಮಾಡಲು ಸಾಧ್ಯವಾಯಿತು.
ಪೂಜ್ಯ ಶ್ರೀ ಡಾ. ಸಿದ್ಧರಾಮ ಬೆಲ್ದಾಳ ಶರಣರು ಶ್ರೇಷ್ಟ ಲಿಂಗಾನುಭಾವಿಗಳಾಗಿದ್ದು ಅವರ ಜ್ಞಾನಾನುಭವನ್ನು ಸಾಧಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ಭಾರತಿ ಕೆಂಪಯ್ಯ ಅವರು, ಸತ್ಯದೇವಿ ಮಾತಾಜಿ, ಗಂಗಾದಾರ ದೇವರು, ಸತ್ಯಕ್ಕ ಮಾತಾಜಿ ಬಂದವರ ಓಣಿ, ಬಸವ ದೇವರು ಸವದತ್ತಿ, ಶ್ರೀಕಾಂತ ಸ್ವಾಮಿ ಬೀದರ, ಉಪಸ್ಥಿತರಿದ್ದರು.
Friday, 21 February 2025
ಸಾಹಿತ್ಯ-ಸರಸ್ವತಿ: ಡಾ.ಚೆನ್ನವೀರ ಶಿವಾಚಾರ್ಯರು
ಗುರುದ್ರೋಹಿ ಕನ್ಹೇರಿ ಸ್ವಾಮಿಗಳು: ಬಹಿರಂಗ ಕ್ಷಮೆ ಯಾಚಿಸಲಿ : ಡಾ. ಚನ್ನಬಸವಾನಂದ ಜಗದ್ಗುರುಗಳು
ಬೀದರ: ಮಹಾರಾಷ್ಟçದ ಕೋಲ್ಹಾಪುರ ಸಮೀಪದ ಕನ್ಹೇರಿ ಮಠವು ೧೨ನೇ ಶತಮಾನದಲ್ಲಿ ಬಸವಾದಿ ಶರಣರ ಮತ್ತು ಶೂನ್ಯ ಪೀಠದ ಪರಂಪರೆಯ ಮಠ. ಶರಣರಾದ ಶ್ರೀ ಕನ್ಹೇರಿ ಕಾಡಸಿದ್ದೇಶ್ವರರು ಅಪ್ಪಟ ಬಸವ ಭಕ್ತರು. ಆದರೆ ಆ ಶರಣ ಪರಂಪರೆಯ ಪೀಠದ ಮೇಲೆ ಕುಳಿತಿರುವ ಈಗಿನ ಮಠಾಧೀಶರಾದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಗಳು ಶರಣರ ಪರಂಪರೆಯನ್ನೇ ಅದೃಶ್ಯಗೊಳಿಸಿದ್ದಾರೆ. ಇತ್ತಿಚಿಗೆ ಖಾಸಗಿ ಟಿವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನವೊAದರಲ್ಲಿ ಬಸವ ಭಕ್ತರನ್ನು ತಾಲಿಬಾನಿಗಳೆಂದು ಆರೋಪಿಸಿದ್ದು, ಭಕ್ತರೋಬ್ಬರು ನಿಮ್ಮ ಮಠವು ವೈದಿಕವೋ ಅಥವಾ ಅವೈದಿಕವೋ ಎಂದು ಪ್ರಶ್ನೆ ಕೇಳಿದಾಗ ಅದನ್ನು ಕೇಳಲು ನೀಯಾರು? ಎಂದು ಸ್ವಾಮಿಗಳು ಉದ್ಧಟತನ ಪ್ರದರ್ಶಿಸಿದ್ದಾರೆ. ವಚನಗಳನ್ನು ಬೊಗಳು ಬರೀ ಹಂಗೆ ಪ್ರಶ್ನೆ ಕೇಳುತ್ತಿದ್ದಿಯಲ್ಲ ಎಂದು ದುರಹಂಕಾರದಿAದ ಪ್ರಶ್ನೆ ಕೇಳಿದ ವ್ಯಕ್ತಿಯನ್ನು ಅವಮಾನ ಮಾಡಿದ್ದಾರೆ.
Thursday, 13 February 2025
ಧರ್ಮಾಚರಣೆಗಳು ಬೇರೆಯಾದರೂ ಆತ್ಮ ಚೈತನ್ಯ ಒಂದೆ - ಹಾರಕೂಡ ಶ್ರೀ
ಚಿಂಚೋಳಿ : ನಾವು ಆಚರಿಸುವ, ಅನುಸರಿಸುವ, ಧರ್ಮಾಚರಣೆಗಳು ಬೇರೆ ಬೇರೆಯಾದರೂ ಎಲ್ಲರೊಳಗಿರುವ ಆತ್ಮ ಚೈತನ್ಯ ಒಂದೆ ಆಗಿರುತ್ತದೆ ಎಂದು ಹಾರಕೂಡದ ಡಾ. ಚನ್ನವೀರ ಶಿವಾಚಾರ್ಯರು ನುಡಿದರು.
Friday, 7 February 2025
ಡಾ. ಬಸವಲಿಂಗ ಪಟ್ಟದ್ದೆವರು ಲಿಂಗಾಯತ ಧರ್ಮಕ್ಕೆ ದ್ರೋಹ: ತಕ್ಷಣ ಒಕ್ಕೂಟ ಅಧ್ಯಕ್ಷಕ್ಕೆ ರಾಜೀನಾಮೆ ನೀಡಲಿ – ಶಿವರಾಜ ಪಾಟೀಲ್ ಅತಿವಾಳ ಆಕ್ರೋಶ
ಬೀದರ : ಲಿಂಗಾಯತ ಮಠಾಧೀಶರ ಒಕ್ಕೂಟದ ಅಧ್ಯಕ್ಷರಾದ ಪೂಜ್ಯ ಡಾ. ನಾಡೋಜ ಬಸವಲಿಂಗ ಪಟ್ಟದ್ದೆವರು ಲಿಂಗಾಯತ ಧರ್ಮದ ತತ್ವ ಸಿದ್ಧಾಂತಗಳಿಗೆ ವಿರುದ್ಧವಾಗಿ ನಡೆದುಕೊಂಡು ಸಮಾಜಕ್ಕೆ ದ್ರೋಹ ಮಾಡುತ್ತಿದ್ದಾರೆ ಎಂದು ಹಿರಿಯ ಲಿಂಗಾಯತ ನಾಯಕ ಶಿವರಾಜ ಪಾಟೀಲ್ ಅತಿವಾಳ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ತಕ್ಷಣವೇ ನೈತಿಕ ಹೊಣೆ ಹೊತ್ತು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಅವರು ಇಂದು ಶೋಧವಾಣಿ ಯೊಂದಿಗೆ ಮಾತನಾಡುತ್ತ ಭಾಲ್ಕಿ ಹಿರೇಮಠ ಸಂಸ್ಥಾನದ ಗೌರವವನ್ನು ಪೂಜ್ಯ ಬಸವಲಿಂಗ ಪಟ್ಟದ್ದೆವರು ಕಳೆಯುತ್ತಿರುವುದು ಖೇದಕರ ಸಂಗತಿ. ಇತ್ತೀಚೆಗೆ ಕಲಬುರಗಿಯಲ್ಲಿ ನಡೆದ ಬಹುತ್ವ ಭಾರತ ಸಮಾವೇಶದಲ್ಲಿ ಭಾಗವಹಿಸಿ ಅವರೆ ಸಮಾವೇಶ ಉದ್ದೇಶಿಸಿ ಮಾತನಾಡುತ್ತಾ ಯಾರು ಭಾರತೀಯ ಸಂಸ್ಕೃತಿಯ ಉತ್ಸವಕ್ಕೆ ಹೋಗಬಾರದು ಎಂದು ನುಡಿದರು. ಮುಂದುವರೆದು ಯಾರು ಭಾಗವಹಿಸುತ್ತಾರೋ ಅವರು ಕೊರಳಿನಲ್ಲಿ ಕಟ್ಟಿರುವ ಲಿಂಗವನ್ನು ಬಿಚ್ಚಿಟ್ಟು ಹೋಗಬೇಕು ಹಾಗೂ ವಚನ ಸಾಹಿತ್ಯವನ್ನು ಬಳಸುವಂತಿಲ್ಲ ಎಂದು ತಾಕ್ಕಿತು ಮಾಡಿರುವ ಮಾತು ಪಟ್ಟದ್ದೆವರು ಮರೆತ್ತಿದ್ದಾರೆಯೇ ಎಂದು ಅತಿವಾಳ ಆಕ್ರೋಶ ವ್ಯಕ್ತಪಡಿಸಿದರು. ಆರೆಸಸ್ ಪ್ರಾಯೋಜಿತ ಭಾರತೀಯ ಸಂಸ್ಕೃತಿ ಉತ್ಸವ ಪ್ರಚಾರ ವಾಹನದ ಪೂಜೆ ಅವರ ಉತ್ತರಾಧಿಕಾರಿ ಪೂಜ್ಯ ಶ್ರೀ ಗುರುಬಸವ ಪಟ್ಟದೇವರು ಭಾಲ್ಕಿ ತಮ್ಮ ಮಠದ ಎದುರುಗಡೆ ಚಾಲನೆ ಕೊಟ್ಟರು, ಎಂತಹ ದ್ರೋಹ ವಿಡಂಬನೆ ಅಂದರೆ ಭಾರತೀಯ ಸಂಸ್ಕೃತಿ ಉತ್ಸವಕ್ಕೆ ಸಾನಿಧ್ಯ ಪೂಜ್ಯ ಶ್ರೀ ಡಾ ಬಸವಲಿಂಗ ಪಟ್ಟದೇವರು ವಹಿಸಿದರು.
ಲಿಂಗಾಯತ ಮಠಾಧೀಶರ ಒಕ್ಕೂಟದ ಅಧ್ಯಕ್ಷರಾಗಿ ಮಾಡಿದು ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರಚಾರ ಮಾಡುವ ಉದ್ದೇಶದಿಂದ ಆದರೆ ಬಸವಲಿಂಗ ಪಟ್ಟದ್ದೆವರು ತಮ್ಮ ಮಠದ ಅಭಿವೃದ್ಧಿ ಯೋಜನೆ ಮೂಲ ಮಂತ್ರವಾಗಿಸಿಕೊಂಡು ಇಂದು ಎಲ್ಲರ ಕೆಂಗಣ್ಣಿಗೆ ಗುರಿಯಾದರು, ಆರೆಸಸ್ ಮುಖಂಡ ಶ್ರೀ ಬಸವರಾಜ ಪಾಟಿಲ ಸೇಡಂ ಅವರ ಸಂಸ್ಥೆಯ ಫಲಾನುಭವಿಗಳು ಆದ ಭಾಲ್ಕಿ ಮಠ ಇಂದು ಲಿಂಗಾಯತ ಧರ್ಮ ಮತ್ತು ಬಸವ ತತ್ವ ಸಿದ್ದಾಂತ ಹಾಳು ಸ್ವಾರ್ಥಕ್ಕಾಗಿ ಮಾಡುತ್ತಿದೆ. ಈ ಪದ್ದತಿಯನ್ನು ಅನುಸರಿಸಿದರೆ ಮುಂದಿನ ದಿನಗಳಲ್ಲಿ ಬೀದಿಗಿಳಿದು ಪಟ್ಟದ್ದೆವರ ವಿರುದ್ಧ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಶಿವರಾಜ ಪಾಟೀಲ್ ಅತಿವಾಳ ಎಚ್ಚರಿಕೆ ನೀಡಿದರು.
ಶೋಧವಾಣಿಯೊಂದಿಗೆ ಮಾತನಾಡಿದ ಪಾಟೀಲ್, “ಬಸವಣ್ಣನವರ ಸಂಸ್ಕೃತಿಯನ್ನು ಬಿಟ್ಟು, ಆರಎಸ್ಎಸ್ ಸಂಸ್ಕೃತಿಯನ್ನು ತಮ್ಮ ಮಠದಲ್ಲಿ ಅಳವಡಿಸಿಕೊಂಡು, ಲಿಂಗಾಯತ ಧರ್ಮದ ತತ್ವಗಳನ್ನು ಗಾಳಿಗೆ ತೂರುತ್ತಿರುವ ಬಸವಲಿಂಗ ಪಟ್ಟದ್ದೆವರು ಸಮಾಜಕ್ಕೆ ದ್ರೋಹ ಮಾಡುತ್ತಿದ್ದಾರೆ. ಇಂತಹ ವ್ಯಕ್ತಿಯು ಲಿಂಗಾಯತ ಸಮುದಾಯದ ಕ್ಷೇಮವನ್ನು ನೋಡಲು ಸಾಧ್ಯವಿಲ್ಲ” ಎಂದು ಕಿಡಿಕಾರಿದರು. ಲಿಂಗಾಯತ ಸ್ವತಂತ್ರ ಧರ್ಮದ ಹೋರಾಟದಲ್ಲಿಯೂ ಭಾಗವಹಿಸಲು ಹಿಂದೇಟು ಹಾಕಿದರು, ಬೀದರ ಹೋರಾಟದಲ್ಲಿ ಮುಂಚೂಣಿಯಲ್ಲಿ ಇರಬೇಕಾದ ಇವರು ಭಾಲ್ಕಿಯ ತಮ್ಮ ಮಠದಲ್ಲಿ ಪ್ರಚಾರ ಸಭೆ ಇಟ್ಟುಕೊಂಡು ತಾವಿಬ್ಬರೂ ಗುರು ಶಿಷ್ಯ ತಮ್ಮ ಮಠದಲ್ಲಿಯೇ ಇರಲಿಲ್ಲ ಗೈರಾದರು, ಇದು ಇವರ ಇಬ್ಬಂಗಿ ತನ ,ಹೀಗಾಗಿ ಅವರ ಮುಖವಾಡವನ್ನು ಸಮಾಜದ ಮುಂದೆ ಕಳಚಿ ಬಿದ್ದಿದೆ ಎಂದು ಶಿವರಾಜ ಪಾಟೀಲ್ ಅತಿವಾಳ ಪಟ್ಟದ್ದೆವರ ವಿರುದ್ಧ ಹರಿಹಾಯಿದರು.
“ಒಕ್ಕೂಟದ ಉದ್ದೇಶವನ್ನು ಮರೆತು, ವ್ಯಕ್ತಿಗತ ಲಾಭದ ಕಡೆಗೆ ಗಮನ ಹರಿಸುವ ಈ ನಡೆ ಅಸ್ಥಿರತೆಯನ್ನು ಉಂಟುಮಾಡುತ್ತದೆ. ಲಿಂಗಾಯತ ಧರ್ಮದ ಹಿತವನ್ನು ಕಾಯುವುದಾದರೆ, ಅವರು ತಕ್ಷಣ ರಾಜೀನಾಮೆ ನೀಡಿ ತಮ್ಮ ಗೌರವ ಉಳಿಸಿಕೊಳ್ಳಬೇಕು” ಎಂದು ಪಾಟೀಲ್ ಒತ್ತಾಯಿಸಿದರು.
ಈ ಬೆಳವಣಿಗೆಯ ಹಿನ್ನೆಲೆ ಲಿಂಗಾಯತ ಸಮುದಾಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಮಠಾಧೀಶರ ಒಕ್ಕೂಟದ ಮುಂದಿನ ನಡೆಯ ಬಗ್ಗೆ ಕುತೂಹಲ ಮೂಡಿಸಿದೆ. ಶೀಘ್ರವೇ ಈ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಪೂಜ್ಯ ಡಾ ಬಸವಲಿಂಗ ಪಟ್ಟದ್ದೆವರು ಕೂಡಲೇ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಎಲ್ಲಾ ಲಿಂಗಾಯತ ಮುಖಂಡರು ಆಗ್ರಹಿಸುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ ಸಂದೇಶಗಳನ್ನು. ಪಟ್ಟದ್ದೆವರ ನಿಲುವು ಕಾದು ನೋಡೋಣ..
ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!
ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...
.jpg)
-
ಹೈದರಾಬಾದ್ : ಇಂದು ಬೆಳಿಗ್ಗೆ ಬೀದರನಲ್ಲಿ ನಡೆದ ಎಟಿಎಂ ದರೋಡೆಕೋರರೆ ನಗರದ ಅಫ್ಜಲಗಂಜನಲ್ಲಿರುವ ರೋಷನ ಟ್ರಾವೆಲ್ ಕಛೆರಿಯಲ್ಲಿ ಪೊಲೀಸ್ ಮತ್ತು ದರೋಡೆಕೋರ ಮಧ್ಯೆ ಗುಂಡಿನ ...
-
ಬೀದರ್: ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆಸಿರುವ ಘಟನೆಯೊಂದು ಬೀದರ್ನ ಎಸ್ಬಿಐ ಮುಖ್ಯ ಕಚೇರಿ ಮುಂದೆ ಗುರುವಾರ ನಡೆದಿದೆ. ...
-
ಶೋಧವಾಣಿ ಜಾಲಲೋಕ ಹೈದರಾಬಾದ್ : ಸಂಘಟಿತ ಹೋರಾಟ ಇಂದಿನ ದಿನಮಾನದ ಜರೂರು ಹೊರನಾಡು ಗಡಿನಾಡಿನ ಕನ್ನಡಿಗರ ಹಿತಕಾಯಲು ಯಾರೂ ಇಲ್ಲವೆನ್ನುವ ಅನಾಥಪ್ರಜ್ಞೆ ಸರಿಯಲ್ಲ. ಭಾಷೆಯ...