ads
Search This Blog
Monday, 24 February 2025
ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದೆ - ಮುಖ್ಯಮಂತ್ರಿ ಸಿದ್ದರಾಮಯ್ಯ
Saturday, 22 February 2025
ಸಂತೋಷಕ್ಕೆ ಸ್ವಾಗತಿಸಿ, ಒತ್ತಡಕ್ಕೆ ಅಂತ್ಯ ಹಾಡಬೇಕಿದೆ: ಬಿ.ಕೆ ಶಕ್ತಿಕಾಂತ
ಶ್ರೀಶೈಲಕ್ಕೆ ವಿಶೇಷ ಬಸ್ಗಳ ವ್ಯವಸ್ಥೆ : ಸೌಲಭ್ಯ ಪಡೆಯಲು ಸೂಚನೆ
ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವ ಯೋಜನೆಗಳ ಲಾಭ ಅರ್ಹರಿಗೆ ತಲುಪಿಸಿ* *ಜಂಟಿ ಕಾರ್ಯದರ್ಶಿ ಸಮೀರ್ ಶುಕ್ಲಾ*
ಕಷ್ಟದ ಜೀವನ ಶಿಸ್ತಿನ ಪಾಠಶಾಲೆ: ಶ್ರೀ ರಂಭಾಪುರಿ ಜಗದ್ಗುರುಗಳು
ಶರಣರು ಸಾಧಿಸಿದ ಲಿಂಗಯೋಗವು ಸರ್ವಶ್ರೇಷ್ಠ ಯೋಗ: ಪೂಜ್ಯ ಶ್ರೀ ಡಾ. ಸಿದ್ಧರಾಮೇಶ್ವರ ಬೆಲ್ದಾಳ ಶರಣರು
ಬಸವಕಲ್ಯಾಣ: “ಹನ್ನೆರಡನೇ ಶತಮಾನದಲ್ಲಿ ಗುರು ಬಸವಾದಿ ಶರಣರು ಸಾಧಿಸಿದ ಲಿಂಗಯೋಗ ಜಗತ್ತಿನಲ್ಲಿಯೇ ಸರ್ವಶ್ರೇಷ್ಟ ಯೋಗವಾಗಿದೆ” ಎಂದು ಪೂಜ್ಯ ಶ್ರೀ ಡಾ. ಸಿದ್ಧರಾಮೇಶ್ವರ ಬೆಲ್ದಾಳ ಶರಣರು ಅಭಿಮತ ವ್ಯಕ್ತಪಡಿಸಿದ್ದಾರೆ.
ಅವರು ಬಸವ ಮಹಾಮನೆ ಟ್ರಸ್ಟ್ ಬಸವಕಲ್ಯಾಣದ ವತಿಯಿಂದ ಹಮ್ಮಿಕೊಂಡ ಅನುಭವ ಮಂಟಪ ಸಂಸತ್ತು 7ನೇ ಅದಿವೇಶನದ ಮೊದಲನೇ ಗೋಷ್ಟಿಯಲ್ಲಿ ಮಾತನಾಡುತ್ತಾ. “ಲಿಂಗಯೋಗವೆಂದರೆ ಕೇವಲ ಆಧ್ಯಾತ್ಮಿಕ ಸಾಧನೆಗೆ ಮಾತ್ರ ಸೀಮಿತವಲ್ಲ. ಇದು ಜೀವನ ಪರಿವರ್ತನೆಯ ಶಕ್ತಿ ಹೊಂದಿರುವ ಪ್ರಾತ್ಯಕ್ಷಿಕ ಯೋಗವಾಗಿದೆ” ಎಂದು ಅವರು ವಿದ್ವತ್ತಿನಿಂದ ವಿವರಿಸಿದರು.
ಶರಣರು ವಚನಸಾಹಿತ್ಯದಲ್ಲಿ ಬೋಧಿಸಿದ ಷಟಸ್ಥಲವು ಅಂಗ ಲಿಂಗರ ಸಾಮರಸ್ಯಕ್ಕೆ ಭದ್ರ ಬುನಾದಿಯಾಗಿದೆಯಲ್ಲದೆ ಇದರಲ್ಲಿ ವಿಜ್ಞಾನ ಅಡಗಿದೆ. ಪ್ರತಿಯೊಬ್ಬ ಸಾಧಕರು ಶಿವಯೋಗ ಮಾರ್ಗವನ್ನು ಅನುಸರಿಸಿದರೆ ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಬಹುದೆಂದರು.
ಇಷ್ಟಲಿಂಗ ಸಾಧನೆಯಿಂದ ದೇಹ ಶುದ್ಧಿಯಾಗುತ್ತದೆ. ಪ್ರಾಣಲಿಂಗ ಸಾಧನೆಯಿಂದ ಮನ ಶುದ್ಧಿಯಾಗುತ್ತದೆ. ಭಾವಲಿಂಗ ಸಾಧನೆಯಿಂದ ಆತ್ಮಶುದ್ಧಿಯಾಗಿ ಸಾಧಕನ ಇಡೀ ದೇಹ ಸರ್ವಾಂಗ ಲಿಂಗವಾಗಲು ಸಹಕಾರಿಯಾಗಿದೆ ಪ್ರತಿಯೊಬ್ಬರು ಸಾಧಿಸಲು ಮುಂದಾಗಬೇಕು ಎಂದರು.
ಕೇವಲ ಧಾರ್ಮಿಕ ಕ್ರಿಯೆಗೆ ಸೀಮಿತರಾಗಬಾರದು ಎಂದು ಕಿವಿ ಮಾತು ಹೇಳಿದರಲ್ಲದೆ ಶಿವಯೋಗ ಸಾಧಿಸುವ ಸಾಧಕರಿಗೆ ವಿಶೇಷ ತರಬೇತಿ ನೀಡಲು ನಾವು ಕಾರ್ಯಯೋಜನೆ ಹಾಕಿಕೊಳ್ಳುತ್ತಿದ್ದೇವೆ. ಶರಣರು ಮಠ ಸಂಸ್ಕೃತಿ ಹುಟ್ಟು ಹಾಕಿಲ್ಲ, ಜಗದ್ಗುರು ಪದವಿ ಹುಟ್ಟು ಹಾಕಿಲ್ಲ. ಶರಣರದು ಮಹಾಮನೆ ಕಲ್ಪನೆ ಇದೆ. ಮಹಾಮನೆ ಎಂಬುದು ವಿಶಾಲವಾಗಿತ್ತು, ಅದರೊಳಗೆ ಅನುಭವ ಮಂಟಪ ಚಿಂತನೆ ನಡೆಯುತ್ತಿತ್ತು ಎಂದರು.
ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ ಗುಣತೀರ್ಥ ವಾಡಿ ಕಲ್ಯಾಣ ಮಹಾಮನೆಯ ಪೂಜ್ಯಶ್ರೀ ಬಸವ ಪ್ರಭು ಸ್ವಾಮೀಜಿ ಮಾತನಾಡಿ “ಇಂದಿನ ಯುಗದಲ್ಲಿ ಮಾನವನಿಗೆ ಶಾಂತಿ, ಸಮಾನತೆ ಮತ್ತು ನೈತಿಕತೆಯ ಅವಶ್ಯಕತೆ ಇದೆ. ಶರಣರ ಲಿಂಗಯೋಗವೇ ಅದಕ್ಕೆ ಮೂಲ ಪರಿಹಾರ” ಎಂದು ಅವರು ಅಭಿಪ್ರಾಯಪಟ್ಟರು.
ಅನುಭವ ಮಂಟಪದ ಆಶಯವು ಸಂಸ್ಕಾರ, ಸಹೋದರ, ಸಮಾನತೆ, ಸಂಘಟನೆಯಿಂದ ಕೂಡಿತ್ತು. ಬಸವಣ್ಣನವರು ಒಬ್ಬ ಮನಃಶಾಸ್ತ್ರೀಯ ಗುಣ ಹೊಂದಿದ್ದರಿಂದಲೇ ಸರ್ವರನ್ನು ತನ್ನತ್ತ ಸೆಳೆದು ಸಮುದಾಯಿಕ ಲಿಂಗಯೋಗ ಸಾಧನೆ ಮಾಡಲು ಸಾಧ್ಯವಾಯಿತು.
ಪೂಜ್ಯ ಶ್ರೀ ಡಾ. ಸಿದ್ಧರಾಮ ಬೆಲ್ದಾಳ ಶರಣರು ಶ್ರೇಷ್ಟ ಲಿಂಗಾನುಭಾವಿಗಳಾಗಿದ್ದು ಅವರ ಜ್ಞಾನಾನುಭವನ್ನು ಸಾಧಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ಭಾರತಿ ಕೆಂಪಯ್ಯ ಅವರು, ಸತ್ಯದೇವಿ ಮಾತಾಜಿ, ಗಂಗಾದಾರ ದೇವರು, ಸತ್ಯಕ್ಕ ಮಾತಾಜಿ ಬಂದವರ ಓಣಿ, ಬಸವ ದೇವರು ಸವದತ್ತಿ, ಶ್ರೀಕಾಂತ ಸ್ವಾಮಿ ಬೀದರ, ಉಪಸ್ಥಿತರಿದ್ದರು.
Friday, 21 February 2025
ಸಾಹಿತ್ಯ-ಸರಸ್ವತಿ: ಡಾ.ಚೆನ್ನವೀರ ಶಿವಾಚಾರ್ಯರು
ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!
ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...
.jpg)
-
ಹೈದರಾಬಾದ್ : ಇಂದು ಬೆಳಿಗ್ಗೆ ಬೀದರನಲ್ಲಿ ನಡೆದ ಎಟಿಎಂ ದರೋಡೆಕೋರರೆ ನಗರದ ಅಫ್ಜಲಗಂಜನಲ್ಲಿರುವ ರೋಷನ ಟ್ರಾವೆಲ್ ಕಛೆರಿಯಲ್ಲಿ ಪೊಲೀಸ್ ಮತ್ತು ದರೋಡೆಕೋರ ಮಧ್ಯೆ ಗುಂಡಿನ ...
-
ಬೀದರ್: ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆಸಿರುವ ಘಟನೆಯೊಂದು ಬೀದರ್ನ ಎಸ್ಬಿಐ ಮುಖ್ಯ ಕಚೇರಿ ಮುಂದೆ ಗುರುವಾರ ನಡೆದಿದೆ. ...
-
ಶೋಧವಾಣಿ ಜಾಲಲೋಕ ಹೈದರಾಬಾದ್ : ಸಂಘಟಿತ ಹೋರಾಟ ಇಂದಿನ ದಿನಮಾನದ ಜರೂರು ಹೊರನಾಡು ಗಡಿನಾಡಿನ ಕನ್ನಡಿಗರ ಹಿತಕಾಯಲು ಯಾರೂ ಇಲ್ಲವೆನ್ನುವ ಅನಾಥಪ್ರಜ್ಞೆ ಸರಿಯಲ್ಲ. ಭಾಷೆಯ...