ಯಾದಗಿರಿ : ಸಿರಿಧಾನ್ಯ ಸೇವನೆಯಿಂದ ಗುಣವಾಗದ ಕಾಯಿಲೆಗಳನ್ನೂ ಗುಣ ಪಡಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಧಿಕಾರಿಗಳಾದ ಡಾ.ಲವೀಶ್ ಒರಡಿಯಾ ಅವರು ಹೇಳಿದರು.ಕೃಷಿ ಇಲಾಖೆಯಿಂದ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಸಿರಿಧಾನ್ಯ ಹಾಗೂ ಸಾವಯವ ಅಂತರಾಷ್ಟಿçÃಯ ಅಂತಾರಾಷ್ಟಯ ವಾಣಿಜ್ಯ ಮೇಳ ಅಂಗವಾಗಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಸ್ಪರ್ಧೆ ಹಾಗೂ ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ads
Search This Blog
Monday, 23 December 2024
ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಜಿ.ಪಂ.ಸಿಇಓ ಲವೀಶ ಒರಡಿಯಾ
ಡಾ. ಅಮ್ಮಸಂದ್ರ ಸುರೇಶ್ ಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ
ಬೆಂಗಳೂರಿನ ಸರ್ವೆ ಕಲ್ಚರಲ್ ಅಕಾಡೆಮಿ ಮತ್ತು ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಕೊಡಮಾಡುವ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಗೆ ಡಾ. ಅಮ್ಮಸಂದ್ರ ಸುರೇಶ್ ಭಾಜನರಾಗಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಮ್ಮಸಂದ್ರ ಸುರೇಶ್ ಅವರು ಇದುವರೆಗೂ ಇಪ್ಪತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ ಮತ್ತು ರಾಜ್ಯ ಮಟ್ಟದ ಪತ್ರಿಕೆಗಳಿಗೆ ಅಂಕಣಗಳನ್ನು ಬರೆಯುತ್ತಿದ್ದಾರೆ. ಪ್ರಶಸ್ತಿಯನ್ನು ಇದೇ ತಿಂಗಳ ೨೭ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗಮಂದಿರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಧಾನ ಮಾಡಲಾಗುವುದು ಎಂದು ಅಕಾಡೆಮಿಯ ಸ್ಥಾಪಕ ಅಧ್ಯಕ್ಷ ರಮೇಶ್ ಸರ್ವೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಿತ್ರಾರ್ಜಿತ ಆಸ್ತಿಯಲ್ಲಿ ಮೃತ ಹೆಣ್ಣು ಮಕ್ಕಳಿಗೂ ಸಮಾನ ಪಾಲು
ಬೆಂಗಳೂರು: 2024ನೇ ವರ್ಷ ಮುಕ್ತಾಯವಾಗುತ್ತಿದೆ. ಹೊಸ ವರ್ಷ 2025ಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ರಾಜ್ಯ ಹೈಕೋರ್ಟ್ ಈ ವರ್ಷ ಹೊರಡಿಸಿದ್ದ ಮಹತ್ವದ ಆದೇಶಗಳ
- ಮಲಗುಂಡಿ ಸ್ವಚ್ಛತೆಗೆ ತಳ ಸಮುದಾಯದವರ ಬಳಕೆ ಮಾಡಿಕೊಂಡಿರುವ ಕುರಿತಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ಕೇಳಿತ್ತು.ಮೃತ ಪುತ್ರನಿಗೆ ಪಿತ್ರಾರ್ಜಿತ ಆಸ್ತಿಯ ಹಕ್ಕು ಇದೆ ಎಂದಾದರೆ ಹೆಣ್ಣು ಮಕ್ಕಳಿಗೂ ಅದು ಅನ್ವಯವಾಗುತ್ತದೆ. ಆದ್ದರಿಂದ ಪಿತ್ರಾರ್ಜಿತ ಆಸ್ತಿಯಲ್ಲಿ ಮೃತ ಹೆಣ್ಣು ಮಕ್ಕಳಿಗೂ ಸಮಾನ ಪಾಲು ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು.ಕೃಷ್ಣರಾಜ ಸಾಗರ (ಕೆಆರ್ಎಸ್) ಅಣೆಕಟ್ಟೆ ಸುತ್ತ 30 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಹೈಕೋರ್ಟ್ ಆದೇಶ.
- ರಾಜ್ಯದಲ್ಲಿ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿ ಕೊರತೆಯಿದ್ದ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ಪ್ರತಿಕ್ರಿಯೆ ಕೇಳಿದ್ದ ಹೈಕೋರ್ಟ್. ಸೇನೆಯಲ್ಲಿನ ನರ್ಸಿಂಗ್ ಸೇವೆಗೆ ಮಹಿಳೆಯರಿಗೆ ಮಾತ್ರ ಇದ್ದ ಅವಕಾಶ ರದ್ದುಗೊಳಿಸಿದ್ದಲ್ಲದೇ, ಈ ರೀತಿಯ ಮೀಸಲಾತಿ ಸಂವಿಧಾನದ ಪರಿಚ್ಛೇದ 14 ಮತ್ತು 16(2)ಕ್ಕೆ ವಿರುದ್ಧ ಎಂದು ಸಾರಿದ್ದ ಹೈಕೋರ್ಟ್.
- ಸಾರ್ವಜನಿಕ ಸ್ಥಳದಲ್ಲಿ ಧಾರ್ಮಿಕ ಕೇಂದ್ರಗಳನ್ನು ನಿರ್ಮಿಸಿದರೆ ಜನ ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದ ಹೈಕೋರ್ಟ್, ಸಾರ್ವಜನಿಕ ರಸ್ತೆಯಲ್ಲಿ ದೇವಾಲಯ, ಮಸೀದಿ, ಚರ್ಚ್ ನಿರ್ಮಿಸಿದರೆ ಜನರು ಏನು ಮಾಡಬೇಕು? ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.
- ಸರ್ಕಾರ ಬದಲಾದರೆ ಅಧಿಕಾರಿಗಳ ವಿರುದ್ಧದ ಪ್ರಕರಣ ಹಿಂಪಡೆಯಲು ಮುಂದಾಗಬಾರದು ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದ ಹೈಕೋರ್ಟ್. ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಮಹಿಳೆಯ ರಕ್ಷಣೆಗೆ ಕ್ರಮ ಕೈಗೊಳ್ಳದ ಪೊಲೀಸ್ ಇಲಾಖೆಗೆ ತರಾಟೆ ತೆಗೆದುಕೊಂಡಿತ್ತು. ಜೊತೆಗೆ, ಮಹಿಳೆಗೆ ಎರಡು ಎಕರೆ ಜಮೀನು ಮತ್ತು ಸರ್ಕಾರದಿಂದ ಚಿಕಿತ್ಸೆ ಮತ್ತು ಪರಿಹಾರ ಒದಗಿಸುವಂತೆ ಮಹತ್ವದ ತೀರ್ಪು ಪ್ರಕಟಿಸಿತ್ತು.
- ಆಸ್ತಿ ಮಾರಾಟ ಸೇರಿದಂತೆ ಇತರೆ ದಾಖಲೆಗಳ ನೋಂದಣಿಗೂ ಮುನ್ನ ಆ ದಾಖಲೆಗಳನ್ನು ಸಲ್ಲಿಸುವ ವ್ಯಕ್ತಿಯ ಆಧಾರ್ ನೈಜತೆಯನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಆದೇಶ. ಬಿಡಿಎ ಕಾರ್ಯವೈಖರಿ ಬಗ್ಗೆ ಹೈಕೋರ್ಟ್ ಅಸಮಾಧಾನ. ಮಾರುವೇಷದಲ್ಲಿ ಕಚೇರಿಗೆ ಹೋಗಿ ಪರಿಶೀಲಿಸುವಂತೆ ಬಿಡಿಎ ಆಯುಕ್ತರಿಗೆ ಸಲಹೆ. ಸುಗ್ರೀವಾಜ್ಞೆ ಮೂಲಕ ಬಿಡಿಎ ಮುಚ್ಚುವುದೇ ಲೇಸು ಎಂದು ಮೌಖಿಕ ಅಭಿಪ್ರಾಯ.
- ಕಾನೂನುಬಾಹಿರವಾಗಿ ವೈದ್ಯಕೀಯ ಸ್ನಾತಕೋತ್ತರ ಪದವಿಯ ಸೀಟು ಹಂಚಿಕೆ ಆರೋಪ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ 1 ಲಕ್ಷ ರೂ. ದಂಡ ವಿಧಿಸಿದ್ದ ಹೈಕೋರ್ಟ್.
- ಬಾಲ್ಯ ವಿವಾಹದಿಂದಾಗುವ ಪರಿಣಾಮ ಅರಿಯದೆ ಪರಸ್ಪರ ಒಮ್ಮತದಿಂದ ಹದಿಹರೆಯದವರು ಲೈಂಗಿಕ ಸಂಭೋಗ ನಡೆಸುವುದರಿಂದ ಅದನ್ನು ಅಪರಾಧೀಕರಿಸುವುದಕ್ಕೆ ಸಾಧ್ಯವಿಲ್ಲ. ಅಪ್ರಾಪ್ತೆಯಾಗಿರುವ ಪತ್ನಿ ಮತ್ತು ಆಕೆಯ ಮಗುವಿಗೆ ಆರೋಪಿತರೇ ಜೀವನಾಧಾರವಾಗಿದ್ದ ಹಿನ್ನೆಲೆಯಲ್ಲಿ, ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ರದ್ದುಪಡಿಸಿ ಆದೇಶಿಸಿದ್ದ ಹೈಕೋರ್ಟ್.
- ಮೃತಪಟ್ಟ ತಂದೆಯ ನೌಕರಿಯನ್ನು ವಿವಾಹಿತ ಪುತ್ರಿಗೆ ಅನುಕಂಪದ ಆಧಾರದಲ್ಲಿ ನೀಡಲಾಗದು ಎಂದಿದ್ದ ಹೈಕೋರ್ಟ್.ರಾಜ್ಯದಲ್ಲಿ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಪಡಿಸಿ ಮಹತ್ವದ ಆದೇಶ ನೀಡಿದ್ದ ಹೈಕೋರ್ಟ್, ದ್ವಿಸದಸ್ಯ ಪೀಠದಿಂದ ಅನುಮತಿ, ಬಳಿಕ ಸುಪ್ರೀಂಕೋರ್ಟ್ನಿಂದ ಅನುಮತಿ ರದ್ದು.
- ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣದಲ್ಲಿ ಡಾ.ಶಿವಮೂರ್ತಿ ಮುರುಘಾಶರಣರ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣ ಸಂಬಂಧದ ಆರೋಪವನ್ನು ಮರು ನಿಗದಿ ಮಾಡಲು ಹೈಕೋರ್ಟ್ ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿದೆ.ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ಸೇವೆ (ಬಡ್ತಿ, ಸೇವಾ ಹಿರಿತನ)ಗೆ ಸಂಬಂಧಿಸಿದ ನಿಯಮಗಳ ಅಡಿ ದಾಖಲಾಗುವ ಪ್ರಕರಣಗಳ ವಿಚಾರಣೆ ನಡೆಸುವ ಅಧಿಕಾರಗಳಿಲ್ಲ ಎಂದು ಹೈಕೋರ್ಟ್ ಆದೇಶ.
- ಕ್ರೂರ, ಅಪಾಯಕಾರಿ ಶ್ವಾನ ತಳಿ ಸಂತಾನೋತ್ಪತ್ತಿ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಿದ್ದ ಹೈಕೋರ್ಟ್.ಮೃತ ಸೈನಿಕನ ವಿಚ್ಛೇದಿತ ಪತ್ನಿಗೆ ಎಲ್ಲ ರೀತಿಯ ವಿಧವಾ ಸೌಲಭ್ಯಗಳನ್ನು ಕಲ್ಪಿಸಲು ಸೇನಾ ಪ್ರಾಧಿಕಾರಕ್ಕೆ ಸೂಚಿಸಿದ್ದ ಹೈಕೋರ್ಟ್.
- ಹೈಕೋರ್ಟ್ ನ್ಯಾಯಪೀಠದ ಮುಂದೆ ಕತ್ತಿಗೆ ಗಾಯ ಮಾಡಿಕೊಂಡ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು.ಶ್ರವಣದೋಷವುಳ್ಳ ವಕೀಲರಿಗೆ ನೆರವಾಗಲು ಅರ್ಥ ನಿರೂಪಣಾಕಾರರ ನೇಮಕ ಮಾಡಿ ಪ್ರಕರಣದ ವಿಚಾರಣೆ ನಡೆಸಿ ಇತ್ಯರ್ಥಪಡಿಸಿದ ಹೈಕೋರ್ಟ್.ನ್ಯಾಯಾಲಯದ ಆದೇಶ ಪಾಲಿಸದ ಸರ್ಕಾರದ ಪ್ರಾಧಿಕಾರಗಳು ವಿರುದ್ಧ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿಕೊಂಡು ಸರ್ಕಾರದ ಪ್ರತಿಕ್ರಿಯೆ ಕೇಳಿದ್ದ ಹೈಕೋರ್ಟ್ಸರ್ಕಾರಿ ಕೋಟಾದಡಿ ಪದವಿ ಪಡೆದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಗ್ರಾಮೀಣ ಸೇವೆ ಕಡ್ಡಾಯ ಎಂದು ಹೈಕೋರ್ಟ್ ಆದೇಶ.
- ವಿದ್ಯುತ್ ಸ್ಪರ್ಶದಿಂದ ಆನೆ ಸೇರಿ ವನ್ಯಜೀವಿಗಳ ಸಾವು ಕುರಿತಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಹೈಕೋರ್ಟ್, ಸರ್ಕಾರದಿಂದ ಮಾಹಿತಿ ನೀಡಲು ಸೂಚನೆ ನೀಡಿತ್ತು.ವಿದೇಶಿಯರಿಗೆ ವೈದ್ಯಕೀಯ ವೀಸಾ ನೀಡುವುದಕ್ಕೂ ಮುನ್ನ ಅವರ ಹಿನ್ನೆಲೆಯಲ್ಲಿ ಸೂಕ್ಷ್ಮವಾಗಿ ಪರಿಶೀಲಿಸಿ ನಿರ್ಧಾರ ಕೈಗೊಳ್ಳುವಂತೆ ಪಾಸ್ಪೋರ್ಟ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದ ಹೈಕೋರ್ಟ್2020ರಲ್ಲಿ ನಟಿ ಸಂಜನಾ ಗಲ್ರಾಣಿ ಮತ್ತಿತರರ ವಿರುದ್ಧ ದಾಖಲಾಗಿದ್ದ ಮಾದಕ ದ್ರವ್ಯ ಸೇವನೆ ಪ್ರಕರಣ ರದ್ದುಗೊಳಿಸಿ ಆದೇಶಿಸಿದ್ದ ಹೈಕೋರ್ಟ್
- ವೇಶ್ಯಾವಾಟಿಕೆಯಲ್ಲಿ ಸಿಕ್ಕಿಹಾಕಿಕೊಳ್ಳುವ ಸಂತ್ರಸ್ತೆಯರನ್ನು ಅಭಿಯೋಜನೆಗೆ ಗುರಿಪಡಿಸಲಾಗದು ಎಂದು ಆದೇಶಿಸಿದ್ದ ಹೈಕೋರ್ಟ್ಬಿಟ್ ಕಾಯಿನ್ ಹಗರಣದಲ್ಲಿ ಆರೋಪಿ ಶ್ರೀಕಿ ಸೇರಿ ಇಬ್ಬರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆಯಡಿ(ಕೋಕಾ) ವಿಧಿಸಿದ್ದ ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಒಂದು ಹಕ್ಕು, ಈ ವೇಳೆ ಸಣ್ಣ ಹಾನಿಯಾಗುವುದು ಸಾಮಾನ್ಯ ಎಂದು ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿರುವ ಹೈಕೋರ್ಟ್
- ವಿದ್ಯಾರ್ಥಿಗೆ ಆತ್ಮಹತ್ಯೆ ಪ್ರಚೋದನೆ ನೀಡುವ ಶಿಕ್ಷಕರು ಶಿಸ್ತು ಕಲಿಸುವ ನೆಪದಲ್ಲಿ ಮಕ್ಕಳ ಜೀವಕ್ಕೆ ಹಾನಿಯಾಗುವ ಕೃತ್ಯಗಳಿಗೆ ಮುಂದಾಗಬಾರದು ಎಂದು ಶಿಕ್ಷಕರಿಗೆ ಸಲಹೆ ನೀಡಿದ್ದ ಹೈಕೋರ್ಟ್ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ ಕುರಿತಂತೆ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ಸರ್ಕಾರದ ಪ್ರತಿಕ್ರಿಯೆ ಕೇಳಿದ್ದ ಹೈಕೋರ್ಟ್.ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಕೊಲೆ ಆರೋಪಿಗಳಿಗೆ ಜಾಮೀನು ನೀಡಿದ್ದ ಹೈಕೋರ್ಟ್.ವಿದ್ಯಾರ್ಥಿಯೊಂದಿಗೆ ಅಸಹಜ ಫೋಟೋ ಕ್ಲಿಕ್ಕಿಸಿಕೊಂಡಿದ್ದ ಮುಖ್ಯ ಶಿಕ್ಷಕಿ ನಡೆಗೆ ಹೈಕೋರ್ಟ್ ಅಸಮಾಧಾನ.ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಯ್ದೆಯಡಿ ಮಂಜೂರಾದ ಜಮೀನನ್ನು ಜಿಪಿಎ ಮಾಡಿಕೊಂಡು ಸೊಸೈಟಿಯಿಂದ ಪಡೆದ ಸಾಲಕ್ಕೆ ಜಪ್ತಿ ಮಾಡಲಾಗದು ಎಂದು ಆದೇಶಿಸಿದ್ದ ಹೈಕೋರ್ಟ್
- ನಿವೃತ್ತಿ ನಂತರ ಸೇವಾ ಅವಧಿ ವಿಸ್ತರಣೆಗಾಗಿ ಜನ್ಮ ದಿನ ಬದಲಾವಣೆ ಕೋರಿ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ.ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಮಾಡುವುದು ಸಾಮರಸ್ಯ ಉತ್ತೇಜಿಸುವ ಸಂಕೇತವಾಗಿರಲಿದೆ ಎಂದು ಹೈಕೋರ್ಟ್ ಆದೇಶ.ಅರ್ಹತೆ ಇದ್ದರೂ ವೈದ್ಯಕೀಯ ಸೀಟು ನೀಡದ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಅಂತಾರಾಷ್ಟ್ರೀಯ ಚೆಸ್ ಪಟುವಿಗೆ ₹10 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಸೂಚನೆ.ಅಪಘಾತ ಸಂಭವಿಸಿದಾಗ ವಾಹನಕ್ಕೆ ಪರವಾನಗಿ, ಫಿಟ್ನೆಸ್ ಸರ್ಟಿಫಿಕೆಟ್ ಇಲ್ಲದಿದ್ದರೂ ಸಂತ್ರಸ್ತರಿಗೆ ವಿಮಾ ಕಂಪನಿ ಪರಿಹಾರ ಪಾವತಿಸಬೇಕು ಎಂದು ಹೈಕೋರ್ಟ್ ಆದೇಶ.ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್) ಜಾರಿ ಬಳಿಕ ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗದು ಎಂದು ತಿಳಿಸಿದ್ದ ಹೈಕೋರ್ಟ್.ಅಪರಾಧದಲ್ಲಿ ಭಾಗಿಯಾಗಿರುವ ಪತಿಯೊಂದಿಗೆ ನೆಲೆಸಿರುವ ಕಾರಣ ಪತ್ನಿಯನ್ನೂ ಸಹ ಆರೋಪಿಯನ್ನಾಗಿ ಮಾಡಲಾಗುವುದಿಲ್ಲ ಎಂದು ಹೈಕೋರ್ಟ್ ಆದೇಶ.ವಾಲ್ಮೀಕಿ ನಿಗಮ ಹಗರಣವನ್ನು ಕೇಂದ್ರ ತನಿಖಾ ದಳದ (ಸಿಬಿಐ) ತನಿಖೆಗೆ ಒಪ್ಪಿಸಬೇಕು ಎಂದು ಯೂನಿಯನ್ ಬ್ಯಾಂಕ್ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್.ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಲಯಾಳಂ ಸಿನಿಮಾ ನಿರ್ದೇಶಕರ ವಿರುದ್ಧದ ದಾಖಲಾದ ಸುಳ್ಳು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್.ಮದರಸಾದಲ್ಲಿ ಶಿಕ್ಷಕರಿಂದ ಬಾಲಕನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಕುರಿತು ಪ್ರಕರಣ ದಾಖಲಿಸದ ಮದರಸಾ ಸಂಸ್ಥಾಪಕನ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ.ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್.ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿರ್ವಸಿಟಿ (ಎನ್ಎಸ್ಎಲ್ಯು) ಯಲ್ಲಿ ತೃತೀಯ ಲಿಂಗಿಗಳಿಗೆ ಶೇ.0.5ರಷ್ಟು ಮೀಸಲಾತಿ ನೀಡುವಂತೆ ಹೈಕೋರ್ಟ್ ಸೂಚನೆ.
ಅಲ್ಲು ಅರ್ಜುನ್ ಪ್ರಕರಣ: ತನಿಖೆಯ ಸಂಪೂರ್ಣ ಮಾಹಿತಿ ನೀಡಿದ ಪೊಲೀಸ್
ಬಹುನಿರೀಕ್ಷಿತ 'ಪುಷ್ಪ-2' ಬಿಡುಗಡೆಯ ಹಿಂದಿನ ರಾತ್ರಿ ನಡೆದ ಕಾಲ್ತುಳಿತದಲ್ಲಿ ಮಹಿಳಾ ಅಭಿಮಾನಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ. ಹೈದರಾಬಾದ್ನ ಪ್ರಸಿದ್ಧ ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತ ಸಂಭವಿಸಿ ರೇವತಿ ಎಂಬ ಅಭಿಮಾನಿ ಸಾವನ್ನಪ್ಪಿದ ಘಟನೆಯ ವಿವರಣೆಯನ್ನು ನಗರ ಪೊಲೀಸ್ ಆಯುಕ್ತ ಸಿ ವಿ ಆನಂದ್ ಒದಗಿಸಿದ್ದಾರೆ.
ನಗರದ ಆ್ಯನುವಲ್ ಕ್ರೈಮ್ ರಿವ್ಯೂವ್ ಮೀಟಿಂಗ್ನಲ್ಲಿ ಮಾತನಾಡಿದ ಅವರು, ಸಿಸಿಟಿವಿ ಫುಟೇಜ್, ಸೋಷಿಯಲ್ ಮೀಡಿಯಾ ಕ್ಲಿಪ್ಸ್ ಹಾಗೂ ಮೀಡಿಯಾ ಕವರೇಜ್ ಸೇರಿದಂತೆ ಸಾಕ್ಷಿಗಳನ್ನು ಸಂಗ್ರಹಿಸಲು ಪೊಲೀಸರು 10,000ಕ್ಕೂ ಹೆಚ್ಚು ವಿಡಿಯೋಗಳನ್ನು ವಿಶ್ಲೇಷಿಸಿದ್ದಾರೆ ಎಂದು ಬಹಿರಂಗಪಡಿಸಿದರು.
ನಟ ಅಲ್ಲು ಅರ್ಜುನ್ ಮುಖ್ಯಭೂಮಿಕೆಯಲ್ಲಿರುವ ಸಿನಿಮಾದ ಸ್ಪೆಷಲ್ ಸ್ಕ್ರೀನಿಂಗ್ ವೇಳೆ ಈ ಘಟನೆ ಸಂಭವಿಸಿದೆ. ನಟನ ಉಪಸ್ಥಿತಿಯು ಥಿಯೇಟರ್ಗೆ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳನ್ನು ಆಕರ್ಷಿಸಿತು. ಕಾಲ್ತುಳಿತದಿಂದ ರೇವತಿ ಸಾವನ್ನಪ್ಪಿದ್ದು, ಅವರ ಮಗ ಶ್ರೀತೇಜ್ಗೆ ಗಂಭೀರ ಗಾಯಗಳಾಗಿವೆ. ಘಟನೆಯ ಪ್ರಮುಖ ಕ್ಷಣಗಳುಳ್ಳ 10 ನಿಮಿಷಗಳ ವಿಡಿಯೋವನ್ನು ಆಯುಕ್ತರು ಹಂಚಿಕೊಂಡಿದ್ದಾರೆ. ಜೊತೆಗೆ ಘಟನೆಯನ್ನು ಅರ್ಥ ಮಾಡಿಕೊಳ್ಳಲು ವೀಕ್ಷಕರನ್ನು ಒತ್ತಾಯಿಸಿದ್ದಾರೆ.
ಆರಂಭಿಕ ಎಚ್ಚರಿಕೆ ಕೊಡುವಲ್ಲಿ ನಿರ್ಲಕ್ಷ್ಯ
- ಫೆಬ್ರವರಿ 2ರಂದು, ಥಿಯೇಟರ್ ಮ್ಯಾನೇಜರ್ ಈವೆಂಟ್ ಆಯೋಜಿಸಲು ಅನುಮತಿಗಾಗಿ ಸ್ಥಳೀಯ ಪೊಲೀಸರಿಗೆ ಮನವಿ ಸಲ್ಲಿಸಿದ್ದರು.
- ಫೆಬ್ರವರಿ 3 ರಂದು, ಪೊಲೀಸರು ಥಿಯೇಟರ್ಗೆ ಭೇಟಿ ನೀದ್ದಾರೆ. ಪರಿಸ್ಥಿತಿಯನ್ನು ಗಮನಿಸಿದ್ದಾರೆ. ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರ ಆಗಮನದಿಂದ ಆಗುವ ಸಂಭಾವ್ಯ ಸಮಸ್ಯೆಗಳನ್ನು ಅವಲೋಕಿಸಿ, ಅಲ್ಲು ಅರ್ಜುನ್ಗೆ ಆಹ್ವಾನ ನೀಡದಂತೆ ಸಲಹೆ ನೀಡಿದ್ದರು.
ಶಾಕ್ ನೀಡಿದ ವಾಟ್ಸಾಪ್: ಮುಂದಿನ ವರ್ಷದಿಂದ ಈ ಆಂಡ್ರಾಯ್ಡ್ ಸೆಟ್ಗಳಲ್ಲಿ ಕಾರ್ಯ ನಿರ್ವಹಿಸುವುದಿಲ್ಲ
ನೀವು ಆಂಡ್ರಾಯ್ಡ್ ಫೋನ್ ಬಳಕೆದಾರರಾಗಿದ್ದರೆ ಇದು ನಿಮಗೆ ಪ್ರಮುಖ ಸುದ್ದಿಯಾಗಿದೆ. ಏಕೆಂದರೆ ಮುಂಬರುವ ವರ್ಷದಿಂದ ಕೆಲವು ಆಂಡ್ರಾಯ್ಡ್ ಹ್ಯಾಂಡ್ಸೆಟ್ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸುವುದಾಗಿ ವಾಟ್ಸಾಪ್ ಘೋಷಿಸಿದೆ.
ಹೌದು, ಜನವರಿ 1, 2025 ರಿಂದ ಕಿಟ್ಕ್ಯಾಟ್ ಚಾಲನೆಯಲ್ಲಿರುವ ಆಂಡ್ರಾಯ್ಡ್ ಫೋನ್ಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತದೆ. ಈ ಫೋನ್ಗಳು ದಶಕದ ಹಳೆಯ ಆಪರೇ ಟಿಂಗ್ ಸಿಸ್ಟಂ ಅನ್ನು ಚಾಲನೆ ಮಾಡುತ್ತಿವೆ ಮತ್ತು ಯಾವುದೇ ಹೊಸ ಅಪ್ಡೇಟ್ಗಳು ಅವುಗಳಿಗೆ ಬರುತ್ತಿಲ್ಲ.
ಸರಳ ಭಾಷೆಯಲ್ಲಿ ಹೇಳುವುದಾದರೆ ನಿಮ್ಮ ಬಳಿ 9 ರಿಂದ 10 ವರ್ಷಗಳ ಹಿಂದೆ ಬಿಡುಗಡೆಯಾದ ಆಂಡ್ರಾಯ್ಡ್ ಫೋನ್ ಇದ್ದರೆ, ಅದರಲ್ಲಿ ವಾಟ್ಸಾಪ್ ಅಪ್ಲಿಕೇಶನ್ ಕಾರ್ಯನಿರ್ವಹಿಸುವುದಿಲ್ಲ. ನೀವು ವಾಟ್ಸಾಪ್ ಬಳಸುವುದನ್ನು ಮುಂದುವರಿಸಲು ಬಯಸಿದರೆ ಇತ್ತೀಚಿನ ಆಪರೇಟಿಂಗ್ ಸಿಸ್ಟಮ್ನೊಂದಿಗೆ ಹೊಸ ಫೋನ್ಗೆ ಅಪ್ಗ್ರೇಡ್ ಮಾಡಬೇಕಾಗುತ್ತದೆ. ಆ್ಯಪ್ನ ಸುರಕ್ಷತೆ ಮತ್ತು ಕಾರ್ಯನಿರ್ವಹಣೆಯ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದು ಕೊಳ್ಳಲಾಗಿದೆ ಎಂದು ವಾಟ್ಸಾಪ್ ಹೇಳಿದೆ.
ಮೈಲಾರ ಮಲ್ಲಣ್ಣ ದೇವರ ಮೂರ್ತಿ ಆನೆ ಮೇಲೆ ಮೆರವಣಿಗೆ : ರಥೋತ್ಸವ
ಬೀದರ್ - ಭಾಲ್ಕಿ ತಾಲ್ಲೂಕಿನ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ಜಾತ್ರೆ ನಿಮಿತ್ತ ರವಿವಾರ ಮಲ್ಲಣ್ಣ ದೇವರ ಮೂರ್ತಿ ಆನೆ ಮೇಲೆ ಮೆರವಣಿಗೆ ನಡೆಯಿತು. ನಂತರ ರಥೋತ್ಸವ ಜರುಗಿತು. ಅಪಾರ ಭಕ್ತ ಸಮೂಹ ಭಕ್ತಿಪರಾಕಷ್ಟೆ ಮೆರೆದರು.
ಮೆರವಣಿಗೆಯು ದೇವಸ್ಥಾನದಿಂದ ಹೊರಟು ಗಣೇಶ ಕುಂಡ, ಜ್ಯೋತಿರ್ಲಿಂಗ ದೇವಸ್ಥಾನ, ತೆಪ್ಪದ ಕುಂಡ ಹಾದು ಘಟಮಾರಿ ದೇವಸ್ಥಾನಕ್ಕೆ ತಲುಪಿ ವಗ್ಗೆ ಕಡೆಯಿಂದ ಹಾಡು, ಚಾಬುಕ ನೃತ್ಯ ನಡೆಯಿತು. ಮಲ್ಲಣ್ಣ ದೇವಸ್ಥಾನಕ್ಕೆ ಆಗಮಿಸಿ ಮಂಗಳಾರತಿಯೊಂದಿಗೆ ಮೆರವಣಿಗೆಯ ಸಮಾಪ್ತಿ ಮಾಡಲಾಯಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ ಮೇತ್ರೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾವ್ ಕುಲಕರ್ಣಿ, ವ್ಯವಸ್ಥಾಪಕ ಸಂಜೀವಕುಮಾರ ಸುಂದಾಳ, ಪ್ರಧಾನ ಅರ್ಚಕ ಬಸಪ್ಪ ಹಿರಿವಗ್ಗೆ, ಮಲ್ಲಿಕಾರ್ಜುನ ಹಿರಿವಗ್ಗೆ, ಪ್ರಕಾಶ ಹಿರಿವಗ್ಗೆ ಮತ್ತು ಆಕಾಶ ಹಿರಿವಗ್ಗೆ ಸೇರಿದಂತೆ ದೇವಸ್ಥಾನದ ಸಿಬ್ಬಂದಿಗಳು ಕೂಡ ಇದ್ದರು.
ಜಾತ್ರೆ ನಿಮಿತ್ಯ ಮಹಾರಾಷ್ಟ್ರ ತೇಲಂಗಾಣ, ಆಂಧ್ರಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ವಿವಿಧ ಕಡೆಯಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಮಲ್ಲಣ್ಣನ ಕೃಪೆಗೆ ಪಾತ್ರರಾದರು.. ಮೆರವಣಿಗೆಯ್ಯೂದಕ್ಕೂ ಭಕ್ತರು ಮಲ್ಲಣ್ಣನ ಜೈಯಘೋಷದೊಂದಿಗೆ ಎಳ್ಳಕೋಟ ಎಳ್ಳಕೋಟಗೆ ಎಂಬ ಜೈಯಿಕಾರ ಹಾಕಿದರು
ತೇಲಂಗಾಣ, ಆಂಧ್ರ ಮತ್ತು ಕರ್ನಾಟಕ ಸೇರಿದಂತೆ ವಿವಿಧ ಕಡೆಯಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
Saturday, 21 December 2024
ಗೋಲ್ಡನ್ ಚಾರಿಯೇಟ್ ರೈಲು ಪ್ರವಾಸದಲ್ಲಿ ಐತಿಹಾಸಿಕ ಸ್ಥಳಗಳ ಅನಾವರಣ: ಸಚಿವ ಹೆಚ್.ಕೆ ಪಾಟೀಲ್
ಬೆಂಗಳೂರು : ಗೋಲ್ಡನ್ ಚಾರಿಯೇಟ್ (ಸುವರ್ಣ ರಥ) ರೈಲು ಪ್ರವಾಸ ದಕ್ಷಿಣ ಭಾರತದ ಶ್ರೀಮಂತ ಸಂಸ್ಕøತಿ, ಪರಂಪರೆ ಹಾಗೂ ಐತಿಹಾಸಿಕ ಸ್ಥಳಗಳ ಅನಾವರಣಕ್ಕೆ ಮುಕುಟಪ್ರಾಯವೆನಿಸಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.
ಅವರು ಇಂದು ಯಶವಂತಪುರ ರೈಲು ನಿಲ್ದಾಣದ ಫ್ಲಾಟ್ ಫಾರಂ 6 ರಲ್ಲಿ ಗೋಲ್ಡನ್ ಚಾರಿಯೇಟ್ ಐಷಾರಾಮಿ ರೈಲು ಸೇವೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಗೋಲ್ಡನ್ ಚಾರಿಯೇಟ್ ರೈಲು ಸೇವೆಗಳು 2018 ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು ಅದನ್ನು ಮರುಚಾಲನೆಗೊಳಿಸಲಾಗಿದೆ. ಈ ರೈಲಿನ ಮಾಲೀಕತ್ವವನ್ನು 50% ಭಾರತೀಯ ರೈಲ್ವೇ, 25% ಪ್ರವಾಸೋದ್ಯಮ ಸಚಿವಾಲಯ ಭಾರತ ಸರ್ಕಾರ ಹಾಗೂ ಕೆಎಸ್ಟಿಡಿಸಿಯ 25% ರಷ್ಟು ಷೇರುಗಳ ಮೂಲಕ ರಾಜ್ಯ ಸರ್ಕಾರ ಹೊಂದಿದೆ. ರೈಲಿನ ಒಳಾಂಗಣವನ್ನು ಕಲಾತ್ಮಕವಾಗಿ ನಿರ್ಮಿಸಲಾಗಿದೆ.18 ಕೋಚ್ಗಳಲ್ಲಿ ಕರ್ನಾಟಕ ಆಳಿದ ರಾಜವಂಶಸ್ಥರುಗಳಾದ ಕದಂಬ, ಹೊಯ್ಸಳ, ವಿಜಯನಗರ ಚಾಲುಕ್ಯರ ಹೆಸರನ್ನು ಇಡಲಾಗಿದೆ. ಊಟ, ವಸತಿಗೆ ಐಷಾರಾಮಿ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಗೋಲ್ಡನ್ ಚಾರಿಯೇಟ್ ಪ್ರವಾಸೋದ್ಯಮ ವಿಶ್ವದ ಪ್ರಸಿದ್ಧ ಪರಂಪರೆಯ ತಾಣಗಳ ಜೊತೆಗೆ ಪಶ್ಚಿಮ ಘಟ್ಟಗಳು, ಪ್ರಾಚೀನ ಕಡಲತೀರಗಳು, ಸಾಂಸ್ಕøತಿಕ ತಾಣಗಳಿಗೆ ಪ್ರವಾಸಿಗರನ್ನು ಕರೆದೊಯ್ಯುತ್ತದೆ. ಇದರಿಂದ ರೈಲು ಹೋಟೆಲ್ಗಳು, ಕುಶಲಕರ್ಮಿಗಳು, ಪ್ರವಾಸ ನಿರ್ವಾಹಕರಿಗೆ ಆದಾಯ ಕಲ್ಪಿಸಿದಂತಾಗುತ್ತದೆ. ಈ ವಿಶೇಷ ರೈಲು ಪ್ರವಾಸ ಜಾಗತಿಕ ಮಟ್ಟದಲ್ಲಿ ವಿಶ್ವದ ಏಳು ಅತ್ಯುತ್ತಮ ಐಷಾರಾಮಿ ರೈಲು ಪ್ರಯಾಣಗಳಲ್ಲಿ ಗುರುತಿಸಲಾಗಿದ್ದು, ಹಲವಾರು ಪ್ರಶಸ್ತಿ ಪಡೆದುಕೊಂಡಿದೆ ಎಂದರು.
ಈ ರೈಲಿನಲ್ಲಿ 44 ಸುಸುಜ್ಜಿತ ಕ್ಯಾಬಿನ್ಗಳು, ಎನ್ ಸೂಟ್ ಸ್ನಾನಗೃಹ, ವೈಫೈ ಸಹ ಒಳಗೊಂಡಿದೆ. ರುಚಿ ಮತ್ತು ನಳಪಾಕ ಹೆಸರಿನ ಎರಡು ಹೋಟೆಲ್ಗಳು ಭಾರತೀಯ ಮತ್ತು ಅಂತರರಾಷ್ಟ್ರೀಯ ಪಾಕಪದ್ದತಿ ಸೇವೆ ನೀಡುತ್ತದೆ. ಲಾಂಜ್ ಬಾರ್, ಫಿಟ್ನೆಸ್ ಸೆಂಟರ್ ಇತರೆ ಸೌಕರ್ಯ ಕಲ್ಪಿಸಲಾಗಿದೆ ಎಂದರು.
ಎಲ್ಲೆಲ್ಲಿ ಪ್ರವಾಸ: ಜೂವೆಲ್ ಆಫ್ ಸೌತ್ ಪ್ರವಾಸ ಇದೇ ಡಿಸೆಂಬರ್ 21 ರಿಂದ 26 ರವರೆಗೆ ಬೆಂಗಳೂರಿನಿಂದ ಆರಂಭಗೊಂಡು ಮೈಸೂರು, ಕಾಂಚೀಪುರಂ, ಮಹಾಬಲಿಪುರಂ, ತಂಜಾವೂರು, ಕೊಚ್ಚಿನ್, ಮರಾರಿಕುಲಂಗೆ ತೆರಳಿ ನಂತರ ಬೆಂಗಳೂರಿಗೆ ಹಿಂದಿರುಗುತ್ತದೆ. ಇದು ಐದು ದಿನಗಳ ಪ್ರವಾಸವಾಗಿದ್ದು, ಇದಕ್ಕೆ ತಗಲುವ ವೆಚ್ಚ ಒಬ್ಬರಿಗೆ ರೂ 4,07,700/-, ಪ್ರೈಡ್ ಆಫ್ ಕರ್ನಾಟಕ ಪ್ರವಾಸ ದಿನಾಂಕ: 01-02-2025 ರಿಂದ 06-02-2025 ರವರೆಗೆ ಬೆಂಗಳೂರಿನಿಂದ - ನಂಜನಗೂಡು- ಮೈಸೂರು- ಹಳೇಬೀಡು, ಚಿಕ್ಕಮಗಳೂರು, ಹೊಸಪೇಟೆ-ಗೋವಾ- ಬೆಂಗಳೂರನ್ನು ಒಳಗೊಂಡಿದ್ದು ಇದಕ್ಕೆ ತಗಲುವ ವೆಚ್ಚ 2,71,800 ರೂಪಾಯಿಗಳು. ಸೋಜರ್ನ್ ಆಪ್ ಸೌತ್ ಚಾರ್ಟರ್ಡ್ ಪ್ರವಾಸವನ್ನು 29-12-2024 ರಿಂದ 12-02-2025 ರವರೆಗೆ ಆಯೋಜಿಸಲಾಗಿದೆ.
ಭಾರತ ಅದರಲ್ಲೂ ದಕ್ಷಿಣ ಭಾರತದ ಪ್ರವಾಸೋದ್ಯಮವನ್ನು ಜಾಗತಿಕವಾಗಿ ಗುರುತಿಸಲು ಈ ಪ್ರವಾಸವು ಹೆಚ್ಚು ಸಹಕಾರಿಯಾಗಿದೆ. 2029 ರ ವೇಳೆಗೆ ಪ್ರವಾಸಿಗರ ಸಂಖ್ಯೆಯನ್ನು ಹೆಚ್ಚಿಸಲು ಕರ್ನಾಟಕ ಭಾರತೀಯ ರಾಜ್ಯಗಳ ಪಟ್ಟಿಯಲ್ಲಿ 3ನೇ ಅಗ್ರಸ್ಥಾನ ಪಡೆಯುವ ಗುರಿ ಸಹ ಹೊಂದಿದೆ. ಅಲ್ಲದೆ ಪ್ರವಾಸಿ ತಾಣದ ಮಹತ್ವವನ್ನು ಜನರಿಗೆ ತಿಳಿಸಲು ಈ ಪ್ರವಾಸ ಹೇಳಿ ಮಾಡಿಸಿದಂತಿದೆ.
ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಲ್ಮಾ ಕೆ. ಫಾಹಿಮ್, ಕೆಎಸ್ಟಿಡಿಸಿ ಅಧ್ಯಕ್ಷ ಎಂ.ಶ್ರೀನಿವಾಸ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!
ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...
.jpg)
-
ಹೈದರಾಬಾದ್ : ಇಂದು ಬೆಳಿಗ್ಗೆ ಬೀದರನಲ್ಲಿ ನಡೆದ ಎಟಿಎಂ ದರೋಡೆಕೋರರೆ ನಗರದ ಅಫ್ಜಲಗಂಜನಲ್ಲಿರುವ ರೋಷನ ಟ್ರಾವೆಲ್ ಕಛೆರಿಯಲ್ಲಿ ಪೊಲೀಸ್ ಮತ್ತು ದರೋಡೆಕೋರ ಮಧ್ಯೆ ಗುಂಡಿನ ...
-
ಬೀದರ್: ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆಸಿರುವ ಘಟನೆಯೊಂದು ಬೀದರ್ನ ಎಸ್ಬಿಐ ಮುಖ್ಯ ಕಚೇರಿ ಮುಂದೆ ಗುರುವಾರ ನಡೆದಿದೆ. ...
-
ಶೋಧವಾಣಿ ಜಾಲಲೋಕ ಹೈದರಾಬಾದ್ : ಸಂಘಟಿತ ಹೋರಾಟ ಇಂದಿನ ದಿನಮಾನದ ಜರೂರು ಹೊರನಾಡು ಗಡಿನಾಡಿನ ಕನ್ನಡಿಗರ ಹಿತಕಾಯಲು ಯಾರೂ ಇಲ್ಲವೆನ್ನುವ ಅನಾಥಪ್ರಜ್ಞೆ ಸರಿಯಲ್ಲ. ಭಾಷೆಯ...